Breaking News
Home / inmudalgi (page 44)

inmudalgi

ಮಹಾನ್ ಪುರುಷರ ಜಯಂತಿ ಕಾರ್ಯಕ್ರಮಗಳನ್ನು ಎಲ್ಲ ಜಾತಿಯವರು ಸೇರಿಕೊಂಡು ಆಚರಿಸಿದರೆ ಮಾತ್ರ ಅಂತಹ ಕಾರ್ಯಕ್ರಮಗಳಿಗೆ ಶೋಭೆ ಬರುತ್ತದೆ-ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಮಹಾನ್ ಪುರುಷರ ಜಯಂತಿ ಕಾರ್ಯಕ್ರಮಗಳನ್ನು ಎಲ್ಲ ಜಾತಿಯವರು ಸೇರಿಕೊಂಡು ಆಚರಿಸಿದರೆ ಮಾತ್ರ ಅಂತಹ ಕಾರ್ಯಕ್ರಮಗಳಿಗೆ ಶೋಭೆ ಬರುತ್ತದೆ. ಕೇವಲ ಒಂದು ಸಮುದಾಯಕ್ಕೆ ಸೀಮಿತಗೋಳಿಸದೇ ಒಗ್ಗಟ್ಟಿನಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸುವ ಮೂಲಕ ಸ್ವಾತಂತ್ರö್ಯ ಹೋರಾಟಗಾರರಿಗೆ ಗೌರವ ಸಲ್ಲಿಸುವ ಕಾರ್ಯಕ್ಕೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ತಾಲ್ಲೂಕಿನ ಕೌಜಲಗಿ ಗ್ರಾಮದ ಬಸವೇಶ್ವರ ಪೇಟೆಯಲ್ಲಿ ಮಂಗಳವಾರದAದು ಜರುಗಿದ ಕಿತ್ತೂರು ರಾಣಿ ಜಯಂತಿ …

Read More »

ಸ್ವದೇಶಿ ಚಿಂತನೆಯಲ್ಲಿ ಪಂ. ದೀನದಯಾಳ ಉಪಾಧ್ಯಾಯರ ಪಾತ್ರ ಅವೀಸ್ಮರಣಿಯ ಡಾ. ದುಂಡಪ್ಪ ಬಡಲಕ್ಕನ್ನವರ

ಮೂಡಲಗಿ : ಸ್ವದೇಶಿ ಚಿಂತನೆ, ಸಾಮಾಜಿಕ & ಆರ್ಥಿಕ ಚಿಂತನೆ, ಶೈಕ್ಷಣಿಕ ಸುದಾರಣೆಯ ಜೊತೆಗೆ ಅಂತ್ಯೋದಯ ದಿವಸದ ಪ್ರತಿಪಾದನೆಯಲ್ಲಿ ಪಂ ದೀನದಯಾಳ ಉಪಾಧ್ಯಾಯರ ಪಾತ್ರ ಅವೀಸ್ಮರಣಿಯವಾಗಿದೆ ದೀನದಯಾಳರು ಸಾಮರಸ್ಯದ ಜೀವನ ಪರಿಸರ ರಕ್ಷಣೆ ಹಾಗೂ ಗ್ರಾಮೀಣ ಅಭಿವೃದ್ಧಿಯ ಪ್ರತಿಪಾಧನೆಯ ಮೂಲಕ ರಾಷ್ಟ್ರಪ್ರೇಮವನ್ನು ತುಂಬುವದರ ಜೊತೆಗೆ ದೇಶದ ಐಕ್ಯತೆಗೆ ಮಾನವ ಕಲ್ಯಾಣಕ್ಕೆ ಆದ್ಯತೆ ನೀಡುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಕೇಂದ್ರ ಸರಕಾರದ ಶಿಕ್ಷಣ ಸಚಿವಾಲಯದ ಸಂಶೋದನಾ ಕೇಂದ್ರ (ಸಿಎಂಡಿಆರ್) ಧಾರವಾಡದ …

Read More »

ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿ ಯೋಜನೆಯಡಿ ಸಮುದಾಯ ಭವನ ಕಾಮಗಾರಿಗೆ ಭೂಮಿ ಪೂಜೆ

ಮೂಡಲಗಿ: ಕಲಾಲ ಸಮಾಜ ಸಣ್ಣ ಸಮಾಜವಾಗಿದ್ದರು ಕೂಡ ಮರ್ಯಾದಾ ಪುರುμÉೂೀತ್ತಮ ಶ್ರೀರಾಮನ ಚಂದ್ರನ ಅನುಯಾಯಿಗಳಾಗಿರುವುದು ಅತ್ಯಂತ ಹೆಮ್ಮೆ ಪಡುವ ಸಂಗತಿಯಾಗಿದೆ. ಈ ಸಮುದಾಯದ ಜನರಿಗೆ ಸಾಂಸ್ಕøತಿಕ, ಧಾರ್ಮಿಕ, ಕೌಟುಂಬಿಕ ಈ ರೀತಿಯ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಮುದಾಯದ ಭವನದ ಅವಶ್ಯಕತೆ ಇದ್ದು. ಇದನ್ನು ಮನಗಂಡು ಭವನ ನಿರ್ಮಾಣ ಮಾಡಲು ದೃಢ ಹೆಜ್ಜೆ ಇಟ್ಟಿರುತ್ತೇನೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಹೇಳಿದರು. ಬುಧವಾರ ಅ-30 ರಂದು ಕಲ್ಲೋಳಿ ಪಟ್ಟಣದ ಶ್ರೀರಾಮ …

Read More »

ಯಾದವಾಡ ಗ್ರಾಮದ ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.1ರಂದು ಕನ್ನಡಾಂಬೆಯ ಭಾವಚಿತ್ರದ ಭವ್ಯ ಮೆರವಣಿಗೆ

ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ನಮ್ಮ ಕರ್ನಾಟಕ ರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.1ರಂದು ಕನ್ನಡಾಂಬೆಯ ಭಾವಚಿತ್ರದ ಭವ್ಯ ಮೆರವಣಿಗೆ ಜರಗುವುದು. ಮೆರವಣಿಗೆಯಲ್ಲಿ ಅನೇಕ ಕಲಾವಿದರು, ತಲಾ ತಂಡಗಳು ಹಾಗೂ ಸುತ್ತಮುತ್ತಿನ ಸಾರ್ವಜನಿಕರು ಭಾಗವಹಿಸಲಿದ್ದಾರೆ ಎಂದು ನಮ್ಮ ಕರವೇ ಸಂಸ್ಥಾಪಕ ಕಲ್ಮೇಶ ಗಾಣಿಗಿ ಹೇಳಿದರು. ಬುಧುವಾರದಂದು ಪಟ್ಟಣದ ಪತ್ರಿಕಾ ಕಾರ್ಯಾಲದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಿ ವರ್ಷವೂ ಕೂಡಾ ಯಾದವಾಡ ಗ್ರಾಮದಲ್ಲಿ “ಯಾದವಡ ಸಾಂಸ್ಕøತಿಕ ಉತ್ಸವ” …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪಿಎಲ್ ಡಿ ಬ್ಯಾಂಕಿನಿಂದ ರೈತರಿಗೆ ಡಿವಿಡೆಂಡ್ ವಿತರಿಸಿದರು

ಗೋಕಾಕ- ಜಿಲ್ಲೆಯ ಇತಿಹಾಸದಲ್ಲಿಯೇ ಪಿಎಲ್‌ಡಿ ಬ್ಯಾಂಕ್ ತನ್ನ ಶೇಅರುದಾರರಿಗೆ ಡಿವಿಡೆಂಡ್ ನೀಡುವ ಮೂಲಕ ರೈತ ವರ್ಗದವರಿಗೆ ಗೋಕಾಕ ಪಿ ಎಲ್ ಡಿ   ಬ್ಯಾಂಕು ದೀಪಾವಳಿ ಹಬ್ಬದ ಕೊಡುಗೆ ನೀಡಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪ್ರಶಂಸೆ ವ್ಯಕ್ತಪಡಿಸಿದರು. ಮಂಗಳವಾರದಂದು ಇಲ್ಲಿಯ ಎಪಿಎಂಸಿ ರಸ್ತೆಯಲ್ಲಿರುವ ದಿ. ಗೋಕಾಕ ತಾಲ್ಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ( ಪಿ.ಎಲ್.ಡಿ.) ನಿಂದ ಪ್ರಸ್ತುತ …

Read More »

ನಾಳೆಯಿಂದ ಬೆಟಗೇರಿ ಶ್ರೀ ದುರ್ಗಾದೇವಿ ಜಾತ್ರಾಮಹೋತ್ಸವ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ದುರ್ಗಾದೇವಿ ದೇವರ ಜಾತ್ರಾಮಹೋತ್ಸವ ಇದೇ ಅ.29ರಿಂದ ಅ.30ರ ವರೆಗೆ ಎರಡು ದಿನಗಳ ಕಾಲ ನಡೆಯಲಿದೆ. ಅ.29 ರಂದು ಬ್ರಾಹ್ಮಿ ಮುಹೂರ್ತ ಬೆಳಿಗ್ಗೆ 5 ಗಂಟೆಗೆ ಶ್ರೀ ದುರ್ಗಾದೇವಿ ದೇವರ ಗದ್ದುಗೆಗೆ ಮಹಾಭಿಷೇಕ, ಮಹಾಪೂಜೆ, ಸಾಯಂಕಾಲ 5 ಗಂಟೆಗೆ ಪುರದೇವರ ಪಲ್ಲಕ್ಕಿಗಳ ಆಗಮನ, ಸುಮಂಗಲೆಯರಿಂದ ಆರತಿ ಸಕಲ ವಾಧ್ಯಮೇಳಗಳೊಂದಿಗೆ ಪಲ್ಲಕ್ಕಿ ಬರಮಾಡಿಕೊಳ್ಳುವ ಕಾರ್ಯಕ್ರಮ, ರಾತ್ರಿ 10 ಗಂಟೆಗೆ ಯಡಹಳ್ಳಿ ಗಜಾನನ ಮಹಿಳಾ ಗಾಯನ ಸಂಘ …

Read More »

ಲಯನ್ಸ್ ಕ್ಲಬ್‍ನ 100ನೇ ಅನ್ನದಾಸೋಹ

ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ರೋಗಿಗಳಿಗೆ 100ನೇ ಅನ್ನದಾಸೋಹವನ್ನು ಅ. 28ರಂದು ಮಧ್ಯಾಹ್ನ 12ಕ್ಕೆ ಏರ್ಪಡಿಸಿರುವರು. ಅನ್ನದಾಸೋಹ ಕಾರ್ಯಕ್ರಮದ ಸಾನಿಧ್ಯವನ್ನು ಶಿವಬೋಧರಂಗ ಮಠದ ದತ್ತಾತ್ರಯಬೋಧ ಸ್ವಾಮಿಗಳು ವಹಿಸುವರು. ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಪರಿವಾರದ ಅಧ್ಯಕ್ಷ ಸಂಜಯ ಮೋಕಾಶಿ ವಹಿಸುವರು. ಉದ್ಘಾಟನೆಯನ್ನು ಲಯನ್ಸ್ ಕ್ಲಬ್ ಡಿಸ್ಟ್ರೀಕ್ಟ್ ಗವರ್ನರ್ ಹುಬ್ಬಳ್ಳಿಯ ಉದ್ಯಮಿ ಮನೋಜ ಮಾನೇಕ ನೆರವೇರಿಸುವರು. ಮುಖ್ಯ ಅತಿಥಿಯಾಗಿ ಪುರಸಭೆ ಮುಖ್ಯಾಧಿಕಾರಿ …

Read More »

ತಂಬಾಕಿನಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವಿರಲಿ-ಶ್ವೇತಾ ಪಾಟೀಲ

ಮೂಡಲಗಿ: ಭಾರತದಲ್ಲಿ ಅಸಂಕ್ರಾಮಿಕ ರೋಗದಿಂದ ಸಾಯುವವರ ಸಂಖ್ಯೆ ಅತಿಯಾಗಿ ಹೆಚ್ಚುತ್ತಿದ್ದು, ಅದಕ್ಕೆ ಮುಖ್ಯ ಕಾರಣಗಳಾದ ತಂಬಾಕು, ಸ್ಟಾರ್‍ಗುಟಕಾ ಸೇವನೆ, ಮದ್ಯಪಾನ, ಧೂಮಪಾನ ಚಟಗಳಿಂದ ಯುವಜನತೆ ಮುಕ್ತವಾಗಬೇಕು ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಸಲಹೆಗಾರೆ ಶ್ವೇತಾ ಪಾಟೀಲ ಅಭಿಪ್ರಾಯ ಪಟ್ಟರು. ಪಟ್ಟಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣ ಘಟಕ, ರಾಷ್ಟ್ರೀಯ ತಂಬಾಕು ನಿಯಂತ್ರಣ ಘಟಕ ಹಾಗೂ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ -ವಾಣಿಜ್ಯ ಹಾಗೂ ಬಿ.ಸಿ.ಎ.ಮಹಾವಿದ್ಯಾಲಯದ …

Read More »

ವಿಚಕ್ಷಣ ದಿನಾಚರಣೆ ಹಾಗೂ ಫಿಟ್ ಇಂಡಿಯಾ ಸ್ವಚ್ಛತಾ ಫ್ರೀಡಂ ರನ್ 5.0 ಕಾರ್ಯಕ್ರಮ

ಮೂಡಲಗಿ: ಭ್ರಷ್ಟಾಚಾರಮುಕ್ತ, ಸ್ವಚ್ಛ ಹಾಗೂ ಸಧೃಢ, ಸಶಕ್ತ ಭಾರತ ನಿರ್ಮಾಣವಾಗಬೇಕು.    ಭ್ರಷ್ಟಾಚಾರ ನಮ್ಮ ದೇಶಕ್ಕೆ ಅಂಟಿದ ಕಳಂಕ. ಯುವಜನತೆ  ಭ್ರಷ್ಟಾಚಾರ ವಿರೋಧಿ ಆಂದೋಲನವನ್ನು ಕೈಗೊಂಡು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕು ಎಂದು ಗೋಕಾಕದ ಮಲ್ಲಪ್ಪ ಜೋತಾವರ ಕರೆ ನೀಡಿದರು. ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ನೆಹರು ಯುವ ಕೇಂದ್ರ ಬೆಳಗಾವಿ, ಕಲ್ಲೋಳಿಯ ವೀರಭದ್ರೇಶ್ವರ ಜಾನಪದ ಮತ್ತು ಕಲಾಫೋಷಕ ಸಂಘ ಹಾಗೂ ಎಸ್.ಆರ್.ಇ.ಎಸ್. ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ, ಎನ್ನೆಸ್ಸೆಸ್ …

Read More »

ಎಸ್‍ಸಿ-ಎಸ್‍ಟಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಯೋಜನೆಗಳ ಅರಿವು ಅವಶ್ಯಕ – ಯಲ್ಲಪ್ಪ ಭಜಂತ್ರಿ

ಮೂಡಲಗಿ : ಎಸ್‍ಸಿ-ಎಸ್‍ಟಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಯೋಜನೆಗಳ ಅರಿವು ಅವಶ್ಯಕವಾಗಿದ್ದು ಇಂದು ಅನೇಕ ವಿದ್ಯಾರ್ಥಿಗಳು ಸರಕಾರದ ಶೈಕ್ಷಣಿಕ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದು ಸರಕಾರ ವಿದ್ಯಾರ್ಥಿಗಳಿಗಾಗಿ ಅನೇಕ ಶೈಕ್ಷಣಿಕ ಯೋಜನೆಗಳನ್ನು ರೂಪಿಸಿ ಜಾರಿಗೆ ರೂಪಿಸುತ್ತಿದ್ದು ಅವುಗಳ ತಿಳಿವಳಿಕೆ ಹೊಂದಿ ಸರಿಯಾದ ಮಾರ್ಗದರ್ಶನದಲ್ಲಿ ಪ್ರಯೋಜನ ಪಡೆಯುವಂತಾಗಬೇಕು ಅಲ್ಲದೇ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಅನೇಕ ಯೋಜನೆಗಳು ಸಮಾಜಕಲ್ಯಾಣ ಇಲಾಖೆಯಲ್ಲಿ ಇದ್ದು ಅವುಗಳನ್ನು ಪಡೆದುಕೊಳ್ಳಲು ಸರಿಯಾದ ದಾಖಲೆಗಳನ್ನು ಹೊಂದಿ ಹೆಚ್ಚು ಪ್ರಯೋಜನ ಪಡೆದುಕೊಳ್ಳಲು ವಿದ್ಯಾರ್ಥಿಗಳು …

Read More »