ಮೂಡಲಗಿ: ಕೊರೋನಾ ವೈರಸ್ ಹಿನ್ನೆಲೆ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದೆ. ವೈರಸ್ ಹರಡದಂತೆ ತಟೆಗಟ್ಟಲು ವೈದ್ಯಾಧಿಕಾರಿಗಳು ಹಾಗೂ ಪೋಲಿಸ್ ಇಲಾಖೆ ಹಾಗೂ ಇನ್ನೂ ಕೆಲವು ಅಧಿಕಾರಿಗಳು ಸತತವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರಿಗೆ ಸರಕಾರದಿಂದ ಸೌಲಭ್ಯಗಳನ್ನು ನೀಡಿದೆ. ಆದರೆ ಪತ್ರಕರ್ತರಿಗೆ ಯಾಕೆ ಯಾವುದೇ ಸೌಲಭ್ಯ ನೀಡಿಲ್ಲಾ ಎಂದು ಸರಕಾರ ವಿರುದ್ದ ಡಿಕೆ ಶಿವಕುಮಾರ ಫೌಂಡೇಷನ್ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಾಥ ಕರಿಹೊಳಿ ಕಿಡಿಕಾರಿದರು. ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು …
Read More »ಬೆಳಗಾವಿ ಹಾಲು ಒಕ್ಕೂಟದಿಂದ 25 ಲಕ್ಷ ರೂ. ಮೊತ್ತದ ಚೆಕ್ಕನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹಸ್ತಾಂತರ.
ಬೆಂಗಳೂರು : ಲಾಕ್ಡೌನ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಅಧಿಸೂಚಿತ ಕೊಳಗೇರಿಗಳು, ವಲಸೆ ಕಾರ್ಮಿಕರು, ಕಟ್ಟಡ ಕಾರ್ಮಿಕರು ಹಾಗೂ ಪುನರ್ವಸತಿ ಶಿಭಿರಗಳ ನಿವಾಸಿಗಳಿಗೆ ಉಚಿತವಾಗಿ ವಿತರಿಸುತ್ತಿರುವ ನಂದಿನಿ ಹಾಲು ನಾಳೆಯಿಂದ ಏಪ್ರಿಲ್ 30 ರವರೆಗೆ ಅವಧಿಯನ್ನು ಮುಖ್ಯಮಂತ್ರಿಗಳು ವಿಸ್ತರಿಸಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿದಿನ 7.75 ಲಕ್ಷ ಲೀ. …
Read More »ಎರಡು ದಿನಗಳ ನಂತರ ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಕೋವಿಡ್-೧೯ ಪಾಸಿಟಿವ್ ಪ್ರಕರಣ
ಬೆಳಗಾವಿ- ಸಂತಸದ ಮದ್ಯೆ ಬೆಳಗಾವಿ ಜಿಲ್ಲೆಯಲ್ಲಿ ಮತ್ತೋರ್ವ ಸೊಂಕಿತ ಪತ್ತೆಯಾಗಿದ್ದಾನೆ ಬೆಳಗಾವಿ ಜಿಲ್ಲೆಯಲ್ಲಿ ಮೂವರು ಗುಣಮುಖರಾಗಿ ಡಿಶ್ಚಾರ್ಜ ಆದ ಬೆನ್ನಲ್ಲಿಯೇ ಮತ್ತೋರ್ವ ಸೊಂಕಿತ ಪತ್ತೆಯಾಗಿದ್ದಾನೆ ಮಂಗಳವಾರ ಸಂಜೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ಸಂಕೇಶ್ವರದಲ್ಲಿ ಈ ಹಿಂದೆ ಪತ್ತೆಯಾಗಿದ್ದ ಸೊಂಕಿತನ ಸಂಪರ್ಕಕ್ಕೆ ಬಂದಿದ್ದ ಶಂಕಿತನಿಗೆ ಸೊಂಕು ತಗಲಿದ್ದು ದೃಡವಾಗಿದೆ. ಸಂಕೇಶ್ವರದ 20 ವರ್ಷದ ಯುವತಿಯಲ್ಲಿ ಸೊಂಕು ಪತ್ತೆಯಾಗಿದೆ
Read More »ಕೊರೊನಾ ಭೀತಿಗೆ ಮನೆ ಸೇರಿದ ಜನ, ನಗರಕ್ಕೆ ಬಂದ ಕಾಡು ಎಮ್ಮೆಗಳು..!
ಕೊರೊನಾ ಭೀತಿಗೆ ಮನೆ ಸೇರಿದ ಜನ, ಸಂಕೇಶ್ವರ ನಗರಕ್ಕೆ ಬಂದ ಕಾಡು ಎಮ್ಮೆಗಳು..! ಸಂಕೇಶ್ವರ : ಕೊರೊನಾ ಭೀತಿ ಹಿನ್ನೆಲೆ ಇಡೀ ದೇಶವೇ ಲಾಕ್ಡೌನ್ ಆಗಿದೆ. ಸರ್ಕಾರದ ಆದೇಶದ ಮೇರೆಗೆ ಜನ ಮನೆಯಿಂದ ಹೊರಬರುತ್ತಿಲ್ಲ. ಆದರ್ರೇ ಕಾಡು ಎಮ್ಮೆಗಳು ನಿರಾತಂಕವಾಗಿ ನಗರದ ರಸ್ತೆಯಲ್ಲಿ ಓಡಾಡುತ್ತಿವೆ. ಸಂಕೇಶ್ವರ ನಗರದ ಪ್ರದೇಶದಲ್ಲಿನ ರಸ್ತೆಯಲ್ಲಿ ಕಾಡು ಎಮ್ಮೆಗಳು ಕಾಣಿಸಿಕೊಂಡು ಜನರಲ್ಲಿ ಆತಂಕ ಸೃಷ್ಟಿಸಿದೆ. ನಿನ್ನೆ ನಗರದ ಸಮೀಪದ ಅಂಕಲಿ ಗ್ರಾಮದಲ್ಲಿ ಕಾಣಿಸಿಕೊಂಡ ಕಾಡು ಎಮ್ಮೆಗಳು …
Read More »ಇಂದು ಒಟ್ಟು ಏಳು ಪ್ರಕರಣಗಳು ಪತ್ತೆ
ಮಂಗಳವಾರ ಮಧ್ಯಾಹ್ನದ ಕರ್ನಾಟಕ ಆರೋಗ್ಯ ಇಲಾಖೆ ಕೊರೋನಾ ಬುಲೆಟಿನ್ ಬಿಡುಗಡೆಯಾಗಿದ್ದು, ಇಂದು ಒಟ್ಟು ಏಳು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ೪೧೫ಕ್ಕೆ ಸೋಂಕಿತರ ಸಂಖ್ಯೆ ಏರಿದೆ. ಬೆಳಗಾವಿ ಮಟ್ಟಿಗೆ ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ. ವಿಜಯಪುರ-೩, ಕಲಬುರ್ಗಿ-೩, ದಕ್ಷಿಣ ಕನ್ನಡ ಒಂದು ಪ್ರಕರಣ ದಾಖಲಾಗಿದೆ. ಬೆಳಗಾವಿ ಜಿಲ್ಲೆಯ ಯಾರಿಗೂ ಸೋಂಕು ತಗುಲಿಲ್ಲ ಈ ಮೂಲಕ ಹಾಟ್ ಸ್ಪಾಟ್ ಬೆಳಗಾವಿ ನಿಟ್ಟುಸಿರು ಬಿಟ್ಟಿದೆ. ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 42 ಕೊರೋನಾ ಸೋಂಕು ತಗುಲಿದವರಿದ್ದು, ಇವರೆಲ್ಲರೂ …
Read More »53 ಪತ್ರಕರ್ತರಿಗೆ ಕೋರೋನಾ
ಮುಂಬಯಿ : ಮುಂಬಯಿ ಮಹಾನಗರದಲ್ಲಿ ಸುದ್ದಿಗಳಿಗಾಗಿ ನಾ ಮುಂದೆ ತಾ ಮುಂದೆ ಎಂದು ಓಡಾಡುವ 53 ಪತ್ರಕರ್ತರಿಗೆ ಕರೋನಾ ವೈರಸ್ ತಗುಲಿರುವದು ದೃಢಪಟ್ಟಿದೆ ಎಂದು ವರದಿಗಳು ತಿಳಿಸಿವೆ . ಈ ಸಂಬಂಧ ಟೈಮ್ಸ್ ಆಫ್ ಇಂಡಿಯಾ ಟ್ವೀಟ್ ಮಾಡಿದ್ದು ಮುಂಬಯಿ ಮಹಾನಗರದಲ್ಲಿ 171 ಪತ್ರಕರ್ತರ ಸ್ಯಾಂಪಲ್ ಗಳನ್ನು ಪಡೆಯಲಾಗಿತ್ತು . ಆ ಪೈಕಿ 53 ಜನರ ವರದಿಗಳು ಪಾಸಿಟಿವ್ ಬಂದಿವೆ .ಇದರಲ್ಲಿ ಪತ್ರಕರ್ತರು ಫೋಟೋಗ್ರಾಫರ್ ಗಳು ವಿಡಿಯೋ ಜರ್ನಲಿಸ್ಟ್ಗಗಳು ಮತ್ತು …
Read More »ಹಾಟ್ ಸ್ಪಾಟ್ ಪ್ರದೇಶಗಳಲ್ಲಿ ಯಾವುದೇ ಪ್ರಕರಣ ಕಂಡುಬಂದಿಲ್ಲ. ಅವುಗಳಿಗೆ ಇಂದು ರಿಲೀಫ್ !
ಮಹಾಮಾರಿ ಕೊರೋನಾ ಸೋಮವಾರ ಸಂಜೆ ಕೂಡ ಬೆಳಗಾವಿ ಜಿಲ್ಲೆಯ ಮಟ್ಟಿಗೆ ಖುಷಿ ತಂದಿದೆ. ರಾಜ್ಯದಲ್ಲಿ ಒಟ್ಟು ಹದಿನೆಂಟು ಪ್ರಕರಣಗಳು ಕಂಡುಬಂದಿದ್ದು ವಿವರ ಈ ಕೆಳಗಿನಂತಿದೆ. ಸಂಜೆಯ ವರದಿಯಲ್ಲಿ ಒಟ್ಟು ೧೮ ಸೋಂಕಿತರು ಪತ್ತೆಯಾಗಿದ್ದು ಈ ಮೂಲಕ ೪೦೮ ಕ್ಕೆ ಪ್ರಕರಣಗಳು ಏರಿವೆ. ವಿಜಯಪುರ- ೧೧ , ಕಲಬುರಗಿ-೫, ಗದಗ-೧, ಬೀದರ್ – ೧ ಪ್ರಕರಣಗಳು ದಾಖಲಾಗಿದೆ. ಮಾ. 13ರಿಂದ 18ರ ವರೆಗೆ ನಿಜಾಮುದ್ದೀನ್ ನಲ್ಲಿ ನಡೆದ ಧರ್ಮ ಸಭೆಯಲ್ಲಿ ಪಾಲ್ಗೊಂಡಿದ್ದವರ …
Read More »ಶ್ರೀ ಗಳ ಅಗಲಿಕೆಗೆ ಸಂತಾಪ ಸೂಚಿಸಿದ ಶ್ರೀನಾಥ ಕರಿಹೋಳಿ
ಮೂಡಲಗಿ ಶ್ರೀ ಶಿವಬೋಧರಂಗ ಸಿದ್ಧ ಸಂಸ್ಥಾನ ಮಠದ 12ನೇ ಪೀಠಾಧಿಪತಿ ಶ್ರೀಪಾದಬೋಧ ಸ್ವಾಮೀಜಿ ಅವರು ರವಿವಾರ ರಾತ್ರಿ ನಿಧನರಾದರು. ಶ್ರೀ ಮಠದ ಏಳ್ಗೆ ಹಾಗೂ ಶ್ರೇಯೋಭಿವೃದ್ದಿಗಾಗಿ ಶ್ರಮಿಸಿದ್ದರು. ಜೊತೆಗೆ ಶ್ರೀ ಮಠದ ಭಾವೈಕ್ಯತೆ ಮತ್ತು ಪರಂಪರೆಯನ್ನು ಪೂಜ್ಯರು ಯಥಾವತ್ತಾಗಿ ನಡೆಸಿಕೊಂಡು ಬಂದಿದ್ದರು. ಎಲ್ಲ ಸಮುದಾಯದವರನ್ನು ಒಂದೇ ಭಾವದಿಂದ ನೋಡಿಕೊಳ್ಳುತ್ತಿದ್ದರು. ಸರಳ, ಸಜ್ಜನದ ಸಾಕಾರಮೂರ್ತಿಗೆ ಹೆಸರಾಗಿದ್ದರು. ಪೂಜ್ಯರ ಐಕ್ಯಯಿಂದಾದ ದುಃಖವನ್ನು ಭರಿಸುವ ಶಕ್ತಿಯನ್ನು ಪರಮಾತ್ಮನು ನೀಡಲಿ. ಪೂಜ್ಯರ ಆತ್ಮಕ್ಕೆ ಚಿರಶಾಂತಿ ದೊರೆಯಲಿ …
Read More »ಆರಿಹೋಯಿತು ಮೂಡಲಗಿ ದೀಪ : ಶ್ರೀ ಶ್ರೀಪಾದಭೋದ ಮಹಾಸ್ವಾಮಿಜಿಗಳು
ಮೂಡಲಗಿ ತಾಲ್ಲೂಕು ಆಗುವಲ್ಲಿ ಅವಿರತ ಪ್ರಯತ್ನ ಪಟ್ಟು ಹೋರಾಟ ನಡೆಸಿದ್ದ ಮೂಡಲಗಿ ಸಿದ್ಧಸಂಸ್ಥಾನ ಮಠದ ಮಹಾಸ್ವಾಮೀಜಿ ಶ್ರೀ ಶ್ರೀಪಾದ ಬೋಧ ಮಹಾಸ್ವಾಮಿಗಳು ವಿಧಿವಶರಾಗಿದ್ದಾರೆ. ಅವರ ಅಂತ್ಯಕ್ರಿಯೆ ಇಂದು ರಾತ್ರಿಯೇ ಜರುಗಲಿದೆ ಎಂದು ಮಠದ ಮೂಲಗಳು ತಿಳಿಸಿವೆ. ಸಂತಾಪ: ಅವರ ನಿಧನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಮಾಜಿ ಸಚಿವ ಕೆ. ಪಿ. ಸಿ. ಸಿ ಕಾರ್ಯಧ್ಯಕ್ಷ ಹಾಗೂ ಶಾಸಕ ಸತೀಶ್ ಜಾರಕಿಹೊಳಿ, ಕೆ. ಎಮ್. ಎಫ್ ರಾಜ್ಯಾಧ್ಯಕ್ಷ ಹಾಗೂ ಶಾಸಕ …
Read More »ನಾಳೆಯಿಂದ ನೌಕರರು ಕಚೇರಿಗೆ ಹಾಜರು: ಸೂಚನೆ ಹೊರಡಿಸಿದ ಸರ್ಕಾರ
ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ನಾಳೆಯಿಂದ ಶೇಕಡ 33ರಷ್ಟು ಸಿಬ್ಬಂದಿ ಕೆಲಸ ಆರಂಭಿಸಲಿದ್ದಾರೆ. ಕೊರೋನಾ ಸೇವೆಯಲ್ಲಿ ತೊಡಗಿಸಿಕೊಂಡಿರುವ 18 ಇಲಾಖೆ ಹೊರತುಪಡಿಸಿ ಉಳಿದ ಇಲಾಖೆಗಳು, ನಿಗಮ ಮಂಡಳಿ, ಪ್ರಾಧಿಕಾರದ ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಮುಖ್ಯ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಏಪ್ರಿಲ್ 20 ರಿಂದ ಮೇ 3ರವರೆಗೆ ಸುತ್ತೋಲೆ ಜಾರಿಯಲ್ಲಿರುತ್ತದೆ. ನಾನಾ ಇಲಾಖೆಗಳ ಅಧಿಕಾರಿಗಳು ಮತ್ತು ಶೇಕಡ 33 ರಷ್ಟು ಸಿಬ್ಬಂದಿ ಕೆಲಸಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ವೈದ್ಯಕೀಯ …
Read More »