ತುರ್ತು ವಾಹನ ಓಡಿಸಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ.
ಬೆಟಗೇರಿ:ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ತಮ್ಮ 2021-22ನೇ ಸಾಲಿನ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅನುದಾನದಡಿಯಲ್ಲಿ ನೀಡಿರುವ ನೂತನ ಅಂಬ್ಯುಲೆನ್ಸ್ ವಾಹನ ಸಮರ್ಪಿಸಿ ಜುಲೈ.17 ರಂದು ನಡೆದ ಕಾರ್ಯಕ್ರಮದಲ್ಲಿ ತುರ್ತು ವಾಹನ ಓಡಾಟಕ್ಕೆ ಚಾಲನೆ ನೀಡಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು, ವಾಹನದ ಚಾಲಕನ ಕುರ್ಚಿಯಲ್ಲಿ ತಾವೇ ಕುಳಿತು ತುರ್ತು ನೂತನ ವಾಹನ ಓಡಿಸಿ ಎಲ್ಲರ ಗಮನ ಸೆಳೆದರು.