Breaking News
Home / Recent Posts / *ಬೆಟಗೇರಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಬಾಲ್ಯ ವಿವಾಹ ಜಾಗೃತಿ ಅಭಿಯಾನ * ತಾಯಂದಿರ ಸಭೆ

*ಬೆಟಗೇರಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಬಾಲ್ಯ ವಿವಾಹ ಜಾಗೃತಿ ಅಭಿಯಾನ * ತಾಯಂದಿರ ಸಭೆ

Spread the love

ಬಾಲ್ಯ ವಿವಾಹ ನಿಯಂತ್ರಣಕ್ಕೆ ಪ್ರತಿಯೊಬ್ಬರು ಪ್ರಯತ್ನಿಸಬೇಕು: ಡಾ.ಮೈತ್ರೇಯಿಣಿ ಗದಿಗೆಪ್ಪಗೌಡರ

*ಬೆಟಗೇರಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಬಾಲ್ಯ ವಿವಾಹ ಜಾಗೃತಿ ಅಭಿಯಾನ * ತಾಯಂದಿರ ಸಭೆ

ಬೆಟಗೇರಿ:ಮಕ್ಕಳಿಗೆ ವಿದ್ಯಾರ್ಥಿ ಜೀವನ ಅಮೂಲ್ಯವಾದದು, ಶಾಲಾ ಮಕ್ಕಳು ಕಲಿಕಾ ಬದುಕು ಸದುಪಯೋಗ ಮಾಡಿಕೊಂಡು ಸಾಧನೆಗೈಬೇಕು. ಪಾಲಕರು ಹೆಣ್ಣು ಮಕ್ಕಳಿಗೆ ಶಿಕ್ಷಣ ಕೂಡಿಸಲು ಮೊದಲು ಆದ್ಯತೆ ನೀಡಬೇಕು. ಬಾಲ್ಯ ವಿವಾಹ ಕಾನೂನಿನ ಪ್ರಕಾರ ಅಕ್ಷಮ್ಯ ಅಪರಾಧವಾಗಿದೆ ಎಂದು ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಪ್ರಾಧ್ಯಾಪಕಿ ಮತ್ತು ವಿಮರ್ಶಕಿ ಡಾ.ಮೈತ್ರೇಯಿಣಿ ಗದಿಗೆಪ್ಪಗೌಡರ ಹೇಳಿದರು.

ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿದೇ ಸರ್ಕಾರಿ ಪ್ರೌಢ ಶಾಲೆಯಲ್ಲಿ ನ.20ರಂದು ನಡೆದ ಮಾತೆಯರ ಸಮಾಗಮ ಹಾಗೂ ಬಾಲ್ಯ ವಿವಾಹ ಜಾಗೃತ ಅಭಿಯಾನದ ಬೇಗ ಬೇಡ ಕೊರಳಿಗೆ ಉರುಳು ಕಾರ್ಯಕ್ರಮದ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು, ಹೆಣ್ಣು ಮಕ್ಕಳಿಗೆ ಬೇಗ ವಿವಾಹ ಬೇಡ, ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಕೂಡಿಸಲು ಪ್ರತಿಯೊಬ್ಬ ತಂದೆ, ತಾಯಿ ಪ್ರಯತ್ನಿಸಬೇಕು. ಇಂದಿನ ದಿನಮಾನಗಳಲ್ಲಿ ಬಾಲ್ಯ ವಿವಾಹ ನಿಯಂತ್ರಣಕ್ಕೆ ಪ್ರತಿಯೊಬ್ಬರು ಪ್ರಯತ್ನಿಸಬೇಕು. ಮಹಿಳಾ ಹಕ್ಕುಗಳ ಕುರಿತು ಹಲವಾರು ಸಲಹೆಗಳನ್ನು ತಿಳಿಸಿದರು.
ಮುಖ್ಯಾಧ್ಯಾಪಕ ರಮೇಶ ಅಳಗುಂಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಮನೆಯಲ್ಲಿ ಮಕ್ಕಳ ಓದಿನ ಕಡೆ ತಂದೆ, ತಾಯಿ ವಿಶೇಷ ಗಮನ ಹರಿಸಿದರೆ ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸುವುದರಲ್ಲಿ ಎರಡು ಮಾತಿಲ್ಲ ಎಂದÀರು. ಸ್ಥಳೀಯ ಪಿಎಚ್‍ಸಿ ವೈದ್ಯಾಧಿಕಾರಿ ಎಸ್.ಪಿ.ತಂಬಾಕಿ ಮಾತನಾಡಿ, ಮಕ್ಕಳ ಸಮಗ್ರ ಬೆಳವಣಿಗೆ ಮತ್ತು ಒಳ್ಳೆಯ ಸಂಸ್ಕಾರ ನೀಡುವಲ್ಲಿ ತಾಯಿಂದಿರ ಪಾತ್ರ ಮಹತ್ವದಾಗಿದೆ ಎಂದರು.
ಶಾಲೆಯ ಹಾಗೂ ತಾಯಿಂದಿರ ಪರವಾಗಿ ಅತಿಥಿಗಳನ್ನು ಶಾಲು ಹೊದಿಸಿ ಸತ್ಕರಿಸಿದರು. ಬಾಲ್ಯ ವಿವಾಹ ನಿಯಂತ್ರಣ ಮಾಡುವುದಾಗಿ ಸ್ಥಳೀಯ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ವಿದ್ಯಾರ್ಥಿ ತಾಯಂದಿರು, ಪಾಲಕರು, ಎಸ್‍ಡಿಎಮ್‍ಸಿ ಸದಸ್ಯರು, ಶಿಕ್ಷಕರು, ಅತಿಥಿ ಶಿಕ್ಷಕರು, ವಿದ್ಯಾರ್ಥಿಗಳು, ಶಿಕ್ಷಣ ಪ್ರೇಮಿಗಳು ಬಾಲ್ಯ ವಿವಾಹ ನಿಯಂತ್ರಣ ಮಾಡುವುದಾಗಿ ಪ್ರತಿಜ್ಞಾ ವಿಧಿ ಮಾಡಿದರು.
ತಾಪಂ ಮಾಜಿ ಸದಸ್ಯ ಲಕ್ಷ್ಮಣ ನೀಲಣ್ಣವರ ಗ್ರಾಪಂ ಅಧ್ಯಕ್ಷೆ ತೇಜಸ್ವಿನಿ ನೀಲಣ್ಣವರ, ಬೆಟಗೇರಿ ವಲಯ ಸಿಆರ್‍ಪಿ ಮಲ್ಲನಗೌಡ ನಾಯ್ಕರ, ಲಲಿತಾ ಪಟಗಾರ, ರಾಮಣ್ಣ ನೀಲಣ್ಣವರ, ದುಂಡಪ್ಪ ದೇಯಣ್ಣವರ, ಹನುಮಂತ ಹಾಲಣ್ಣವರ, ಸ್ಥಳೀಯ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ವಿದ್ಯಾರ್ಥಿ ತಾಯಂದಿರು, ಪಾಲಕರು, ಎಸ್‍ಡಿಎಮ್‍ಸಿ ಸದಸ್ಯರು, ಶಿಕ್ಷಕರು, ಅತಿಥಿ ಶಿಕ್ಷಕರು, ವಿದ್ಯಾರ್ಥಿಗಳು, ಶಿಕ್ಷಣ ಪ್ರೇಮಿಗಳು ಇದ್ದರು.


Spread the love

About inmudalgi

Check Also

ಗಜಾನನ ಮನ್ನಿಕೇರಿ ಶಿಕ್ಷಣ ಇಲಾಖೆಯ ಗೌರವ ಹೆಚ್ಚಿಸಿದ್ದರು’ – ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ 

Spread the loveಗಜಾನನ ಮನ್ನಿಕೇರಿ ಅವರಿಗೆ ‘ಅಕ್ಷರದೊಳಗಿನ ನಕ್ಷತ್ರ’ ಅಭಿನಂದನಾ ಗಂಥ ಅರ್ಪಣೆ ‘ಗಜಾನನ ಮನ್ನಿಕೇರಿ ಶಿಕ್ಷಣ ಇಲಾಖೆಯ ಗೌರವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ