Breaking News
Home / inmudalgi (page 149)

inmudalgi

ಕೌಜಲಗಿ ಹೊಸ ತಾಲೂಕು ರಚನಗೆ ಸಂಪೂರ್ಣ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ

*ಕೌಜಲಗಿ ಹೊಸ ತಾಲೂಕು ರಚನಗೆ ಸಂಪೂರ್ಣ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ* *ಎಲ್ಲರೂ ಸೇರಿ ಒಗ್ಗಟ್ಟಾಗಿ ಕೌಜಲಗಿಯನ್ನು ತಾಲೂಕು ಕೇಂದ್ರವನ್ನಾಗಿಸಲು ಪ್ರಯತ್ನಿಸೋಣ* ಕೌಜಲಗಿ:  ಕೌಜಲಗಿ ಹೊಸ ತಾಲೂಕು ರಚನೆಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಅರಭಾವಿ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ತಾಲೂಕಿನ ಕೌಜಲಗಿ ಗ್ರಾಮದ ಬಲಭೀಮ ದೇವಸ್ಥಾನದ ಆವರಣದಲ್ಲಿ ತಾಲೂಕು ರಚನೆಗೆ ಸಂಬಂಧ ಜರುಗಿದ ಪೂರ್ವಭಾವಿ ಸಭೆಯಲ್ಲಿ ನಿಯೋಜಿತ ಕೌಜಲಗಿ ತಾಲೂಕು ಹೋರಾಟ …

Read More »

 ಕುಲಗೋಡ ಶ್ರೀ ಬಲಭೀಮ ಪಲ್ಲಕ್ಕಿ ಉತ್ಸವ ಸಂಪನ್ನ

 ಕುಲಗೋಡ ಶ್ರೀ ಬಲಭೀಮ ಪಲ್ಲಕ್ಕಿ ಉತ್ಸವ ಸಂಪನ್ನ.  ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಶ್ರೀ ಬಲಭೀಮ ದೇವರ ಕಾರ್ತಿಕೋತ್ಸವ ಹಾಗೂ ನೂತನ ಬೆಳ್ಳಿ ಪಲ್ಲಕ್ಕಿ ಉತ್ಸವ ಮತ್ತು ಮಕ್ಕಳನ್ನು ಪಲ್ಲಕ್ಕಿ ಕೇಳಗೆ ಹಾಯಿಸುವ ಕಾರ್ಯಕ್ರಮಗಳು ರವಿವಾರ ಮುಂಜಾನೆ ಸಾವಿರಾರು ಭಕ್ತರ ಸಮ್ಮೂಖದಲ್ಲಿ ವಿಜೃಂಭಣೆಯಿಂದ ಜರುಗಿತು. ರವಿವಾರ ಮುಂಜಾನೆ 10 ಗಂಟೆಗೆ ಶ್ರೀ ಬಲಭೀಮದೇವರ ಪಲ್ಲಕ್ಕಿ ಉತ್ಸವ ಸಾವಿರಾರೂ ಭಕ್ತರ ಸನಿಧಿಯಲ್ಲಿ ಡೊಳ್ಳು ಕುಣಿತ, ಕರಡಿ ಮಜಲು, ಹಲಗಿ ಮೇಳದೊಂದಿಗೆ …

Read More »

ಜ. 29 ಮತ್ತು 30 ರಂದು ಬಿಜೆಪಿ ರೈತ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿಯ ಸಭೆ

ಬೆಳಗಾವಿ: ನಾಳೆಯಿಂದ (ಜ. 29 ಮತ್ತು 30) ಎರಡು ದಿನಗಳ ಕಾಲ ಬೆಳಗಾವಿ ನಗರದ ಮಯೂರ ಪ್ರೆಸಿಡೇನ್ಸಿ ಕ್ಲಬ್‌ನಲ್ಲಿ ಬಿಜೆಪಿ ರೈತ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿಯ ಸಭೆ ನಡೆಯಲಿದೆ. ಮ. 12 ಗಂಟೆಗೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಈ ಸಭೆಯ ಉದ್ಘಾಟನೆಯನ್ನು ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯರು, ಮಾಜಿ ಮುಖ್ಯಮಂತ್ರಿಗಳು ಹಾಗೂ ರೈತ ನಾಯಕರಾದ ಬಿ.ಎಸ್. ಯಡಿಯೂರಪ್ಪ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಷ್ಟ್ರೀಯ ರೈತ ಮೋರ್ಚಾದ …

Read More »

*ಮೂಡಲಗಿಗೆ “ಸಹಕಾರ ನಗರ” ಬಿರುದನ್ನು ನೀಡಲು ಚಿಂತನೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

*ಮೂಡಲಗಿಗೆ “ಸಹಕಾರ ನಗರ” ಬಿರುದನ್ನು ನೀಡಲು ಚಿಂತನೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ ಪಿಕೆಪಿಎಸ್ ಅಮೃತ ಮಹೋತ್ಸವ ಸಮಾರಂಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾಹಿತಿ* *ಮೂಡಲಗಿ : ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಸಹಕಾರ ಸಂಘಗಳನ್ನು ಹೊಂದಿರುವ ಮೂಡಲಗಿ ಪಟ್ಟಣಕ್ಕೆ “ಸಹಕಾರ ನಗರ” ಎಂಬ ಬಿರುದನ್ನು ನೀಡಲು ಸರ್ಕಾರದ ಮಟ್ಟದ ಚಿಂತನೆ ನಡೆಸುತ್ತಿರುವುದಾಗಿ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಸಂಜೆ ಪಟ್ಟಣದ ಬಸವ ರಂಗ …

Read More »

ಜನ ಕಲ್ಯಾಣ ಹಾಗೂ ಲೋಕ ಕಲ್ಯಾಣಕ್ಕಾಗಿ ಬಲಭೀಮ ದೇವಸ್ಥಾನದಲ್ಲಿ ಹೋಮ ಪೂಜೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಜನ ಕಲ್ಯಾಣ ಹಾಗೂ ಲೋಕ ಕಲ್ಯಾಣಕ್ಕಾಗಿ ಬಲಭೀಮ ದೇವಸ್ಥಾನದಲ್ಲಿ ಹೋಮ ಪೂಜೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕುಲಗೋಡ:  ಲೋಕ ಕಲ್ಯಾಣ ಹಾಗೂ ಜನರ ಏಳ್ಗೆಗಾಗಿ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಬೆಳಗಿನ ಜಾವ ಇಲ್ಲಿನ ಇತಿಹಾಸ ಪ್ರಸಿದ್ಧ ಬಲಭೀಮ ದೇವಸ್ಥಾನದಲ್ಲಿ ಹೋಮ- ಹವನ ನಡೆಸಿದರು. ಅರಭಾವಿ ಕ್ಷೇತ್ರದ ಜನರಿಗೆ ಸದಾಕಾಲವೂ ಒಳ್ಳೆಯದಾಗಬೇಕು. ಕಷ್ಟ ಕಾರ್ಪಣ್ಯಗಳು ದೂರ ಸರಿಯಬೇಕು. ಕಾಲ-ಕಾಲಕ್ಕೆ ಮಳೆ ಬಂದು …

Read More »

ಕಲ್ಲೋಳಿಯಲ್ಲಿ 5.50 ಕೋಟಿ ರೂಗಳ ವೆಚ್ಚದ ನಗರೋತ್ಥಾನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

*ಕಲ್ಲೋಳಿಯಲ್ಲಿ 5.50 ಕೋಟಿ ರೂಗಳ ವೆಚ್ಚದ ನಗರೋತ್ಥಾನ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಗುಣಮಟ್ಟದಿಂದ ಕಾಮಗಾರಿಯನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ ಕೆಎಮ್‍ಎಫ್ ಅಧ್ಯಕ್ಷ* ಮೂಡಲಗಿ:  ನಗರೋತ್ಥಾನ ಯೋಜನೆಯಡಿ ಕೈಗೊಳ್ಳುತ್ತಿರುವ ಕಾಮಗಾರಿಗಳನ್ನು ಗುಣಮಟ್ಟದಿಂದ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲೂಕಿನ ಕಲ್ಲೋಳ್ಳಿ ಪಟ್ಟಣದಲ್ಲಿ 5.50ಕೋಟಿ ರೂಗಳ ವೆಚ್ಚದ ನಗರೋತ್ಥಾನ ಯೋಜನೆಯಡಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ …

Read More »

ಕಾರ್ಮಿಕ ವರ್ಗದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ-ಶಾಸಕ ಬಾಲಚಂದ್ರ ಜಾರಕಿಹೊಳಿ.

ಕಾರ್ಮಿಕ ವರ್ಗದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ-ಶಾಸಕ ಬಾಲಚಂದ್ರ ಜಾರಕಿಹೊಳಿ. ಯಾದವಾಡ: (ಗಿರಿಸಾಗರ) ಗ್ರಾಮದಲ್ಲಿ ಜೈ ಭವಾನಿ ಕಟ್ಟಡ ಕಾರ್ಮಿಕರ ಸಂಘವನ್ನು ಉದ್ಘಾಟಿಸಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.* *ಮೂಡಲಗಿ*: ಕಾರ್ಮಿಕರ ವರ್ಗದಿಂದ ಮಾತ್ರ ಈ ದೇಶದ ಆರ್ಥಿಕ ಅಭಿವೃದ್ಧಿ ಸಾಧ್ಯವಾಗುತ್ತದೆ. ದೈಹಿಕ ಇಲ್ಲವೇ ಬೌದ್ಧಿಕ ಶ್ರಮವನ್ನು ಮಾಡುತ್ತಿರುವ ವ್ಯಕ್ತಿಯು ಕಾರ್ಮಿಕನಾಗಿದ್ದು, ಅಂತಹ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಿರುವುದಾಗಿ ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ …

Read More »

ಮೂಡಲಗಿ ತಾಲ್ಲೂಕು ರಡ್ಡಿ ಸಮಾಜಕ್ಕೆ ೨೨ ಗುಂಟೆ ನಿವೇಶನ – ಶಾಸಕ ಬಾಲಚಂದ್ರ ಜಾರಕಿಹೊಳಿ

*ಮೂಡಲಗಿ ತಾಲ್ಲೂಕು ರಡ್ಡಿ ಸಮಾಜಕ್ಕೆ ೨೨ ಗುಂಟೆ ನಿವೇಶನ – ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿಯಲ್ಲಿಂದು ಜರುಗಿದ ವೇಮನರ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕರ ಭರವಸೆ* ಮೂಡಲಗಿ: ಮೂಡಲಗಿ ತಾಲೂಕಿನ ರಡ್ಡಿ ಸಮಾಜ ಭಾಂದವರಿಗೆ ಸಮುದಾಯ ಭವನ ನಿರ್ಮಿಸಲು ಪುರಸಭೆಯಿಂದ 22 ಗುಂಟೆ ನಿವೇಶನ ನೀಡಲಾಗುವುದು ಎಂದು ಶಾಸಕ ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದರು. ಬುಧವಾರದಂದು ಮೂಡಲಗಿ ಪಟ್ಟಣದ ಬಸವ ರಂಗ ಮಂಟಪದಲ್ಲಿ ತಾಲೂಕಾ ಮಟ್ಟದ …

Read More »

ಮೂಡಲಗಿ ಪಿಕೆಪಿಎಸ್ ಅಮೃತ ಮಹೋತ್ಸವ

 ಮೂಡಲಗಿ ಪಿಕೆಪಿಎಸ್ ಅಮೃತ ಮಹೋತ್ಸವ   ಮೂಡಲಗಿ: ಸ್ಥಳೀಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಮೃತ ಮಹೋತ್ಸವ ಸಮಾರಭಂವು ಜ.27 ರಂದು ಶ್ರೀ ಬಸವ ರಂಗ ಮಂಟಪದಲ್ಲಿ ಸಂಜೆ 4ಗಂಟೆಗೆ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸಂದೀಪ ಸೋನವಾಲ್ಕರ ತಿಳಿಸಿದರು. ಅವರು ಸಂಘದ ಕಛೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸಮಾರಂಭದ ಸಾನಿಧ್ಯವನ್ನು ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿ ಶ್ರೀ ದತ್ತಾತ್ರೇಯಬೋಧ ಸ್ವಾಮಿಗಳು, ಕೊಪ್ಪಳದ ಗವಿಸಿದ್ದೇಶ್ವರ ಮಠದ ಶ್ರೀ ಅಭಿನವ …

Read More »

*ಕ್ರಿಕೆಟ್ ಆಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಕ್ರಿಕೆಟ್ ಆಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* ಮೂಡಲಗಿ: ನಾಗನೂರ ಪ್ರಿಮಿಯರ್ ಲೀಗ್ ಏರ್ಪಡಿಸಿದ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕ್ರಿಕೆಟ್ ಆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮೊದಲಿಂದಲೂ ಕ್ರಿಕೆಟ್ ಬಗ್ಗೆ ಅಪಾರ ಅಭಿಮಾನವನ್ನು ಜೊತೆಗೆ ಕ್ರಿಕೆಟ್ ಆಟಗಾರರಾಗಿರುವ ಬಾಲಚಂದ್ರ ಜಾರಕಿಹೊಳಿ ಅವರು ಅಭಿಮಾನಿಗಳ ಒತ್ತಾಯದ ಮೇರೆಗೆ ಬ್ಯಾಟಿಂಗ್ ಮಾಡುವ ಮೂಲಕ ನೆರೆದ ಸಭಿಕರನ್ನು ರಂಜಿಸಿದರು. ಹಿರಿಯ ಸಹಕಾರಿ ಬಿ.ಆರ್. ಪಾಟೀಲ ಹಾಗೂ ಮಾಜಿ ಸಚಿವ ಆರ್. ಎಂ. …

Read More »