ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬೀರಸಿದ್ಧೇಶ್ವರ ದೇವಸ್ಥಾನ ದಾಸೋಹ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಸ್ಥಳೀಯ ಬೀರಸಿದ್ಧೇಶ್ವರ ದೇವಸ್ಥಾನದ ಅರ್ಚಕ ಗುರಪ್ಪ ಮಾಕಾಳಿ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಬೆಟಗೇರಿ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ, ಬೀರಸಿದ್ಧೇಶ್ವರ ದೇವಸ್ಥಾನ ಕಮಿಟಿ ಅಧ್ಯಕ್ಷ ಸುಭಾಷ ಕರೆಣ್ಣವರ, ಕಾರ್ಯದರ್ಶಿ ಮಾಯಪ್ಪ ಬಾಣಸಿ, ವಿಠ್ಠಲ ಕೋಣಿ, ಸದಾಶಿವ ಕುರಿ, ಬಸಪ್ಪ ಮಾಕಾಳಿ, ಬಸಪ್ಪ ಮಾಲದಿನ್ನಿ, ಸದ್ಬಕ್ತರು, ಸ್ಥಳೀಯರು, ಇತರರು ಇದ್ದರು.
IN MUDALGI Latest Kannada News