Breaking News
Home / ತಾಲ್ಲೂಕು / ಶಾಲಾ ಮಕ್ಕಳು ಗ್ರಂಥಾಲಯ ಸದುಪಯೋಗ ಪಡೆದುಕೊಳ್ಳಬೇಕು: ಬಸವರಾಜ ಪಣದಿ

ಶಾಲಾ ಮಕ್ಕಳು ಗ್ರಂಥಾಲಯ ಸದುಪಯೋಗ ಪಡೆದುಕೊಳ್ಳಬೇಕು: ಬಸವರಾಜ ಪಣದಿ

Spread the love

ಬೆಟಗೇರಿ:ಗ್ರಾಮೀಣ ವಲಯದಲ್ಲಿ ಗ್ರಾಮ ಪಂಚಾಯತಿ
ಗ್ರಂಥಾಲಯ ಮತ್ತು ಅರಿವು ಕೇಂದ್ರಗಳು ಶಾಲಾ
ಮಕ್ಕಳ ಕಲಿಕೆಗೆ ಆಶಾಕಿರಣವಿದ್ದಂತೆ ಎಂದು ಗೋಕಾಕ
ತಾಲೂಕಿನ ಬೆಟಗೇರಿ ಗ್ರಾಪಂ ಗ್ರಂಥಾಲಯ ಮತ್ತು ಅರಿವು
ಕೇಂದ್ರದ ಮೇಲ್ವಿಚಾರಕ ಬಸವರಾಜ ಪಣದಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯತಿ
ಹಾಗೂ ಗ್ರಾಮ ಪಂಚಾಯತಿ ಗ್ರಂಥಾಲಯದ
ಸಹಯೋಗದಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ
ಗ್ರಂಥಾಲಯ ಮತ್ತು ಅರಿವು ಕೇಂದ್ರದಲ್ಲಿ ಏ.8 ರಿಂದ
ಮೇ.24 ತನಕ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ
ಶಿಬಿರದ ಸಮಾರೂಪ ಸಮಾರಂಭದಲ್ಲಿ ಪ್ರಾಸ್ತಾವಿಕವಾಗಿ
ಮಾತನಾಡಿ, ಇಂದಿನ ಯುಗದಲ್ಲಿ ಶಾಲಾ ಮಕ್ಕಳು ಓದುವ
ಹವ್ಯಾಸ ಬೆಳಸಿಕೊಳ್ಳಬೇಕು ಮತ್ತು ಗ್ರಂಥಾಲಯ
ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಸ್ಥಳೀಯ ಶಿಕ್ಷಣಪ್ರೇಮಿ ಲಖನ ಚಂದರಗಿ ಮಾತನಾಡಿ,
ಜ್ಞಾನ ಸಂಪತ್ತಿಗಿಂತ ಇನ್ನೂಂದು ಸಂಪತ್ತಿಲ್ಲಾ, ನಾವು
ಕಷ್ಟಪಟ್ಟು ಸಂಪಾದಿಸಿದ ಆಸ್ತಿ, ಅಂತಸ್ತು ನಶಿಸಿ
ಹೋಗಬಹುದು, ಜ್ಞಾನ ಎಂದು ನಶಿಸಿ ಹೋಗುವುದಿಲ್ಲಾ,
ವಿದ್ಯಾರ್ಥಿಗಳು ಶಾಲಾ ಬಿಡುವಿನ ವೇಳೆಯಲ್ಲಿ ಉತ್ತಮ
ಪುಸ್ತಕಗಳು ಸೇರಿದಂತೆ ವಿವಿಧ ಸ್ಪರ್ಧಾತ್ಮಕ
ಪರೀಕ್ಷೆಗಳಿಗೆ ಪೂರಕವಾಗುವ ಪುಸ್ತಕಗಳನ್ನು
ಓದಬೇಕು ಎಂದು ಅಭಿಪ್ರಾಯಿಸಿದರು.
ಸ್ಥಳೀಯ ಗ್ರಾಪಂ ಕಾರ್ಯದರ್ಶಿ ಮಾರುತಿ ತಳವಾರ
ಅಧ್ಯಕ್ಷತೆ ವಹಿಸಿದ್ದರು. ಏ.8 ರಿಂದ ಮೇ.24 ತನಕ
ಸ್ಥಳೀಯ ಗ್ರಂಥಾಲಯದಲ್ಲಿ ನಡೆದ ಗ್ರಾಮೀಣ
ಮಕ್ಕಳ ಬೇಸಿಗೆ ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳಿಗೆ
ನೋಟಬುಕ್ಕ, ಪೆನ್ನ ಸೇರಿದಂತೆ ಶೈಕ್ಷಣಿಕ ಕಲಿಕಾ
ಉಪಕರಣಗಳನ್ನು ಇಲ್ಲಿಯ ಗ್ರಾಮ ಪಂಚಾಯತ
ವತಿಯಿಂದ ಈ ವೇಳೆ ವಿತರಿಸಿದರು.
ರಾಮಣ್ಣ ಮುಧೋಳ, ವಿಠ್ಠಲ ಕೋಣಿ, ಸಿದ್ಧಾರೂಢ
ಸವತಿಕಾಯಿ, ಮಣಿಕಂಠ ಐದುಡ್ಡಿ, ಗ್ರಾಪಂ ಸಿಬ್ಬಂದಿ, ಗಣ್ಯರು,

ಶಿಕ್ಷಣ ಪ್ರೇಮಿಗಳು, ಶಾಲಾ ಮಕ್ಕಳು ಇದ್ದರು.


Spread the love

About inmudalgi

Check Also

ಮನುಷ್ಯ ಉದಾರಿಯಾಗಿ ಬದುಕಬೇಕು : ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ: ಮನುಷ್ಯ ಎಷ್ಟು ವರ್ಷ ಬದುಕಿದ ಅಂಬುವುದು ಮುಖ್ಯವಲ್ಲಾ. ನಿನ್ನ ಬದುಕು ಹೇಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ