Breaking News
Home / Recent Posts / ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

Spread the love

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

ಬೆಂಗಳೂರು- ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ.
ಜೈನ್ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಹಾಗೂ ಶ್ರೀ ಮಠದ ಪರಂಪರೆಯನ್ನು ಉಳಿಸುವಲ್ಲಿ ಸ್ವಾಮೀಜಿಗಳ ಕಾರ್ಯ ಅಪಾರವಾಗಿತ್ತು. ಶೈಕ್ಷಣಿಕ ಕ್ಷೇತ್ರದ ಸಮಗ್ರ ಪ್ರಗತಿಗಾಗಿಯೂ ಹಗಲಿರುಳು ದುಡಿದಿದ್ದಾರೆ‌. ಕಳೆದ ನಾಲ್ಕು ದಶಕಗಳಿಂದ ಆಧ್ಯಾತ್ಮಿಕ ರಂಗದಲ್ಲಿ ಮುಂಚೂಣಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಶ್ರೀಗಳ ನಿಧನದಿಂದ ಇಡೀ ನಾಡೇ ಬಡವಾಗಿದೆ. ಇವರ ಆತ್ಮಕ್ಕೆ ಆ ಭಗವಂತನು ಚಿರ ಶಾಂತಿಯನ್ನು ಕರುಣಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರಾರ್ಥಿಸಿದ್ದಾರೆ.


Spread the love

About inmudalgi

Check Also

ಬೆಟಗೇರಿಯಲ್ಲಿ ಸಂಭ್ರಮದಿಂದ ಬಕ್ರೀದ್ ಹಬ್ಬ ಆಚರಣೆ

Spread the loveಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ತ್ಯಾಗ ಬಲಿದಾನ ಹಾಗೂ ಸಹೋದರತ್ವದ ಸಂದೇಶ ಸಾರುವ ಪವಿತ್ರ ಬಕ್ರೀದ್ ಹಬ್ಬವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ