Breaking News
Home / inmudalgi (page 3)

inmudalgi

ಮೂಡಲಗಿ ಶಿಕ್ಷಣ ಸಂಸ್ಥೆಯಲ್ಲಿ ಜರುಗಿದ 11 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಮೂಡಲಗಿ: ಯೋಗವು ಭಾರತ ದೇಶದಲ್ಲಿ ಮಾನವ ಶರೀರದ ರೋಗವನ್ನು ಹೋಗಲಾಡಿಸುವ ಪಾರಂಪರಿಕ ಚಿಕಿತ್ಸಾ ಪದ್ದತಿಯಾಗಿದ್ದು, ನಮ್ಮ ದೇಶ ಜಗತ್ತಿಗೆ ನೀಡಿದ ಬೆಲೆ ಕಟ್ಟಲಾಗದ ಒಂದು ಮಹಾನ ಕೊಡುಗೆ ಯೋಗಭ್ಯಾಸವಾಗಿದೆ ಎಂದು ರಾಜ್ಯಸಭೆ ಸಂಸದ ಈರಣ್ಣ ಕಡಾಡಿ ಹೇಳಿದರು. ಶನಿವಾರದಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಕೇಂದ್ರ ಆಯುಷ್ಯ ಸಚಿವಾಲಯ, ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆ, ನವದೆಹಲಿ, ತಾಲೂಕಾಡಳಿತ ಮೂಡಲಗಿ, ಸಾಮಾಜಿಕ ಆರ್ಥಿಕ ಮತ್ತು ಕಲ್ಯಾಣ ಸಂಸ್ಥೆ ಕಲ್ಲೋಳಿ, ಮೂಡಲಗಿ …

Read More »

ಮೂಡಲಗಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆದ ವಿಶ್ವ ಯೋಗ ದಿನಾಚರಣೆ

  ಮೂಡಲಗಿ: ಯೋಗವು ಶಾರೀರಿಕ, ಮಾನಸಿಕ, ಆಧ್ಯಾತ್ಮಿಕ ಪ್ರಗತಿಗೆ ಹಾದಿ ಮಾಡುವ ಪ್ರಾಚೀನ ಭಾರತೀಯ ಶಿಸ್ತಿನ ಮಾರ್ಗವಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದ ಆರ್.ಡಿ.ಎಸ್. ಮಹಾವಿದ್ಯಾಲಯದ ಆವರಣದಲ್ಲಿ ಶನಿವಾರದಂದು ಜರುಗಿದ ೧೧ ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಹ, ಮನಸ್ಸು ಹಾಗೂ ಆತ್ಮದ ಮಧ್ಯೆ ಸಮತೋಲನ ಸಾಧಿಸುವುದೇ ಯೋಗ ಎಂದು ಹೇಳಿದರು. ಯೋಗವು ಮಾನವ ಜೀವನದ ಸಮಗ್ರ …

Read More »

ರೈತರ ಕಲ್ಯಾಣಕ್ಕಾಗಿ ಬಿಡಿಸಿಸಿಯಿಂದ ಹಲವು ಯೋಜನೆ

ಬೆಳಗಾವಿ: ಡಿಸಿಸಿ ಬ್ಯಾಂಕ್‌ಗೆ ಅಕ್ಟೋಬರ್‌ 19ರಂದು ಚುನಾವಣೆ ಜರುಗಲಿದ್ದು, ಈಗಾಗಲೇ ನಾವು ಖಾನಾಪುರ ತಾಲೂಕು ಕೇಂದ್ರದಿಂದ ಚುನಾವಣೆ ಪ್ರಚಾರವನ್ನು ಆರಂಭಿಸಿದ್ದೇವೆ. ರೈತರ ಪ್ರಗತಿ ಮತ್ತು ಭವಿಷ್ಯದ ಅನುಕೂಲಕ್ಕಾಗಿ ನಮ್ಮ ಪ್ಯಾನಲ್‌ ಅನ್ನು ಗೆಲ್ಲಿಸಬೇಕು. ಇದರಿಂದ ಮುಂದಿನ ದಿನಗಳಲ್ಲಿ ರೈತರ ಶ್ರೆಯೋಭಿವೃದ್ಧಿಗೆ ಶ್ರಮಿಸಲು ಹೆಚ್ಚಿನ ಶಕ್ತಿ ಬಂದಂತಾಗುತ್ತದೆ ಎಂದು ಬೆಮುಲ್‌ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು. ನಗರದ ಧರ್ಮನಾಥ ಭವನದಲ್ಲಿ ಶುಕ್ರವಾರ ನಡೆದ ಬೆಳಗಾವಿ ತಾಲೂಕಿನ ಪ್ರಾಥಮಿಕ ಕೃಷಿ …

Read More »

ಭಾರತವು ವಿಶ್ವಕ್ಕೆ ಗುರುವಾಗುವ ಕಾಲ ಸನ್ನಿಹಿತವಾಗಿದೆ – ಬೆಳಗಾವಿ ಜಿಲ್ಲಾ ( ಗ್ರಾ) ಬಿಜೆಪಿ ಅಧ್ಯಕ್ಷ ಸುಭಾಸ ಪಾಟೀಲ

  ಗೋಕಾಕ – ಪ್ರಧಾನಿ ನರೇಂದ್ರ ಮೋದಿಯವರು ಕಳೆದ ೧೧ ವರ್ಷಗಳಿಂದ ಭಾರತದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಮುಂದಿನ ದಿನಗಳಲ್ಲಿ ಭಾರತವು ವಿಶ್ವಕ್ಕೆ ಗುರುವಾಗುವ ಕಾಲ ಸನ್ನಿಹಿತವಾಗಿದೆ ಎಂದು ಬೆಳಗಾವಿ ಜಿಲ್ಲಾ ( ಗ್ರಾ) ಬಿಜೆಪಿ ಅಧ್ಯಕ್ಷ ಸುಭಾಸ ಪಾಟೀಲ ಹೇಳಿದರು. ಇಲ್ಲಿಯ ಎನ್ಎಸ್ಎಫ್ ಕಚೇರಿಯಲ್ಲಿ ಶುಕ್ರವಾರದಂದು ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಸಂಕಲ್ಪ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನರೇಂದ್ರ ಮೋದಿಯವರ ಹನ್ನೊಂದು ವರ್ಷಗಳ ಸಾಧನೆಗಳನ್ನು ಪ್ರತಿ ಮತಗಟ್ಟೆಗಳ ಮೂಲಕ …

Read More »

ಗೋಕಾಕ- ಜೂನ್ 21 ರಂದು ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯು ಮೂಡಲಗಿ ಪಟ್ಟಣದ ಆರ್ ಡಿ ಎಸ್ ಕಾಲೇಜಿನ ಮೈದಾನದಲ್ಲಿ ಜರುಗಲಿದ್ದು, ಪಟ್ಟಣದ ನಾಗರೀಕರು ಇದರಲ್ಲಿ ಭಾಗಿಯಾಗುವ ಮೂಲಕ ಯೋಗ ದಿನವನ್ನು ಯಶಸ್ವಿಗೊಳಿಸುವಂತೆ ಅರಭಾವಿ ಶಾಸಕ ಮತ್ತು ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳು ಮತ್ತು ಸಾರ್ವಜನಿಕಕರಲ್ಲಿ ಮನವಿ ಮಾಡಿಕೊಂಡರು. ಗುರುವಾರದಂದು ನಗರದ ಎನ್ ಎಸ್ ಎಫ್ ಕಚೇರಿಯಲ್ಲಿ ಮೂಡಲಗಿ ಪಟ್ಟಣದ ಮುಖಂಡರು ಮತ್ತು ಅಧಿಕಾರಿಗಳ ಸಭೆಯ ಅಧ್ಯಕ್ಷತೆ …

Read More »

ಅಧ್ಯಕ್ಷರಾಗಿ ಉಮೇಶ ಶೆಕ್ಕಿ, ಅವಿರೋಧ ಆಯ್ಕೆ

ಮೂಡಲಗಿ : ಇಲ್ಲಿನ ಕಲ್ಮೇಶ್ವರ ವೃತ್ತದ ಬಳಿ ಇರುವ ಪಂಚಮಸಾಲಿ ಸಮಾಜದ ಶ್ರೀ ಬಸವ ಸೇವಾ ಯುವಕ ಸಂಘದ ಐದು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಉಮೇಶ ಶೆಕ್ಕಿ, ಉಪಾಧ್ಯಕ್ಷರಾಗಿ ಸಿದ್ದು ಹಳಸಿ, ಕಾರ್ಯದರ್ಶಿಯಾಗಿ ಈರಪ್ಪ ಅಡಿಬಡ್ಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಂದು ಸಂಘದ ಮಾಜಿ ಅಧ್ಯಕ್ಷ ಕಲ್ಮೇಶ ಗೋಕಾಕ ಅವರು ತಿಳಿಸಿದ್ದಾರೆ.

Read More »

ರಾಮಪ್ಪ ಯರಗಟ್ಟಿ ನಿಧನ

  ಮೂಡಲಗಿ : ತಾಲೂಕಿನ ಕುಲಗೋಡ ಗ್ರಾಮದ ನಿವಾಸಿ ರಾಮಪ್ಪ ತಿಮ್ಮಣಾ ಯರಗಟ್ಟಿ (75) ಬುಧವಾರ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ನಾಲ್ವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More »

ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಿಂದ ದೂರವಿರಬೇಕು – ಪಿಎಸ್‍ಐ ರಾಜು ಪೂಜಾರಿ

ಮೂಡಲಗಿ: ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು ತಮ್ಮ ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ಕೊಡಬೇಕು ಮೂಡಲಗಿ ಪೋಲೀಸ್ ಠಾಣೆಯ ಪಿಎಸ್‍ಐ ರಾಜು ಪೂಜಾರಿ ಹೇಳಿದರು. ಅವರು ಪಟ್ಟಣದ ಕೆ.ಹೆಚ್.ಸೋನವಾಲಕರ್ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರದಂದು ಜರುಗಿದ ಮಾದಕ ವಸ್ತು ನಿರ್ಮೂಲನೆ ದಿನಾಚರಣೆಯಲ್ಲಿ ಮಾತನಾಡಿ, ಮಾದಕ ಪದಾರ್ಥಗಳನ್ನು ಬಳಸುವುದು, ಮಾರಾಟ ಮಾಡುವುದು ಮತ್ತು ಬಳಸುವವರ ಸಹವಾಸ ಮಾಡುವುದು ಅಪರಾಧ, ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನಹರಿಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಶಾಲೆಯ …

Read More »

ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

ಮೂಡಲಗಿ: ಮೂಡಲಗಿಯ ಪುರಸಭೆ ವಾರ್ಡ ಸಂಖ್ಯೆ 15ರಲ್ಲಿ ಚರಂಡಿ ನಿರ್ಮಾಣಕ್ಕೆ ಬುಧವಾರ ಪುರಸಭೆ ಸದಸ್ಯ ಸಂತೋಷ ಸೋನವಾಲಕರ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಿಂಗಪ್ಪ ಕುರಬೇಟ ಅವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ತುಕಾರಾಮ ಮಾದರ, ಅನ್ವರ ನದಾಫ, ನಿವೃತ್ತ   ಶಿಕ್ಷಕ ಕೆ.ಆರ್.ಕೊತ್ತಲ, ಶಿವಬಸು ಸುಣಧೋಳಿ, ಬಿ.ಪಿ.ಬಂದಿ, ಆರೋಗ್ಯ ನಿರೀಕ್ಷಕ ಪ್ರೀತಮ ಬೋವಿ, ಅಕ್ಷಯ ಕಂಬಾರ, ಗುತ್ತಿಗೆದಾರ ರಾಜು ಪೂಜೇರಿ ಮತ್ತಿತರರು …

Read More »

ಎಂಜಿನಿಯರಿಂಗ್, ಮೆಡಿಕಲ್ ಪ್ರವೇಶಕ್ಕೆ ವಿದ್ಯಾಪೋಷಕದಿಂದ ಆರ್ಥಿಕ ನೆರವು

ಇಂಜಿನೀಯರಿಂಗ್ ಮತ್ತು ಮೆಡಿಕಲ್ ಪದವಿ ಕಲಿಯಲಿಕ್ಕೆ ಕಳೆದ ವರ್ಷದಲ್ಲಿ ವಿದ್ಯಾಪೋಷಕದಿಂದ ಆರ್ಥಿಕ ಸಹಾಯ ಪಡೆದ ವಿದ್ಯಾರ್ಥಿಗಳು ಮೂಡಲಗಿ: ಧಾರವಾಡದ ವಿದ್ಯಾಪೋಷಕ ಸಂಸ್ಥೆಯು 2025-26ನೇ ಸಾಲಿನಲ್ಲಿ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಪದವಿ ಪ್ರವೇಶಕ್ಕೆ ಕರ್ನಾಟಕದ ಅರ್ಹ ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳಿಗೆ ಧನ ಸಹಾಯವನ್ನು ನೀಡಲಿದೆ. ವಿದ್ಯಾರ್ಥಿಗಳು 2024-25ನೇ ಶೈಕ್ಷಣಿಕ ಸಾಲಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ಪರೀಕ್ಷೆಯಲ್ಲಿ ಮೊದಲ ಬಾರಿಗೆ ಶೇ.80ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರುವ ಇಂಜಿನೀಯರಿಂಗ ಮತ್ತು ಮೆಡಿಕಲ್ ಪದವಿಗಳಿಗೆ ಪ್ರವೇಶ …

Read More »