Breaking News
Home / inmudalgi (page 152)

inmudalgi

*ರೇವಣಸಿದ್ಧೇಶ್ವರ ಗವೀಮಠದ ಮಹಿಮೆ ಅಪಾರವಾದದ್ದು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಗವೀಮಠದಿಂದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸತ್ಕಾರ*

ಮೂಡಲಗಿ- ಮೂಡಲಗಿಯ ಮೂಲ ದೇವರೆಂದೇ ಭಕ್ತರಿಂದ ಕರೆಸಿಕೊಳ್ಳುವ ರೇವಣಸಿದ್ಧ ಗವಿಮಠದ ಮಹಿಮೆ ಅಪಾರವಾದುದ್ದು. ಮಠದ ಭಕ್ತ ವೃಂದದವರ ಆಶಯದಂತೆ ಮುಖ್ಯ ರಸ್ತೆಯಿಂದ ಗವಿಮಠದವರೆಗೆ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ರೇವಣಸಿದ್ಧೇಶ್ವರ ಗವಿ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಗವಿಮಠವು ಇಲ್ಲಿಯ ಆರಾಧ್ಯದೈವವಾಗಿರುವ ಶಿವಬೋಧರಂಗ ಮಠದಂತೆಯೇ ಪ್ರಸಿದ್ಧಿಯಾಗಿದೆ. ಸಿದ್ಧ ಸಂಸ್ಥಾನಮಠದ ಮೂಲ ಪೀಠಾಧಿಪತಿಗಳು ಮೂಡಲಗಿಯಲ್ಲಿ ನೆಲೆಯೂರಲು ರೇವಣಸಿದ್ಧೇಶ್ವರರು …

Read More »

ಮೂಡಲಗಿ ಶಿಕ್ಷಣ ಸಂಸ್ಥೆಯಲ್ಲಿ ಯೋಗ ದಿನಾಚರಣೆಯ ಬೃಹತ್ ಕಾರ್ಯಕ್ರಮ

ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಆತಿಥ್ಯದಲ್ಲಿ ಜೂನ್ 21ರಂದು ಬೆಳಿಗ್ಗೆ 6ಕ್ಕೆ ಸಂಸ್ಥೆಯ ಕಾಲೇಜು ಮೈದಾನದಲ್ಲಿ ಅಂತರ್‍ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಬೃಹತ್‍ವಾಗಿ ಆಚರಿಸಲಿದ್ದಾರೆ. ತಾಲ್ಲೂಕು ಆಡಳಿತ ಕಚೇರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಹೆಸ್ಕಾಂ, ಸಮುದಾಯ ಆರೋಗ್ಯ ಕೇಂದ್ರಗಳ ಸಿಬ್ಬಂದಿ, ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ, ಮಂಜುನಾಥ ಹಾಗೂ ಕರುನಾಡು ಸೈನಿಕ ತರಬೇತಿ ಕೇಂದ್ರಗಳು ಸೇರಿದಂತೆ ವಿವಿಧ ಸಂಘ, ಸಂಸ್ಥೆಯವರು ಯೋಗ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಉದ್ಘಾಟನೆ: ಸಂಸ್ಥೆಯ ಅಧ್ಯಕ್ಷ ವಿಜಯಕುಮರ …

Read More »

ಎಸ್.ಆರ್ ಸಂತಿ ಸರಕಾರಿ ಪಿ.ಯು ಕಾಲೇಜಿನ ೨೦೨೧-೨೦೨೨ ನೇ ಸಾಲಿನ ಪಿಯುಸಿ ಪರೀಕ್ಷಾ ಫಲಿತಾಂಶ

ಮೂಡಲಗಿ : ಸಮೀಪದ ಹಳ್ಳೂರ ಗ್ರಾಮದ ಎಸ್.ಆರ್ ಸಂತಿ ಸರಕಾರಿ ಪಿ.ಯು ಕಾಲೇಜಿನ ೨೦೨೧-೨೦೨೨ ನೇ ಸಾಲಿನ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ವಿದ್ಯಾರ್ಥಿನಿ ಪೂರ್ಣಿಮಾ ಅಂಗಡಿ ವಾಣಿಜ್ಯ ವಿಭಾಗದಲ್ಲಿ ೫೮೬(೯೭.೬೬%) ಅಂಕಗಳನ್ನು ಪಡೆಯುವ ಮೂಲಕ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ಕಲಾ ವಿಭಾಗದಲ್ಲಿ ಸವಿತಾ ಕೌಜಲಗಿ ೫೭೯ (೯೬.೫೦%) ಅಂಕಗಳೊoದಿಗೆ ಶೈಕ್ಷಣಿಕ ಜಿಲ್ಲೆಗೆ ತೃತೀಯ ಸ್ಥಾನಗಳನ್ನು ಪಡೆಯುವ ಮೂಲಕ ಗ್ರಾಮೀಣ ಪ್ರದೇಶದಲ್ಲಿದ್ದರು ಸಹ ಶೈಕ್ಷಣಿಕವಾಗಿ ಸಾಧನೆ ಗೈದಿದ್ದಾರೆ …

Read More »

ರಾಯಣ್ಣ ಕುರಿ ಮತ್ತು ಆಡು ರೈತ ಉತ್ಪಾದಕರ ಸಂಸ್ಥೆಯಿoದ ಕಹಾಮ ಅಧ್ಯಕ್ಷರುರಿಗೆ ಸನ್ಮಾನ

ಮೂಡಲಗಿ: ನೂತನವಾಗಿ ಪ್ರಾರಂಭಗೊoಡಿರುವ ತಾಲೂಕಾ ರಾಯಣ್ಣ ಕುರಿ ಮತ್ತು ಆಡು ರೈತ ಉತ್ಪಾದಕರ ಸಂಸ್ಥೆಯವತಿಯಿoದ ಕಹಾಮ ಅಧ್ಯಕ್ಷರು ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರನ್ನು ಮೂಡಲಗಿಯ ಶಾಸಕರ ಕಛೇರಿಯಲ್ಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪಕ ನಿರ್ಧೇಶಕ ಮಾರುತಿ ಮರಡಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಿದ್ದಾರೋಡ ಪಡೆಪ್ಪಗೋಳ, ನಿರ್ಧೇಶಕರಾದ ಮಡ್ಡೆಪ್ಪ ಕೊರಕಪೂಜೇರ, ಮುತ್ತುರಾಜ ಬಡವಣ್ಣಿ, ಸಿದ್ದು ದೇವರಮನಿ, ಮಾಜಿ ಗ್ರಾಪಂ ಅಧ್ಯಕ್ಷ ಬಸಪ್ಪ ಯಾದವಾಡ, ಲಕ್ಷ್ಮಣ್ ಮರಡಿ, ಲಕ್ಕಪ್ಪ ಕೊರಕಪೂಜೇರ ಹಾಗೂ …

Read More »

ಮಾಜಿ ಸೈನಿಕನ ಮಗಳು ಡಾ.ಮಾಶಾಭಿ ನದಾಫ್ ಅವರಿಗೆ ಎಮ್‍ಡಿ ಪದವಿ

ವರದಿ: ಅಡಿವೇಶ ಮುಧೋಳ. ಬೆಟಗೇರಿ:ಮನುಷ್ಯ ಬದುಕಿನಲ್ಲಿ ಏನೇನ್ನಾದರೂ ಸಾಧಿಸಬೇಕೆಂಬ ಛಲವಿದ್ದರೆ ಯಶಸ್ಸು ಖಂಡಿತಾ ಸಾಧ್ಯವಾಗುತ್ತದೆ ಅಂಬುವುದಕ್ಕೆ ಬೆಳಗಾವಿ ಜಿಲ್ಲೆಯ ನೂತನ ಮೂಡಲಗಿ ತಾಲೂಕಿನ ಹೊನಕುಪ್ಪಿ ಗ್ರಾಮದ ಡಾ.ಮಾಶಾಭಿ ನದಾಫ್ ಅವರೇ ಸಾಕ್ಷಿ.! ನೂತನ ಮೂಡಲಗಿ ತಾಲೂಕಿನ ಸೈನಿಕರ ಗ್ರಾಮ ಎಂದು ಕರೆಯಲ್ಪಡುವ ಹೊನಕುಪ್ಪಿ ಎಂಬ ಪುಟ್ಟ ಹಳ್ಳಿಯ ನಿವೃತ್ತ ಯೋಧ, ಬೆಟಗೇರಿ ಗ್ರಾಮದ ಗ್ರಾಮಲೆಕ್ಕಾಧಿಕಾರಿ ತಂದೆ ಜಾಹೀರ ನದಾಫ್, ತಾಯಿ ಕುಲಸುಮಾ ಆದರ್ಶ ದಂಪತಿಗಳ ಜೇಷ್ಠ ಸುಪುತ್ರಿಯಾಗಿ ಸನ್1993 ಅಕ್ಟೊಬರ್.14 …

Read More »

ಕಾಗಿನೆಲೆಯ ಕನಕಗುರುಪೀಠದ ಬ್ರಹ್ಮಲೀನ ಜಗದ್ಗುರು ಶ್ರೀ ಬೀರೇಂದ್ರಕೇಶವ ತಾರಕಾನಂದ ಪುರಿ ಮಹಾಸ್ವಾಮಿಜಿಯವರ 16 ನೇ ವರ್ಷದ ಪುಣ್ಯಾರಾಧನೆ

ಮೂಡಲಗಿ: ಹಾವೇರಿ ಜಿಲ್ಲೆಯ ಶ್ರೀ ಕ್ಷೇತ್ರ ಕಾಗಿನೆಲೆಯ ಕನಕಗುರುಪೀಠದ ಬ್ರಹ್ಮಲೀನ ಜಗದ್ಗುರು ಶ್ರೀ ಬೀರೇಂದ್ರಕೇಶವ ತಾರಕಾನಂದ ಪುರಿ ಮಹಾಸ್ವಾಮಿಜಿಯವರ 16 ನೇ ವರ್ಷದ ಪುಣ್ಯಾರಾಧನೆ ಹಾಗೂ ಜಗದ್ಗುರು ಶ್ರೀಶ್ರೀಶ್ರೀ ನಿರಂಜನಾನಂದಪುರಿ ಮಹಾಸ್ವಾಜಿಗಳ ಗುರುವಂದನಾ ಮಹೋತ್ಸವವು ಜುಲೈ 13 ರಂದು ಕಾಗಿನೆಲೆಯಲ್ಲಿ ಜರುಗಲಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ರಾಜ್ಯಾಧ್ಯಕ್ಷ ಡಾ. ರಾಜೇಂದ್ರ ಸಣ್ಣಕ್ಕಿ ತಿಳಿಸಿದರು. ಅವರು ರವಿವಾರ ಪಟ್ಟಣದ ಬೀರೇಶ್ವರ ದೇವಸ್ಥಾನದಲ್ಲಿ ಜರುಗಿದ ತಾಲೂಕಾ ಪ್ರದೇಶ ಕುರುಬರ …

Read More »

ಗೋಕಾಕ ನಗರದ ಶಿವಾ ಫೌಂಡೇಶನ ವಿದ್ಯಾರ್ಥಿಗಳಿಗೆ ಬಂಗಾರ ಪದಕ

ಮೂಡಲಗಿ: ಹರಿಯಾಣದಲ್ಲಿ ನಡೆದ ಯೂತ್ ಗೇಮ್ಸ್ ನ್ಯಾಷನಲ್ ಗೋಲ್ಡನ್ ಕಪ್ 2022ರ ಕರಾಟೆ ಸ್ಪರ್ಧೆಯಲ್ಲಿ ಗೋಕಾಕ ನಗರದ ಶಿವಾ ಫೌಂಡೇಶನ ವಿದ್ಯಾರ್ಥಿಗಳು ಬಂಗಾರ ಪದಕ ಹಾಗೂ ಬೆಳ್ಳಿ ಪದಕ ಪಡೆದು ವಿಜೇತರಾದ ಹಿನ್ನಲೆಯಲ್ಲಿ ರಾಜ್ಯಸಭಾ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ಸಂಸದ ಈರಣ್ಣ ಕಡಾಡಿ ಅವರು ಸತ್ಕಾರ ಮಾಡಿ, ಸಿಹಿ ವಿತರಿಸಿ ಇನ್ನೂ ಹೆಚ್ಚಿನ ಸಾಧನೆ ಮಾಡಲು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಖ್ಯಸ್ಥ ಶಾನೂರ ಹಿರೇಹೊಳಿ, ತರಬೇತುದಾರ ದುರ್ಯೋಧನ …

Read More »

ಆರ್.ಡಿ.ಎಸ್. ಪಿ.ಯು ಕಾಲೇಜು ಶೇಕಡ 69 ರಷ್ಟು ಫಲಿತಾಂಶ

ಆರ್.ಡಿ.ಎಸ್. ಪಿ.ಯು ಕಾಲೇಜು ಶೇಕಡ 69 ರಷ್ಟು ಫಲಿತಾಂಶ ಮೂಡಲಗಿ : ಇಲ್ಲಿಯ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯವು ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಶೇ69ರಷ್ಟು ಫಲಿತಾಂಶವನ್ನು ಪಡೆದುಕೊಂಡಿದೆ ಎಂದು ಕಾಲೇಜು ಪ್ರಾಚಾರ್ಯರು ತಿಳಿಸಿರುತ್ತಾರೆ ವಾಣಿಜ್ಯ ವಿಭಾಗದಲ್ಲಿ ವಾಣಿ ಕುಲಕರ್ಣಿ 578 ( ಶೇ 97) ಅಂಕ ಪಡೆದು ಕಾಲೇಜಿಗೆ ಪ್ರಥಮ, ಪವನ ಜಕ್ಕನ್ನವರ 539 (ಶೇ 90) ಅಂಕ ಪಡೆದು ದ್ವೀತಿಯ ಸ್ಥಾನ ಪಡೆದುಕೊಂಡಿದ್ದು, ಕಲಾ ವಿಭಾಗದಲ್ಲಿ ಸೌಜನ್ಯ …

Read More »

*ಮೂಡಲಗಿ ತಾಲೂಕು ಭೂಮಿ ಶಾಖೆಯನ್ನು ಉದ್ಘಾಟಿಸಿದ ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ರಾಜ್ಯ ಸಭೆ ಸದಸ್ಯ ಈರಣ್ಣ ಕಡಾಡಿ, ಜಿಲ್ಲಾಧಿಕಾರಿ ನೀತೇಶ ಪಾಟೀಲ್, ಎಸಿ ಬಗಲಿ ಭಾಗಿ*

ಮೂಡಲಗಿ: ಮೂಡಲಗಿ ತಾಲೂಕಿನ ರೈತರ ಮತ್ತು ಜನಸಾಮಾನ್ಯರ ಅನುಕೂಲಕ್ಕಾಗಿ ಮೂಡಲಗಿಯಲ್ಲಿ ಹೊಸದಾಗಿ ಭೂಮಿ ಶಾಖೆಯನ್ನು ಆರಂಭಿಸಲಾಗಿದೆ ಎಂದು ಕೆಎಮ್‌ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರದಂದು ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ನೂತನವಾಗಿ ಮೂಡಲಗಿ ತಾಲೂಕಿನ ಭೂಮಿ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಗೋಕಾಕ ತಾಲೂಕಿನಲ್ಲಿದ್ದ ಭೂಮಿ ಶಾಖೆಯನ್ನು ಬೇರ್ಪಡಿಸಿ ಮೂಡಲಗಿ ಹೊಸ ತಾಲೂಕಿಗೆ ಭೂಮಿ ಶಾಖೆಯನ್ನು ತೆರೆದಿದ್ದು, ಮೂಡಲಗಿ ತಾಲೂಕಿನ ಎಲ್ಲ ರೈತ ಭಾಂಧವರು ಇದರ …

Read More »

ಬೆಟಗೇರಿ ಪ್ರೌಢ ಶಾಲೆಯಲ್ಲಿ ಹೈಟೆಕ್ ಶೌಚಾಲಯ ಹಾಗೂ ಅಡುಗೆ ಕೋಣೆ ನಿರ್ಮಾಣಕ್ಕೆ ಭೂಮಿ ಪೂಜೆ

ಬೆಟಗೇರಿ:ಗ್ರಾಮದ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಸ್ಥಳೀಯ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಸುಮಾರು 9 ಲಕ್ಷ ರೂ.ಗಳÀಲ್ಲಿ ಹೈಟೆಕ್ ಶೌಚಾಲಯ ಹಾಗೂ ಸುಮಾರು 9 ಲಕ್ಷ ರೂ.ಗಳ ಅನುದಾನದಡಿಯಲ್ಲಿ ಅಡುಗೆ ಕೋಣೆ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ಜೂ.17ರಂದು ನಡೆಯಿತು. ಸ್ಥಳೀಯ ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಗುದ್ದಲಿ ಪೂಜೆ ನೆರವೇರಿಸಿದರು. ಶಾಲೆಯ ಎಸ್‍ಡಿಎಂಸಿ ಮಾಜಿ ಅಧ್ಯಕ್ಷ ಶ್ರೀಶೈಲ ಗಾಣಗಿ …

Read More »