ಬೆಟಗೇರಿ:ಪ್ರತಿಯೊಬ್ಬರೂ ಶ್ರೀರಾಮನ ತತ್ವದಾರ್ಶಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಶ್ರೀರಾಮಚಂದ್ರ ಎಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ಎಲ್ಲರೂ ಸಹೋದರತ್ವ ಭಾವನೆಯಿಂದ ಇರೋಣ ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು. ಬೆಟಗೇರಿ ಗ್ರಾಮದ ಶ್ರೀರಾಮ ವೃತ್ತದಲ್ಲಿ ಮಾ.10ರಂದು ನಡೆದ ನೂತನ ಶ್ರೀರಾಮ ಮೂರ್ತಿಯ ಅನಾವರಣ ಮತ್ತು ಹನುಮಾನ ಮೂರ್ತಿಯ ಪ್ರತಿಷ್ಠಾಪನೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಅರಭಾಂವಿ ಮತ್ತು ಗೋಕಾಕ ಮತಕ್ಷೇತ್ರದ ಎಲ್ಲಾ ಸಮಾಜ ಭಾಂದವರ ಆರ್ಶೀವಾದ ನಮ್ಮ ಜಾರಕಿಹೊಳಿ ಕುಟುಂಬದವರ …
Read More »ರಾಜ್ಯಗಳು ಹಿಂದಿ ಭಾಷಯನ್ನು ಪರಸ್ಪರ ಸಂಪರ್ಕ ಭಾಷಯನ್ನಾಗಿ ಬಳಸಬೇಕು
ಮೂಡಲಗಿ: ರಾಜ್ಯಗಳು ಹಿಂದಿ ಭಾಷಯನ್ನು ಪರಸ್ಪರ ಸಂಪರ್ಕ ಭಾಷಯನ್ನಾಗಿ ಬಳಸಬೇಕು ಎಂದು ಹೇಳಿರುವುದನ್ನು ವಿರೋಧಿಸಿ, ಸಿದ್ದರಾಮಯ್ಯ ನೀಡಿರುವ ಹೇಳಿಕೆಯು ಆತುರಗಾರನಿಗೆ ಬುದ್ದಿ ಮಟ್ಟ ಎಂಬಂತೆ ಭಾಸವಾಗಿದೆ. ಅವರ ಹೇಳಿಕೆಗೆ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸುತ್ತೇನೆ ಎಂದು ರಾಜ್ಯಸಭಾ ಸಂಸದ ಹಾಗೂ ಸಂಸತ್ತಿನ ರಾಜಸಭಾ ಸಮಿತಿ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶನಿವಾರ ಏ-09 ರಂದು ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ಪತ್ರಿಕಾ ಹೇಳಿಕೆ ನೀಡಿದ ಅವರು ನವದೆಹಲಿಯಲ್ಲಿ ನಡೆದ 37ನೆಯ ಸಂಸತ್ತಿನ ರಾಜಸಭಾ …
Read More »ಕಲ್ಲೋಳಿಯ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿಗೆ ರೂ 1.04 ಕೋಟಿ ಲಾಭ ಸಂಸದ ಈರಣ್ಣ ಕಡಾಡಿ
ಮೂಡಲಗಿ : ಗ್ರಾಹಕರಿಗೆ ಅತ್ಯುತ್ತಮ ಸಾಲ ಮತ್ತು ಹೂಡಿಕೆಯ ಅವಕಾಶಗಳನ್ನು ನೀಡುವ ಮೂಲಕ ಗ್ರಾಮೀಣ ಭಾಗದ ಜನರು ಆರ್ಥಿಕ ಸ್ವಾವಲಂಬನೆ ಸಾಧಿಸಲು ನೆರವಾಗುವ ಮೂಲತತ್ವದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ, ಇದರ ಪ್ರಸಕ್ತ ಹಣಕಾಸು ವರ್ಷದಲ್ಲಿ ರೂ 1.04 ಕೋಟಿ ಲಾಭಗಳಿಸಿ ಸಹಕಾರಿಯು ಪ್ರಗತಿಪಥದಲ್ಲಿ ಸಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಕಲ್ಲೋಳಿ ಪಟ್ಟಣದಲ್ಲಿ ಏ-09 …
Read More »ನೂತನವಾಗಿ ನಿರ್ಮಿಸಿರುವ ಶ್ರೀರಾಮ ಮೂರ್ತಿಯ ಅನಾವರಣ ಮತ್ತು ಹನುಮಾನ ಮೂರ್ತಿಯ ಪ್ರತಿಷ್ಠಾಪನೆ
ಬೆಟಗೇರಿ:ಗ್ರಾಮದ ಶ್ರೀರಾಮ ವೃತ್ತದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀರಾಮ ಮೂರ್ತಿಯ ಅನಾವರಣ ಮತ್ತು ಹನುಮಾನ ಮೂರ್ತಿಯ ಪ್ರತಿಷ್ಠಾಪನೆ ಕಳಸಾರೋಹಣ, ದಾನಿಗಳಿಗೆ ಸತ್ಕಾರ ಹಾಗೂ ಅನ್ನಸಂತರ್ಪನೆ ಸಮಾರಂಭ ಮಾ.10ರಂದು ನಡೆಯಲಿದೆ. ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀರಾಮ ಮತ್ತು ಹನುಮಾನ ಮೂರ್ತಿಗೆ ಮಹಾಭಿಷೇಕ, ಮಹಾಪೂಜೆ, ಹೋಮ ನಡೆದ ಬಳಿಕ ಸ್ಥಳೀಯ ಯಲ್ಲಾಲಿಂಗೇಶ್ವರ ಮಠದಿಂದ ಶ್ರೀ ಆಂಜನೇಯ ಮೂರ್ತಿಯ ಮತ್ತು ಕಳಸ, ಕುಂಭ, ಆರತಿ ಸಕಲ ವಾದ್ಯಮೇಳದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ಜರುಗಿದ ನಂತರ …
Read More »ಎ. 11 ರಿಂದ ‘ಸಿದ್ಧ ಸಮಾಧಿ ಯೋಗ-ಎಸ್ಎಸ್ವೈ’ ಶಿಬಿರ
ಎ. 11 ರಿಂದ ಸಿದ್ಧ ಸಮಾಧಿ ಯೋಗ ಶಿಬಿರ ಮೂಡಲಗಿ: ಋಷಿ ಸಂಸ್ಕøತಿ ವಿದ್ಯಾ ಕೇಂದ್ರ ಬೆಂಗಳೂರಿನ, ಶಾಖೆ ಮೂಡಲಗಿಯ ಅರುಣ ಗುರೂಜೀ ಅವರ ಮಾರ್ಗದರ್ಶನದಲ್ಲಿ ಎ. 11 ರಿಂದ ಸಾಯಂಕಾಲ 5.30ಕ್ಕೆ ‘ಸಿದ್ಧ ಸಮಾಧಿ ಯೋಗ-ಎಸ್ಎಸ್ವೈ’ ಶಿಬಿರವನ್ನು ಸ್ಥಳೀಯ ಶಿವಬೋಧರಂಗ ಮಠದ ಆವರಣದಲ್ಲಿ ಏರ್ಪಡಿಸಿರುವರು. ಪ್ರಾಣಾಯಾಮ, ಧ್ಯಾನ, ಯೋಗಾಸನ, ಸೂರ್ಯ ನಮಸ್ಕಾರ, ಗಾಯತ್ರಿ ಮಹಾಮಂತ್ರೋಪದೇಶ ಇವುಗಳ ಜೋತೆಗೆ ಉದ್ವೇಗ, ಒತ್ತಡ ನಿವಾರಣೆ, ಆಹಾರ ಕ್ರಮ, ವಿವಿಧ ಕಾಯಿಲೆಗಳ ನಿವಾರಣೋಪಾಯಗಳಿಗೆ …
Read More »ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ‘ವಿಶ್ವ ಆರೋಗ್ಯ ದಿನಾಚರಣೆ’ ಆಚರಣೆ ‘ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು’
ಮೂಡಲಗಿ: ‘ಪ್ರತಿಯೊಬ್ಬರು ಉತ್ತಮ ಆರೋಗ್ಯವನ್ನು ಹೊಂದುವುದರ ಮೂಲಕ ಆರೋಗ್ಯವಂತ ಸಮಾಜ ನಿರ್ಮಿಸಲು ಮುಂದಾಗಬೇಕು’ ಎಂದು ಡಾ. ತಿಮ್ಮಣ್ಣ ಗಿರಡ್ಡಿ ಹೇಳಿದರು. ಇಲ್ಲಿಯ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದವರು ಪುರಸಭೆಯ ಸಹಯೋಗದಲ್ಲಿ ಗುರುವಾರ ಆಚರಿಸಿದ ವಿಶ್ವ ಆರೋಗ್ಯ ದಿನಾಚರಣೆ ಸಮಾರಂಭ ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು ಪ್ರತಿಯೊಬ್ಬರು ರೋಗವು ದೇಹದಲ್ಲಿ ವ್ಯಾಪಿಸದಂತೆ ಎಚ್ಚರವಹಿಸುವುದು ಮತ್ತು ಮುಂಜಾಗೃತೆ ತೆಗೆದುಕೊಳ್ಳುವುದು ಅವಶ್ಯವಿದೆ ಎಂದರು. ಹೃದಯ, ಕಿಡ್ನಿ, …
Read More »ಸಚಿವ ಉಮೇಶ ಕತ್ತಿಯಿಂದ ಬೆಂಕಿ ಹಚ್ಚುವ ಕೆಲಸ : ಮುರುಘರಾಜೇಂದ್ರ ಮಹಾಸ್ವಾಮಿಗಳು ಕಿಡಿ ಜಾರಕಿಹೊಳಿ ಸಹೋದರರು ಮನಸ್ಸು ಮಾಡಿದರೆ ಮಾತ್ರ ಗೋಕಾಕ ಜಿಲ್ಲಾ ರಚನೆ ಗೋಕಾಕ ಜಿಲ್ಲೆಯಾಗದಿದ್ದಲ್ಲಿ ಎಲ್ಲ ಅಹಿತಕರ ಘಟನೆಗಳಿಗೆ ಸರ್ಕಾರ ಮತ್ತು ಉಮೇಶ ಕತ್ತಿ ಕಾರಣ
ಗೋಕಾಕ : ಬೆಳಗಾವಿ ಜಿಲ್ಲಾ ವಿಭಜನೆ ಕುರಿತಂತೆ ಅಪ್ರಬುದ್ಧ ಹೇಳಿಕೆ ನೀಡುವ ಮೂಲಕ ಗೋಕಾಕ ತಾಲೂಕಿನ ಜನರ ಸ್ವಾಭಿಮಾನಕ್ಕೆ ಧಕ್ಕೆ ತಂದಿರುವ ಸಚಿವ ಉಮೇಶ ಕತ್ತಿ ಅವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇಂತಹ ಸಚಿವರಿಗೆ ಮುಖ್ಯಮಂತ್ರಿಗಳು ತಾಕೀತು ಮಾಡಬೇಕು. ಗೋಕಾಕನ್ನು ನೂತನ ಜಿಲ್ಲಾ ಕೇಂದ್ರವನ್ನಾಗಿ ಕೂಡಲೇ ಘೋಷಿಸುವಂತೆ ಸ್ಥಳೀಯ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಮಹಾಸ್ವಾಮಿಗಳು ಸರ್ಕಾರವನ್ನು ಆಗ್ರಹಿಸಿದರು. ಗುರುವಾರದಂದು ನಿಯೋಜಿತ ಗೋಕಾಕ ಜಿಲ್ಲಾ ರಚನಾ ಹೋರಾಟ …
Read More »ಯಾದವಾಡದಲ್ಲಿ 75 ಲಕ್ಷ ರೂ. ವೆಚ್ಚದ ನೂತನ ಪಿಎಚ್ಸಿ ಕಟ್ಟಡಕ್ಕೆ ಗುದ್ದಲಿ ಪೂಜೆ
ಯಾದವಾಡದಲ್ಲಿ 75 ಲಕ್ಷ ರೂ. ವೆಚ್ಚದ ನೂತನ ಪಿಎಚ್ಸಿ ಕಟ್ಟಡಕ್ಕೆ ಗುದ್ದಲಿ ಪೂಜೆ ಮೂಡಲಗಿ : ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ದೂರದೃಷ್ಟಿಯ ನಾಯಕತ್ವದಿಂದಾಗಿ ಇಡೀ ಅರಭಾವಿ ಕ್ಷೇತ್ರ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಎಲ್ಲ ಕ್ಷೇತ್ರಗಳಿಗೂ ಹಾಗೂ ಸರ್ವ ಜನಾಂಗದ ಏಳ್ಗೆಗಾಗಿ ಶ್ರಮಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರು ಅಭಿವೃದ್ಧಿಯ ಧೃವತಾರೆ ಎಂದು ಯಾದವಾಡ ಜಿಪಂ ಮಾಜಿ ಸದಸ್ಯ ಗೋವಿಂದ ಕೊಪ್ಪದ ಹೇಳಿದರು. ಬುಧವಾರದಂದು ತಾಲೂಕಿನ ಯಾದವಾಡ …
Read More »ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಸ್ಥೆಗೆ ರೂ.2.81 ಕೋಟಿ ಲಾಭ
ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಬಸವೇಶ್ವರ ಅರ್ಬನ ಕ್ರೆಡಿಟ ಸೌಹಾರ್ದ ಸಹಕಾರಿ ಸಂಸ್ಥೆಯು ಸತತ 31 ವರ್ಷಗಳಿಂದ ಶೇಕಡಾ 100% ವಸೂಲಾತಿಯೊಂದಿಗೆ ಮಾರ್ಚ ಅಂತ್ಯಕ್ಕೆ ರೂ 2.81 ಕೋಟಿ ಲಾಭ ಗಳಿಸಿ ಪ್ರಗತಿಯಲ್ಲಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಬಾಳಪ್ಪ ಬಸಪ್ಪ ಬೆಳಕೂಡ ತಿಳಿಸಿದರು. ಸಂಸ್ಥೆಯ ಪ್ರಗತಿಯ ಕುರಿತು ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಸೊಸೈಟಿಯು ಸದ್ಯ 79.20 ಲಕ್ಷ ರೂ ಶೇರು ಬಂಡವಾಳ, ರೂ.34.70 …
Read More »*ತೊಂಡಿಕಟ್ಟಿ ಪಿಕೆಪಿಎಸ್ ದಲ್ಲಿ ಡಾ.ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ*
ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಹಸಿರು ಕ್ರಾಂತಿಯ ಹರಿಕಾರ ಮತ್ತು ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ 115ನೇ ಜನ್ಮದಿನಾಚರಣೆಯನ್ನು ಆಚರಿಸಿದರು. ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಕ ಸಿ. ಎಂ. ಹಿರೇಮಠ ಅವರು ಡಾ.ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪೂಜೆಸಲ್ಲಿಸಿದರು. ಈ ಸಮಯದಲ್ಲಿ ಸಂಘದ ಸಿಬ್ಬಂದಿಗಳಾದ ಜನಾರ್ಧನ್ ದಾಸರ, ಮಹಾದೇವ ಮಡಿವಾಳ,ವಿಠ್ಠಲ್ ಉದ್ದಪ್ಪನ್ನವ ಮತ್ತಿತರು ಇದ್ದರು
Read More »