Breaking News
Home / ತಾಲ್ಲೂಕು (page 176)

ತಾಲ್ಲೂಕು

ಸರ್ಕಾರಿ ಪ್ರೌಢ ಶಾಲೆಯ ಆವರಣದ ರಕ್ಷಣಾ ಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ

ಬೆಟಗೇರಿ:ಗ್ರಾಮ ಪಂಚಾಯತಿ ಸಹಯೋಗದಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಸುಮಾರು 7 ಲಕ್ಷ ರೂ.ಗಳ ಅನುದಾನದಡಿಯಲ್ಲಿ ಸ್ಥಳೀಯ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಆವರಣದ ದಕ್ಷಿಣ ಭಾಗದ ರಕ್ಷಣಾ ಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡುವ ಭೂಮಿ ಪೂಜೆ ಕಾರ್ಯಕ್ರಮ ಶುಕ್ರವಾರ ಆ.20 ರಂದು ನಡೆಯಿತು. ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ …

Read More »

ಸ್ತ್ರೀ ಕುಲದ ಅನಗ್ರ್ಯ ರತ್ನ: ಹೇಮರಡ್ಡಿ ಮಲ್ಲಮ್ಮ-ಬಸವ ಸಮರ್ಥ ಮಹಾಸ್ವಾಮಿಗಳು

ಸ್ತ್ರೀ ಕುಲದ ಅನಗ್ರ್ಯ ರತ್ನ: ಹೇಮರಡ್ಡಿ ಮಲ್ಲಮ್ಮ-ಬಸವ ಸಮರ್ಥ ಮಹಾಸ್ವಾಮಿಗಳು ಮೂಡಲಗಿ: ಸಮಾಜದ ಓರೆ ಕೋರೆಗಳನ್ನು ತಿದ್ದುವ ಮೂಲಕ ಮಾದರಿಯಾಗಿರುವ ಹೇಮರಡ್ಡಿ ಮಲ್ಲಮ್ಮನವರ ಆದರ್ಶಗಳು ನಮ್ಮ ಸಮಾಜಕ್ಕೆ ಮಾರ್ಗದರ್ಶಿಯಾಗಿವೆ ಎಂದು ಗದಗ ಶಿರಂಜು ಜ್ಞಾನ ಯೋಗಾಶ್ರಮದ ಪೂಜ್ಯ ಶ್ರೀ ಬಸವ ಸಮರ್ಥ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು. ಮೂಡಲಗಿ ತಾಲೂಕಿನ ಹಳೆಯರಗುದ್ರಿ ಗ್ರಾಮದಲ್ಲಿ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಮತ್ತು ಬಿಂದಿಗೆಮ್ಮ ದೇವಿಯ ಮೂರ್ತಿ ಪ್ರತಿಷ್ಠಾಪಣೆ ಮತ್ತು ದೇವಸ್ಥಾನದ ಉದ್ಘಾಟನೆ ಮತ್ತು ಕಳಸಾರೋಹಣ ಸಮಾರಂಭದ …

Read More »

ಜೈ ಹನುಮಾನ ಯುವ ಜನ ಸೇವಾ ಸಂಘದಿಂದ ಮುಖ್ಯ ಮಂತ್ರಿಗಳಿಗೆ ಮನವಿ

ಕಲ್ಲೋಳಿ: ಜೈ ಹನುಮಾನ ಯುವ ಜನ ಸೇವಾ ಸಂಘದಿಂದ ಮುಖ್ಯ ಮಂತ್ರಿಗಳಿಗೆ ಮನವಿ ಮೂಡಲಗಿ: ತಾಲ್ಲೂಕಿನ ಕಲ್ಲೋಳಿ ಪಟ್ಟಣದ ಜೈ ಹನುಮಾನ ಯುವ ಜನ ಸೇವಾ ಸಂಘದ ಪದಾಧಿಕಾರಿಗಳು ಮೂಡಲಗಿ ತಹಶೀಲ್ದಾರ್ ಡಿ.ಜಿ.ಮಹಾತ್ ಅವರು ಗುರುವಾರದಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯದಲ್ಲಿ ವಯೋಮಿತಿ ಮೀರುತ್ತಿರುವ ನಿರುದ್ಯೋಗಿಗಳಿಗೆ ಸರಕಾರಿ ನೌಕರಿಯಲ್ಲಿ ಅವಕಾಶ ನೀಡಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಿದರು. ಸರಕಾರದಿಂದ ಕೆಲ ವರ್ಷಗಳಿಂದ ಉದ್ಯೋಗ ಕರೆಯುವ ಪ್ರಮಾಣ ಕಡಿಮೆಯಾಗುತ್ತಿದೆ. ಪ್ರಸ್ತುತ …

Read More »

ಹಳ್ಳಿಗಳ ಅಭಿವೃದ್ಧಿಯಾಗಿ ಗಾಂಧೀಜಿಯವರ ಕನಸು ನನಸಾಗಲು ಸಾಧ್ಯವಾಗುವದು – ಬೆಳಗಾವಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ

ಮೂಡಲಗಿ: ಭಾರತ ದೇಶವು ಹಳ್ಳಿಗಳಿಂದ ಕೂಡಿದ ದೇಶ. ಹಳ್ಳಿಗಳ ಅಭಿವೃದ್ಧಿಗಾಗಿ ಗ್ರಾಮೀಣಾಭಿವೃದ್ಧಿ ಪಂಚಾಯತ ರಾಜ್ ಇಲಾಖೆಯಿಂದ ಸಾಕಷ್ಟು ಯೋಜನೆಗಳಿವೆ. ಗ್ರಾಮಸ್ಥರು, ಚುನಾಯಿತ ಪ್ರತಿನಿಧಿಗಳು ಹಾಗೂ ಪಂಚಾಯತ ಸಿಬ್ಬಂದಿಯವರು ಇವುಗಳ ಉಪಯೋಗ ಪಡೆದುಕೊಂಡಾಗ ಮಾತ್ರ ಹಳ್ಳಿಗಳ ಅಭಿವೃದ್ಧಿಯಾಗಿ ಗಾಂಧೀಜಿಯವರ ಕನಸು ನನಸಾಗಲು ಸಾಧ್ಯವಾಗುವದು ಎಂದು ಬೆಳಗಾವಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಸಮೀಪದ ಹಳ್ಳೂರ ಗ್ರಾಮ ಪಂಚಾಯತ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉದ್ಯಾನವನ …

Read More »

ಕೆಇಬಿ ಪ್ಲಾಟ್ ನಿವಾಸಿಗಳಿಗೆ ಕೋವಿಡ್ ಲಸಿಕೆ ಮೂಡಲಗಿ: ರೋಗ ನಿರೋಧಕ ಶಕ್ತಿ ಹೊಂದಲು ಹಾಗೂ ಕೊರೋನಾ ರೋಗ ಬಾದಿಸದಂತೆ ಮುನ್ನೆಚ್ಚರಿಕೆಗಾಗಿ ಪ್ರತಿಯೊಬ್ಬರೂ ಕೋವಿಡ್ ಲಸಿಕೆ ಪಡೆಯುವುದು ಅವಶ್ಯವಿದೆ ಎಂದು ಆಶಾ ಕಾರ್ಯಕರ್ತೆ ಶಕುಂತಲಾ ಗೋಲಶೆಟ್ಟಿ ಹೇಳಿದರು. ಗುರುವಾರ ಇಲ್ಲಿನ ವಾರ್ಡ ನಂ 17 ಕೆಇಬಿ ಪ್ಲಾಟ್, ಈರಣ್ಣ ನಗರದ ಹನುಮಾನ ದೇವಸ್ಥಾನ ಆವರಣದಲ್ಲಿ ಕೋವಿಡ್ ಲಸಿಕಾ ಶಿಬೀರದಲ್ಲಿ ಮಾತನಾಡಿದ ಅವರು, ಇಲ್ಲಿನ ನಿವಾಸಿಗಳ ಅನುಕೂಲತೆಗಾಗಿ ಈ ವ್ಯವಸ್ಥೆ ಮಾಡಲಾಗಿದೆ ಇದರ …

Read More »

ವಿಕಲಚೇತನರ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯ

ಕೊಪ್ಪಳ: ವಿಕಲಚೇತನರ ವಿವಿಧ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ವಿಕಲಚೇತನ ನೌಕರರ ಸಂಘದ ವತಿಯಿಂದ ವಸತಿ ಸಚಿವರಾದ ವಿ.ಸೋಮಣ್ಣ ಅವರಿಗೆ ಇಂದು ಬೆಂಗಳೂರಿನ ಅವರ ನಿವಾಸದಲ್ಲಿ ಮನವಿ ಪತ್ರ ಸಲ್ಲಿಸಲಾಯಿತು. ಈ ಸಮಯದಲ್ಲಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಮಾತನಾಡಿ,ಸರಕಾರದಿಂದ ನೀಡಲಾಗುವ ಮನೆಗಳಲ್ಲಿ ವಿಕಲಚೇತನರಿಗೆ ಮೀಸಲಿಡಬೇಕಾದ ಮನೆಗಳನ್ನು ಮೀಸಲಿಡದೇ ಪ್ರಭಾವ ಬಳಿಸಿ ಬೇರೆಯವರು ಅದರ ಸೌಲಭ್ಯವನ್ನು ಪಡೆಯುತ್ತಿದ್ದು,ಕೂಡಲೇ ಸರಕಾರವು ವಿಕಲಚೇತನರಿಗೆ ಕಡ್ಡಾಯವಾಗಿ ವಿವಿಧ ಯೋಜನೆಗಳನ್ನು ನೀಡಲಾಗುವ ಮನೆಗಳ …

Read More »

ನಾಳೆ ಹಾಲು ಶಿಥಿಲೀಕರಣ ಘಟಕ ಉದ್ಘಾಟನೆ

ನಾಳೆ ಹಾಲು ಶಿಥಿಲೀಕರಣ ಘಟಕ ಉದ್ಘಾಟನೆ ಮೂಡಲಗಿ: ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಹಳ್ಳೂರ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಎನ್‌ಪಿಡಿಡಿ ಯೋಜನೆಯಡಿಯಲ್ಲಿ ಹಾಲು ಶಿಥಿಲೀಕರಣ (ಬಿಎಮ್‌ಸಿ) ಘಟಕದ ಉದ್ಘಾಟನಾ ಸಮಾರಂಭದ ಆ.20ರಂದು ಮುಂಜಾನೆ 90:30ಕ್ಕೆ ಸಂಘದ ಆವರಣದಲ್ಲಿ ಜರುಗಲಿದೆ. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅಂಕಲಗಿಯ ಶ್ರೀ ಅಡವಿಸಿದ್ದೇಶ್ವರ ಮಹಾಸ್ವಾಮಿಗಳು ಹಾಗೂ ಸಾನಿಧ್ಯವನ್ನು ಬೆಂಡವಾಡ ವಿರಕ್ತ ಮಠದ ಶ್ರೀ ಗುರುಸಿದ್ದ ಮಹಾಸ್ವಾಮಿಗಳು ವಹಿಸುವವರು. ಉದ್ಘಾಟಕರಾಗಿ ಕೆಎಮ್‌ಎಫ್ ಅಧ್ಯಕ್ಷ ಹಾಗೂ ಅರಭಾಂವಿ …

Read More »

ಮೂಡಲಗಿ ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಕಾರ್ಮಿಕ ಅದಾಲತ

ಮೂಡಲಗಿ : 21 ರಂದು ಮುಂಜಾನೆ 10ಗಂಟೆಗೆ ಮೂಡಲಗಿ ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಕಾರ್ಮಿಕ ಅದಾಲತ ಜರುಗಲಿದೆ ಎಂದು ಕಾರ್ಮಿಕ ನಿರೀಕ್ಷ ಪಾಂಡುರಂಗ ಮಾವರಕರ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ ನಿರ್ದೇಶನದಂತೆ ಕಾರ್ಮಿಕ ಅದಾಲತ್ ಹಮ್ಮಿಕೊಳ್ಳಲಾಗಿದ್ದು ಈ ಅದಾಲತ್‍ನಲ್ಲಿ ಉಪ ಕಾರ್ಮಿಕ ಆಯುಕ್ತರು ಪಾಲ್ಗೋಳ್ಳಲಿದ್ದು ಕಾರ್ಮಿಕರು ಕಾರ್ಮಿಕ ಸಂಘದ ಪದಾಧಿಕಾರಿಗಳು ಪಾಲ್ಗೊಂಡು ಇಲಾಖೆಯಿಂದ ಸಿಗುವ ಶೈಕ್ಷಣಿಕ, ಮದುವೆ, ಅಂತಿಮ ಸಂಸ್ಕಾರ …

Read More »

  ಕಮಲದಿನ್ನಿ ಗ್ರಾಮದಲ್ಲಿ ಪ್ರವಾಹ ಸಂತ್ರಸ್ತರಿಗೆ ನೆರವು ಲಯನ್ಸ್ ಕ್ಲಬ್‍ದಿಂದ ಆಹಾರ ಧಾನ್ಯ ಕಿಟ್ ವಿತರಣೆ

  ಕಮಲದಿನ್ನಿ ಗ್ರಾಮದಲ್ಲಿ ಪ್ರವಾಹ ಸಂತ್ರಸ್ತರಿಗೆ ನೆರವು ಲಯನ್ಸ್ ಕ್ಲಬ್‍ದಿಂದ ಆಹಾರ ಧಾನ್ಯ ಕಿಟ್ ವಿತರಣೆ ಮೂಡಲಗಿ: ಇಲ್ಲಿಯ ಲಯನ್ಸ್ ಕ್ಲಬ್ ಆಪ್ ಮೂಡಲಗಿ ಪರಿವಾರದಿಂದ ತಾಲ್ಲೂಕಿನ ಕಮಲದಿನ್ನಿ ಗ್ರಾಮದಲ್ಲಿಯ ಪ್ರವಾಹ ಪೀಡಿತ ಸಂತ್ರಸ್ತರಿಗೆ ಆಹಾರ ಧಾನ್ಯ ಕಿಟ್‍ಗಳನ್ನು ವಿತರಿಸಿದರು. ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ ಬಂದಿ ಮಾತನಾಡಿ ಪ್ರಕೃತಿಯ ವಿಕೋಪದಲ್ಲಿ ಅಮಾಯಕ ಜನರು ಕಷ್ಟ ಅನುಭವಿಸುವಂತಾಗುತ್ತದೆ. ಇಂಥ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಅಂತರ್‍ರಾಷ್ಟ್ರೀಯ ಸಂಸ್ಥೆಯ ಸಹಯೋಗದಲ್ಲಿ ಕಡು ಬಡವ …

Read More »

ಕಾರ್ಯಾಧ್ಯಕ್ಷರಾಗಿ ನಿಂಗಪ್ಪ ಪಿರೋಜಿ ನೇಮಕ

ಕಾರ್ಯಾಧ್ಯಕ್ಷರಾಗಿ ನಿಂಗಪ್ಪ ಪಿರೋಜಿ ನೇಮಕ ಮೂಡಲಗಿ: ಸ್ಥಳೀಯ ಮುಖಂಡ ಹಾಗೂ ರಾಜಕೀಯ ಧುರಿಣರಾದ ನಿಂಗಪ್ಪ ಫಿರೋಜಿಯವರನ್ನು ಬೆಳಗಾವಿ ಜಿಲ್ಲಾ ಅಖಿಲ ಭಾರತ ಪಂಚಮಸಾಲಿ ಮಹಾಸಭಾದ ಕಾರ್ಯಾಧ್ಯಕ್ಷರನ್ನಾಗಿ ನಿಯಮಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಜರುಗಿದ ಕಾರ್ಯಕಾರಣಿ ಸಭೆಯಲ್ಲಿ ಕೂಡಲಸಂಗಮದ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯೊಂಜಯ ಸ್ವಾಮೀಜಿಯª ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ ನೇಮಕಗೋಳಿಸಿ ಸಂಘಟನೆಯಲ್ಲಿ ಸಕ್ರೀಯ ಕಾರ್ಯಚಟುವಟಿಕೆಗಳನ್ನು ನಿರ್ವಹಿಸಲು ಸೂಚಿಸಿದ್ದಾರೆ.

Read More »