Breaking News
Home / inmudalgi (page 232)

inmudalgi

ಯುವಕ ಸಂಘದ ಯುವ ಚಟುವಟಿಕೆಯನ್ನು ಪ್ರಾರಂಭಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕ್ರೀಡಾ ಇಲಾಖೆಯ ನಿರ್ದೇಶಕರಿಗೆ ಮನವಿ

ಬೆಳಗಾವಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ನಾರಾಯಣ ಗೌಡರಿಗೆ ಬೆಳಗಾವಿಯಲ್ಲಿ ಯುವಕ ಸಂಘದ ಯುವ ಚಟುವಟಿಕೆಯನ್ನು ಪ್ರಾರಂಭಿಸುವಂತೆ ರಾಷ್ಟ್ರೀಯ ಯುವ ಪ್ರಶಸ್ತಿ ವಿಜೇತರಾದ ಮಲ್ಲೇಶ ಚೌಗಲಾ ಹಾಗೂ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ವಿಜೇತರು ಜಿಲ್ಲಾಧ್ಯಕ್ಷರಾದ ಸಿದ್ದಣ್ಣ ದುರದುಂಡಿ ಅವರ ನೇತೃತ್ವದಲ್ಲಿ ಸಚಿವರ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕ್ರೀಡಾ ಇಲಾಖೆಯ   ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿ ಪ್ರಮುಖ ಬೇಡಿಕೆಗಳಾದ ತಾಲೂಕ ಮಟ್ಟದ ಜಿಲ್ಲಾಮಟ್ಟದ ರಾಜ್ಯಮಟ್ಟದ …

Read More »

ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ 28ನೇ ವರ್ಷದ ಮಹಾಪೂಜೆ

ಮೂಡಲಗಿ : ಅಯ್ಯಪ್ಪನ ಸೇವೆ ಮಾಡಿದಂತೆ ನಿಮ್ಮ ನಿಮ್ಮ ಮಕ್ಕಳಿಗೆ ಹೊಟ್ಟೆ ತುಂಬಿಸಿ, ತಲೆಗೆ ವಿದ್ಯೆಯನ್ನು ತುಂಬಿಸಿದಲ್ಲಿ ಮುಗ್ಧ ಮಕ್ಕಳಲ್ಲಿ ಆ ಅಯ್ಯಪ್ಪ ಸ್ವಾಮಿಯನ್ನು ಕಾಣಬಹುದು ಎಂದು ಸುಣಧೋಳಿಯ ಜಡಿಸಿದ್ದೇಶ್ವರ ಮಠದ ಶಿವಾನಂದ ಮಹಾಸ್ವಾಮಿಗಳು ಹೇಳಿದರು. ಪಟ್ಟಣದ ಬಸವ ಮಂಟಪದಲ್ಲಿ ಜರುಗಿದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ 28ನೇ ವರ್ಷದ ಮಹಾಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿ ಅವರು, ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಹದಿನೆಂಟು ಮೆಟ್ಟಿಲುಗಳನ್ನು ಏರಿ ಮಲೆಯಲ್ಲಿ ನೆಲೆಯಾಗಿರುವ ಅಯ್ಯಪ್ಪ …

Read More »

26ರಂದು ಉಪ್ಪಾರ ಸಮಾಜ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ

26ರಂದು ಉಪ್ಪಾರ ಸಮಾಜ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಮೂಡಲಗಿ: ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದಿಂದ ದಿ; 26ರಂದು ಭಾನವಾರ ಧಾರವಾಡದ ಮಯೂರ ಆದಿತ್ಯಾ ರೆಸಾರ್ಟದಲ್ಲಿ ಉಪ್ಪಾರ ಸಮಾಜದ ವಿಧ್ಯಾರ್ಥಿ/ನಿಯರಿಗಾಗಿ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಸನ್ 2020-21 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ಪ್ರತಿಶತ 80% ಹಾಗೂ ಅಧಿಕ ಅಂಕ ಗಳಿಸಿದ ಉಪ್ಪಾರ ಸಮಾಜದ ವಿದ್ಯಾರ್ಥಿ/ನಿಯರಿಗೆ ಸನ್ಮಾನಿಸಿ ಗೌರವಿಸಲಾಗುವುದು. ಅದರೊಂದಿಗೆ …

Read More »

ಡಿ.25ರಂದು ನಡೆಯಲಿದೆ ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ

ಬೆಟಗೇರಿ:ಗ್ರಾಮದ ಮಾರುತಿ ದೇವರ ಕಾರ್ತಿಕೋತ್ಸವ ಮತ್ತು ಪಲ್ಲಕ್ಕಿ ಉತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶನಿವಾರ ಡಿ.25ರಂದು ನಡೆಯಲಿವೆ. ಬೆಳೆಗ್ಗೆ 6 ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಮಹಾಪೂಜೆ, ಕುಂಕುಮ, ಎಲೆ ಪೂಜೆ ಜರುಗಿ, ಪುರ ಜನರಿಂದ ಪೂಜೆ, ನೈವೈದ್ಯ ಸಮರ್ಪನೆ, ರಾತ್ರಿ 8 ಗಂಟೆಗೆ ದೀಪೋತ್ಸವ, ಸಕಲ ವಾದ್ಯ ಮೇಳಗಳೊಂದಿಗೆ ಪಲ್ಲಕ್ಕಿ ಉತ್ಸವ, ಕಾಯಿ, ಕಾರಿಕ ಹಾರಿಸುವ, ಸಿಹಿ ಹಂಚುವದು ವೈಭವದಿಂದ ಜರುಗಲಿದೆ. ಸ್ಥಳೀಯ ಕರಡಿ ಮಜಲು …

Read More »

ಉಜ್ಜಯನಿಪೀಠದ ಶ್ರೀ ಮದುಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ್ವರ ಜಗದ್ಗುರುಗಳಿಗೆ ಆಹ್ವಾನ ನೀಡಿದ ಬೆಟಗೇರಿ ಓಂ ಶ್ರೀ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು

ಉಜ್ಜಯನಿಪೀಠದ ಶ್ರೀ ಮದುಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ್ವರ ಜಗದ್ಗುರುಗಳಿಗೆ ಆಹ್ವಾನ ನೀಡಿದ ಬೆಟಗೇರಿ ಓಂ ಶ್ರೀ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಬೆಟಗೇರಿ:ಗ್ರಾಮದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯವರ ಆಶ್ರಯದಲ್ಲಿ 24ನೇ ವರ್ಷದ ಓಂ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ, ಅನ್ನಸಂತರ್ಪನೆ, ಉಜ್ಜಯನಿಪೀಠದ ಶ್ರೀ ಮದುಜ್ಜಯನಿ ಸದ್ಧರ್ಮ ಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರುಗಳ ಅಡ್ಡಪಲ್ಲಕ್ಕಿ ಉತ್ಸವ, ದಾನಿಗಳಿಗೆ ಸತ್ಕಾರ ಸಮಾರಂಭ ಹಾಗೂ ಧರ್ಮಸಭೆ ಸೋಮವಾರ ಡಿ.27ರಂದು ಜರುಗಲಿರುವ ಪ್ರಯುಕ್ತ …

Read More »

ರಮೇಶ್ ಕತ್ತಿಗೆ ‘ಜೈ’ ಎಂದ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಮಧ್ಯಸ್ಥಿಕೆಯಲ್ಲಿ ನಡೆದ ಸಂಧಾನ ಸಭೆ ಯಶಸ್ವಿ. ಜಾರಕಿಹೊಳಿ- ಕತ್ತಿ ಕುಟುಂಬದ ಮಧ್ಯ ಯಾವುದೇ ಬಿರುಕಿಲ್ಲ. ನಾವೆಲ್ಲ ಒಂದೇ.

ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿಗೆ ‘ಜೈ’ ಎಂದ ನಿರ್ದೇಶಕರು ರಮೇಶ ಕತ್ತಿ ಅವರೇ ಪೂರ್ಣಾವಧಿ ಅಧ್ಯಕ್ಷರು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಯಾರಿಂದಲೂ ಜಾರಕಿಹೊಳಿ-ಕತ್ತಿ ಕುಟುಂಬಗಳನ್ನು ಒಡೆಯಲು ಸಾಧ್ಯವಿಲ್ಲ. ಬೆಳಗಾವಿ : ಜಿಲ್ಲೆಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರ ಬದಲಾವಣೆಗೆ ಪೂರ್ಣ ವಿರಾಮ ಹಾಕಿದ್ದು, ಅಧ್ಯಕ್ಷ ರಮೇಶ ಕತ್ತಿ ಮತ್ತು ಬ್ಯಾಂಕಿನ ನಿರ್ದೇಶಕರುಗಳ ಮಧ್ಯೆ ನಡೆದ ಸಂಧಾನ ಸಭೆ ಯಶಸ್ವಿಯಾಗುವ ಮೂಲಕ …

Read More »

ಹೈಸ್ಕೂಲಿನ 1990-91 ನೇ ಸಾಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಂದ ಗುರುವಂದನ ಮತ್ತು ಅಪೂರ್ವ ಸ್ನೇಹಸಂಗಮ ಕಾರ್ಯಕ್ರಮ

ಮೂಡಲಗಿ : ಭಾರತೀಯ ಸಂಸ್ಕ್ರತಿಯಲ್ಲಿ ತ್ರಿಮೂರ್ತಿಗಳಿಗೆ ಅತೀತವಾದ ಸ್ಥಾನವನ್ನು ಗುರುವಿಗೆ ನೀಡಿದೆ. ಸೃಷ್ಠಿ, ಸ್ಥಿತಿ, ಲಯಗಳನ್ನು ನಿರ್ವಹಿಸುತ್ತಿರುವ ಬ್ರಹ್ಮ, ವಿಷ್ಣು, ಮಹೇಶ್ವರರ ಕಾರ್ಯಗಳನ್ನು ಗುರುವೊಬ್ಬನೇ ನಿರ್ವಹಿಸಬಲ್ಲನಾದ್ದರಿಂದ “ಗುರುಬ್ರಹ್ಮ, ಗುರುವಿಷ್ಣು, ಗುರುದೇವೋ ಮಹೇಶ್ವರ ಗುರುಸಾಕ್ಷಾತ್ ಪರಬ್ರಹ್ಮ ತಸ್ಮೈಶ್ರೀ ಗುರುವೇ ನಮ: ಎನ್ನುವ ಮೂಲಕ “ನ ಗುರೋರಧಿಕಂ” ಎಂದು ಮನ್ನಿಸಲಾಗಿದೆ. ಗುರು-ಶಿಷ್ಯ ಪರಂಪರೆಗೆ ಸನಾತನ ಕಾಲದಿಂದಲೂ ಬಹುದೊಡ್ಡ ಇತಿಹಾಸವಿದೆ. ಅಂತಹ ಗುರುಶಿಷ್ಯರ ಸಮ್ಮಿಲನ ಇಂದು ಕಣ್ಮನಗಳಿಗೆ ಮುದ ನೀಡುವಂತಿದೆ ಎಂದು ವಿಶ್ರಾಂತ ಪ್ರಾದ್ಯಾಪಕ, …

Read More »

ಬೆಟಗೇರಿ ಗ್ರಾಮದೇವತೆ ದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಸಂಪನ್ನ

ಬೆಟಗೇರಿ ಗ್ರಾಮದೇವತೆ ದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಸಂಪನ್ನ ಬೆಟಗೇರಿ:ಗ್ರಾಮದೇವತೆ ಶ್ರೀದ್ಯಾಮವ್ವದೇವಿ ದೇವರ ಕಾರ್ತಿಕೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಪಲ್ಲಕ್ಕಿ ಉತ್ಸವ ಮಂಗಳವಾರ ಡಿ.21 ರಂದು ವಿಜೃಂಭನೆಯಿಂದ ನಡೆದವು. ಮುಂಜಾನೆ 10.30 ಗಂಟೆಗೆ ಇಲ್ಲಿಯ ದ್ಯಾಮವ್ವದೇವಿ ದೇವರ ದೇವಸ್ಥಾನದಲ್ಲಿರುವ ಶ್ರೀದೇವಿಯ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಶೃಂಗಾರಗೊಳಿಸುವ, ಉಡಿತುಂಬುವದು, ಪುರದೇವರ ಪಲ್ಲಕ್ಕಿಗಳನ್ನು ಬರಮಾಡಿಕೊಳ್ಳುವದು ಸಡಗರದಿಂದ ನಡೆಯಿತು. ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ ಸಾನಿಧ್ಯದಲ್ಲಿ ಸಂಜೆ 7 ಗಂಟೆಗೆ ಪಲ್ಲಕ್ಕಿ ಉತ್ಸವ ಜರುಗಿ, …

Read More »

‘ಸಾಹಿತ್ಯದ ಓದುಗಾರಿಕೆಯು ಮನುಷ್ಯನ ಹೃದಯ ಶುದ್ದತೆ ಮತ್ತು ಸಂಸ್ಕಾರಗೊಳಿಸುವುದು

‘ಸಾಹಿತ್ಯದ ಓದುಗಾರಿಕೆಯು ಮನುಷ್ಯನ ಹೃದಯ ಶುದ್ದತೆ ಮತ್ತು ಸಂಸ್ಕಾರಗೊಳಿಸುವುದು ಮೂಡಲಗಿ: ‘ಸಾಹಿತ್ಯದ ಓದು ಮನುಷ್ಯನ ಹೃದಯವನ್ನು ಶುದ್ಧ ಮತ್ತು ಸಂಸ್ಕಾರಗೊಳಿಸುವ ಪ್ರಕ್ರಿಯೆಯಾಗಿದೆ’ ಎಂದು ಸಾಹಿತಿ ಗೋಕಾಕದ ಜೆಸ್‍ಎಸ್ ಕಾಲೇಜು ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಚಂದ್ರಶೇಖರ ಅಕ್ಕಿ ಹೇಳಿದರು. ಇಲ್ಲಿಯ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನದಿಂದ ಪ್ರತಿ ತಿಂಗಳು ಆಯೋಜಿಸಲಿರುವ ಬೆಳದಿಂಗಳ ಸಾಹಿತ್ಯ ಚಿಂತನ-ಮಂಥನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಾಹಿತ್ಯದ ಓದು ಜೀವನೋತ್ಸಾಹವನ್ನು ವೃದ್ಧಿಸುತ್ತದೆ ಎಂದರು. ಇಂದಿನ ತಂತ್ರಜ್ಞಾನದ ಬೆಳವಣಿಗೆಯ ಒತ್ತಡೆದಲ್ಲಿ …

Read More »

ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಹರಿಯುತ್ತಿರುವ ತ್ಯಾಜ್ಯ ಮಿಶ್ರಿತ ರಾಸಾಯನಿಕ ನೀರು ವಿರೋಧಿಸಿ ವಿಶ್ವರಾಜ್ ಶುಗರ್ಸ್ ಮಾಲೀಕರಿಗೆ ಬಿಸಿ ಮುಟ್ಟಿಸಿದ ವಡೇರಹಟ್ಟಿ ಗ್ರಾಮಸ್ಥರು

ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಹರಿಯುತ್ತಿರುವ ತ್ಯಾಜ್ಯ ಮಿಶ್ರಿತ ರಾಸಾಯನಿಕ ನೀರು ವಿರೋಧಿಸಿ ವಿಶ್ವರಾಜ್ ಶುಗರ್ಸ್ ಮಾಲೀಕರಿಗೆ ಬಿಸಿ ಮುಟ್ಟಿಸಿದ ವಡೇರಹಟ್ಟಿ ಗ್ರಾಮಸ್ಥರು ಮೂಡಲಗಿ : ತಾಲೂಕಿನ ವಡೇರಹಟ್ಟಿಯ ಇಂದ್ರವೇಣಿ ಹಳ್ಳಕ್ಕೆ ಬೆಲ್ಲದ ಬಾಗೇವಾಡಿಯ ವಿಶ್ವರಾಜ ಶುಗರ್ಸ್‍ನಿಂದ ತ್ಯಾಜ್ಯ ಮಿಶ್ರಿತ ರಾಸಾಯನಿಕ ನೀರು ಬಿಡುವುದನ್ನು ವಿರೋಧಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದ್ದಾರೆ. ಮಂಗಳವಾರದಂದು ವಡೇರಹಟ್ಟಿ ಗ್ರಾಮದ ಸುಮಾರು ಇನ್ನೂರಕ್ಕೂ ಹೆಚ್ಚು ಜನರು ಇಂದು ತಹಶೀಲ್ದಾರ ಕಛೇರಿಗೆ ಆಗಮಿಸಿ ಕಾರ್ಖಾನೆಯ ಮಾಲೀಕರ ವಿರುದ್ಧ …

Read More »