Breaking News
Home / inmudalgi (page 171)

inmudalgi

ರಾಜ್ಯಸಭೆಗೆ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಕರ್ನಾಟಕದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ

ಮೂಡಲಗಿ: ಕೇಂದ್ರ ಸರ್ಕಾರದಿಂದ ರಾಜ್ಯಸಭೆಗೆ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಕರ್ನಾಟಕದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ, ತಮಿಳುನಾಡಿನಿಂದ ಸಂಗೀತ ನಿರ್ದೇಶಕರಾದ ಇಳಯರಾಜ, ಕೇರಳದಿಂದ ಪ್ರಸಿದ್ಧ ಕ್ರೀಡಾಪಟು ಪಿ.ಟಿ ಉಷಾ ಹಾಗೂ ಆಂಧ್ರಪ್ರದೇಶದಿಂದ ಖ್ಯಾತ ಕಥೆಗಾರರಾದ ವಿಜಯೇಂದ್ರ ಪ್ರಸಾದ್ ಅವರನ್ನು ಆಯ್ಕೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುವುದಾಗಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ತಿಳಿಸಿದರು. ಹಲವು ದಶಕಗಳಿಂದ ಧಾರ್ಮಿಕ, ಶಿಕ್ಷಣ, ಆರೋಗ್ಯ ಕ್ಷೇತ್ರ ಸೇರಿದಂತೆ ಮಹಿಳಾ …

Read More »

ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮಹಾಮಂಡಳಕ್ಕೆ ಅವಿರೋಧ ಆಯ್ಕೆ , ಹಿಡಕಲ್ ಡ್ಯಾಂ ನೀರು ಬಳಕೆದಾರರ ಸಂಘದ ನೂತನ ಅಧ್ಯಕ್ಷರಾಗಿ ಅಶೋಕ ಖಂಡ್ರಟ್ಟಿ, ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ ಹುಂಡೇಕರ

ಗೋಕಾಕ : ಹಿಡಕಲ್ ಡ್ಯಾಂ ಘಟಪ್ರಭಾ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರಿ ಸಂಘಗಳ ಮಹಾಮಂಡಳದ ನೂತನ ಅಧ್ಯಕ್ಷರಾಗಿ ಗೋಕಾಕ ತಾಲೂಕಿನ ದುರದುಂಡಿ ಗ್ರಾಮದ ಅಶೋಕ ಶಿವಪುತ್ರ ಖಂಡ್ರಟ್ಟಿ ಹಾಗೂ ಉಪಾಧ್ಯಕ್ಷರಾಗಿ ಮುಗಳಖೋಡ ಗ್ರಾಮದ ಮಲ್ಲಿಕಾರ್ಜುನ ಪರಮಾನಂದ ಹುಂಡೇಕರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರದಂದು ಹಿಡಕಲ್ ಡ್ಯಾಂನ ಮಹಾಮಂಡಳದ ಪ್ರಧಾನ ಕಛೇರಿಯಲ್ಲಿ ಜರುಗಿದ ಮಹಾಮಂಡಳದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ …

Read More »

ಬೆಟಗೇರಿ-ನಿಂಗಾಪೂರ-ಕಪರಟ್ಟಿ ರಸ್ತೆ ಅಭಿವೃದ್ಧಿಗೆ 6 ಕೋಟಿ ರೂ.ಅನುದಾನ

ಬೆಟಗೇರಿ:ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಬೆಟಗೇರಿ-ನಿಂಗಾಪೂರ-ಕಪರಟ್ಟಿ ರಸ್ತೆ ಅಭಿವೃದ್ಧಿಗೆ 6 ಕೋಟಿ ರೂ.ಅನುದಾನ ಬಿಡುಗಡೆಗೊಂಡಿದೆ ಎಂದು ಬೆಟಗೇರಿ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಹೇಳಿದರು. ಅರಭಾಂವಿ ಮತಕ್ಷೇತ್ರ ವ್ಯಾಪ್ತಿಯ ಬೆಟಗೇರಿ ಗ್ರಾಮದಲ್ಲಿ ಬುಧವಾರದಂದು 2021-22 ನೇ ಸಾಲಿನ ರಾಜ್ಯ ಹೆದ್ದಾರಿ ಸುಧಾರಣೆಗೆ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 6 ಕೋಟಿ ರೂ.ಮೊತ್ತದ ಬೆಟಗೇರಿ-ನಿಂಗಾಪೂರ-ಕಪರಟ್ಟಿ ರಸ್ತೆ ಸುಧಾರಣೆ ಕಾಮಗಾರಿಯ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿ, ಕ್ಷೇತ್ರದಲ್ಲಿ ಹದೆಗೆಟ್ಟ …

Read More »

ರೈಲ್ವೆ ಉನ್ನತ ಅಧಿಕಾರಿಗಳ ಸಭೆ ನಡೆಸಿದ ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯ: ಈರಣ್ಣ ಕಡಾಡಿ

ಹಲವು ಬೇಡಿಕೆಗಳೊಂದಿಗೆ ರೈಲ್ವೆ ಉನ್ನತ ಅಧಿಕಾರಿಗಳ ಸಭೆ ನಡೆಸಿದ ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯ: ಈರಣ್ಣ ಕಡಾಡಿ ಆಗಸ್ಟ 15ರೊಳಗೆ ಹುಬ್ಬಳ್ಳಿ-ಮಿರಜ್ ಪ್ಯಾಸೆಂಜರ್ ರೈಲು ಪ್ರಾರಂಭ ಮೂಡಲಗಿ: ಬೆಳಗಾವಿ ಜಿಲ್ಲೆಗೆ ಅಗತ್ಯವಿರುವ ಹಲವು ಬೇಡಿಕೆಗಳೊಂದಿಗೆ ಸೋಮವಾರ ಸಂಜೆ ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯರಾಗಿರುವ ರಾಜ್ಯಸಭಾ ಸಂಸದ ಈರಣ್ಣ ಕಡಾಡಿಯವರು ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರ ಹಾಗೂ ಹಿರಿಯ ಅಧಿಕಾರಿಗಳ ಜತೆ ಸಭೆಯನ್ನು ಹುಬ್ಬಳ್ಳಿ ನೈರುತ್ಯ …

Read More »

ಬೆಟಗೇರಿ ಗ್ರಾಮದಲ್ಲಿ ಐದು ದಿನ ಕಟ್ಟಾ ವಾರ ಆಚರಣೆ

ಗಬೆಟಗೇರಿ:ಗ್ರಾಮದಲ್ಲಿ ಜನ-ಜಾನುವಾರುಗಳಿಗೆ ರೋಗ-ರುಜೀನ ಬರದಂತೆ ಹಾಗೂ ಸಕಾಲಕ್ಕೆ ಮಳೆಯಾಗದಿದ್ದ ಕಾರಣ ಮಳೆಗಾಗಿ ಕಟ್ಟಾ ವಾರ ಹಿಡಿದ ಹಿನ್ನಲೆಯಲ್ಲಿ ಗ್ರಾಮದ ಪ್ರಮುಖ ಓಣಿಯ ಬೀದಿ, ಮುಖ್ಯ ಸ್ಥಳಗಳು ಮಂಗಳವಾರ ಜು.5ರಂದು ಬೀಕೂ ಎನ್ನುತ್ತಿದ್ದವು. ಜು.5 ರಂದು ಸಂಜೆ 6 ಗಂಟೆಗೆ ಊರಿನ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳಗಳೊಂದಿಗೆ ಪುರ ದೇವರ ಪಲ್ಲಕ್ಕಿ ಉತ್ಸವದ ಮೂಲಕ ಗ್ರಾಮದ ನಾಲ್ಕು ದಿಕ್ಕುಗಳ ಮುಖ್ಯ ರಸ್ತೆಗಳಿಗೆ ಊರಿನ ಸೀಮೆಗೆ ಕರಿ ಕಟ್ಟುವದು ನಡೆಯಿತು. ಸ್ಥಳೀಯರಿಂದ ಪುರದೇವರ …

Read More »

ಬಾಲಶೇಖರ ಬಂದಿ ಅವರಿಗೆ ಅಂತರ್‍ರಾಷ್ಟ್ರೀಯ ಲಯನ್ಸ್ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಪ್ರಶಂಸನಾ ಪ್ರಶಸ್ತಿ

ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಅಧ್ಯಕ್ಷ ಬಾಲಶೇಖರ ಬಂದಿ ಅವರಿಗೆ ಅಂತರ್‍ರಾಷ್ಟ್ರೀಯ ಲಯನ್ಸ್ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಪ್ರಶಂಸನಾ ಪ್ರಶಸ್ತಿಯನ್ನು ಲಯನ್ಸ್ ಜಿಲ್ಲಾ ಗವರ್ನರ್ ಶ್ರೀಕಾಂತ ಮೋರೆ ಅವರು ಇತ್ತಿಚೆಗೆ ಗೋವಾದಲ್ಲಿ ಜರುಗಿದ ವಾರ್ಷಿಕ ಸಮಾವೇಶದಲ್ಲಿ ಪ್ರದಾನ ಮಾಡಿದರು ಬಾಲಶೇಖರ ಬಂದಿಗೆ ಅಂತರ್‍ರಾಷ್ಟ್ರೀಯ ಲಯನ್ಸ್ ಪ್ರಶಸ್ತಿ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಅಧ್ಯಕ್ಷ ಬಾಲಶೇಖರ ಬಂದಿ ಅವರು ಅಂತರ್‍ರಷ್ಟ್ರೀಯ ಲಯನ್ಸ್ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರ ಪ್ರಶಂಸನಾ ಪ್ರಶಸ್ತಿ ಪಡೆದುಕೊಂಡಿದ್ದಾರೆ. …

Read More »

ಯೋಧ ಮಲ್ಲಪ್ಪ ಕಂಕಣವಾಡಿ ಅವರ ಸೇನಾ ನಿವೃತ್ತಿಯ ಅಭಿನಂದನಾ ಸಮಾರಂಭ

ಮೂಡಲಗಿ: ಅಗ್ನಿಪಥ್ ಯೋಜನೆ ನರೇಂದ್ರ ಮೋದಿ ಸರ್ಕಾರದ ಕ್ರಾಂತಿಕಾರಿ ಯೋಜನೆಯಾಗಿದ್ದು, ಈ ಯೋಜನೆಯ ಮೂಲಕ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸೇನೆಗೆ ಸೇರಿ ದೇಶ ಸೇವೆ ಮಾಡುವ ಮುಖಾಂತರ ವಿಶ್ವದಲ್ಲಿ ಭಾರತದ ಸೇನೆಯನ್ನು ಬಲಿಷ್ಠಗೊಳಿಸಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹೇಳಿದರು. ಜು.2 ಶನಿವಾರ ರಂದು ಕಲ್ಲೋಳಿ ಪಟ್ಟಣದ ಯೋಧ ಮಲ್ಲಪ್ಪ ಕಂಕಣವಾಡಿ ಅವರ ಸೇನಾ ನಿವೃತ್ತಿಯ ಅಭಿನಂದನಾ ಸಮಾರಂಭದಲ್ಲಿ ಅವರನ್ನು ಸತ್ಕರಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರುಅಗ್ನಿಪಥ್ …

Read More »

ವಿದ್ಯಾರ್ಥಿ ಜೀವನದಲ್ಲಿಯೇ ಪರೀಕ್ಷೆಗಳು ಅತ್ಯಂತ ಮಹತ್ವದ್ದಾಗಿವೆ- ಚಿಕ್ಕೋಡಿ ಡಿಡಿಪಿಐ ಮೋಹನಕುಮಾರ ಹಂಚಾಟೆ

ಮೂಡಲಗಿ : ವಿದ್ಯಾರ್ಥಿ ಜೀವನದಲ್ಲಿಯೇ ಪರೀಕ್ಷೆಗಳು ಅತ್ಯಂತ ಮಹತ್ವದ್ದಾಗಿವೆ. ಅತೀ ಹೆಚ್ಚು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಯಶಸ್ವಿ ದಿಕ್ಕಿನಲ್ಲಿ ಸಾಗಿದಾಗ ಮಾತ್ರ ಉಜ್ವಲವಾದ ಭವಿಷ್ಯವನ್ನು ನಿರ್ಮಿಸಿಕೋಳ್ಳಲು ಸಾದ್ಯ ಎಂದು ಚಿಕ್ಕೋಡಿ ಡಿಡಿಪಿಐ ಮೋಹನಕುಮಾರ ಹಂಚಾಟೆ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಶನಿವಾರ ಪಟ್ಟಣದ ಬಾಗೋಜಿ ಶಿಕ್ಷಣ ಸಂಸ್ಥೆಯಲ್ಲಿ ಜರುಗಿದ ೨೦೨೨-೨೩ ನೇ ಸಾಲಿನ ಎಸ್.ಎಸ್.ಎಲ್.ಸಿ ತರಗತಿ ಶಿಕ್ಷಕರ ಹಾಗೂ ಎನ್.ಎನ್.ಎಮ್.ಎಸ್ ಪ್ರತಿಭಾನ್ವೇಷನೆ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ಸತ್ಕಾರ ಸಮಾರಂಭದಲ್ಲಿ ಭಾಗವಹಿಸಿ …

Read More »

ಕೃಷಿ ಉಡಾನ್ 2.0 ಯೋಜನೆಯಡಿ ಬೆಳಗಾವಿ ವಿಮಾನ ನಿಲ್ದಾಣ ಆಯ್ಕೆ

ಮೂಡಲಗಿ: ಕೃಷಿ ಉಡಾನ್ 2.0 ಯೋಜನೆಯಡಿ ಬೆಳಗಾವಿ ವಿಮಾನ ನಿಲ್ದಾಣ ಆಯ್ಕೆಯಾಗಿದ್ದು, ಇದರಿಂದಾಗಿ ಈ ಭಾಗದ ಕೃಷಿ ಉತ್ಪನ್ನಗಳ ಸಾಗಾಟ-ಮಾರಾಟಕ್ಕೆ ಹೆಚ್ಚಿನ ಉತ್ತೇಜನೆ ಸಿಗಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ. ಕೇಂದ್ರ ವಿಮಾನಯಾನ ಸಚಿವಾಲಯವು ಕೃಷಿ ಉಡಾನ್ 2.0 ಯೋಜನೆಯಡಿ ಮೊದಲ ಹಂತದಲ್ಲಿ ಒಟ್ಟು 53 ವಿಮಾನ ನಿಲ್ದಾಣಗಳಲ್ಲಿ ಅನುಷ್ಠಾನಗೊಳಿಸಲಾಗಿದೆ. ಎರಡನೆಯ ಹಂತದಲ್ಲಿ ಹೊಸ 5 ವಿಮಾನ ನಿಲ್ದಾಣಗಳನ್ನು ಆಯ್ಕೆ ಮಾಡಿದೆ. ಅದರಲ್ಲಿ …

Read More »

ಸಕ್ಕರೆ ತಂತ್ರಜ್ಞಾನ ಪದವಿ ಅಧ್ಯಯನಕ್ಕೆ ಅವಕಾಶ

ಮೂಡಲಗಿ: ಬೆಳಗಾವಿಯ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಆಶ್ರಯದಲ್ಲಿ ನಡೆಯುತ್ತಿರುವ ಸಕ್ಕರೆ ವಿಜ್ಞಾನ ಮತ್ತು ತಂತ್ರಜ್ಞಾನ ಮಹಾವಿದ್ಯಾಲಯದಲ್ಲಿ ಪ್ರಥಮ ಬಿ.ಎಸ್‍ಸಿ ಸಕ್ಕರೆ ವಿಜ್ಞಾನ ಓದುವುದಕ್ಕೆ ವಿದ್ಯಾರ್ಥಿಗಳಿಗೆ ಪ್ರವೇಶ ಆರಂಭವಾಗಿದೆ. ಪಿ.ಯು.ಸಿ ವಿಜ್ಞಾನ ಪರೀಕ್ಷೆ ಪಾಸಾದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರವೇಶ ಪಡೆದು ಇದರ ಉಪಯೋಗ ಪಡೆದುಕೊಳ್ಳಬಹುದು ಎಂದು ಸಕ್ಕರೆ ಸಂಸ್ಥೆಯ ನಿರ್ದೇಶಕ ಡಾ. ಬಿ.ಆರ್ ಖಾಂಡಗಾವೆ ಹೇಳಿದರು. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕರ್ನಾಟಕದಲ್ಲಿ 70 ಸಕ್ಕರೆ ಕಾರಖಾನೆಗಳು ಕಾರ್ಯನಿರ್ವಹಿಸುತ್ತಿವೆ. ದೇಶದಲ್ಲಿ 600ಕ್ಕೂ …

Read More »