Breaking News
Home / inmudalgi (page 96)

inmudalgi

ಇಂದು ‘ಸುವರ್ಣದೀಪ’ ಕೃತಿ ಬಿಡುಗಡೆ

ಮೂಡಲಗಿ: ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಜಾನಪದ ಪರಿಷತ್ ಆಶ್ರಯದಲ್ಲಿ ಆ. 28ರಂದು ಸಂಜೆ 5ಕ್ಕೆ ಡಾ. ಮಹಾದೇವ ಪೋತರಾಜ ರಚಿಸಿರುವ ‘ಸುವರ್ಣದೀಪ’ ವಚನ ಸಂಕಲನ ಬಿಡುಗಡೆ ಮತ್ತು ವಿಶ್ವ ಜಾನಪದ ಸಂಸ್ಥಾಪನಾ ದಿನಾಚರಣೆಯನ್ನು  ಮೂಡಲಗಿ ನೀಲಕಂಠೇಶ್ವರ ಮಠದಲ್ಲಿ ಏರ್ಪಡಿಸಿರುವರು. ಶಿವಾನಂದ ಸ್ವಾಮಿಗಳು ಸಾನ್ನಿಧ್ಯ ವಹಿಸುವರು, ಅಧ್ಯಕ್ಷತೆಯನ್ನು ಕಸಾಪ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ವಹಿಸುವರು. ಉದ್ಘಾಟನೆಯನ್ನು ಡಾ. ರವಿ ಕೊಟನೂರ, ಗ್ರಂಥ ಪಬಿಡುಗಡೆಯನ್ನು ಡಾ. ಚೇತನ ಡಾಗಾ, ಗ್ರಂಥ …

Read More »

ಸತೀಶ ಶುಗರ್ಸ್‌ ಕಾರ್ಖಾನೆಗೆ ‘ಅತ್ಯುತ್ತಮ ಸಕ್ಕರೆ ಕಾರ್ಖಾನೆ ಪ್ರಶಸ್ತಿ’

ಸತೀಶ ಶುಗರ್ಸ್‌ ಕಾರ್ಖಾನೆಗೆ ‘ಅತ್ಯುತ್ತಮ ಸಕ್ಕರೆ ಕಾರ್ಖಾನೆ ಪ್ರಶಸ್ತಿ’ ಮೂಡಲಗಿ: ಮೂಡಲಗಿ ತಾಲ್ಲೂಕಿನ ಹುಣಶ್ಯಾಳ ಪಿಜಿಯ ಬಳಿಯ ಸತೀಶ ಶುಗರ್ಸ್ ಸಕ್ಕರೆ ಕಾರ್ಖಾನೆಯು 2024ನೇ ಸಾಲಿನ ಅತ್ಯುತ್ತಮ ಸಕ್ಕರೆ ಕಾರ್ಖಾನೆ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಕಾರ್ಖಾನೆಯ ಸಕ್ಕರೆ ಘಟಕ, ಸಹ-ವಿದ್ಯುತ್ ಮತ್ತು ಡಿಸ್ಟಿಲರಿ ಘಟಕಗಳ ಉತ್ತಮ ಕಾರ್ಯನಿರ್ವಹಣೆ, ಪೂರ್ಣ ಪ್ರಮಾಣದ ಸಾಮರ್ಥ್ಯದ ಬಳಕೆ, ದಕ್ಷತೆ ಮತ್ತು ಕಾರ್ಯಕ್ಷಮತೆಯನ್ನು ಪರಿಗಣಿಸಿ ಪುಣೆಯ ದಿ. ಡೆಕ್ಕನ್ ಶುಗರ್ ಟೆಲ್ನೋಲೊಜಿಸ್ಟ್ ಅಸೋಸಿಯೇಶನ್ ಸಂಸ್ಥೆಯ 69 ನೇ …

Read More »

ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ.

ಮೂಡಲಗಿ: ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿ ಮಾದರಿಯನ್ನಾಗಿ ಮಾಡುವ ಸಂಕಲ್ಪ ಮಾಡುವಂತೆ ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಪಪಂ ನೂತನ ಆಧ್ಯಕ್ಷ- ಉಪಾಧ್ಯಕ್ಷರಿಗೆ ಕಿವಿ ಮಾತು ಹೇಳಿದರು. ಕಲ್ಲೊಳ್ಳಿ ಪಟ್ಟಣ ಪಂಚಾಯತಿಗೆ ನೂತನವಾಗಿ ಆಯ್ಕೆಗೊಂಡ ಅಧ್ಯಕ್ಷ- ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಅವರು, ನಾಗರಿಕರಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪಂಚಾಯತಿ ಕಮೀಟಿಯವರು ಶ್ರಮಿಸುವಂತೆ …

Read More »

ಭಗವಂತಪ್ಪ ಪಾಂಡಪ್ಪ ಅಂಗಡಿ (96) ನಿಧನ

ನಿಧನ ವಾರ್ತೆ ಮೂಡಲಗಿ: ತಾಲೂಕಿನ ವೆಂಕಟಾಪುರ ಗ್ರಾಮದ ಭಗವಂತಪ್ಪ ಪಾಂಡಪ್ಪ ಅಂಗಡಿ (96) ಮಂಗಳವಾರ ರಂದು ನಿಧನರಾಗಿದ್ದಾರೆ.ಮೃತರ ಅಂತಿಮ ಇಚ್ಛೆಯಂತೆ ಅವರ ದೇಹವನ್ನು ಬೈಲಹೊಂಗಲದ ಡಾ.ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೆಳಗಾವಿ ಕೆಎಲ್ಇ ಜವಾಹರಲಾಲ ನೆಹರು ವೈದ್ಯಕೀಯ ಮಹಾ ವಿದ್ಯಾಲಯಕ್ಕೆ ದೇಹದಾನ ನೀಡಿ ಸಾವಿನಲ್ಲೂ ಸಾರ್ಥಕತೆ ಮರೆದಿದ್ದಾರೆ. ಮೃತರಿಗೆ ನಾಲ್ವರು ಪುತ್ರರರು, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಆಗಲಿದ್ದಾರೆ.

Read More »

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸನ್ಮಾನ

ಮೂಡಲಗಿ:ತಾಲೂಕಿನ ಕಲ್ಲೋಳಿ ಪಟ್ಟಣದ ಕಾಂಗ್ರೇಸ್ ಮುಖಂಡ ಬಾಳಪ್ಪ ಬೆಳಕೂಡ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಭೇಟಿ ನೀಡಿ ಸನ್ಮಾನ ಸ್ವೀಕರಿಸುತ್ತಿರುವುದು.ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ,ಸತೀಶ ಜಾರಕಿಹೊಳಿ,ಬಾಳಪ್ಪ ಬೆಳಕೂಡ,ಬಸವರಾಜ ಕಡಾಡಿ,ರಾವಸಾಹೇಬ ಬೆಳಕೂಡ,ಬಸವರಾಜ ಬೆಳಕೂಡ,ಮಹಾಂತೇಶ ಕಡಾಡಿ,ಪ್ರಭು ಕಡಾಡಿ ಸೇರಿದಂತೆ ಅನೇಕರಿದ್ದರು.

Read More »

ಕಲ್ಲೋಳಿ ಪಟ್ಟಣ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧವಾಗಿ ಆಯ್ಕೆ

ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಮಾಯವ್ವ ಬಸವಂತ ದಾಸನವರ ಮತ್ತು ಉಪಾಧ್ಯಕ್ಷರಾಗಿ ಮೇಘಾ ಬಸವರಾಜ ಖಾನಾಪೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೋಮವಾರದಂದು ಜರುಗಿದ ಪಟ್ಟಣ ಪಂಚಾಯತಿ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ತಲಾ ಒಂದೊಂದು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಎರಡು ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿವೆ. ಹಿಂದುಳಿದ “ಅ”ವರ್ಗ ಮಹಿಳೆಗೆ ಅಧ್ಯಕ್ಷ ಸ್ಥಾನವು ಮೀಸಲಿದ್ದರೇ, ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆಗೆ ಮೀಸಲಿತ್ತು. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸಮರ್ಥ ನೇತೃತ್ವದಲ್ಲಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳು …

Read More »

ಬಾಲಚಂದ್ರ ಜಾರಕಿಹೊಳಿ ನಮ್ಮವರು. ಆದರೆ ಅವರ ಮಿತ್ರರು ನಮ್ಮವರಲ್ಲ- ಸಿಎಂ ಸಿದ್ಧರಾಮಯ್ಯ

*ಸಂಗೊಳ್ಳಿ ರಾಯಣ್ಣನ ಪುತ್ಥಳಿ ಅನಾವರಣ ಮಾಡಿದ ಮುಖ್ಯಮಂತ್ರಿ* *ರಾಯಣ್ಣನಂತಹ ದೇಶ ಪ್ರೇಮಿಗಳು ಮತ್ತೇ ಹುಟ್ಟಬೇಕಿದೆ*- *ಸಿಎಂ ಸಿದ್ಧರಾಮಯ್ಯ* *ಯಾವ ತಪ್ಪು ಮಾಡಿಲ್ಲ. ಅಧಿಕಾರದಿಂದ ಕೆಳಗಿಳಿಸುವ ವಿರೋಧಿಗಳ ಹುನ್ನಾರ ನಡೆಯಲ್ಲ* *ಬಾಲಚಂದ್ರ ಜಾರಕಿಹೊಳಿ ನಮ್ಮವರು. ಆದರೆ ಅವರ ಮಿತ್ರರು ನಮ್ಮವರಲ್ಲ* *ಬಾಲಚಂದ್ರರತ್ತ* *ಮುಖ ನೋಡಿ ಮುಗುಳ್ನಗೆ ಬೀರಿದ ಸಿದ್ಧರಾಮಯ್ಯ*  ಗೋಕಾಕ: ಸಂಗೊಳ್ಳಿ ರಾಯಣ್ಣ ಹುಟ್ಟಿದ ಸ್ಥಳದಲ್ಲಿ ಮ್ಯೂಜಿಯಮ್ ಮತ್ತು ಸೈನಿಕ ಶಾಲೆ ತೆರೆಯಲಾಗಿದೆ. ನಂದಗಡದಲ್ಲಿರುವ ಸಮಾಧಿಯನ್ನು ಸಹ ಅಭಿವೃದ್ದಿ ಮಾಡಲಾಗಿದೆ. ಸಂಗೊಳ್ಳಿ …

Read More »

ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಂಘಕ್ಕೆ  54.89 ಲಕ್ಷ ರೂ ಲಾಭ- ಮಲ್ಲಪ್ಪ ಕಡಾಡಿ

ಮೂಡಲಗಿ: ಕಳೆದ 111 ವರ್ಷಗಳಿಂದ ಸಹಕಾರ ಕ್ಷೇತ್ರದಲ್ಲಿ ಪ್ರಗತಿಯನ್ನು ಸಾಧಿಸುಸುತ್ತ ಬಂದಿರುವ ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಂಘವು  2023-24 ನೇ ಸಾಲಿನಲ್ಲಿ 54.89  ಲಕ್ಷ ರೂ ಲಾಭ ಹೊಂದಿ ಪ್ರಗತಿ ಪಥತ ದತ್ತ ಸಾಗಿದೆ. ಸಂಘದ ಶೇರುದಾರರಿಗೆ ಶೇ.೫ ರಷ್ಟು ಲಾಭವಂಶ ವಿತರಿಸಲು ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಮಲ್ಲಪ್ಪ ಪರಪ್ಪ ಕಡಾಡಿ ಹೇಳಿದರು. ಅವರು ತಾಲೂಕಿನ ಕಲ್ಲೋಳಿ ಪಟ್ಟಣದ ಶತಮಾನ ಪೂರೈಸಿದ ಪ್ರತಿಷ್ಠಿತ ಪ್ರಾಥಮಿಕ ಕೃಷಿ ಪತ್ತಿನಸಹಕಾರಿ …

Read More »

ಮೂಡಲಗಿಯಲ್ಲಿ ವಿಶ್ವ ಛಾಯಾಗ್ರಾಹಕ ದಿನಾಚರಣೆ

ಪಟ್ಟಣದಲ್ಲಿ ನೂತನವಾಗಿ ಪ್ರಾರಂಭವಾದ ವೃತ್ತಿನಿರತ ಛಾಯಾಗ್ರಾಹಕ ಸಂಘದ ಕಚೇರಿಯಲ್ಲಿ ವಿಶ್ವ ಛಾಯಾಗ್ರಾಹಕ ದಿನಾಚರಣೆ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಹಿರಿಯ ಛಾಯಾಗ್ರಾಹಕ ಅರ್ಜುನ ದೊಂಗಡಿಯವರನ್ನು ಸತ್ಕರಿಸಿ ಗೌರವಿಸಲಾಯಿತು. ಮೂಡಲಗಿ: ಇಂದಿನ ಯುವಜನತೆ ಹೆಚ್ಚಾಗಿ ಪೋನ್‍ಗಳಲ್ಲಿ ಪೋಟೋಗಳನ್ನು ಕ್ಲಿಕಿಸುತ್ತಿರುವುದರಿಂದ ಛಾಯಾಗ್ರಾಹಕರ ಬದುಕಿಗೆ ಬರೆ ಎಳೆದಂತಾಗಿದೆ ಎಂದು ಹಿರಿಯ ಛಾಯಾಗ್ರಾಹಕ ಅರ್ಜುನ ದೊಂಗಡಿ ಬೆಸರ ವ್ಯಕ್ತಡಿಸಿದರು. ಪಟ್ಟಣದಲ್ಲಿ ನೂತನವಾಗಿ ಪ್ರಾರಂಭವಾದ ವೃತ್ತಿನಿರತ ಛಾಯಾಗ್ರಾಹಕ ಸಂಘದ ಕಚೇರಿಯಲ್ಲಿ ವಿಶ್ವ ಛಾಯಾಗ್ರಾಹಕ ದಿನಾಚರಣೆ ಅಂಗವಾಗಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ …

Read More »

ಶ್ರೀಕೃಷ್ಣಪರಮಾತ್ಮನನ್ನು ಪ್ರತಿಯೊಬ್ಬರು ಭಕ್ತಿಯಿಂದ ಪೂಜಿಸಿದರೆ ಮುಕ್ತಿ ಪಡೆಯಲು ಸಾಧ್ಯ – ಪೂಜಾ ಪಾರ್ಶಿ

ಮೂಡಲಗಿ : ದುಷ್ಟರನ್ನು ಸಂಹರಿಸಿ ಶಿಷ್ಟರನ್ನು ಕಾಪಾಡಲು ಹಾಗೂ ಧರ್ಮ ಅವನತಿಯ ಅಂಚಿನಲ್ಲಿದ್ದಾಗ ಧರ್ಮವನ್ನು ಕಾಪಾಡಲು ಮತ್ತೆ ಮತ್ತೆ ಭಗವಂತನ ರೂಪದಲ್ಲಿ ಅವತರಿಸಿ ಧರ್ಮ ಮಾರ್ಗದಿಂದ ನಡೆದರೆ ಮಾತ್ರ ಬದುಕಿಗೆ ಬೆಲೆ ಬರುತ್ತದೆ ಎಂದು ಶ್ರೀಕೃಷ್ಣಪರಮಾತ್ಮನು ತಿಳಿಸಿಕೊಟ್ಟಿದ್ದಾನೆ ಪ್ರಸ್ತುತ ಕಾಲದಲ್ಲಿ ಧರ್ಮ, ಸಂಸ್ಕೃತಿ ಮತ್ತು ಸಂಪ್ರದಾಯಿಗಳು ಮಾಯವಾಗುವಾಗ ಅವುಗಳ ಕಲ್ಪನೆ ಮಕ್ಕಳ ಹಂತಗಳಿAದಲೇ ಬೆಳಸುವುದು ಅಗತ್ಯವಿದೆ ಎಂದು ಮಾಡಲಗಿಯ ಆರ್.ಡಿ.ಸಂಸ್ಥೆಯ ಉಪಾಧ್ಯಕ್ಷರಾದ ಪೂಜಾ ಪಾರ್ಶಿ ಹೇಳಿದರು. ಪಟ್ಟಣದ ಆರ್.ಡಿ. ಸಂಸ್ಥೆಯ …

Read More »