ಬೆಟಗೇರಿಯಲ್ಲಿ ಇಂದು ಕನಕದಾಸ ಮತ್ತು ಸಂಗೋಳ್ಳಿ
ರಾಯಣ್ಣ ನೂತನ ಮೂರ್ತಿ ಪ್ರತಿಷ್ಠಾಪನೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನೂತನ ಭಕ್ತ ಕನಕದಾಸ ಮತ್ತು ವೀರ ಸಂಗೋಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಫೆ.1 ರಂದು ಮುಂಜಾನೆ 10 ಗಂಟೆಗೆ ನಡೆಯಲಿದೆ.
ಸುಣಧೋಳಿ ಅಭಿನವ ಶಿವಾನಂದ ಮಹಾಸ್ವಾಮೀಜಿ, ಕಡಕೋಳದ ಅಭಿನವ ಸಿದ್ದರಾಯಜ್ಜನವರು ದಿವ್ಯ ಸಾನಿಧ್ಯ, ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ರಾಜಕೀಯ ಮುಖಂಡರು, ಗಣ್ಯರು, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸ್ಥಳೀಯ ಬಸವೇಶ್ವರ ವೃತ್ತದಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸುಮಂಗಲೆಯರಿಂದ ಆರತಿ, ಕುಂಭ ಉತ್ಸವ ಸಕಲ
ವಾಧ್ಯಮೇಳಗಳೊಂದಿಗೆ ಮೂರ್ತಿ ಭವ್ಯ ಮೆರವಣಿಗೆ ಜರುಗಲಿದೆ.
IN MUDALGI Latest Kannada News