ಬೆಟಗೇರಿ ಸರಕಾರಿ ಪ್ರೌಢ ಶಾಲೆ ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ಪ್ರಸಕ್ತ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಶಾಲೆಯ ವಿದ್ಯಾರ್ಥಿಗಳಾದ ರೇವತಿ ಭಾಗೋಜಿ613 ಅಂಕ(ಶೇ.98.08) ಪ್ರಥಮ ಸ್ಥಾನ, ಶಿವನಗೌಡ ಪಾಟೀಲ610 ಅಂಕ(ಶೇ.97.60) ದ್ವಿತೀಯ ಸ್ಥಾನ, ತನುಜಾ ಮೆಟ್ಟಿನವರ607 ಅಂಕ(ಶೇ.97.12)ಪಡೆದು ತೃತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಅಲ್ಲದೇ ಹಲವಾರು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಹಲವಾರು ವಿಷಯಗಳಲ್ಲಿ 100ಕ್ಕೆ 100 ಅಂಕ …
Read More »ಬೆಟಗೇರಿಯಲ್ಲಿ ಹೊಸಳ್ಳಿ ಮತ್ತು ಕೊಪ್ಪಳ ಶ್ರೀಗಳಿಂದ ಆಧ್ಯಾತ್ಮಿಕ ಪ್ರವಚನ
ವರದಿ: ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಸ್ಥರ ಸಹಯೋಗದಲ್ಲಿ ಬಸವ ಜಯಂತಿ ಹಾಗೂ 775 ವರ್ಷ ಬಾಳಿದ ಮಹಾತಪಸ್ವಿ ಜಗದ್ಗುರು ಬೂದೀಶ್ವರ ಮಹಾಶಿವಯೋಗಿಗಳ ಶಿಲಾ ಮಂಟಪ ಲೋಕಾರ್ಪಣೆ ನಿಮಿತ್ಯ ಬೆಟಗೇರಿ ಗ್ರಾಮದಲ್ಲಿ ಪ್ರಪ್ರಥಮವಾಗಿ ಇದೇ ಏ.26 ರಿಂದ ಏ.30 ರವರೆಗೆ ಹೊಸಳ್ಳಿ ಮತ್ತು ಕೊಪ್ಪಳ ಶ್ರೀಗಳಿಂದ ಆಧ್ಯಾತ್ಮಿಕ ಪ್ರವಚನ ನಡೆಯಲಿದೆ. ಏ.26 ರಿಂದ ಏ.29 ರವರೆಗೆ ಹೊಸಳ್ಳಿಯ ಅಭಿನವ ಬೂದೀಶ್ವರ ಸ್ವಾಮಿಜಿ ಅವರಿಂದ ನಾಲ್ಕು ದಿನಗಳ ಕಾಲ …
Read More »*ಎನ್ಎಸ್ಎಫ್ ಕಚೇರಿಯಲ್ಲಿ ಮಹರ್ಷಿ ಭಗೀರಥ ಜಯಂತಿ ಆಚರಣೆ*
*ಗೋಕಾಕ;* ಮಹರ್ಷಿ ಭಗೀರಥರಂತಹ ಮಹಾನ್ ಪುರುಷರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿವೆ. ಪ್ರತಿ ದಿನವೂ ಮಹಾನ್ ಪುರುಷರನ್ನು ಸ್ಮರಿಸಬೇಕಾದ ಅಗತ್ಯತೆಯನ್ನು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಪ್ರತಿಪಾದಿಸಿದರು. ನಗರದಲ್ಲಿರುವ ತಮ್ಮ ಗೃಹ ಕಛೇರಿಯಲ್ಲಿ ಗುರುವಾರದಂದು ಮಹರ್ಷಿ ಭಗೀರಥ ಮಹಾರಾಜರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಭಗೀರಥ ಸಮಾಜವು ಶೈಕ್ಷಣಿಕವಾಗಿ ಮುಂದೆ ಬರಬೇಕಾಗಿದೆ. ತಮ್ಮ ಮೂಲ ವೃತ್ತಿ ಜತೆಗೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಅಂದಾಗ ಮಾತ್ರ ನಮ್ಮ ಸಮಾಜವು …
Read More »ಚೈತನ್ಯ ಆಶ್ರಮ ವಸತಿ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ ಎರಡನೇ ಸ್ಥಾನ
ಚೈತನ್ಯ ಆಶ್ರಮ ವಸತಿ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ ಎರಡನೇ ಸ್ಥಾನ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಮೂಡಲಗಿ ತಾಲೂಕಿನ ಚೈತನ್ಯ ಆಶ್ರಮ ವಸತಿ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದಿದ್ದಾನೆ 625ಕ್ಕೆ 624 ಅಂಕ ಗಳನ್ನು ಪಡೆದು ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಕುಮಾರ ವಿವೇಕ ಸುಳ್ನವರ ಈತನಿಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಅಭಿನಂದನೆಗಳನ್ನು ತಿಳಿಸಿದ್ದಾರೆ
Read More »ಬಸವಣ್ಣ ಸಾಮಾಜಿಕ ಸಮಾನತೆಯ ಹರಿಕಾರ : ರಮೇಶ ಅಳಗುಂಡಿ
ಬಸವಣ್ಣ ಸಾಮಾಜಿಕ ಸಮಾನತೆಯ ಹರಿಕಾರ : ರಮೇಶ ಅಳಗುಂಡಿ ವರದಿ: ಅಡಿವೇಶ ಮುಧೋಳ. ಬೆಟಗೇರಿ:ಬಸವಣ್ಣನವರು ಭಾರತ ಇತಿಹಾಸದಲ್ಲಿ ಸಾಮಾಜಿಕ ಸಮಾನತೆ ಹರಿಕಾರರಾಗಿ ಗುರುತಿಸಿಕೊಂಡಿದ್ದಾರೆ. ಕಾಯಕ ತತ್ವ ಬೋಧಿಸಿದ ಮಹಾನ ಚೇತನರಾಗಿದ್ದರು ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಏ.20ರಂದು ನಡೆದ ಬಸವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಬಸವಣ್ಣನವರ ಬದುಕಿನ …
Read More »ಬಸವಣ್ಣನವರು ಸಕಲ ಜೀವಿಗಳಿಗೆ ಶ್ರೇಯಸ್ಸು ಬಯಸಿದ್ದರು: ಬಸವಂತ ಕೋಣಿ
ವರದಿ: ಅಡಿವೇಶ ಮುಧೋಳ. ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು ಸಕಲ ಜೀವಿಗಳಿಗೆ ಶ್ರೇಯಸ್ಸು ಬಯಸಿದ್ದರು. ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಮಾಜಿ ಗ್ರಾಪಂ ಅಧ್ಯಕ್ಷ ಬಸವಂತ ಕೋಣಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಸವ ಅಭಿಮಾನಿ ಬಳಗದ ಸಹಯೋಗದಲ್ಲಿ ಏ.20ರಂದು ನಡೆದ ಬಸವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಬಸವಣ್ಣನವರು ವಚನಗಳನ್ನು ರಚಿಸಿ ಜಗತ್ತಿಗೆ ಅದ್ಭುತವಾದ …
Read More »ಏ.20ರಂದು ಬೆಟಗೇರಿಯಲ್ಲಿ ಅದ್ದೂರಿ ಬಸವ ¸ ಜಯಂತಿ ಆಚರಣೆ
ಏ.20ರಂದು ಬೆಟಗೇರಿಯಲ್ಲಿ ಅದ್ದೂರಿ ಬಸವ ¸ ಜಯಂತಿ ಆಚರಣೆ ವರದಿ: ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಸವ ಅಭಿಮಾನಿ ಬಳಗದ ಸಹಯೋಗದಲ್ಲಿ ಬಸವ ಜಯಂತಿಯ ಆಚರಣೆ ಕಾರ್ಯಕ್ರಮ ಏ.20ರಂದು ಅದ್ಧೂರಿಯಾಗಿ ನಡೆಯಲಿದೆ. ಬೆಟಗೇರಿ ಗ್ರಾಮದ ಅಶ್ವಾರೊಢ ಬಸವೇಶ್ವರ ವೃತ್ತದಲ್ಲಿ ಮುಂಜಾನೆ 8 ಗಂಟೆಗೆ ಅಶ್ವಾರೊಢ ಬಸವಣ್ಣನವರ ಮೂರ್ತಿಗೆ ಮಹಾಪೂಜೆ, ಪುಷ್ರ್ಪಾಪನೆ, ಷಟಸ್ಥಲ್ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿ ಅಭಿನವ ಶಿವಾನಂದ ಸ್ವಾಮೀಜಿ ದಿವ್ಯ …
Read More »*ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸುತ್ತಿರುವ ನೀರು ಮೂರು ದಿನಗಳವರೆಗೆ ಹೆಚ್ಚುವರಿ ವಿಸ್ತರಣೆ*
ಗೋಕಾಕ: ಜನ ಹಾಗೂ ಜಾನುವಾರುಗಳಿಗೆ ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸಲಾಗುತ್ತಿರುವ ನೀರನ್ನು ಇನ್ನೂ ಮೂರು ದಿನಗಳವರೆಗೆ ವಿಸ್ತರಣೆ ಮಾಡಿರುವುದಕ್ಕೆ ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹರ್ಷ ವ್ಯಕ್ತಪಡಿಸಿದ್ದು, ಇದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈಗಾಗಲೇ 10 ದಿನಗಳತನಕ ಘಟಪ್ರಭಾ ಬಲದಂಡೆ ಕಾಲುವೆಗೆ ನೀರನ್ನು ಹರಿಸಿದ್ದು, ಆದರೂ ಕೌಜಲಗಿ ಉಪ ವಿಭಾಗದ ಯಾದವಾಡ, ಕಾಮನಕಟ್ಟಿ, ಕೊಪದಟ್ಟಿ, ಗುಲಗಂಜಿಕೊಪ್ಪ ಗ್ರಾಮಗಳಿಗೆ ನೀರು …
Read More »ಹೊಸಳ್ಳಿ ಮತ್ತು ಕೊಪ್ಪಳ ಶ್ರೀಗಳಿಂದ ಆಧ್ಯಾತ್ಮಿಕ ಪ್ರವಚನ ಆಮಂತ್ರಣ ಪತ್ರಿಕೆ ಬಿಡುಗಡೆ
ಹೊಸಳ್ಳಿ ಮತ್ತು ಕೊಪ್ಪಳ ಶ್ರೀಗಳಿಂದ ಆಧ್ಯಾತ್ಮಿಕ ಪ್ರವಚನ ಆಮಂತ್ರಣ ಪತ್ರಿಕೆ ಬಿಡುಗಡೆ ವರದಿ: ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಸ್ಥರ ಸಹಯೋಗದಲ್ಲಿ ಬಸವ ಜಯಂತಿ ಹಾಗೂ 775 ವರ್ಷ ಬಾಳಿದ ಮಹಾತಪಸ್ವಿ ಜಗದ್ಗುರು ಬೂದೀಶ್ವರ ಮಹಾಶಿವಯೋಗಿಗಳ ಶಿಲಾ ಮಂಟಪ ಲೋಕಾರ್ಪಣೆ ನಿಮಿತ್ಯ ಬೆಟಗೇರಿ ಗ್ರಾಮದಲ್ಲಿ ಪ್ರಪ್ರಥಮವಾಗಿ ಇದೇ ಏ.26 ರಿಂದ ಏ.30 ರವರೆಗೆ ಹೊಸಳ್ಳಿ ಮತ್ತು ಕೊಪ್ಪಳ ಶ್ರೀಗಳಿಂದ ಆಧ್ಯಾತ್ಮಿಕ ಪ್ರವಚನದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ …
Read More »*ಡಾ. ಅಂಬೇಡ್ಕರ್ ಎಲ್ಲ ಸಮುದಾಯಗಳ ಆಸ್ತಿ- ಲಕ್ಕಪ್ಪ ಲೋಕುರಿ* *ಅರಭಾವಿ ಬಿಜೆಪಿ ಮಂಡಲದಿಂದ ಅಂಬೇಡ್ಕರ್ ಜಯಂತಿ ಆಚರಣೆ*
ಗೋಕಾಕ: ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಅರಭಾವಿ ಬಿಜೆಪಿ ಮಂಡಲದಿಂದ ಇಲ್ಲಿನ ಎನ್ಎಸ್ಎಫ್ ಕಚೇರಿಯಲ್ಲಿ ಆಚರಿಸಲಾಯಿತು. ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಸಹಾಯಕ ಲಕ್ಕಪ್ಪ ಲೋಕುರಿ ಈ ಸಂದರ್ಭದಲ್ಲಿ ಮಾತನಾಡಿ, ಅಂಬೇಡ್ಕರ್ ಅವರು ರಾಷ್ಟ್ರದ ಉನ್ನತಿ, ಪ್ರಗತಿಗಾಗಿ ಶ್ರಮಿಸಿರುವ ಮಹಾನ್ ವ್ಯಕ್ತಿ. ಪ್ರಪಂಚದಲ್ಲಿಯೇ ಎಲ್ಲರೂ ಮೆಚ್ಚುವಂತಹ ಸಂವಿಧಾನವನ್ನು ರಚನೆ ಮಾಡಿದ್ದಾರೆ. ನಮ್ಮ ದೇಶವು ಇಂದು ಶಿಕ್ಷಣದಲ್ಲಿ ಮುಂದುವರೆದು ಉನ್ನತ ಸ್ಥಾನ,ಮಾನ ಬರುತ್ತದೆಂದರೆ ಅದಕ್ಕೆ ಅಂಬೇಡ್ಕರ್ ಅವರು ಕಾರಣರು. …
Read More »
IN MUDALGI Latest Kannada News