Breaking News
Home / inmudalgi (page 10)

inmudalgi

ಡಿ.26 ಮತ್ತು 27 ರಂದು ಮುಸಗುಪ್ಪಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ

ಡಿ.೨೬ಮತ್ತು ೨೭ ರಂದು ಮುಸಗುಪ್ಪಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಮೂಡಲಗಿ: ಮೂಡಲಗಿ ತಾಲೂಕಿನ ಮುಸಗುಪ್ಪಿ ಗ್ರಾಮದ ನಮ್ಮೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಡಿ.೨೬ ಮತ್ತು ೨೭ರಂದು ಎರಡು ದಿನಗಳ ಕಾಲ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ಮತ್ತು ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಮುಸಗುಪ್ಪಿ ಗ್ರಾಮದ ಗುರು-ಹಿರಿಯರು, ಎಸ್.ಡಿ.ಎಂ.ಸಿ ಪಧಾಧಿಕಾರಿಗಳು ಹಾಗೂ ಶಾಲೆಯ ಹಳೆಯ ವಿದ್ಯಾರ್ಥಿಗಳ ನೇತೃತ್ವದಲ್ಲಿ ಶತಮಾನೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷ ಬಾಳಗೌಡ ಪಾಟೀಲ …

Read More »

ಕೃಷಿಕ ಸಮಾಜ ಹಾಗೂ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ ತುಕ್ಕಾನಟ್ಟಿ ಇವರ ಸಹಯೋಗದಲ್ಲಿ ಕಿಸಾನ ಗೋಷ್ಠಿ ಕಾರ್ಯಕ್ರಮ

ಮೂಡಲಗಿ :ರೈತ ದಿನಾಚರಣೆಯ ಅಂಗವಾಗಿ ಗೋಕಾಕ ಕೃಷಿ ಇಲಾಖೆಯ ವತಿಯಿಂದ ಆತ್ಮ (ATMA) ಯೋಜನೆ, ಗೋಕಾಕ್/ಮೂಡಲಗಿ ತಾಲೂಕು ಕೃಷಿಕ ಸಮಾಜ ಹಾಗೂ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ ತುಕ್ಕಾನಟ್ಟಿ ಇವರ ಸಹಯೋಗದಲ್ಲಿ ಕಿಸಾನ ಗೋಷ್ಠಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಡಾ. ಎಂ.ಎನ್. ಮಳವಡಿ ಅವರು ಬೇಸಾಯ ಪದ್ಧತಿ ಮತ್ತು ಸಮಗ್ರ ಕೃಷಿ ಕ್ರಮಗಳ ಬಗ್ಗೆ, ಡಾ. ಪರಶುರಾಮ್ ಪಾಟೀಲ್ ಅವರು ಸಮಗ್ರ ಬೆಳೆ ಪದ್ಧತಿ ಹಾಗೂ ಮೌಲ್ಯವರ್ಧನೆ ಕುರಿತು, ಮತ್ತು …

Read More »

ತಮ್ಮ ಮಗುವಿಗೆ ತಪ್ಪದೇ ಪೋಲಿಯೊ ಹನಿ ಹಾಕಿಸಿ : ಲಕ್ಷ್ಮಣ ಚಂದರಗಿ

ತಮ್ಮ ಮಗುವಿಗೆ ತಪ್ಪದೇ ಪೋಲಿಯೊ ಹನಿ ಹಾಕಿಸಿ : ಲಕ್ಷ್ಮಣ ಚಂದರಗಿ ಬೆಟಗೇರಿ:ನಿಮ್ಮ ಮನೆಯಲ್ಲಿರುವ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೊ ಹನಿ ತಪ್ಪದೇ ಹಾಕಿಸಿ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ರವಿವಾರ ಡಿ.21ರಂದು ನಡೆದ ಪಲ್ಸ್ ಪೋಲಿಯೊ ಹನಿ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ತಮ್ಮ ಮಕ್ಕಳಿಗೆ …

Read More »

‘ಮಗುವಿಗೆ ಪೊಲಿಯೋ ಹನಿ ಹಾಕಿ, ತಾಯಿಗೆ ಗುಲಾಬಿ ನೀಡಿ ಗೌರವ’

ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲಯನ್ಸ್ ಕ್ಲಬ್ ಪರಿವಾರದ ಸಹಯೋಗದಲ್ಲಿ ಭಾನುವಾರ ಮಗುವಿಗೆ ಪೊಲಿಯೋ ಹನಿ ಹಾಕುವ ಮೂಲಕ ಪಲ್ಸ್ ಪೊಲಿಯೋ ಹನಿ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ‘ಮಗುವಿಗೆ ಪೊಲಿಯೋ ಹನಿ ಹಾಕಿ, ತಾಯಿಗೆ ಗುಲಾಬಿ ನೀಡಿ ಗೌರವ’ ಮೂಡಲಗಿ: ಮಗುವಿಗೆ ಪಲ್ಸ್ ಪೊಲಿಯೋ ಹನಿ ಹಾಕಿ ಮಗುವಿನ ತಾಯಿಗೆ ಗುಲಾಬಿ ಹೂವು ನೀಡಿ ತಾಯಿಯನ್ನು ಅಭಿನಂದಿಸುವ ಮೂಲಕ ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರಿಯ ಪಲ್ಸ್ ಪೊಲಿಯೋ …

Read More »

*ಪೋಲಿಯೋ ಮುಕ್ತ ರಾಷ್ಟ್ರ ನಿರ್ಮಿಸಲು ಪ್ರತಿಯೊಂದು ಮಗುವಿಗೆ ಪೋಲಿಯೋ ಲಸಿಕೆ ಅವಶ್ಯ : ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ*

*ಪೋಲಿಯೋ ಮುಕ್ತ ರಾಷ್ಟ್ರ ನಿರ್ಮಿಸಲು ಪ್ರತಿಯೊಂದು ಮಗುವಿಗೆ ಪೋಲಿಯೋ ಲಸಿಕೆ ಅವಶ್ಯ : ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ* ಮೂಡಲಗಿ : ಐದು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಕಡ್ಡಾಯವಾಗಿ ಹಾಕಿಸಿ ಪೋಲಿಯೋ ಮುಕ್ತ ರಾಷ್ಟ್ರ ನಿರ್ಮಾಣ ಮಾಡಲು ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ಜೈ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ಸಿದ್ದಣ್ಣ ದುರದುಂಡಿ ಹೇಳಿದರು. ಹಳ್ಳೂರ ಗ್ರಾಮದ ಶ್ರೀ ಹನುಮಾನ್ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಪಲ್ಸ್ …

Read More »

ಭೂತಾಯಿ ಮಡಿಲಲ್ಲಿ ಚರಗ ಚಲ್ಲಿ ಎಳ್ಳು ಅಮವಾಸ್ಯೆ ಹಬ್ಬ ಆಚರಣೆ

ಭೂತಾಯಿ ಮಡಿಲಲ್ಲಿ ಚರಗ ಚಲ್ಲಿ ಎಳ್ಳು ಅಮವಾಸ್ಯೆ ಹಬ್ಬ ಆಚರಣೆ ವರದಿ: ಅಡಿವೇಶ ಮುಧೋಳ. ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಎಳ್ಳು ಅಮವಾಸ್ಯೆ ಹಬ್ಬದ ಪ್ರಯುಕ್ತ ರೈತರು ತಮ್ಮ ತಮ್ಮ ಹೊಲ-ಗದ್ದೆಗಳÀಲ್ಲಿರುವ ಹಚ್ಚ ಹಸಿರಿನ ಬೆಳೆಗಳ ನಡುವೆ ಭೂಮಿ ತಾಯಿಗೆ ಪೂಜಿಸಿ, ಚರಗ ಚಲ್ಲುವ ಕಾರ್ಯಕ್ರಮ ಶನಿವಾರ ಡಿ.20 ರಂದು ನಡೆಯಿತು. ಗ್ರಾಮದ ಎಲ್ಲರ ಮನೆಗಳಲ್ಲಿ ಹಬ್ಬದ ಸಡಗರ, ಸಂಭ್ರಮ ಮನೆ ಮಾಡಿತ್ತು, ಇಲ್ಲಿಯ ರೈತ ಕುಟುಂಬದ ಮಕ್ಕಳು ಸೇರಿದಂತೆ …

Read More »

ವಿಶೇಷ ಅಲಂಕಾರಗೊಂಡ ಬೆಟಗೇರಿ ಲಕ್ಷ್ಮೀದೇವಿ

ವಿಶೇಷ ಅಲಂಕಾರಗೊಂಡ ಬೆಟಗೇರಿ ಲಕ್ಷ್ಮೀದೇವಿ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಅಧಿದೇವತೆ ಲಕ್ಷ್ಮೀದೇವಿ ದೇವಾಲಯದಲ್ಲಿ ಎಳ್ಳು ಅಮವಾಸ್ಯೆ ಹಬ್ಬದ ಪ್ರಯುಕ್ತ ಶನಿವಾರ ಡಿ.20ರಂದು ಲಕ್ಷ್ಮೀದೇವಿ ಗದ್ದುಗೆ ಹೂ ಮಾಲೆಗಳಿಂದ ವಿಶೇಷ ಅಲಂಕಾರಗೊಂಡು ಎಲ್ಲರ ಭಕ್ತರ ಭಕ್ತಿಯ ಕಣ್ಮನ ಸೆಳೆದಳು. ಚಿತ್ರ: ಭರಮಣ್ಣ ಪೂಜೇರಿ. ಶ್ರೀದೇವಿ ದೇವಾಲಯ ಅರ್ಚಕ ಬೆಟಗೇರಿ.

Read More »

ತಮ್ಮ ಮಗುವಿಗೆ ಪೋಲಿಯೊ ಹನಿ ಹಾಕಿಸಿ: ಡಾ.ಸರಸ್ವತಿ ತಂಬಾಕೆ

ತಮ್ಮ ಮಗುವಿಗೆ ಪೋಲಿಯೊ ಹನಿ ಹಾಕಿಸಿ: ಡಾ.ಸರಸ್ವತಿ ತಂಬಾಕೆ ಬೆಟಗೇರಿ:ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಭಾನುವಾರ ಡಿ.21ರಂದು ಪಲ್ಸ್ ಪೋಲಿಯೊ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಪೋಲಿಯೊ ಹನಿ ಸುರಕ್ಷಿತವಾಗಿದ್ದು, ತಮ್ಮ ಮಕ್ಕಳಿಗೆ ತಪ್ಪದೇ ಡಿ.21ರಂದು ಪೋಲಿಯೊ ಹನಿ ಹಾಕಿಸಿಕೊಳ್ಳಿ ಎಂದು ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸರಸ್ವತಿ ತಂಬಾಕೆ ಹೇಳಿದ್ದಾರೆ. ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಶುಕ್ರವಾರ ಡಿ.19 ರಂದು ಬೆಟಗೇರಿ ಗ್ರಾಮದ ಪ್ರಮುಖ …

Read More »

ನಾಳೆ ಶ್ರೀ ಅಯ್ಯಪ್ಪಸ್ವಾಮಿ 32ನೇ ಮಹಾಪೂಜೆ

ನಾಳೆ ಶ್ರೀ ಅಯ್ಯಪ್ಪಸ್ವಾಮಿ 32ನೇ ಮಹಾಪೂಜೆ ಮೂಡಲಗಿ: ಪಟ್ಟಣದ ಶ್ರೀ ಶಿವಬೋಧರಂಗ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯಿಂದ 32ನೇ ಶ್ರೀ ಅಯ್ಯಪ್ಪಸ್ವಾಮಿಯ ಮಹಾಪೂಜೆ ಉತ್ಸವ ಮತ್ತು ಅಗ್ನಿ ಪೂಜೆ ಹಾಗೂ ಅನ್ನ ಪ್ರಸಾದ ಕಾರ್ಯಕ್ರಮವು ಡಿ.22ರಂದು ಮದ್ಯಾಹ್ನ 2ಗಂಟೆಗೆ ಕನ್ನಿ ಸ್ವಾಮಿಗಳಿಂದ ಕುಂಭಮೇಳ ಮತ್ತು ಆನೆ ಮೇಲೆ ಅಂಬಾರಿ ಹಾಗೂ ಶ್ರೀ ಅಯ್ಯಪ್ಪ ಸ್ವಾಮಿ ಭಾವಚಿತ್ರ, ಮೂರ್ತಿಯ ಭವ್ಯ ಮೆರವಣಿಗೆಯು ವಿವಿಧ ವಾದ್ಯಮೇಳಗಳೊಂದಿಗೆ ಪ್ರಮುಖ ರಸ್ತೆಗಳ ಮೂಲಕ ಬಸವರಂಗ ಮಂಟಪದಲ್ಲಿರುವ ಸ್ವಾಮಿಯ …

Read More »

ಶಬರಿಮಲೈಗೆ ಪಾದಯಾತ್ರೆ ಕೈಗೊಂಡ ಅಯ್ಯಪ್ಪ ಮಾಲಾಧಾರಿಗಳು

ಶಬರಿಮಲೈಗೆ ಪಾದಯಾತ್ರೆ ಕೈಗೊಂಡ ಅಯ್ಯಪ್ಪ ಮಾಲಾಧಾರಿಗಳು ಮೂಡಲಗಿ:-ಪಟ್ಟಣದಿಂದ ಶಬರಿಮಲೈಗೆ ಪಾದಯಾತ್ರೆ ಕೈಗೊಂಡಿರುವ ಶ್ರೀ ಅಯ್ಯಪ್ಪ ಮಾಲಾಧಾರಿಗಳು. ಮೂಡಲಗಿಯಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಾದ ಈರಪ್ಪ ವರ್ಲಿ ಸ್ವಾಮಿ ನಾಲ್ಕನೆಯ ವರ್ಷದ ಪಾದಾರ್ಪಣೆ ಮತ್ತು ಈ ವರ್ಷ ಇವರೊಡನೆ ಇನ್ನುಳಿದ ರಾಜು ನಾಯಕ ಸ್ವಾಮಿ,ಮಲ್ಲಪ್ಪ ಕೊಳವಿ ಸ್ವಾಮಿ ಹಾಗೂ ತವನಪ್ಪಾ ಟೋಕನವರ ಸ್ವಾಮಿ ಪ್ರಥಮವಾಗಿ ಪಾದಯಾತ್ರೆ ಮೂಲಕ ಶಬರಿಯಾತ್ರೆಗೆ ಕೈಗೊಂಡರು.ಇವರನ್ನು ಮೂಡಲಗಿಯ ಶ್ರೀಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಹಾಗೂ ಇನ್ನುಳಿದ ಭಕ್ತರು ಬಿಳ್ಕೊಟರು.

Read More »