ಬೆಟಗೇರಿ: ಸಮೀಪದ ತಪಸಿ ಗ್ರಾಮ ಪಂಚಾಯತಿ ಹಾಗೂ ಬೆಳಗಾವಿ ಜಿಲ್ಲಾ ಪಂಚಾಯತ, ಗೋಕಾಕ ತಾಲೂಕಾ ಪಂಚಾಯತ ಸಹಯೋಗದಲ್ಲಿ ಗುರುವಾರ ಸೆ.24 ರಂದು ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಬಚ್ಚಲು ಗುಂಡಿ, ಪೌಷ್ಠಿಕ ತೋಟ ಹಾಗೂ ಅಣಬೆ ಬೇಸಾಯಗಳ ವಿಶೇಷ ಅಭಿಯಾನಕ್ಕೆ ಚಾಲನೆ ಮತ್ತು ಅನುಷ್ಠಾನ ಕುರಿತು ತಿಳುವಳಿಕೆ ಮೂಡಿಸುವ ಪ್ರಚಾರ ಕಾರ್ಯಕ್ರಮ ನಡೆಯಿತು. ಗ್ರಾಪಂ ಪಿಡಿಒ ಪರಶುರಾಮ ಇಟಗೌಡ್ರ ಮಾತನಾಡಿ, ಇಲ್ಲಿಯ ಗ್ರಾಮ ಪಂಚಾಯತ …
Read More »ದಿ.ಸುರೇಶ ಅಂಗಡಿ ಅವರಿಗೆ ಅಭಿಮಾನಿಗಳಿಂದ ಶೃದ್ಧಾಂಜಲಿ
ದಿ.ಸುರೇಶ ಅಂಗಡಿ ಅವರಿಗೆ ಅಭಿಮಾನಿಗಳಿಂದ ಶೃದ್ಧಾಂಜಲಿ ಮೂಡಲಗಿ:- ಬುಧವಾರದಂದು ನಿಧನರಾದ ಕೇಂದ್ರ ರೈಲ್ವೇ ಸಚಿವ ಸುರೇಶ ಅಂಗಡಿ ಅವರಿಗೆ ಅರಭಾವಿ ಬಿಜೆಪಿ ಮಂಡಲ ಪದಾಧಿಕಾರಿಗಳು,ಕಾರ್ಯಕರ್ತರು,ಅಭಿಮಾನಿಗಳು ಕಲ್ಮೇಶ್ವರ ವೃತ್ತದಲ್ಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ,ಮೌನ ಆಚರಿಸಿ ಶೃದ್ಧಾಂಜಲಿ ಸಲ್ಲಿಸಿದರು, ಬಿಜೆಪಿ ಮುಖಂಡರಾದ ಪ್ರಕಾಶ ಮಾದರ ಮಾತನಾಡಿ ಕೇಂದ್ರ ಸಚಿವ ಸುರೇಶ ಅಂಗಡಿ ಅವರು ರೈಲ್ವೇ ಸಚಿವರಾಗಿ ಕರ್ನಾಟಕಕ್ಕೆ ದೊಡ್ಡ ಕೊಡುಗೆ ನೀಡಿದ್ದರು. ಸಾಕಷ್ಟು ಮಹಾತ್ವಾಕಾಂಕ್ಷೆ ಹೊಂದಿದ್ದ ಅವರು ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗಾಗಿ …
Read More »ಶಾಸಕ ನಾರಾಯಣರಾವ್ ಸೋಂಕಿಗೆ ಬಲಿ
ಶಾಸಕ ನಾರಾಯಣರಾವ್ ಸೋಂಕಿಗೆ ಬಲಿ ಬೆಂಗಳೂರು ; ಬಸವ ಕಲ್ಯಾಣ ಕ್ಷೇತ್ರದ ಶಾಸಕ ನಾರಾಯಣರಾವ್ ಅವರು ಕೋರೋನಾ ಸೊ೦ಕಿಗೆ ಬಲಿಯಾದ ದಾರುಣ ಘಟನೆ ಇಂದು ಸಂಭವಿಸಿದೆ. ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ನಿಧನದ ಆಘಾತವನ್ನು ಸಹಿಸಿಕೊಳ್ಳುವ ಮುನ್ನವೇ ಮತ್ತೊಂದು ಆಘಾತವನ್ನು ಕರ್ನಾಟಕ ಎದುರಿಸುವಂತಾಗಿದೆ. ಕರೋನಾ ಸೋಂಕು ತಗುಲಿದ ತಕ್ಷಣ 66 ವರ್ಷದ ಶಾಸಕ ನಾರಾಯಣರಾವ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು .ಉಪಚಾರ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ .ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ …
Read More »ಪ್ರಾಥಮೀಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಖಾಲಿ ಇರುವ ಕಂಪ್ಯೂಟರ್ ಹುದ್ದೆ ನೇಮಕಾತಿಯಲ್ಲಿ ಅಕ್ರಮ
*ಅಧಿಸೂಚನೆ ಹೊರಡಿಸದೆ ಒಳಗೊಳಗೆ ನೇಮಕಾತಿ ಆರೋಪ | ಸರ್ಕಾರದ ನಿಯಮಗಳ ಉಲ್ಲಂಘನೆ* *ಕಂಪ್ಯೂಟರ್ ನೇಮಕಾತಿಯಲ್ಲಿ ಪಾರದರ್ಶಕತೆ ಮರೆ….!* ಮೂಡಲಗಿ : ಸರ್ಕಾರಿ ಕಚೇರಿ ಹಾಗೂ ಸಂಘ ಸಂಸ್ಥೆಗಳಲ್ಲಿ ಸಿಬ್ಬಂದಿ ನೇಮಕ ಮಾಡಿಕೊಳ್ಳಬೇಕೆಂದಲ್ಲಿ ಹಲವು ನೀತಿ ನಿಯಮಗಳನ್ನು ಪಾಲನೆ ಮಾಡಲೇಬೇಕು. ಆದರೆ ತಾಲೂಕಿನ ಗುಜನಟ್ಟಿ ಗ್ರಾಮದ ಪ್ರಾಥಮೀಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಖಾಲಿ ಇರುವ ಕಂಪ್ಯೂಟರ್ ಹುದ್ದೆ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬರುತ್ತಿದೆ. ಪ್ರಾಥಮಿಕ ಪ್ರಾಥಮೀಕ ಕೃಷಿ …
Read More »ಮೂಡಲಗಿ ಶಿಕ್ಷಣ ಸಂಸ್ಥೆಯಲ್ಲಿ ಸಂತಾಪ ಸಭೆ ‘ಸುರೇಶ ಅಂಗಡಿ ಜನ ಮಾನಸದಲ್ಲಿ ಶಾಶ್ವತವಾಗಿ ಉಳಿಯುವ ವ್ಯಕ್ತಿತ್ವ
ಮೂಡಲಗಿ ಶಿಕ್ಷಣ ಸಂಸ್ಥೆಯಲ್ಲಿ ಸಂತಾಪ ಸಭೆ ‘ಸುರೇಶ ಅಂಗಡಿ ಜನ ಮಾನಸದಲ್ಲಿ ಶಾಶ್ವತವಾಗಿ ಉಳಿಯುವ ವ್ಯಕ್ತಿತ್ವ ಮೂಡಲಗಿ: ಹಲವಾರು ರೈಲ್ವೆ ಯೋಜನೆಗಳನ್ನು ಕರ್ನಾಟಕಕ್ಕೆ ತರುವ ಮೂಲಕ ಸಚಿವ ಸುರೇಶ ಅಂಗಡಿ ಅವರ ಕೊಡುಗೆ ಅಪಾರವಾಗಿದೆ’ ಎಂದು ಮೂಡಲಗಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ಹೇಳಿದರು. ಸಚಿವ ಸುರೇಶ ಅಂಗಡಿ ಅವರ ಅಕಾಲಿಕ ನಿಧನಕ್ಕೆ ಸಂಸ್ಥೆಯಲ್ಲಿ ಗುರುವಾರ ಏರ್ಪಡಿಸದ್ದ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು. ಬೆಳಗಾವಿಯಿಂದ ಬೆಂಗಳೂರಿಗೆ ರೈಲು ಪ್ರಾರಂಭಿಸಿದ್ದು ಶ್ಲಾಘನೀಯ …
Read More »ದಿ.ಸುರೇಶ ಅಂಗಡಿ ಅವರಿಗೆ ಅರಭಾವಿ ಬಿಜೆಪಿ ಮಂಡಲದಿಂದ ಶೃದ್ಧಾಂಜಲಿ
ದಿ.ಸುರೇಶ ಅಂಗಡಿ ಅವರಿಗೆ ಅರಭಾವಿ ಬಿಜೆಪಿ ಮಂಡಲದಿಂದ ಶೃದ್ಧಾಂಜಲಿ ಗೋಕಾಕ : ಬುಧವಾರ ರಾತ್ರಿ ನಿಧನರಾದ ಕೇಂದ್ರ ರೈಲ್ವೇ ಸಚಿವ ಸುರೇಶ ಅಂಗಡಿ ಅವರಿಗೆ ಅರಭಾವಿ ಬಿಜೆಪಿ ಮಂಡಲದಿಂದ ಶೃದ್ಧಾಂಜಲಿ ಸಲ್ಲಿಸಲಾಯಿತು. ಇಲ್ಲಿಯ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ದಿ. ಸುರೇಶ ಅಂಗಡಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಒಂದು ನಿಮಿಷ ಮೌನವನ್ನು ಆಚರಿಸಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಮಾತನಾಡಿ, ಕೇಂದ್ರ ಸಚಿವ ಸುರೇಶ ಅಂಗಡಿ ಅವರ ನಿಧನದಿಂದ …
Read More »ಕಲ್ಲೋಳಿ ಪಟ್ಟಣದ ಈರಣ್ಣ ಕಡಾಡಿಯವರ ರಾಜ್ಯಸಭಾ ಸಂಸದರ ಜನ ಸಂಪರ್ಕ ಕಛೇರಿಯಲ್ಲಿ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಸುರೇಶ ಅಂಗಡಿ ಅವರ ಶ್ರದ್ದಾಜಲಿ ಸಭೆ
ಮೂಡಲಗಿ: ಬುಧವಾರದಂದು ನಿಧನರಾದ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಸುರೇಶ ಅಂಗಡಿ ಅವರ ನಿಧನಕ್ಕೆ ಕಲ್ಲೋಳಿ ಪಟ್ಟಣದ ಈರಣ್ಣ ಕಡಾಡಿಯವರ ರಾಜ್ಯಸಭಾ ಸಂಸದರ ಜನ ಸಂಪರ್ಕ ಕಛೇರಿಯಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಸಹಕಾರ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಅವರಿಗೆ ಸೆ. 24 ಗುರುವಾರದಂದು ಶ್ರದ್ದಾಂಜಲಿ ಸಲ್ಲಿಸಲಾಯಿತು. ಬಿಜೆಪಿ ಪ್ರಮುಖರಾದ ಬಸವರಾಜ ಕಡಾಡಿ ಮಾತನಾಡಿ ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿ, ಸರಳ ಸಜ್ಜನಿಕೆಯ ವ್ಯಕ್ತಿ, ಕೇಂದ್ರ ಸಚಿವರಾದ ನಮ್ಮ ಭಾಗದ ಸಂಸದರಾದ …
Read More »ಸರಳ ಸಜ್ಜನ ರಾಜಕಾರಣಿ, ಅಜಾತಶತ್ರು ಎಂದೆನಿಸಿಕೊಂಡ ರಾಜಕಾರಣಿಯಾಗಿದ್ದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ತೀವ್ರ ಆಘಾತ – ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
ಮೂಡಲಗಿ: ಸರಳ ಸಜ್ಜನ ರಾಜಕಾರಣಿ, ಅಜಾತಶತ್ರು ಎಂದೆನಿಸಿಕೊಂಡ ರಾಜಕಾರಣಿಯಾಗಿದ್ದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಅಕಾಲಿಕ ನಿಧನದ ಸುದ್ದಿ ತಿಳಿದು ತೀವ್ರ ಆಘಾತವಾಯಿತು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಶೋಕ ವ್ಯಕ್ತಪಡಿಸಿದರು. ಬುಧವಾರ ರಾತ್ರಿ ದೆಹಲಿ ಎಮ್ಸ್ ಆಸ್ಪತ್ರೆಗೆ ತೆರಳಿ ಅಂತಿಮ ದರ್ಶನ ಪಡೆಯಲಾಯಿತು. ಕಳೆದ 25 ವರ್ಷಗಳಿಂದ ನಾನು ಅವರೊಂದಿಗೆ ಉತ್ತಮ ಒಡನಾಟ ಹೊಂದಿ, ಅತ್ಯಂತ ಆತ್ಮೀಯರು ಹಾಗೂ ಮಾರ್ಗದರ್ಶಕರಾಗಿದ್ದರು. ರಾಜ್ಯದಲ್ಲಿ …
Read More »ಕೇಂದ್ರ ಸಚಿವ ಸುರೇಶ ಅಂಗಡಿ ಅಗಲಿಕೆಯಿಂದ ಅತೀವ ದುಃಖವಾಗಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ
ಕೇಂದ್ರ ಸಚಿವ ಸುರೇಶ ಅಂಗಡಿ ಅಗಲಿಕೆಯಿಂದ ಅತೀವ ದುಃಖವಾಗಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ ಗೋಕಾಕ : ಕೇಂದ್ರ ರೈಲ್ವೇ ಖಾತೆಯ ಸಹಾಯಕ ಸಚಿವ ಸುರೇಶ ಅಂಗಡಿ ಅವರ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಬುಧವಾರ ರಾತ್ರಿ ಕೊರೋನಾ ಸೋಂಕಿನಿಂದ ಮೃತಪಟ್ಟಿರುವ ವಿಷಯ ಕೇಳಿ ದಿಗ್ಭ್ರಮೆಗೊಂಡೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದು ನಿಜಕ್ಕೂ …
Read More »ಕೇಂದ್ರ ಮಂತ್ರಿ ಸುರೇಶ್ ಅಂಗಡಿ ಅವರನ್ನು ಕಳೆದುಕೊಂಡ ಬೆಳಗಾವಿ ಜನತೆ
ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ಹಾಗೂ ಬೆಳಗಾವಿ ಸಂಸದ ಸುರೇಶ್ ಅಂಗಡಿ (65) ನಿಧನರಾಗಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಸಚಿವ ಜಗದೀಶ್ ಶೆಟ್ಟರ್, ಸುರೇಶ್ ಅಂಗಡಿ ನಿಧನರಾಗಿರುವ ಸುದ್ದಿಯನ್ನು ಸ್ಪಷ್ಟ ಪಡಿಸಿದ್ದಾರೆ. ನಾಲ್ಕನೇ ಬಾರಿ ಸಂಸದರಾಗಿದ್ದ ಸುರೇಶ್ ಅಂಗಡಿ, ಈ ಬಾರಿ ರೈಲ್ವೇ ಖಾತೆ ರಾಜ್ಯ ಸಚಿವರಾಗಿ ಅತ್ಯುತ್ತಮ ಕಾರ್ಯ …
Read More »