ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ನೂತನ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ 98 ಲಕ್ಷ ಅನುದಾನದ ನೂತನ ಕಟ್ಟಡ ಶಂಕು ಸ್ಥಾಪನೆಯನ್ನು ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ ನೇರೆವರಿಸಿದರು. 1977 ರಲ್ಲಿ ನಿರ್ಮಾಣವಾದ ಠಾಣೆ ಕಟ್ಟಡ ಶಿಥಿಲಗೊಂಡು ಸಂಪೂರ್ಣ ಹಾಳಾಗಿತ್ತು ಅಲಲ್ಲಿ ಮೆಲ್ಛಾವಣಿ ಬಿರುಕು ಬಿಟ್ಟಿದ್ದು ಮಳೆಗಾಲದಲ್ಲಿ ಸಂಪೂರ್ಣ ಸೋರುತ್ತಿತ್ತು ಹೀಗಾಗಿ ಠಾಣೆಯ ವಸ್ತುಗಳು, ದಾಖಲೆಗಳ ರಕ್ಷಣೆಗೆ ಕಷ್ಟಪಡಬೇಕಾಗಿತ್ತು. ಠಾಣೆಯ ಅಧಿಕಾರಿಗಳು ಮುಂದೆ ನಿಂತು ಗುಣಮಟ್ಟ ನೋಡಿ ನಿರ್ಮಿಸಿಕೊಳಬೇಕು …
Read More »ಬೆಳದಿಂಗಳ ಚಿಂತನ-ಮಂಥಣ: ಡಾ. ಬೆಟಗೇರಿ ಕೃಷ್ಣಶರ್ಮರ ಕುರಿತು ಉಪನ್ಯಾಸ
ಬೆಳದಿಂಗಳ ಚಿಂತನ-ಮಂಥಣ: ಡಾ. ಬೆಟಗೇರಿ ಕೃಷ್ಣಶರ್ಮರ ಕುರಿತು ಉಪನ್ಯಾಸ ಮೂಡಲಗಿ: ಮೂಡಲಗಿ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನ ಇವುಗಳ ಬೆಳದಿಂಗಳ ಸಾಹಿತ್ಯ ಚಿಂತನ-ಮಂಥನ ಕಾರ್ಯಕ್ರಮವು ಏ. 16ರಂದು ಸಂಜೆ 6.30ಕ್ಕೆ ಶ್ರೀರಂಗ ಸಾಂಸ್ಕøತಿಕ ಭವನದಲ್ಲಿ ಜರುಗಲಿದೆ. ಅಧ್ಯಕ್ಷತೆಯನ್ನು ಶಿವಾನಂದ ಬೆಳಕೂಡ ವಹಿಸಲಿದ್ದು, ;ಡಾ. ಬೆಟಗೇರಿ ಕೃಷ್ಣಶರ್ಮರ ಬದುಕು-ಬರಹ’ ಕುರಿತು ಸಾಹಿತಿ ಸಿದ್ರಾಮ್ ದ್ಯಾಗಾನಟ್ಟಿ ಉಪನ್ಯಾಸ ನೀಡುವರು. ಕಸಾಪ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ಉಪಸ್ಥಿತರಿರುವರು ಎಂದು …
Read More »ಕೌಜಲಗಿ ಅರ್ಬನ್ ಬ್ಯಾಂಕಿನ ನೂತನ ಅಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿಗೆ ಸನ್ಮಾನ
ಬೆಟಗೇರಿ:ಸಮೀಪದ ಕೌಜಲಗಿ ಪಟ್ಟಣದ ಕೌಜಲಗಿ ಅರ್ಬನ್ ಕೋ. ಆಪ್ ಕ್ರೆಡಿಟ್ ಬ್ಯಾಂಕಿನ ಆಡಳಿತ ಮಂಡಳಿ ನೂತನ ಅಧ್ಯಕ್ಷರಾಗಿ ಡಾ.ರಾಜೇಂದ್ರ ಸಣ್ಣಕ್ಕಿ ಅವರು ಅವಿರೋಧವಾಗಿ ಏ.12ರಂದು ಆಯ್ಕೆಗೊಂಡಿದ್ದರ ಪ್ರಯುಕ್ತ ಬೆಟಗೇರಿ ಗ್ರಾಮದ ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ನೇತೃತ್ವದಲ್ಲಿ ಡಾ. ರಾಜೇಂದ್ರ ಸಣ್ಣಕ್ಕಿ ಅಭಿಮಾನಿ ಬಳಗದ ಸದಸ್ಯರು, ಗಣ್ಯರು, ಸ್ಥಳೀಯರು ಸತ್ಕರಿಸಿದರು. ಹನುಮಂತ ವಡೇರ, ಈರಪ್ಪ ದೇಯಣ್ಣವರ, ಈಶ್ವರ ಮುಧೋಳ, ಈರಪ್ಪ ಬಳಿಗಾರ, ಅಶೋಕ ಕೋಣಿ, ಲಖನ್ ಚಂದರಗಿ, …
Read More »ಕೌಜಲಗಿ ಅರ್ಬನ್ ಕೋ.ಆಪ್ ಕ್ರೆಡಿಟ್ ಬ್ಯಾಂಕಿನ ಆಡಳಿತ ಮಂಡಳಿ ನೂತನ ಅಧ್ಯಕ್ಷರಾಗಿ ಡಾ.ರಾಜೇಂದ್ರ ಸಣ್ಣಕ್ಕಿ ಉಪಾಧ್ಯಕ್ಷೆಯಾಗಿ ಶೋಭಾದೇವಿ ಲೋಕನ್ನವರ ಆಯ್ಕೆ
ಬೆಟಗೇರಿ:ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಗೋಕಾಕ ತಾಲೂಕಿನ ಕೌಜಲಗಿ ಪಟ್ಟಣದ ಪ್ರತಿಷ್ಠಿತ ಸಹಕಾರ ಸಂಸ್ಥೆಯಾದ ಕೌಜಲಗಿ ಅರ್ಬನ್ ಕೋ.ಆಪ್ ಕ್ರೆಡಿಟ್ ಬ್ಯಾಂಕ ಲಿ. ಕೌಜಲಗಿ ಇದರ ಅಮೃತ ಮಹೋತ್ಸವ ವರ್ಷಾಚರಣೆ ಸಂದರ್ಭದಲ್ಲಿ ಬ್ಯಾಂಕಿನ ಆಡಳಿತ ಮಂಡಳಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಏ.12ರಂದು ನಡೆಯಿತು. ಬ್ಯಾಂಕಿನ ಆಡಳಿತ ಮಂಡಳಿ ನೂತನ ಅಧ್ಯಕ್ಷರಾಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಯ. ಸಣ್ಣಕ್ಕಿ, ಉಪಾಧ್ಯಕ್ಷೆಯಾಗಿ ಶೋಭಾದೇವಿ ಗಂಗಾಧರ ಲೋಕನ್ನವರ ಅವಿರೂಧವಾಗಿ …
Read More »ಮುಂದಿನ ಪೀಳಿಗೆಗೆ ಕ್ರೀಡೆಗಳ ಪರಿಚಯ ಮಾಡಿಕೊಡುವ ಅಗತ್ಯತೆಯು ಪ್ರತಿಯೊಬ್ಬರ ಮೇಲೆ ಇದೇ- ಜಿಲ್ಲಾಧಿಕಾರಿ ವಿಕಾಸ ಕಿಶೋರ ಸುರಳ್ಕರ
ಕೊಪ್ಪಳ: ಮುಂದಿನ ಪೀಳಿಗೆಗೆ ಕ್ರೀಡೆಗಳ ಪರಿಚಯ ಮಾಡಿಕೊಡುವ ಅಗತ್ಯತೆಯು ಪ್ರತಿಯೊಬ್ಬರ ಮೇಲೆ ಇದೇ ಎಂದು ಜಿಲ್ಲಾಧಿಕಾರಿಗಳಾದ ವಿಕಾಸ ಕಿಶೋರ ಸುರಳ್ಕರ ಹೇಳಿದರು. ಅವರು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸರಕಾರಿ ನೌಕರರ ಸಂಘದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ,ಪ್ರಸ್ತುತ ದಿನಮಾನಗಳಲ್ಲಿ ಅನೇಕ ತಂತ್ರಜ್ಞಾನದ ಪ್ರಭಾವದಿಂದ ಮಕ್ಕಳಲ್ಲಿ ಕ್ರೀಡಾ ಮನೋಭಾವ ಕಡಿಮೆ ಆಗಿದೆ.ಅಲ್ಲದೆ ಮಕ್ಕಳು ಕೇವಲ …
Read More »*ಮಾರುಕಟ್ಟೆ ನಿರ್ವಹಣೆಯಲ್ಲಿ ಅಗ್ರ ಸೇವೆಗೆ ಕೆಎಂಎಫ್ ಪಾತ್ರ* *ಕೇಂದ್ರ ಸಚಿವ ಅಮೀತ್ ಷಾ ಅವರಿಂದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪ್ರಶಸ್ತಿ ಪ್ರದಾನ* *ಗುಜರಾತ್ ಗಾಂಧೀ ನಗರದಲ್ಲಿ ಭಾನುವಾರದಂದು ನಡೆದ ಎನ್ ಸಿ ಡಿ ಎಫ್ ಐ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ದಲ್ಲಿ ಕೆಎಂಎಫ್ ಗೆ ಪ್ರಶಸ್ತಿ ನೀಡಿ ಗೌರವಿಸಿದ ಸಚಿವ ಅಮೀತ್ ಷಾ.*
ಬೆಂಗಳೂರು- ದೇಶದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ರಾಷ್ಟ್ರೀಯ ಸಹಕಾರಿ ಹೈನುಗಾರಿಕೆ ಮಹಾ ಮಂಡಲ ( ಎನ್ ಸಿ ಡಿ ಎಫ್ ಐ) ವು ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಸು-ಸಂದರ್ಭದಲ್ಲಿ ಹಾಲು ಮತ್ತು ಹಾಲಿನ ಉತ್ಪಾದನೆ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಗುರುತಿಸಿ ‘ಕೆಎಂಎಫ್’ ಗೆ ಪ್ರಶಸ್ತಿಯ ಭಾಗ್ಯ ಒಲಿದು ಬಂದಿದೆ. ಭಾನುವಾರದಂದು ಗುಜರಾತ್ ರಾಜ್ಯದ ಗಾಂಧೀ ನಗರದಲ್ಲಿ ಎನ್ ಸಿ ಡಿ ಎಫ್ ಐ ಸುವರ್ಣ ಮಹೋತ್ಸವ ಸಮಾರಂಭದಲ್ಲಿ …
Read More »ಕೇಂದ್ರ ಸರಕಾರಿ ನೌಕರರ ಮಾದರಿಯಲ್ಲಿ ರಾಜ್ಯದಲ್ಲಿಯ ನೌಕರರಿಗೂ ಸಮಾನ ವೇತನ ನೀಡಬೇಕು
ಮೂಡಲಗಿ: ಕೇಂದ್ರ ಸರಕಾರಿ ನೌಕರರ ಮಾದರಿಯಲ್ಲಿ ರಾಜ್ಯದಲ್ಲಿಯ ನೌಕರರಿಗೂ ಸಮಾನ ವೇತನ ನೀಡಬೇಕು. ನೂತನ ಪಿಂಚಣಿ ರದ್ದು ಪಡಿಸಿ ಹಳೆ ಪಿಂಚಣಿ ಜಾರಿ ಕುರಿತಾಗಿ ರಾಜ್ಯಮಟ್ಟದಲ್ಲಿ ಸಿ.ಎಮ್ ಬಸವರಾಜ ಬೊಮ್ಮಾಯಿಯವರಿಗೆ ಮನವರಿಕೆ ಮಾಡಿ ಕೊಟ್ಟಿರುವದಾಗಿ ಕರ್ನಾಟಕ ಸರಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಹೇಳಿದರು. ಅವರು ಪಟ್ಟಣದ ತಹಶೀಲ್ದಾರ ಕಛೇರಿಯ ಸಭಾ ಭವನದಲ್ಲಿ ಜರುಗಿದ ಗೌರವ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಕರ್ನಾಟಕ ರಾಜ್ಯವು ಆರ್ಥಿಕವಾಗಿ ೬ ನೇ …
Read More »ಶ್ರೀರಾಮಚಂದ್ರ ಎಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ: ಲಖನ್ ಜಾರಕಿಹೊಳಿ *ಬೆಟಗೇರಿ ಗ್ರಾಮದಲ್ಲಿ ಶ್ರೀರಾಮ ಮೂರ್ತಿಯ ಅನಾವರಣ*ಹನುಮಾನ ಮೂರ್ತಿ ಪ್ರತಿಷ್ಠಾಪನೆ * ಭವ್ಯ ಮೆರವಣಿಗೆ* ಗಣ್ಯರಿಗೆ ಸತ್ಕಾರ
ಬೆಟಗೇರಿ:ಪ್ರತಿಯೊಬ್ಬರೂ ಶ್ರೀರಾಮನ ತತ್ವದಾರ್ಶಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಶ್ರೀರಾಮಚಂದ್ರ ಎಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ. ಎಲ್ಲರೂ ಸಹೋದರತ್ವ ಭಾವನೆಯಿಂದ ಇರೋಣ ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು. ಬೆಟಗೇರಿ ಗ್ರಾಮದ ಶ್ರೀರಾಮ ವೃತ್ತದಲ್ಲಿ ಮಾ.10ರಂದು ನಡೆದ ನೂತನ ಶ್ರೀರಾಮ ಮೂರ್ತಿಯ ಅನಾವರಣ ಮತ್ತು ಹನುಮಾನ ಮೂರ್ತಿಯ ಪ್ರತಿಷ್ಠಾಪನೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಅರಭಾಂವಿ ಮತ್ತು ಗೋಕಾಕ ಮತಕ್ಷೇತ್ರದ ಎಲ್ಲಾ ಸಮಾಜ ಭಾಂದವರ ಆರ್ಶೀವಾದ ನಮ್ಮ ಜಾರಕಿಹೊಳಿ ಕುಟುಂಬದವರ …
Read More »ರಾಜ್ಯಗಳು ಹಿಂದಿ ಭಾಷಯನ್ನು ಪರಸ್ಪರ ಸಂಪರ್ಕ ಭಾಷಯನ್ನಾಗಿ ಬಳಸಬೇಕು
ಮೂಡಲಗಿ: ರಾಜ್ಯಗಳು ಹಿಂದಿ ಭಾಷಯನ್ನು ಪರಸ್ಪರ ಸಂಪರ್ಕ ಭಾಷಯನ್ನಾಗಿ ಬಳಸಬೇಕು ಎಂದು ಹೇಳಿರುವುದನ್ನು ವಿರೋಧಿಸಿ, ಸಿದ್ದರಾಮಯ್ಯ ನೀಡಿರುವ ಹೇಳಿಕೆಯು ಆತುರಗಾರನಿಗೆ ಬುದ್ದಿ ಮಟ್ಟ ಎಂಬಂತೆ ಭಾಸವಾಗಿದೆ. ಅವರ ಹೇಳಿಕೆಗೆ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸುತ್ತೇನೆ ಎಂದು ರಾಜ್ಯಸಭಾ ಸಂಸದ ಹಾಗೂ ಸಂಸತ್ತಿನ ರಾಜಸಭಾ ಸಮಿತಿ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶನಿವಾರ ಏ-09 ರಂದು ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ಪತ್ರಿಕಾ ಹೇಳಿಕೆ ನೀಡಿದ ಅವರು ನವದೆಹಲಿಯಲ್ಲಿ ನಡೆದ 37ನೆಯ ಸಂಸತ್ತಿನ ರಾಜಸಭಾ …
Read More »ಕಲ್ಲೋಳಿಯ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿಗೆ ರೂ 1.04 ಕೋಟಿ ಲಾಭ ಸಂಸದ ಈರಣ್ಣ ಕಡಾಡಿ
ಮೂಡಲಗಿ : ಗ್ರಾಹಕರಿಗೆ ಅತ್ಯುತ್ತಮ ಸಾಲ ಮತ್ತು ಹೂಡಿಕೆಯ ಅವಕಾಶಗಳನ್ನು ನೀಡುವ ಮೂಲಕ ಗ್ರಾಮೀಣ ಭಾಗದ ಜನರು ಆರ್ಥಿಕ ಸ್ವಾವಲಂಬನೆ ಸಾಧಿಸಲು ನೆರವಾಗುವ ಮೂಲತತ್ವದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ, ಇದರ ಪ್ರಸಕ್ತ ಹಣಕಾಸು ವರ್ಷದಲ್ಲಿ ರೂ 1.04 ಕೋಟಿ ಲಾಭಗಳಿಸಿ ಸಹಕಾರಿಯು ಪ್ರಗತಿಪಥದಲ್ಲಿ ಸಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಕಲ್ಲೋಳಿ ಪಟ್ಟಣದಲ್ಲಿ ಏ-09 …
Read More »