ಬೆಟಗೇರಿ:ಸಮೀಪದ ಮಮದಾಪೂರ ಗ್ರಾಮದ ಮೌನ ಮಲ್ಲಿಕಾರ್ಜುನ ಮಠದಲ್ಲಿ ನವರಾತ್ರಿಯ ಅಂಗವಾಗಿ ಆಯೋಜಿಸಿರುವ ಶ್ರೀ ದೇವಿ ಪುರಾಣ ಪ್ರವಚನ ಮಂಗಲೋತ್ಸವ ಮತ್ತು ಜಮಖಂಡಿ ಕಲ್ಯಾಣ ಮಠದ ಗೌರಿಶಂಕರ ಶಿವಾಚಾರ್ಯ ಸ್ವಾಮಿಜಿಗಳ ಅನುಷ್ಠಾನ ಮಂಗಲೋತ್ಸವ ಹಾಗೂ ಫಕೀರೇಶ್ವರ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಬುಧವಾರ ಅ.20 ರಂದು ಸಾಯಂಕಾಲ 4 ಗಂಟೆಗೆ ನಡೆಯಲಿದೆ.
ಶಿವಾನುಭವ ಸಭೆ ಸಂಜೆ 7 ಗಂಟೆಗೆ ನಡೆಯಲಿದ್ದು,
ಸ್ಥಳೀಯ ಮೌನ ಮಲ್ಲಿಕಾರ್ಜುನ ಮಠದ ಮೌನ ಮಲ್ಲಿಕಾರ್ಜುನ ಮಹಾ ಶಿವಯೋಗಿಗಳು ಅಧ್ಯಕ್ಷತೆ, ಶಿರಹಟ್ಟಿಯ ಜಗದ್ಗುರು ಫಕೀರೇಶ್ವರ ಸಂಸ್ಥಾನಮಠದ ಜಗದ್ಗುರು ಫಕೀರಸಿದ್ಧರಾಮ ಮಹಾಸ್ವಾಮಿಜಿ ದಿವ್ಯ ಸಾನಿಧ್ಯ, ಜಮಖಂಡಿ ಕಲ್ಯಾಣ ಮಠದ ಗೌರಿಶಂಕರ ಶಿವಾಚಾರ್ಯ ಸ್ವಾಮಿಜಿ ಸಾನಿಧ್ಯ, ಹಿಪ್ಪರಗಿ ಕುಮಾರ ಸಿದ್ಧಾರೂಢ ಶರಣರು ಸಮ್ಮುಖ ವಹಿಸಲಿದ್ದಾರೆ.
ಆಗಮಿತ ನಾಡಿನ ಸಕಲ ಹರ-ಗುರು, ಚರಮೂರ್ತಿಗಳ ಸಮ್ಮುಖದಲ್ಲಿ, ಗಣ್ಯರ ಅತಿಥಿ ಸ್ಥಾನದ ಉಪಸ್ಥಿತಿಯಲ್ಲಿ ಪ್ರವಚನ ಜರುಗಲಿದೆ. ಕರಡಿಗುದ್ದಿಯ ವಿರುಪಾಕ್ಷ ರಾಚಣ್ಣವರ ಅನ್ನ ದಾಸೋಹ ಸೇವೆ ನೆರವೇರಿಸಲಿದ್ದಾರೆ. ಜಗದಾಳದ ಉದಯ ಪತ್ತಾರ ಅವರ ತಬಲಾ ಸಾಥದೊಂದಿಗೆ ಮಮದಾಪೂರದ ಚಿದಾನಂದ ಪಟಾತ ಅವರಿಂದ ಸಂಗೀತ ಸೇವೆ, ಕುಮಾರಿ ಲಕ್ಷ್ಮೀ ಒಡೆಯರ ಹಾಗೂ ಸಂಗಡಿಗರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ.
ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ಸಂತ-ಶರಣರು, ಆಧ್ಯಾತ್ಮ ಪ್ರವೀಣರು, ಗಣ್ಯರು ಸೇರಿದಂತೆ ಶ್ರೀ ಮಠದಲ್ಲಿ ಆಯೋಜಿಸಿರುವ ಶ್ರೀದೇವಿ ಪುರಾಣ ಪ್ರವಚನ ಕಾರ್ಯಕ್ರಮದ ಆಯೋಜಕ ಸಮಿತಿ ಪದಾಧಿಕಾರಿಗಳು, ಸದಸ್ಯರು ಪುರಾಣ ಪ್ರವಚನ ಮಂಗಲೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸ್ಥಳೀಯ ಮೌನ ಮಲ್ಲಿಕಾರ್ಜುನ ಮಠದ ಶ್ರೀದೇವಿ ಪುರಾಣ ಪ್ರವಚನ ಕಾರ್ಯಕ್ರಮದ ಆಯೋಜಕ ಸಮಿತಿ ಸಂಚಾಲಕ ಮಂಜುನಾಥ ಶರಣರು ಪ್ರತಿಕಾ ಪ್ರಕಟನೆಗೆ ತಿಳಿಸಿದ್ದಾರೆ.