ಬೆಟಗೇರಿ:ಸ್ಥಳೀಯ ರೈತರು ನಿತ್ಯದ ಕೃಷಿ ಚಟುವಟಿಕೆಗಳ ಜೋತೆಗೆ ಹೈನುಗಾರಿಕೆ ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಕೆಎಂಎಫ್ನಿಂದ ಹೈನುಗಾರಿಕೆ ಅಭಿವೃದ್ಧಿಗಾಗಿ ಹಲವಾರು ಸಹಾಯ, ಸೌಲಭ್ಯಗಳಿವೆ. ರೈತರು ಇವುಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಗುಲಬುರ್ಗಾ ತರಬೇತಿ ಕೇಂದ್ರದ ನಿವೃತ್ತ ಜಂಟಿ ನಿರ್ದೇಶಕ ಡಾ.ನಿಕೀಲ ಜ್ಯೋಶಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಸೆ.10ರಂದು ನಡೆದ 2024-25ನೇ ಸಾಲಿನ ವಾರ್ಷಿಕ ಸರ್ವಸಾಧಾರಣ ಮಹಾಸಭೆಯಲ್ಲಿ ಮುಖ್ಯಅತಿಥಿಯಾಗಿ ಮಾತನಾಡಿ, ಹೈನುಗಾರಿಕೆ ರೈತರ ಬದುಕಿನ ಜೀವಾಳವಾಗಿದೆ. ಬೆಳಗಾವಿ ಹಾಲು ಒಕ್ಕೂಟದಿಂದ ಹೈನುಗಾರಿಕೆ ಅಭಿವೃದ್ಧಿಗಾಗಿ ರೈತರಿಗೆ ದೊರಕುವ ವಿವಿಧ ಸಹಾಯ, ಸೌಲಭ್ಯಗಳ ಕುರಿತು ತಿಳಿಸಿದರು.
ಸಂಘದ ಮುಖ್ಯಕಾರ್ಯನಿರ್ವಾಹಕ ನಿಂಗಪ್ಪ ನೀಲಣ್ಣವರ ವಾರ್ಷಿಕ ವರದಿ ಮಂಡಿಸಿ ಸಂಘವು ಸನ್2024-25ನೇ ಸಾಲಿನಲ್ಲಿ 21,10,646/-ರೂ.ಗಳ ನಿವ್ವಳ ಲಾಭ ಗಳಿಸಿದೆ. ಸಂಘದ ಶೇರ ಸದಸ್ಯರಿಗೆ ಶೇ20ರಷ್ಟು 42,080/-ರೂಗಳ ಡಿವ್ಹಿಡೆಂಡ್, ಶೇ65ರಷ್ಟು ಒಟ್ಟು 9,81,009/-ರೂ.ಗಳ ಬೋನಸ್ ಸದಸ್ಯರಿಗೆ ವಿತರಿಸಲಾಗುವದು ಎಂದರು.
ಸಂಘದ ಅಧ್ಯಕ್ಷ ಮಹಾದೇವ ಕಂಬಿ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಘದ ಶೇರ ಸದಸ್ಯರು, ಗ್ರಾಹಕರು, ಗ್ರಾಮದ ಪ್ರಮುಖ ನಾಗರಿಕರ ಜೋತೆ ಆಡಳಿತ ಮಂಡಳಿ ಅಧ್ಯಕ್ಷ ಮತ್ತು ಸದಸ್ಯರು ಸಂಘದ ಸಮಗ್ರ ಪ್ರಗತಿಯ ಕುರಿತು ಹಲವಾರು ವಿಷಯಗಳನ್ನು ಈ ವೇಳೆ ಚರ್ಚಿಸಿದ ಬಳಿಕ ಗಣ್ಯರು, ಅತಿಥಿಗಳನ್ನು ಈ ವೇಳೆ ಶಾಲು ಹೊದಿಸಿ ಸನ್ಮಾನಿಸಲಾಯಿತು.
ಬಹುಮಾನ ವಿತರಣೆ:ಸನ್2024-25ನೇ ಸಾಲಿನಲ್ಲಿ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಆಕಳು ಮತ್ತು ಎಮ್ಮೆ ಹಾಲು ವಿಭಾಗದಲ್ಲಿ ಅತಿ ಹೆಚ್ಚು ಹಾಲು ನೀಡಿದ ಸಂಘದ ಸದಸ್ಯರಿಗೆ ಪ್ರಥಮ, ದ್ವೀತಿಯ, ತೃತೀಯ ಸ್ಥಾನಗಳಿಗೆ ಹಾಗೂ 2ಸಾವಿರ ರೂಪಾಯಿಕ್ಕಿಂತ ಹೆಚ್ಚು ಭೋನಸ್ ಹಣ ಪಡೆದ ಸಂಘದ ಸದಸ್ಯರಿಗೆ ಸ್ಥಳೀಯ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಹೈನುಗಾರಿಕೆ ಮತ್ತು ಗೃಹೋಪಯೋಗಿ ಉಪಕರಣಗಳನ್ನು ಬಹುಮಾನ ರೂಪದಲ್ಲಿ ನೀಡಿ ಸನ್ಮಾನಿಸಿದರು.
ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟ ಗೋಕಾಕ ಘಟಕದ ಉಪಕೇಂದ್ರ ಅಧಿಕಾರಿ ವೀರಣ್ಣ ಕೌಜಲಗಿ, ವಿಸ್ತರಣಾಧಿಕಾರಿ ಗೋಪಾಲ ಭಂಡಾರಿ, ಬಸಪ್ಪ ತೋಟಗಿ, ಯಲ್ಲಾಲಿಂಗ ದೇಯಣ್ಣವರ, ಮಲ್ಲಿಕಾರ್ಜುನ ಪೇದನ್ನವರ, ಸಿದ್ಧೇಶ್ವರ ಕುರಬೇಟ, ಅರ್ಜುನ ಬ್ಯಾಗಿ, ಶಿವಪ್ಪ ಬಳಿಗಾರ, ಸತ್ತೆಪ್ಪ ಹೊರಟ್ಟಿ, ವಿಜಯ ಮಠದ, ಮಹಾದೇವ ಮಾಳೇದ, ಸುರೇಶ ತಳವಾರ, ಸಿದ್ದಪ್ಪ ಕೋಣಿ, ಸ್ಥಳೀಯ ಹಾಉಸಸಂಘದ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ, ಶೇರ ಸದಸ್ಯರು, ಗ್ರಾಹಕರು, ಇತರರು ಇದ್ದರು.
