Breaking News
Home / ತಾಲ್ಲೂಕು (page 216)

ತಾಲ್ಲೂಕು

ಮೂಡಲಗಿ ತಾಲೂಕಾ ಜಾರಕಿಹೊಳಿ ಅಭಿಮಾನಿ ಬಳಗದಿಂದ ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಟೈಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ

ಮೂಡಲಗಿ : ರಮೇಶ ಜಾರಕಿಹೊಳಿಯವರ ನಕಲಿ ವಿಡಿಯೋ ಖಂಡಿಸಿ ಮೂಡಲಗಿ ತಾಲೂಕಾ ಜಾರಕಿಹೊಳಿ ಅಭಿಮಾನಿ ಬಳಗದಿಂದ ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಟೈಯರ್‌ಗೆ ಬೆಂಕಿ ಹಚ್ಚಿ ರಮೇಶ ಜಾರಕಿಹೊಳಿ ವಿರುದ್ಧದ ಷಡ್ಯಂತ್ರ ಖಂಡಿಸಿ ಪ್ರತಿಭಟನೆ ನಡೆಸಿದರು. ಬಿಡುಗಡೆಗೊಳಿಸಿರುವ ಸಿಡಿ ಫೇಕ್ ತಂತ್ರಜ್ಞಾನದಿoದ ಕೂಡಿದ ರಾಸಲೀಲೆ ವಿಡಿಯೋ ಹರಿಬಿಟ್ಟಿದ್ದು, ಇದು ಜಾರಕಿಹೊಳಿ ಕುಟುಂಬದ ವಿರುದ್ಧ ಮಾಡಿರುವ ರಾಜಕೀಯ ವಿರೋಧಿಗಳ ಹುನ್ನಾರ-ಷಡ್ಯಂತ್ರ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಿಡಿ ಬಗ್ಗೆ ಸಮಗ್ರ ತನಿಖೆ ನಡೆಸಲು …

Read More »

ರಮೇಶ ಜಾರಕಿಹೊಳಿ ನಕಲಿ ಸಿಡಿ ಬಗ್ಗೆ ಸಮಗ್ರ ತನಿಖೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

 ರಮೇಶ ಜಾರಕಿಹೊಳಿ ನಕಲಿ ಸಿಡಿ ಬಗ್ಗೆ ಸಮಗ್ರ ತನಿಖೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ  ಕುಲಗೋಡ: ಎರಡು ದಿನಗಳಿಂದ ರಾಜ್ಯ ರಾಜ್ಯಕಾರಣದಲ್ಲಿ ಸಂಚಲನ ಮೂಡಿಸಿದ ಮಾಜಿ ಸಚಿವ ರಮೇಶ ಜಾರಕಿಹೊಳಿ ರಾಸಲೀಲೆ ಪ್ರಕರಣ ಸಂಪೂರ್ಣ ಸುಳ್ಳಾಗಿದ್ದು , ನಕಲಿ ಸಿಡಿ ಬಗ್ಗೆ ಸಮಗ್ರ ತನಿಖೆ ನಡೆಸಿ, ಸಿಬಿಐಗೆ ವಹಿಸುವಂತೆ ಗ್ರಾಮ ಮುಖಂಡರು ಆಗ್ರಹಿಸಿ ಮನವಿ ನೀಡಿದರು. ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ರಮೇಶ ಜಾರಕಿಹೊಳಿ ಅಭಿಮಾನಿ ಬಳಗ ಹಾಗೂ ಗ್ರಾಪಂ ಅಧ್ಯಕ್ಷ\ಉಪಾಧ್ಯಕ್ಷ …

Read More »

ವಿವಾದಿತ ಸಿಡಿ ಪ್ರಕರಣ ತನಿಖೆಗೆ ಆಗ್ರಹಿಸಿ ಕೌಜಲಗಿಯಲ್ಲಿ ಪ್ರತಿಭಟನೆ ರಮೇಶ ಜಾರಕಿಹೊಳಿ ಅಭಿಮಾನಿಗಳು ಹಾಗೂ ಬೆಂಬಲಿಗರಿಂದ ರಸ್ತೆ ತಡೆ, ಟೈರ್‍ಗೆ ಬೆಂಕಿ ಹಚ್ಚಿ ಪ್ರತಿಭಟನೆ

ವಿವಾದಿತ ಸಿಡಿ ಪ್ರಕರಣ ತನಿಖೆಗೆ ಆಗ್ರಹಿಸಿ ಕೌಜಲಗಿಯಲ್ಲಿ ಪ್ರತಿಭಟನೆ ರಮೇಶ ಜಾರಕಿಹೊಳಿ ಅಭಿಮಾನಿಗಳು ಹಾಗೂ ಬೆಂಬಲಿಗರಿಂದ ರಸ್ತೆ ತಡೆ, ಟೈರ್‍ಗೆ ಬೆಂಕಿ ಹಚ್ಚಿ ಪ್ರತಿಭಟನೆ. ಗೋಕಾಕ: ರಮೇಶ ಜಾರಕಿಹೊಳಿ ಅವರ ಕೌಜಲಗಿ ಗ್ರಾಮದ ಅಭಿಮಾನಿ ಬಳಗ ಹಾಗೂ ಬೆಂಬಲಿಗರು ಗುರುವಾರದಂದು ವಿವಾದಿತ ಸಿಡಿ ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿ ಕಂದಾಯ ನಿರೀಕ್ಷಕ ಎಮ್.ಆಯ್.ಮಠ ಅವರ ಮುಖಾಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಿದರು. ಗ್ರಾಮದ ರವಿವರ್ಮ ಚೌಕದಲ್ಲಿ …

Read More »

ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನ ವೃದ್ಧಿಸಿಕೊಳ್ಳುವುದು ಅಗತ್ಯ: ರಮೇಶ ಗೊಂಗಡಿ

ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನ ವೃದ್ಧಿಸಿಕೊಳ್ಳುವುದು ಅಗತ್ಯ: ರಮೇಶ ಗೊಂಗಡಿ ತುಕ್ಕಾನಟ್ಟಿ: ವ್ಯಕ್ತಿತ್ವ ಎಂಬುದು ಅನೇಕ ಶಕ್ತಿಗಳ ಸಂಗಮ. ಆದರ್ಶ,ಸದಾಚಾರ,ಶ್ರದ್ಧೆ, ನಿಷ್ಠೆ, ದಕ್ಷತೆ, ಎಚ್ಚರ-ಸನ್ನಿವೇಶಗಳೊಡನೆ ಹೊಂದಿಕೊಳ್ಳುವ ಸಾಮರ್ಥ್ಯ, ವೃತ್ತಿಪ್ರಿಯತೆ,ಪರೋಪಕಾರ ಬುದ್ಧಿ,ಪ್ರಾಮಾಣಿಕತೆಗಳು ವ್ಯಕ್ತಿತ್ವ ನಿರ್ಮಿಸುವ ಶಕ್ತಿಗಳು.ಈ ನಿಟ್ಟಿನಲ್ಲಿ ನೋಡಿದಾಗ ನಮಗೆ ವ್ಯಕ್ತಿ ಮುಖ್ಯವಲ್ಲ ವ್ಯಕ್ತಿತ್ವ ಮುಖ್ಯ ಎಂದು ಬೆಳಗಾವಿಯ ಎ.ಪಿ.ಡಿ. ಸಂಸ್ಥೆಯ ಮಾನವ ಸಂಪನ್ಮೂಲ ನೊಡಲ್ ಅಧಿಕಾರಿ ರಮೇಶ ಗೊಂಗಡಿ ನುಡಿದರು. ಅವರು ಇತ್ತೀಚೆಗೆ ತುಕ್ಕಾನಟ್ಟಿಯ ಬಡ್ಸ್ ಸಮಾಜಕಾರ್ಯ ಪದವಿ ಮಹಾವಿದ್ಯಾಲಯ ಸಮಾಜ …

Read More »

ಮಾ. 7ರಿಂದ ಸಿದ್ಧ ಸಮಾಧಿ ಯೋಗ ಶಿಬಿರ

ಮಾ. 7ರಿಂದ ಸಿದ್ಧ ಸಮಾಧಿ ಯೋಗ ಶಿಬಿರ ಮೂಡಲಗಿ: ಬೆಂಗಳೂರಿನ ಋಷಿ ಸಂಸ್ಕøತಿ ವಿದ್ಯಾ ಕೇಂದ್ರದಿಂದ ಜಮಖಂಡಿಯ ಅರುಣ ಗುರೂಜೀ ಅವರ ಮಾರ್ಗದರ್ಶನದಲ್ಲಿ ಮಾ. 7ರಿಂದ ಬೆಳಿಗ್ಗೆ 5.30ಕ್ಕೆ ‘ಸಿದ್ಧ ಸಮಾಧಿ ಯೋಗ-ಎಸ್‍ಎಸ್‍ವೈ’ ಶಿಬಿರವನ್ನು ಸ್ಥಳೀಯ ಶಿವಬೋಧರಂಗ ಮಠದ ಆವರಣದಲ್ಲಿ ಏರ್ಪಡಿಸಿರುವರು. ಪ್ರಾಣಾಯಾಮ, ಧ್ಯಾನ, ಯೋಗಾಸನ, ಸೂರ್ಯ ನಮಸ್ಕಾರ, ಗಾಯತ್ರಿ ಮಹಾಮಂತ್ರೋಪದೇಶ ಇವುಗಳ ಜೋತೆಗೆ ಉದ್ವೇಗ, ಒತ್ತಡ ನಿವಾರಣೆ, ಆಹಾರ ಕ್ರಮ, ವಿವಿಧ ಕಾಯಿಲೆಗಳ ನಿವಾರಣೋಪಾಯಗಳಿಗೆ ಶಿಬಿರದಲ್ಲಿ ಹೇಳಿಕೊಡುವರು. ಶಿಬಿರದ …

Read More »

ಕರ್ನಾಟಕ ಪ್ರದೇಶ ಕಾಂಗ್ರೇಸ ಸಮಿತಿ ಅಲ್ಪಸಂಖ್ಯಾತರ ನೂತನ ಪದಾಧಿಕಾರಿಗಳ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೇಸ ಸಮಿತಿ ಅಲ್ಪಸಂಖ್ಯಾತರ ನೂತನ ಪದಾಧಿಕಾರಿಗಳ ನೇಮಕ ಮೂಡಲಗಿ: ಬೆಳಗಾವಿ ಜಿಲ್ಲಾ ಅಲ್ಪ ಸಂಖ್ಯಾತ ಘಟಕಕ್ಕೆ ಪದಾಧಿಕಾರಿಗಳನ್ನು ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ, ಕಾಂಗ್ರೇಸ್ ಮುಖಂಡ ಅರವಿಂದ ದಳವಾಯಿ ಹಾಗೂ ಅರಭಾಂವಿ ಮತ್ತು ಕೌಜಲಗಿ ಬ್ಲಾಕ್ ಕಾಂಗ್ರೇಸ್ ಮುಖಂಡರ ಅನುಮೋದನೆಯ ಮೇರೆಗೆ ಆಯ್ಕೆಗೋಳಿಸಿದ್ದಾರೆ. ಬೆಳಗಾವಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ವರ್ಧಮಾನ ಕಮತೆ, ಜಿಲ್ಲಾ ಸಂಚಾಲಕರಾಗಿ ಅಜಿತ ಬೆಣವಾಡ, ಅರಭಾಂವಿ ಬ್ಲಾಕ್ …

Read More »

ಶ್ರೀ ಶ್ರೀನಿವಾಸ ಸ್ಕೂಲ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಡಾ. ಯತೀಶ ಪೂಜಾರ ಸಂವಾದ

ಶ್ರೀ ಶ್ರೀನಿವಾಸ ಸ್ಕೂಲ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಡಾ. ಯತೀಶ ಪೂಜಾರ ಸಂವಾದ ಮೂಡಲಗಿ:- ಇಲ್ಲಿಯ ಶ್ರೀ ಶ್ರೀನಿವಾಸ ಸ್ಕೂಲ್ ನಲ್ಲಿ ಮಂಗಳವಾರದಂದು 6ರಿಂದ 8ನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ರಬಕವಿಯ ಆರೋಗ್ಯ ಅಕಾಡೆಮಿ ಸದಸ್ಯ ಡಾ. ಯತೀಶ ಪೂಜಾರ ‘ಕೊವಿಡ್ 19 ಪರಿಸ್ಥಿತಿಯಲ್ಲಿ ಹದಿಹರೆಯದ ವಿದ್ಯಾರ್ಥಿಗಳಲ್ಲಿ ಒತ್ತಡ ಸಹಿಷ್ಣುತೆ ಎಂಬ ವಿಷಯದ ಮೇಲೆ ಸಂವಾದ ನಡೆಸಿದರು. ನಂತರ ವಿದ್ಯಾರ್ಥಿಗಳಲ್ಲಿ ಆರೋಗ್ಯ, ಶುಚಿತ್ವಪಾಲನೆ, ಉತ್ತಮ ಹವ್ಯಾಸಗಳು ಹಾಗೂ ಅಧ್ಯಯನದ ಮಹತ್ವಗಳ ಬಗ್ಗೆ ಹೇಳಿದರು. …

Read More »

ಕೆಎಲ್‍ಇ ಆಸ್ಪತ್ರೆಯ ತಜ್ಞ ವೈದ್ಯರಿಂದ ಕಲ್ಲೋಳಿಯಲ್ಲಿ ಮಾ. 3ರಂದು ಉಚಿತ ಆರೋಗ್ಯ ತಪಾಸಣೆ

ಕೆಎಲ್‍ಇ ಆಸ್ಪತ್ರೆಯ ತಜ್ಞ ವೈದ್ಯರಿಂದ ಕಲ್ಲೋಳಿಯಲ್ಲಿ ಮಾ. 3ರಂದು ಉಚಿತ ಆರೋಗ್ಯ ತಪಾಸಣೆ ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಪ್ರಿಯದರ್ಶಿನಿ ಕೋ.ಆಪ್ ಕ್ರೆಡಿಟ್ ಸೊಸೈಟಿ, ಬಸವೇಶ್ವರ ಶಿಕ್ಷಣ ಸಂಸ್ಥೆ ಇವರ ಆಶ್ರಯದಲ್ಲಿ ಬೆಳಗಾವಿಯ ಕೆಎಲ್‍ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದವರಿಂದ ಮಾ. 3ರಂದು ಬೆಳಿಗ್ಗೆ 9.30ರಿಂದ ಸಂಜೆ 4ರ ವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಬಸವೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಏರ್ಪಡಿಸಿರುವರು. ಶಿಬಿರದಲ್ಲಿ …

Read More »

ಕೃಷಿ ಮಸೂದೆಗಳ ಬಗ್ಗೆ ಸಾಮಾನ್ಯ ರೈತರಿಗೆ ಅರಿವು ಮೂಡಿಸುವ ಕೆಲಸವನ್ನು ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಮಾಡಬೇಕು- ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷರಾದ ದುಂಡಪ್ಪಾ ಬೆಂಡವಾಡೆ 

ಮೂಡಲಗಿ: ಕೇಂದ್ರ ಸರ್ಕಾರದ ರೂಪಿಸಿರುವ ಕೃಷಿ ಮಸೂದೆಗಳ ಬಗ್ಗೆ ಸಾಮಾನ್ಯ ರೈತರಿಗೆ ಅರಿವು ಮೂಡಿಸುವ ಕೆಲಸವನ್ನು ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಮಾಡಬೇಕು ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷರಾದ ದುಂಡಪ್ಪಾ ಬೆಂಡವಾಡೆ  ಕರೆ ನೀಡಿದರು ಸೋಮವಾರ   ಕಲ್ಲೋಳಿ ಪಟ್ಟಣದ ಈರಣ್ಣ ಕಡಾಡಿ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ಅರಭಾವಿ, ಗೋಕಾಕ ನಗರ ಹಾಗೂ ಗೋಕಾಕ ಗ್ರಾಮಾಂತರ ಮಂಡಲ ಕಾರ್ಯಕಾರಿಣಿ ಸಭೆಯನ್ನು ಸಸಿಗೆ ನೀರು ಉಣಿಸುವ ಮೂಲಕ ಚಾಲನೆ ನೀಡಿ …

Read More »

 ಬರಡು ರಾಸುಗಳ ಉಚಿತ ತಪಾಸಣಾ ಶಿಬಿರ

 ಬರಡು ರಾಸುಗಳ ಉಚಿತ ತಪಾಸಣಾ ಶಿಬಿರ ಮೂಡಲಗಿ: ‘ರೈತರು ಹೈನುಗಾರಿಕೆ ಮಾಡುವ ಮೂಲಕ ಸಾವಯವ ಕೃಷಿಗೆ ಆದ್ಯತೆ ನೀಡಬೇಕು’ ಎಂದು ಮೂಡಲಗಿಯ ಪಶು ಸಂಗೋಪನಾ ಇಲಾಖೆಯ ಮುಖ್ಯ ಪಶುವೈದ್ಯಾಧಿಕಾರಿ ಡಾ. ಎಂ.ಬಿ. ವಿಭೂತಿ ಹೇಳಿದರು. ಇಲ್ಲಿಯ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯೊಂದಿಗೆ ಲಯನ್ಸ್ ಕ್ಲಬ್ ಪರಿವಾರದಿಂದ ಆಯೋಜಿಸಿದ ಬರಡು ರಾಸುಗಳ ಚಿಕಿತ್ಸಾ ಶಿಬಿರ ಹಾಗೂ ಕರುಗಳಿಗೆ ಜಂತು ನಾಶಕ ಔಷಧಿ ವಿತರಣಾ ಕಾರ್ಯಕ್ರಮದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ …

Read More »