Breaking News
Home / ಬೆಳಗಾವಿ / ನ.1ರಂದು ಬೆಟಗೇರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ

ನ.1ರಂದು ಬೆಟಗೇರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ

Spread the love

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲ್ಲಿ ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ ಇವರ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭ ನ.1 ರಂದು ಜರುಗಲಿದೆ.
ನ.1 ರಂದು ಬೆಳಿಗ್ಗೆ 9 ಗಂಟೆಗೆ ಸ್ಥಳೀಯ ವಿವಿಧ ವೃತ್ತದಲ್ಲಿರುವ ಮಹಾನ್ ಪುರುಷರ ಪುತ್ಥಳಿಗಳಿಗೆ ಪೂಜೆ, ಪುಷ್ಪಾರ್ಪಣೆ ಸಮರ್ಪಣೆ ಬಳಿಕ ಇಲ್ಲಿಯ ಅಶ್ವಾರೂಢ ಬಸವೇಶ್ವರ ವೃತ್ತದಿಂದ ಸಂಗೋಳ್ಳಿ ರಾಯಣ್ಣ ವೃತ್ತದವರೆಗೆ ಶಾಲಾ-ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ವಿವಿಧ ರೂಪಕಗಳ, ಜಾನಪದ ಕಲಾ ತಂಡಗಳು ಸೇರಿದಂತೆ ಸಕಲ ವಾದ್ಯಮೇಳಗಳೊಂದಿಗೆ ಭುವನೇಶ್ವರಿ ದೇವಿಯ ಮತ್ತು ಡಾ.ಬೆಟಗೇರಿ ಕೃಷ್ಣಶರ್ಮರ ಭಾವಚಿತ್ರದ ಭವ್ಯ ಮೇರವಣಿಗೆ ಕಾರ್ಯಕ್ರಮ ನಡೆಯಲಿದೆ.
ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಕನ್ನಡ ಪರ ಹೋರಾಟಗಾರರು, ಸಾಹಿತಿ-ಶರಣರು, ಗಣ್ಯರು, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯ ಯುವಕರು, ಕನ್ನಡಾಭಿಮಾನಿಗಳು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸ್ಥಳೀಯ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಪತ್ರಿಕಾ ಪ್ರಕಟನೆಗೆ ತಿಳಿಸಿದ್ದಾರೆ.


Spread the love

About inmudalgi

Check Also

ಮನುಷ್ಯ ಉದಾರಿಯಾಗಿ ಬದುಕಬೇಕು : ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ: ಮನುಷ್ಯ ಎಷ್ಟು ವರ್ಷ ಬದುಕಿದ ಅಂಬುವುದು ಮುಖ್ಯವಲ್ಲಾ. ನಿನ್ನ ಬದುಕು ಹೇಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ