ಬೆಳಗಾವಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಚಿವರಾದ ನಾರಾಯಣ ಗೌಡರಿಗೆ ಬೆಳಗಾವಿಯಲ್ಲಿ ಯುವಕ ಸಂಘದ ಯುವ ಚಟುವಟಿಕೆಯನ್ನು ಪ್ರಾರಂಭಿಸುವಂತೆ ರಾಷ್ಟ್ರೀಯ ಯುವ ಪ್ರಶಸ್ತಿ ವಿಜೇತರಾದ ಮಲ್ಲೇಶ ಚೌಗಲಾ ಹಾಗೂ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ವಿಜೇತರು ಜಿಲ್ಲಾಧ್ಯಕ್ಷರಾದ ಸಿದ್ದಣ್ಣ ದುರದುಂಡಿ ಅವರ ನೇತೃತ್ವದಲ್ಲಿ ಸಚಿವರ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕ್ರೀಡಾ ಇಲಾಖೆಯ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿ ಪ್ರಮುಖ ಬೇಡಿಕೆಗಳಾದ ತಾಲೂಕ ಮಟ್ಟದ
ಜಿಲ್ಲಾಮಟ್ಟದ ರಾಜ್ಯಮಟ್ಟದ ಯುವಜನ ಮೇಳಗಳನ್ನು ಹಾಗೂ ಯುವ ಸಮ್ಮೇಳನ ತರಬೇತಿ ಕಾರ್ಯಾಗಾರ ಕಾರ್ಯಕ್ರಮಗಳನ್ನು ಪ್ರಾರಂಭಿಸಬೇಕು. ಗ್ರಾಮೀಣ ಕ್ರೀಡೋತ್ಸವ ಹಾಗೂ ರಾಷ್ಟ್ರೀಯ ಯುವ ಪ್ರಶಸ್ತಿ ವಿಜೇತರು ಹಾಗೂ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ವಿಜೇತರಿಗೆ ಉಚಿತ ಬಸ್ ಪಾಸ್ ಹಾಗೂ ಹೆಲ್ತ್ ಕಾರ್ಡ್ ನೀಡಬೇಕು. ಮುಂದಿನ ಯುವ ಪೀಳಿಗೆ ಹಾಗೂ ಯುವಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ನಿಂತು ಹೋದಂತ ಜಿಲ್ಲಾ ಹಾಗೂ ರಾಜ್ಯ ಯುವ ಪ್ರಶಸ್ತಿಗಳನ್ನು ಮುಂದುವರಿಸಬೇಕು. ಕರ್ನಾಟಕ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಈ ಹಿಂದೆ ಇರುವಂತ ಎಲ್ಲಾ ಕಾರ್ಯಕ್ರಮಗಳನ್ನು ಪುನರಾರಂಭಿಸಿ ಗ್ರಾಮೀಣ ಭಾಗದ ಕ್ರೀಡೆಗಳಿಗೆ ಕ್ರೀಡಾಪಟುಗಳಿಗೆ ಗ್ರಾಮೀಣ ಭಾಗದ ಜನಪದ ಕಲಾವಿದರಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಾರಂಭಿಸಬೇಕು.
ಯುವಕ ಸಂಘಗಳು ಮತ್ತು ಯುವತಿ ಮಂಡಲಗಳು ಆರ್ಥಿಕವಾಗಿ ಸಬಲೀಕರಣಗೊಳಿಸಲು ಯುವ ಪ್ರಾಧಿಕಾರ ಯುವ ನೀತಿಯನ್ನು ಜಾರಿಗೆ ತರಬೇಕು. ಹಾಗೂ ಯುವಜನರಿಗಾಗಿ ಇರುವ ಇನ್ನಿತರ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಮನವಿ ಮಾಡಿಕೊಳ್ಳಲಾಯಿತು. ಮುಂದೆ ಬರುವ ಬಜೆಟ್ ನಲ್ಲಿ ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯದ್ಯಂತ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಎಲ್ಲಾ ಯುವಕ ಸಂಘಗಳು
ಸೇರಿಕೊಂಡು ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹಾಗೂ ಕೆಎಂಎಫ್ ಅಧ್ಯಕ್ಷರು ಅರಭಾವಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ ಮೂಲಕ ಮನವಿ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಲಾಯಿತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಷ್ ಪಾಟೀಲ್ ರಾಷ್ಟ್ರೀಯ ಯುವ ಪ್ರಶಸ್ತಿ ವಿಜೇತರಾದ ಮಲ್ಲೇಶ ಚೌಗಲಾ ಭರತ್ ಕಲಾ ಚಂದ್ರ ಹಾಗೂ ಸ್ವಾಮಿ ವಿವೇಕಾನಂದ ರಾಜ್ಯ ಯುವ ಪ್ರಶಸ್ತಿ ವಿಜೇತರು ಜಿಲ್ಲಾಧ್ಯಕ್ಷರಾದ ಸಿದ್ದಣ್ಣ ದುರದುಂಡಿ ಗೌರವ ಅಧ್ಯಕ್ಷ ರಾಮಚಂದ್ರ ಕಾಂಬಳೆ ಮಾರುತಿ ಪ್ಯಾಟಿ ಅಕ್ಕಮಹಾದೇವಿ ಮಾದರ್ ಖುಷಿ ದವಳಿ ಯಮನವ್ವ ಮಾದರ್ ಭಾರತಿ ಮಾದರ್ ಯಮನಪ್ಪ ಬೆಳಗಂಟಿ ಗೂಳಪ್ಪ ವಿಜಯನಗರ ಒಕ್ಕೂಟದ ತಾಲೂಕ ಅಧ್ಯಕ್ಷರುಗಳಾದ ಮಾದೇವ ಮುರುಗೋಡ ಸಂಗಮೇಶ್ ಪೂಜಾರಿ ನಾಗೇಂದ್ರ ಚೌಗಲಾ ರಾಘವೇಂದ್ರ ಲಂಬುಗೋಳ ಹಾಗೂ ಸಂತೋಷ್ ಮಾದರ್ ಶಿವಾನಂದ ನಾಯಕ ಜಿಲ್ಲೆಯ ಎಲ್ಲಾ ಯುವಕ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಸರ್ವ ಸದಸ್ಯರು ಉಪಸ್ಥಿತರಿದ್ದರು. ಇವತ್ತು ವಿಲಿಕರಣ ಕ್ರೀಡಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಇದ್ದರು.