ಮೂಡಲಗಿ: ಕಳೆದ ಲೋಕಸಭಾ ಚುನಾವಣೆಯಲ್ಲಿ ಯಾದವಾಡದಲ್ಲಿ ನಮಗೆ ಅಭೂತಪೂರ್ವ ಬೆಂಬಲ ಸಿಕ್ಕರೂ ಸೋಲಬೇಕಾಯಿತು. ಸೋತೆವು ಎಂದ ಮಾತ್ರಕ್ಕೆ ಕೈಕಟ್ಟಿ ಕುಳಿತುಕೊಳ್ಳುವ ಜಾಯಮಾನ ನಮ್ಮದಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ತಾಲೂಕಿನ ಯಾದವಾಡ ಗ್ರಾಮದಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಯಾದವಾಡ ಘಟಕ ವತಿಯಿಂದ ಆಯೋಜಿಸಲಾಗಿದ್ದ, ಯಾದವಾಡ ಸಾಂಸ್ಕೃತಿಕ ಉತ್ಸವ-2024 ರ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದ ಅವರು ,ಯಾವುದೇ ಕೆಲಸಗಳನ್ನು ಮಾಡಲು ಮುಂದಾದರೆ …
Read More »ಬಸ್ಸ್ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ
ಮೂಡಲಗಿ: ಭಗವಂತ ತಮ್ಮ ಸೇವೆ ಮಾಡಲು ಅವಕಾಶ ನೀಡಿದರಿಂದ ಶಿವಾಪೂರ(ಹ) ಗ್ರಾಮಕ್ಕೆ ವಿಶೇಷ ಆದ್ಯತೆ ನೀಡಿ ಅಭಿವೃದ್ದಿ ಮಾಡಲಾಗುತ್ತಿದ್ದು ಗ್ರಾಮದ ಅಡಿವಿಸಿದ್ದೇಶ್ವರ ಮಠ, ಬಸ್ಸ್ ನಿಲ್ದಾಣ ಹಾಗೂ ದುರ್ಗಾದೇವಿ ದೇವಸ್ಥಾನದ ಆವರಣದಲ್ಲಿ ಶೆಲ್ಟರ್ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ರವಿವಾರದಂದು ತಾಲೂಕಿನ ಶಿವಾಪೂರ (ಹ) ಗ್ರಾಮದಲ್ಲಿ ರಾಜ್ಯಸಭಾ ಸಂಸದರ ಸ್ಥಳಿಯ ಪ್ರದೇಶಾಭಿವೃದ್ದಿ ಯೋಜನೆಯಡಿ ಮೂಡಲಗಿ ರಸ್ತೆಗೆ ಹೊಂದಿಕೊಂಡ ಬಸ್ಸ್ …
Read More »ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಶಿಸ್ತು ಮತ್ತು ದೇಶಾಭಿಮಾನ ಕಲಿಸಿರಿ-ಗಜಾನನ ಮನ್ನಿಕೇರಿ
ಮೂಡಲಗಿ: ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಶಿಸ್ತನ್ನು ಕಲಿಸಬೇಕೆಂದು ಬೆಳಗಾವಿಯ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತರಾದ ಗಜಾನನ ಮನ್ನಿಕೇರಿ ಹೇಳಿದರು. ಅವರು ತಾಲೂಕಿನ ಹುಣಶ್ಯಾಳ ಪಿಜಿಯ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಶ್ರೀ ನಿಜಗುಣದೇವರ ವಿದ್ಯಾಸಂಸ್ಥೆ ವತಿಯಿಂದ ಜರುಗಿದ ಶಾಲಾ ಸ್ಕೌಟ್ಸ್ ಮತ್ತು ಗೈಡ್ಸ್ ಕಬ್ ಬುಲ್ಬುಲ್ ದಳಗಳನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಪೂಜ್ಯ ಶ್ರೀ ನಿಜಗುಣದೇವ ಮಹಾಸ್ವಾಮಿಗಳು ತಮ್ಮ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ …
Read More »ಕಠಿಣ ಪರಿಶ್ರಮ ಹಾಗೂ ಆತ್ಮಸ್ಥೈರ್ಯ ವಿದ್ಯಾರ್ಥಿಗಳಲ್ಲಿ ಕ್ರೀಡಾ ಯಶಸ್ಸು ತಂದು ಕೊಡುತ್ತದೆ – ಸಂಗಮೇಶ ಹಳ್ಳೂರ
ಕಠಿಣ ಪರಿಶ್ರಮ ಹಾಗೂ ಆತ್ಮಸ್ಥೈರ್ಯ ವಿದ್ಯಾರ್ಥಿಗಳಲ್ಲಿ ಕ್ರೀಡಾ ಯಶಸ್ಸು ತಂದು ಕೊಡುತ್ತದೆ – ಸಂಗಮೇಶ ಹಳ್ಳೂರ ಮೂಡಲಗಿ : ವಿದ್ಯಾರ್ಥಿಗಳಲ್ಲಿ ಕಠಿಣ ಪರಿಶ್ರಮ ಹಾಗೂ ಆತ್ಮಸ್ಥೈರ್ಯ ಕ್ರೀಡಾ ಯಶಸ್ಸು ತಂದು ಕೊಡುತ್ತದೆ ದೃಢ ಸಂಕಲ್ಪ ಮತ್ತು ಕ್ರೀಡಾ ಅರ್ಪಣಾ ಮನೋಭಾ ವಗಳು ನಿಮ್ಮಲ್ಲಿದ್ದರೆ ನಿಮ್ಮ ಸಾಧನೆಗಳಿಗೆ ಮೇರೆಗಳು ಇರುವುದಿಲ್ಲ ಯಶಸ್ಸು ಸಿಗದ ಖುಷಿಗೆ ನನಸಾಗುವಂತೆ ಆಸೆ ಪಡುವುದು ಮೂರ್ಖತನ ಪ್ರತಿಭೆ ಇದ್ದ ಕಡೆ ಕನಸ್ಸು ಕಟ್ಟಿ ಬದುಕುವುದೇ ಜೀವನವಾಗಬೇಕೆಂದು ಶ್ರೀವಿದ್ಯಾನಿಕೇತನ …
Read More »‘ಮನುಷ್ಯನನ್ನು ಗುಣದಿಂದ ಅಳೆಯಬೇಕು ಹೊರತು ದುಡ್ಡು, ಅಧಿಕಾರ, ಅಂತಸ್ತಿನಿಂದಲ್ಲ’- ದುರದುಂಡೀಶ್ವರ ಮಠದ ಪೀಠಾಧಿಪತಿ ಗುರುಬಸವಲಿಂಗ ಸ್ವಾಮಿಜಿ
‘ಮನುಷ್ಯನನ್ನು ಗುಣದಿಂದ ಅಳೆಯಬೇಕು’ ಮೂಡಲಗಿ: ‘ಮನುಷ್ಯನನ್ನು ಗುಣದಿಂದ ಅಳೆಯಬೇಕು ಹೊರತು ದುಡ್ಡು, ಅಧಿಕಾರ, ಅಂತಸ್ತಿನಿಂದಲ್ಲ’ ಎಂದು ಅರಭಾವಿಯ ದುರದುಂಡೀಶ್ವರ ಮಠದ ಪೀಠಾಧಿಪತಿ ಗುರುಬಸವಲಿಂಗ ಸ್ವಾಮಿಗಳು ಹೇಳಿದರು. ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಪುಣ್ಯಾರಣ್ಯ ಮಠದಲ್ಲಿ ಮಾಸಿಕ ಶಿವಾನುಭವ ಗೋಷ್ಠಿಯ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ಪ್ರಸ್ತುತ ಸಮಾಜವು ಗುಣವಂತರನ್ನು ಮರೆತು ಅಧಿಕಾರ ಮತ್ತು ಹಣವಂತರಿಗೆ ಬೆಲೆ ಕೊಡುತ್ತಿರುವುದು ದುರದೃಷ್ಟಕರ ಸಂಗತಿಯಾಗಿದೆ ಎಂದರು. ಇಂದು ಅವಿಭಕ್ತ ಕುಟುಂಬಗಳು ಒಡೆದು ವಿಭಕ್ತ ಕುಟುಂಬಗಳಾಗುತ್ತಿದ್ದು ಇದರಿಂದ …
Read More »ಏಯ್ಡ್ಸ್ ಮತ್ತು ಕ್ಷಯ ರೋಗದ ಬಗ್ಗೆ ಎಚ್ಚರವಿರಲಿ : ಜಗದೀಶ ಗೊಂದಿ
ಮೂಡಲಗಿ : ಯುವ ಜನತೆಗೆ ಏಯ್ಡ್ಸ್ ಮತ್ತು ಕ್ಷಯ ರೋಗದ ಬಗ್ಗೆ ಇಂದಿನ ಜನರ ಸಾಮಾಜಿಕ ಜೀವನದಲ್ಲಿ ಎಚ್ಚರವಹಿಸುವುದು ಅವಶ್ಯಕವಾಗಿದೆ ಎಚ್.ಐ.ವಿ. ರೋಗವು ಅಸುರಕ್ಷಿತ ಲೈಂಗಿಕತೆ ಮತ್ತು ರಕ್ತ ನೀಡುವಲ್ಲಿ-ಪಡೆದು ಕೊಳ್ಳುವಲ್ಲಿ ಮುಂಜಾಗ್ರತೆ ವಹಿಸದೆ ಇರುವುದು ಹಾಗೂ ನಮ್ಮ ಇನ್ನಿತರ ನಿಷ್ಕಾಳಜಿಯಿಂದ ರೋಗ ಉಲ್ಬಣಗೊಳ್ಳುತ್ತದೆ ಮತ್ತು ಕ್ಷಯ ರೋಗವು ಚಳಿಗಾಲದಲ್ಲಿ ಉಲ್ಬಣಗೊಳ್ಳುತ್ತಿದ್ದು ಇಂದಿನ ಆಹಾರ ಪದ್ದತಿ ಜೀವನ ಕ್ರಮಗಳು ಟಿಬಿ ರೋಗದ ಮೇಲೆ ಮಾರಣಾಂತಿಕ ಪರಿಣಾಮ ಬೀರುತ್ತಿದ್ದು ಸಾಂಕ್ರಾಮಿಕ ರೋಗಗಳಿಂದಲ್ಲೂ …
Read More »ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅನುಷ್ಠಾನಗೊಳಿಸಲು ರಾಜ್ಯಕ್ಕೆ 326.02 ಕೋಟಿ ಅನುದಾನ
ಮೂಡಲಗಿ: ಕರ್ನಾಟಕದಲ್ಲಿ ರೈತರ ಕಲ್ಯಾಣಕ್ಕಾಗಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯು ಆರ್ಥಿಕ ವರ್ಷ 2024-25 ರಲ್ಲಿ ಪ್ರಧಾನ ಮಂತ್ರಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಅನುಷ್ಠಾನಗೊಳಿಸಲು ರಾಜ್ಯಕ್ಕೆ 326.02 ಕೋಟಿ ರೂಪಾಯಿ ಮೊತ್ತದ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ …
Read More »ಸಂಪನ್ಮೂಲ ವಿದ್ಯಾರ್ಥಿಗಳು ನವಸಮಾಜದ ಕಣ್ಣುಗಳು ಇದ್ದಂತೆ- ಎಸ್. ಎನ್. ಕುಂಬಾರ
ಮೂಡಲಗಿ : ಸಂಪನ್ಮೂಲ ವಿದ್ಯಾರ್ಥಿಗಳು ನವಸಮಾಜದ ಕಣ್ಣುಗಳು ಇದ್ದಂತೆ ಮತ್ತು ವಿದ್ಯಾರ್ಥಿಗಳು ಸೃಜನಶೀಲ ಸಂಪನ್ಮೂಲ ಕೌಶಲ್ಯಗಳನ್ನು ಹೊಂದುವದರ ಜೊತೆಗೆ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ತಮ್ಮ ಕುಟುಂಬಗಳ ಸಂರ್ವಾಂಗೀಣ ಬೆಳವಣಿಗೆ ಮಾಡಿಕೊಳ್ಳುವದರೊಂದಿಗೆ ದೇಶದ ಆರ್ಥಿಕತೆಯನ್ನು ಸುಧಾರಿಸುತ್ತಾರೆ ಎಂದು ಮೂಡಲಗಿಯ ಆರ್.ಡಿ.ಎಸ್. ಪಿಯು ಕಾಲೇಜಿನ ಉಪನ್ಯಾಸಕರಾದ ಸಂಗಪ್ಪ ಕುಂಬಾರ ಹೇಳಿದರು. ಪಟ್ಟಣದ ಆರ್.ಡಿ.ಎಸ್. ಕಲಾ, ವಾಣಿಜ್ಯ, ವಿಜ್ಞಾನ ಮತ್ತು ಸಮಾಜಕಾರ್ಯ ಪದವಿ ಮಹಾವಿದ್ಯಾಲಯದ ಆಯ್.ಕ್ಯೂ.ಎ.ಸಿ. ಘಟಕದಡಿಯಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳು ಎಂಬ …
Read More »ತಾಲೂಕಾ ಮಟ್ಟದ ಎನ್.ಎಮ್.ಎಮ್.ಎಸ್ ಶಿಷ್ಯವೇತನ ಅರ್ಹತಾ ಪರೀಕ್ಷೆಯ ಪೂರ್ವಭಾವಿ ತಯಾರಿ ಕಾರ್ಯಾಗಾರ ಕಾರ್ಯಕ್ರಮ
ಮೂಡಲಗಿ : ಬಡತನ, ಅನಕ್ಷರತೆ ನಿರ್ಮೂಲನೆಗೆ ಶಿಕ್ಷಣವೊಂದೇ ಅಸ್ತ್ರ ಎಂದು ದಿವಾಣಿ ಹಾಗೂ ಜೆಎಂಎಫ್ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಅಭಿಪ್ರಾಯಪಟ್ಟರು. ಪಟ್ಟಣದ ಹೊರವಲಯದಲ್ಲಿರುವ ಮಡ್ಡಿ ಈರಣ್ಣ ದೇವಸ್ಥಾನದ ಸಭಾಂಗಣದಲ್ಲಿ ಜರುಗಿದ,ತಾಲೂಕಾ ಮಟ್ಟದ ಎನ್.ಎಮ್.ಎಮ್.ಎಸ್ ಶಿಷ್ಯವೇತನ ಅರ್ಹತಾ ಪರೀಕ್ಷೆಯ ಪೂರ್ವಭಾವಿ ತಯಾರಿ ಕಾರ್ಯಾಗಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದವರು, ನಾವು ಹಳ್ಳಿಯ ಮಕ್ಕಳು ಪಟ್ಟಣದ ಮಕ್ಕಳ ಜೊತೆ ಸ್ಪರ್ಧೆ ಮಾಡಲು ಸಾಧ್ಯವಿಲ್ಲ ಎಂಬ ಭಾವನೆ ಯಾರಲ್ಲಿಯೂ ಬರಬಾರದು. ಜಗತ್ತಿನಲ್ಲಿ ಹಲವಾರು ಮಹಾನ್ …
Read More »ಬೀದರ ಡಾ|| ಶಿವಕುಮಾರ ಸ್ವಾಮೀಜಿಗಳಿಂದ ಡಿ.3ರಿಂದ 15ನೇ ಸತ್ಸಂಗ ಸಮ್ಮೇಳನ –ವೇ.ಶಂಕರಯ್ಯಾ ಹಿರೇಮಠ
ಬೀದರ ಡಾ|| ಶಿವಕುಮಾರ ಸ್ವಾಮೀಜಿಗಳಿಂದ ಡಿ.3ರಿಂದ 15ನೇ ಸತ್ಸಂಗ ಸಮ್ಮೇಳನ –ವೇ.ಶಂಕರಯ್ಯಾ ಹಿರೇಮಠ ಮೂಡಲಗಿ: ಪಟ್ಟಣದ ಆರ್.ಡಿ.ಸಂಸ್ಥೆಯ ಆವರಣದಲ್ಲಿ ಮಂಗಳವಾರ ಡಿ.3 ರಿಂದ ಡಿ.9 ರವರಿಗೆ ಏಳು ದಿನಗಳ ಕಾಲ ಬೀದರ ಚಿದಂಬರಾಶ್ರಮ ಸಿದ್ಧಾರೂಢ ಮಠದ ಸದ್ಗುರು ಶ್ರೀ ಡಾ|| ಶಿವಕುಮಾರ ಸ್ವಾಮೀಜಿಗಳಿಂದ 15ನೇ ಸತ್ಸಂಗ ಸಮ್ಮೇಳನ ಜರುಗಲಿದೆ ವೇದಮೂರ್ತಿ ಶ್ರೀ ಶಂಕರಯ್ಯಾ ಹಿರೇಮಠ ಸ್ವಾಮೀಜಿ ತಿಳಿಸಿದರು. ಅವರು ಪಟ್ಟಣದಲ್ಲಿ ಗುರು ಮಠದಲ್ಲಿ 15ನೇ ಸತ್ಸಂಗ ಸಮ್ಮೇಳನದ ಪ್ರಚಾರ ಪತ್ರಿಕೆಯನ್ನು …
Read More »