Breaking News
Home / inmudalgi (page 212)

inmudalgi

  ‘ಸಕ್ಕರೆ ಮತ್ತು ರಕ್ತದೊತ್ತಡ ಕಾಯಿಲೆಗಳ ಬಗ್ಗೆ ಎಚ್ಚರವಹಿಸಿರಿ’

   ‘ಸಕ್ಕರೆ ಮತ್ತು ರಕ್ತದೊತ್ತಡ ಕಾಯಿಲೆಗಳ ಬಗ್ಗೆ ಎಚ್ಚರವಹಿಸಿರಿ’ ಮೂಡಲಗಿ: ‘ಸಕ್ಕರೆ ಕಾಯಿಲೆ ಮತ್ತು ರಕ್ತದೊತ್ತಡ ಕಾಯಿಲೆಗಳು ದೇಹದಲ್ಲಿ ಆಶ್ರಯ ಪಡೆಯುವದಕ್ಕಿಂತ ಮುಂಚೆ ಪ್ರತಿಯೊಬ್ಬರು ಎಚ್ಚರವಹಿಸಬೇಕು’ ಎಂದು ಚಿಕ್ಕೋಡಿಯ ಹೆಚ್ಚುವರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ಗಡೇದ ಅವರು ಹೇಳಿದರು. ಇಲ್ಲಿಯ ಅಂಜುಮನ್ ಎ ಇಸ್ಲಾಂ ಸೊಸೈಟಿ ಹಾಗೂ ಖಿದಮತ್ ಸೋಸಿಯಲ್ ವೆಲಪೇರ್ ಕಮಿಟಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಕಚೇರಿ …

Read More »

ಬೆಟಗೇರಿ ಗ್ರಾಮದಲ್ಲಿ ಮಾ.27 ರಂದು ಸಂಜೀವಿನಿ ಮಾಸಿಕ ಸಂತೆ * ಸ್ಥಳೀಯವಾಗಿ ಉತ್ಪಾದಿಸಿದ ಉತ್ಪನ್ನಗಳು * ವಸ್ತು ಪ್ರದರ್ಶನ ಮತ್ತು ಮಾರಾಟ ಬೆಟಗೇರಿ: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಕೌಸಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಳಗಾವಿ ಜಿಲ್ಲಾ ಪಂಚಾಯತ, ಗೋಕಾಕ ತಾಲೂಕಾ ಪಂಚಾಯತ ಹಾಗೂ ಬೆಟಗೇರಿ ಗ್ರಾಮ ಪಂಚಾಯತಿ ಸಹಯೋಗದೊಂದಿಗೆ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಇದೇ ಮಾ.27ರಂದು ಸಂಜೀವಿನಿ ಮಾಸಿಕ ಸಂತೆ ನಡೆಯಲಿದೆ. …

Read More »

ವಿದ್ಯಾರ್ಥಿಗಳ ಜೀವನ ಶೈಲಿಯನ್ನು ಸುಧಾರಿಸಿ, ಉತ್ತಮ ಪ್ರಜೆಗಳನ್ನಾಗಿ ನಿರ್ಮಾಣ ಮಾಡುವಲ್ಲಿ ಶಿಕ್ಷಣ ಬಹುಮುಖ್ಯ ಪಾತ್ರ ವಹಿಸುತ್ತದೆ -ಡಾ. ಮೋಹನಕುಮಾರ ಭಸ್ಮೆ

ಮೂಡಲಗಿ: ವಿದ್ಯಾರ್ಥಿಗಳ ಜೀವನ ಶೈಲಿಯನ್ನು ಸುಧಾರಿಸಿ, ಉತ್ತಮ ಪ್ರಜೆಗಳನ್ನಾಗಿ ನಿರ್ಮಾಣ ಮಾಡುವಲ್ಲಿ ಶಿಕ್ಷಣ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದು ನಿಪ್ಪಾಣಿಯ ತಹಶೀಲ್ದಾರ ಡಾ. ಮೋಹನಕುಮಾರ ಭಸ್ಮೆ ಹೇಳಿದರು. ಪಟ್ಟಣದ ಶ್ರೀ ಸಾಯಿ ವಿಜ್ಞಾನ ಮತ್ತು ವಾಣಿಜ್ಯ ಪ.ಪೂ ಕಾಲೇಜಿನ ಆವರಣದಲ್ಲಿ ಜರುಗಿದ, ಪಿಯೂಸಿ ವಿದ್ಯಾರ್ಥಿಗಳ ಬೀಳ್ಕೋಡುಗೆ ಸಮಾರಂಭವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾವಂತರಿಗೆ ತಮ್ಮ ಜೀವನ, ಜೀವನ ಶೈಲಿ ಬದಲಿಸಿಕೊಳ್ಳುವ ಸಾಮಥ್ರ್ಯವಿರುತ್ತದೆ. ಜೀವನವನ್ನು ಮುನ್ನೇಡೆಸಲು ಹಲವು …

Read More »

ಸದಾ ಕಾಲ ಸಾಹಿತ್ಯ ಕ್ಷೇತ್ರಕ್ಕೆ ತನ್ನದೆ ವಿಶಿಷ್ಠ ಕೊಡುಗೆ ನೀಡುತ್ತಿರುವ ಉತ್ತರ ಕರ್ನಾಟಕ – ಮೃತ್ಯುಂಜಯ ದೊಡ್ಡವಾಡ

ಮೂಡಲಗಿ: ಸದಾ ಕಾಲ ಸಾಹಿತ್ಯ ಕ್ಷೇತ್ರಕ್ಕೆ ತನ್ನದೆ ವಿಶಿಷ್ಠ ಕೊಡುಗೆ ನೀಡುತ್ತಿರುವ ಉತ್ತರ ಕರ್ನಾಟಕದಲ್ಲಿ ಸಾಮಾಜಿಕ, ಸಾಂಸ್ಕೃತಿಕ, ಐತಿಹಾಸಿಕ, ಜಾನಪದ ಹೀಗೆ ಎಲ್ಲ ಕ್ಷೇತ್ರಗಳಿಗೂ ತನ್ನ ಪತ್ರಿಭೆಗಳನ್ನು ಧಾರೆ ಎರೆದಿದೆ. ಅಪಾರ ಪ್ರಮಾಣದ ವೈವಿಧ್ಯಪೂರ್ಣ ಜ್ಞಾನ ಸಂಪತ್ತಿನ ಕೃತಿಗಳನ್ನು ನಾಡಿಗೆ ನೀಡಿದ ನೆಲವಿದು ಎಂದು ಬೆಂಗಳೂರಿನ ಖ್ಯಾತಗಾಯಕ ಮೃತ್ಯುಂಜಯ ದೊಡ್ಡವಾಡ ಹೇಳಿದರು. ಬುಧುವಾರ ಸಂಜೆ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬೆಂಗಳೂರಿನ ಇಂಡಿಯನ್ ಮ್ಯೂಜಿಕ್ ಅನೋಸಿಯೇಷನ್ ಹಾಗೂ …

Read More »

ವಿವಿಧ ಯೋಜನೆಗಳ ಸದುಪಯೋಗ ಸ್ಥಳೀಯರು ಪಡೆದುಕೊಳ್ಳಬೇಕು: ಪಿಡಿಒ ಎಮ್.ಎಲ್ ಯಡ್ರಾಂವಿ

ವಿವಿಧ ಯೋಜನೆಗಳ ಸದುಪಯೋಗ ಸ್ಥಳೀಯರು ಪಡೆದುಕೊಳ್ಳಬೇಕು: ಪಿಡಿಒ ಎಮ್.ಎಲ್ ಯಡ್ರಾಂವಿ ಬೆಟಗೇರಿ:ಸರ್ಕಾರ ವಿವಿಧ ಇಲಾಖೆಗಳ ಮೂಲಕ ಸ್ಥಳೀಯರಿಗೆ, ಗ್ರಾಮದ ಸಮಗ್ರ ಪ್ರಗತಿಗೆ ಸಾಕಷ್ಟು ಯೋಜನೆಗಳಿಂದ ಸಹಾಯ ಸಹಕಾರ ನೀಡುತ್ತಿದೆ. ಇಲ್ಲಿಯ ಗ್ರಾಪಂ ಸಹಯೋಗದ ವಿವಿಧ ಯೋಜನೆಗಳ ಸದುಪಯೋಗವನ್ನು ಸ್ಥಳೀಯರು ಪಡೆದುಕೊಳ್ಳಬೇಕು ಎಂದು ಗೋಸಬಾಳ ಗ್ರಾಮ ಪಂಚಾಯತಿ ಪಿಡಿಒ ಎಮ್.ಎಲ್ ಯಡ್ರಾಂವಿ ಹೇಳಿದರು. ಸಮೀಪದ ಗೋಸಬಾಳ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಮಾ.22ರಂದು ನಡೆದ ಸನ್ 2021-22ನೇ ಸಾಲಿನ 2ನೇ ಸುತ್ತಿನ ಗ್ರಾಮ …

Read More »

ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳ ಬಿಳ್ಕೂಡುಗೆ

ಬೆಟಗೇರಿ:ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳ ಬಿಳ್ಕೂಡುವ ಸಮಾರಂಭ ಮಾ.22ರಂದು ಜರುಗಿತು. ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಲೋಕನ್ನವರ ಜ್ಯೋತಿ ಬೆಳಗಿಸಿದರು. ಸ್ಥಳೀಯ ಪ್ರೌಢ ಶಾಲೆ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಸಂಗಯ್ಯ ಹಿರೇಮಠ ಸಾನಿಧ್ಯ, ಶಾಲೆಯ ಮುಖ್ಯಶಿಕ್ಷಕ ವೈ.ಸಿ.ಶೀಗಿಹಳ್ಳಿ ಅಧ್ಯಕ್ಷತೆ ವಹಿಸಿದ್ದರು. ಕಳೆದ ಸಾಲಿನಲ್ಲಿ ಶಾಲೆಗೆ ಪ್ರಥಮ,ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳು, …

Read More »

ಮಾ.24ರಂದು ಉಚಿತ ಬಿ ಪಿ ಶುಗರ್ ಹಾಗೂ ಕಣ್ಣು ತಪಾಸಣೆ ಶಿಬಿರ

ಮಾ.24ರಂದು ಉಚಿತ ಬಿ ಪಿ ಶುಗರ್ ಹಾಗೂ ಕಣ್ಣು ತಪಾಸಣೆ ಶಿಬಿರ ಮೂಡಲಗಿ: ಇಲ್ಲಿನ ಅಂಜುಮನ್ ಎ ಇಸ್ಲಾಂ ಎಜುಕೇಷನ್ ಹಾಗೂ ಸೋಶಿಯಲ್ ಡೆವಲೆಪಮೆಂಟ ಸೊಸೈಟಿ ವತಿಯಿಂದ ಮಾ.24ರಂದು ಬೆ.10 ರಿಂದ ಸಾಯಂಕಾಲ 5ಗಂಟೆಯ ವರೆಗೆ ಪಟ್ಟಣದ ಮದರಸಾ ದಾರುಲ ಉಲೂಮ ಆವರಣದಲ್ಲಿ ಉಚಿತ ಬಿ.ಪಿ ಶುಗರ್ ಹಾಗೂ ಕಣ್ಣು ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ. ಅರಭಾಂವಿ ಶಾಸಕ ಹಾಗೂ ಕೆ ಎಮ್ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸುವರು. …

Read More »

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಂಧಾನದ ಫಲ ಯಶಸ್ವಿ ಕಲಾ ವಿಭಾಗದ ಪದವಿ ಪರೀಕ್ಷೆಗಳು ಹಾರೂಗೇರಿ ಬದಲು ಮೂಡಲಗಿಯಲ್ಲಿ

ಮೂಡಲಗಿ : ಇಂದಿನಿoದ ನಡೆಯಬೇಕಿದ್ದ ಪದವಿ(ಕಲಾ ವಿಭಾಗ) ಪರೀಕ್ಷೆಗಳನ್ನು ಮಾರ್ಚ 25 ರಿಂದ ಎಪ್ರೀಲ್ 11 ರವರೆಗೆ ನಡೆಸಲು ಉದ್ಧೇಶಿಸಲಾಗಿದ್ದು, ಪರೀಕ್ಷಾ ಕೇಂದ್ರದ ಬದಲಾವಣೆ ಕುರಿತಂತೆ ಎದ್ದಿರುವ ವಿವಾದವು ಇದೀಗ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಮುತುವರ್ಜಿಯಿಂದ ಬಗೆಹರಿದಿದ್ದು, ಪರೀಕ್ಷೆಯನ್ನು ಮೂಡಲಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮೂಡಲಗಿ ಪಟ್ಟಣದ ಎಂಇಎಸ್ ಕಾಲೇಜಿನ ಕಲಾ ವಿಭಾಗದ ಕೇಂದ್ರವನ್ನು ನೆರೆಯ ರಾಯಬಾಗ ತಾಲೂಕಿನ …

Read More »

ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣ ಸ್ವಚ್ಛತೆ

  ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಹಾಗೂ ಮೂಡಲಗಿ ಪುರಸಭೆಯಿಂದ ಮಂಗಳವಾರ ಇಲ್ಲಿಯ ಸರ್ಕಾರಿ ಪ್ರಾಥಮಿಕ ಗಂಡು ಮಕ್ಕಳ ಶಾಲೆಯ ಆವರಣದಲ್ಲಿ 75ನೇ ಆಜಾದಿ ಕಿ ಅಮೃತಮಹೋತ್ಸವ ಅಂಗವಾಗಿ ಸ್ವಚ್ಚತಾ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಪುರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಚಿದಾನಂದ ಮುಗಳಖೋಡ ಮಾತನಾಡಿ ‘ಸ್ವಚ್ಚತೆಯ ಬಗ್ಗೆ ಸಮುದಾಯದ ಜನರು ಕಾಳಜಿವಹಿಸಬೇಕು. ಸ್ವಚ್ಚತೆ ಇದ್ದರೆ ಉತ್ತಮ ಆರೋಗ್ಯ ಮತ್ತು ಸಮೃದ್ಧಿ ಇರುತ್ತದೆ’ ಎಂದರು. ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದವರು …

Read More »

ಅಕಾಲಿಕ ಮಳೆಯ ಪರಿಣಾಮ ಸದಕ ಮತ್ತು ಗೋಧಿ ಬೆಳೆಗಳು ನೆಲಕ್ಕೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಹಾಗೂ ಬಗರನಾಳ ಗ್ರಾಮದಲ್ಲಿ ಶನಿವಾರದಂದು ಸಂಜೆ ಗಾಳಿ ಮಿಶ್ರಿತ ಸುರಿದ ಅಕಾಲಿಕ ಮಳೆಯ ಪರಿಣಾಮ ಸದಕ ಮತ್ತು ಗೋಧಿ ಬೆಳೆಗಳು ನೆಲಕ್ಕೆರುಳಿದ್ದರಿಂದ ಈ ಭಾಗದ ರೈತರಿಗೆ ಸಂಕಷ್ಟದ ಪರಿಸ್ಥಿತಿ ಎದುರಾಗಿದೆ. ಸಾಲ-ಶೂಲ ಮಾಡಿ ಬೀಜ ಗೊಬ್ಬರ ಹಾಕಿ ಕಷ್ಟಪಟ್ಟು ಸದಕ ಮತ್ತು ಗೋಧಿ ಬೆಳೆಗಳು ಬೆಳೆದು ಇನ್ನೇನು ಕಟಾವು ಹಂತಕ್ಕೆ ಬಂದಿದ್ದ ಅಪಾರ ಪ್ರಮಾಣದ ಬೆಳೆಗಳು ಅಕಾಲಿಕವಾಗಿ ಸುರಿದ ಈ ಮಳೆಯಿಂದ ನೆಲಕಚ್ಚಿ ಮಣ್ಣು ಪಾಲಾಗಿ …

Read More »