ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮಿಗಳ ನಿಧನರಾದ ಸುದ್ದಿ ಕೇಳಿ ದಿಗ್ಭ್ರಮೆಯಾಯಿತು. ನಮ್ಮ ಶ್ರೀ ಗಳ ನಿಧನದಿಂದ ಇಡೀ ನಾಡೇ ಶೋಕ ಸಾಗರದಲ್ಲಿ ಮುಳುಗಿದೆ. ಅತ್ಯಂತ ಸರಳ ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದರು. ದೇಶವಲ್ಲದೇ ಜಾಗತೀಕವಾಗಿಯೂ ಹಲವಾರು ರಾಷ್ಟಗಳಲ್ಲಿ ಪ್ರವಚನಗಳನ್ನು ನೀಡಿದ್ದರು. ಕನ್ನಡವಲ್ಲದೇ ಇಂಗ್ಲಿಷ್ ಭಾಷೆಯಲ್ಲಿಯೂ ಅಪಾರ ಪಾಂಡಿತ್ಯವನ್ನು ಪಡೆದಿದ್ದರು. ಇವರೊಬ್ಬ ಈ ಶತಮಾನದ ಮಹಾನ್ ಸಂತ. ಕನ್ನಡ ನಾಡು ಕಂಡ ಅತೀ ಶ್ರೇಷ್ಠ ವಾಗ್ಮೀ. ತುಮಕೂರು ಸಿದ್ಧಗಂಗಾಮಠದ ಹಿಂದಿನ ಪೀಠಾಧಿಪತಿಯಾಗಿದ್ದ ಲಿಂ. …
Read More »ಸ್ವಾರ್ಥ ಬಿಟ್ಟು ಕೆಲಸ ಮಾಡಿದ್ದಾದರೇ ಇಡೀ ಸಮಾಜವೇ ಉದ್ಧಾರವಾಗುತ್ತದೆ : ಶಾಸಕ ಬಾಲಚಂದ್ರ ಜಾರಕಿಹೊಳಿ
ಸ್ವಾರ್ಥ ಬಿಟ್ಟು ಕೆಲಸ ಮಾಡಿದ್ದಾದರೇ ಇಡೀ ಸಮಾಜವೇ ಉದ್ಧಾರವಾಗುತ್ತದೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ನಡೆಯುತ್ತಿರುವ ಸಿದ್ಧಲಿಂಗ ಕೈವಲ್ಯಾಶ್ರಮದ ಜಾತ್ರೆಯಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಮಠಾಧೀಶರು, ರಾಜಕಾರಣಿಗಳು ಹಾಗೂ ಅಧಿಕಾರಿಗಳು ಸ್ವಾರ್ಥ ಬಿಟ್ಟು ಕೆಲಸ ಮಾಡಿದರೇ ಇಡೀ ಸಮಾಜವೇ ಉದ್ಧಾರವಾಗುತ್ತದೆ. ನಿಸ್ವಾರ್ಥ ಮನೋಭಾವನೆಯಿಂದ ಕೆಲಸಗಳನ್ನು ಮಾಡಿದರೆ ಮುಂದೊಂದು ದಿನ ದೇವರು ಯಾವುದಾದರೂ ರೂಪದಲ್ಲಿ ಬಂದು ಸಹಾಯ ಮಾಡುತ್ತಾನೆ. ಸ್ವಾರ್ಥವನ್ನಿಟ್ಟುಕೊಂಡು ಕೆಲಸ ಮಾಡಿದ್ದಾದರೆ …
Read More »ಕಾರ್ಗಿಲ್ ವಿಜಯ ದಿವಸದಂದು ನಿವೃತ್ತ ಸೈನಿಕರನ್ನು ಗೌರವಿಸಬೇಕೆಂದು ಆಗ್ರಹಿಸಿ ಮನವಿ
ಕಾರ್ಗಿಲ್ ವಿಜಯ ದಿವಸದಂದು ನಿವೃತ್ತ ಸೈನಿಕರನ್ನು ಗೌರವಿಸಬೇಕೆಂದು ಆಗ್ರಹಿಸಿ ಮನವಿ ಮೂಡಲಗಿ: ನಿವೃತ್ತಿ ಹೊದಿಂದ ಯೋಧರಿಗೆ ಆಯಾ ಪಂಚಾಯತ ವತಿಯಿಂದ ಪ್ರತಿ ವರ್ಷ ಕಾರ್ಗಿಲ್ ವಿಜಯ ದಿವಸದಂದು ಸತ್ಕರಿಸಿ ಗೌರವಿಸಬೇಕೆಂದು ಆಗ್ರಹಿಸಿ ಸೋಮವಾರದಂದು ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ಜೈ ಹನುಮಾನ ಯುವ ಜನ ಸೇವಾ ಸಂಘದ ಪದಾಧಿಕಾರಿಗಳು ಕಲ್ಲೋಳಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಜೈ ಹನುಮಾನ ಯುವ ಜನ ಸೇವಾ ಸಂಘದ ಅಧ್ಯಕ್ಷ …
Read More »ಅರಭಾವಿ ಆಂಜನೇಯ ಮತ್ತು ಕಲ್ಲೊಳ್ಳಿ ಮಾರುತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
*ಹೊಸ ವರ್ಷದ ದಿನದಂದು* *ಅರಭಾವಿ ಆಂಜನೇಯ ಮತ್ತು ಕಲ್ಲೊಳ್ಳಿ ಮಾರುತೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.* ಮೂಡಲಗಿ: ಹೊಸ ವರ್ಷದ ದಿನದಂದು ಕ್ಷೇತ್ರದ ಜನ ಕಲ್ಯಾಣ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಯ ಸಂಕಲ್ಪದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾನುವಾರ ಸಂಜೆ ಕ್ಷೇತ್ರದ ಅಧಿದೇವತೆ ಅರಭಾವಿಯ ಆಂಜನೇಯ ಮತ್ತು ಕಲ್ಲೋಳ್ಳಿ ಮಾರುತೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. …
Read More »ಹೊಸ ವರ್ಷದ ನಿಮಿತ್ಯ ವಿದ್ಯಾರ್ಥಿಗಳಿಗೆ ರಂಗೋಲಿ ಸ್ಪರ್ಧೆ
ಹೊಸ ವರ್ಷದ ನಿಮಿತ್ಯ ವಿದ್ಯಾರ್ಥಿಗಳಿಗೆ ರಂಗೋಲಿ ಸ್ಪರ್ಧೆ ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಎಸ್.ಎಸ್.ಆರ್ ಪ್ರೌಢಶಾಲೆಯಲ್ಲಿ ಹೊಸ ವರ್ಷದ ನಿಮಿತ್ಯ ವಿದ್ಯಾರ್ಥಿಗಳಿಗೆ ವಿಷಯಾಧಾರಿತ ರಂಗೋಲಿ ಚಿತ್ರ ಬೀಡಿಸುವ ಸ್ಪರ್ಧೆಗಳು ಜರುಗಿದವು. ಪ್ರೌಢ ಶಾಲೆಯ ಉಪಪ್ರಾಚಾರ್ಯ ಕೆಎಸ್ ಹೊಸಟ್ಟಿ, ಶಿಕ್ಷಕರಾದ ಆರ್.ಕೆ.ಕಳಸಣ್ಣವರ, ಸಿ.ಎಂ ಹಂಜಿ ಕಾರ್ಯನಿರ್ವಹಿಸಿದರು. ಚಿತ್ರ ಕಲಾ ಶಿಕ್ಷಕ ಎಸ್ ಎಸ್ ಕುರಣೆ ನಿರ್ವಹಣೆ ಮಾಡಿದರು. ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ವಿಜ್ಞಾನ ಚಿತ್ರಗಳನ್ನು ಬಿಡಿಸುವಲ್ಲಿ ಸ್ವಾತಿ ಬೀಸನಕೊಪ್ಪ, ಐಶ್ವರ್ಯ ಗಡಾದ್, …
Read More »ಚಲವಾದಿ ಅವರಿಗೆ ಪಿ.ಎಚ್.ಡಿ ಪದವಿ
ಚಲವಾದಿ ಅವರಿಗೆ ಪಿ.ಎಚ್.ಡಿ ಪದವಿ ಮೂಡಲಗಿ: ತಾಲೂಕಿನ ಯಾದವಾಡದ ಜಿ.ಎನ್.ಎಸ್.ಸಂ.ಪ.ಪೂ ಕಾಲೇಜನ ಇತಿಹಾಸ ಉಪನ್ಯಾಸಕ ವಾಯ್.ಎಚ್.ಚಲವಾದಿ ಅವರು ಮಂಡಿಸಿದ ಕೃಷ್ಣ ಮೇಲ್ದಂಡೆ ಯೋಜನೆಯ ಸಾಧಕ ಬಾಧಕಗಳ ಎಂಬ ವಿಷಯದ ಮಹಾಪ್ರಬಂದಕ್ಕೆ ಹಂಪಿ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ. ಡಾ.ಆರ್.ಎಚ್.ಸಜ್ಜನವರ ಮಾರ್ಗದರ್ಶನದಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಯ ಸಾಧಕ ಬಾಧಕಗಳ ಪ್ರಬಂದವನ್ನು ಸಿದ್ಧಪಡಿಸಿದ್ದರು. ವಾಯ್.ಎಚ್.ಚಲವಾದಿ ಅವರಿಗೆ ಪಿಎಚ್ಡಿ ಪದವಿ ದೊರೆತ್ತಿರುವದಕ್ಕೆ ವಿ.ವಿ.ಸಂಘದ ಅಧ್ಯಕ್ಷ ಎಸ್.ಬಿ.ನ್ಯಾಮಗೌಡರ ಉಪಾಧ್ಯಕ ಎಂ.ಎ.ರೂಡಗಿ ಮತ್ತು ಆಡಳಿತ ಮಂಡಳಿ ಹಾಗೂ …
Read More »ಹುಣಶ್ಯಾಳ ಪಿಜಿಯಲ್ಲಿ ಶ್ರೀ ಸಿದ್ಧಲಿಂಗೇಶ್ವರ ಜಾತ್ರೆ ಹಾಗೂ 24ನೇ ಸತ್ಸಂಗ ಮಹೋತ್ಸವ ಉದ್ಘಾಟನೆ
ಹುಣಶ್ಯಾಳ ಪಿಜಿಯಲ್ಲಿ ಶ್ರೀ ಸಿದ್ಧಲಿಂಗೇಶ್ವರ ಜಾತ್ರೆ ಹಾಗೂ 24ನೇ ಸತ್ಸಂಗ ಮಹೋತ್ಸವ ಉದ್ಘಾಟನೆ ಮೂಡಲಗಿ: ಕಷ್ಟದಲ್ಲಿರುವರಿಗೆ ಸಹಾಯ ಮಾಡಿದರೇ ಮನುಷ್ಯನ ಜೀವನ ಸಾರ್ಥಕವಾಗುತ್ತದೆ ಎಂದು ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಹೇಳಿದರು. ಅವರು ತಾಲೂಕಿನ ಹುಣಶ್ಯಾಳ ಪಿಜಿಯ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಭಾನುವಾರದಂದು ನಡೆದ ಶ್ರೀ ಸಿದ್ಧಲಿಂಗೇಶ್ವರ ಜಾತ್ರೆ ಹಾಗೂ 24ನೇ ಸತ್ಸಂಗ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯ ತಾನು ಗಳಿಸಿದ ಸಂಪತ್ತು ಸತ್ತ ಮೇಲೆ ಜೊತೆಗೆ ತಗೆದುಕೊಂಡು ಹೋಗುವುದಿಲ್ಲ. …
Read More »ಬೆಟಗೇರಿ ಗ್ರಾಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಆಚರಣೆ
ಬೆಟಗೇರಿ ಗ್ರಾಮದಲ್ಲಿ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಆಚರಣೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿಶ್ವಕರ್ಮ ಸಮುದಾಯದವರ ಸಹಯೋಗದಲ್ಲಿ ಸ್ಥಳೀಯ ಗ್ರಾಮದೇವತೆ ದ್ಯಾಮವ್ವದೇವಿ ದೇವಾಲಯ ಸಭಾಂಗಣದಲ್ಲಿ ಜ.1ರಂದು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪನೆ, ಪೂಜಾ ಕಾರ್ಯಕ್ರಮಗಳು ಜರುಗಿದ ಬಳಿಕ ಸಿಹಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶಿವಾಜಿ ನೀಲಣ್ಣವರ, ವಿಠಲ ಕೋಣಿ, ರಾಜು ಪತ್ತಾರ, ರಾಮಚಂದ್ರ ಬಡಿಗೇರ, ಪ್ರಕಾಶ ಬಡಿಗೇರ, ಸಿದ್ದಪ್ಪ ಬಾಣಸಿ, …
Read More »ಡಾ.ಅಬ್ದುಲ್ ಕಲಾಂ ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಭಾಜನಾರಾದ ಸಿದ್ದಣ್ಣ ದುರದುಂಡಿ ಶಾಸಕ ಬಾಲಚಂದ್ರ ಜಾರಕಿಹೊಳಿಯವgಸತ್ಕಾರ
ಡಾ.ಅಬ್ದುಲ್ ಕಲಾಂ ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಭಾಜನಾರಾದ ಸಿದ್ದಣ್ಣ ದುರದುಂಡಿ ಶಾಸಕ ಬಾಲಚಂದ್ರ ಜಾರಕಿಹೊಳಿಯವgಸತ್ಕಾರ ಮೂಡಲಗಿ: ತಾಲೂಕಿನ ಹಳ್ಳೂರ ಗ್ರಾಮದ ಸಮಾಜ ಸೇವಕ, ಯುವ ಸಂಘಟಕ ಸಿದ್ದಣ್ಣ ದುರದುಂಡಿ ಅವರಿಗೆ ಸದಲಗಾದ ಡಾ.ಎ.ಪಿ.ಜಿ ಅಬ್ದುಲ್ ಕಲಾಂ ಸಮಾಜ ಸೇವಾ ಸಂಘದಿಂದ ಡಾ.ಅಬ್ದುಲ್ ಕಲಾಂ ರಾಷ್ಟ್ರ ಮಟ್ಟದ ಪ್ರಶಸ್ತಿ ಲಭಿಸಿದ ಪ್ರಯುಕ್ತ ಸಿದ್ದಣ್ಣ ದುರದುಂದಿ ಅವರನ್ನು ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸತ್ಕರಿಸಿ ಗೌರವಿಸಿದರು. ಸಿದ್ದಣ್ಣ ದುರದುಂಡಿ ಅವರು …
Read More »ಜ.1ರಿಂದ 3 ವರಿಗೆ ಪಿ.ಜಿ.ಹುಣಶ್ಯಾಳದ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಅಪ್ಪನ ಜಾತ್ರೆ
ಜ.1ರಿಂದ 3 ವರಿಗೆ ಪಿ.ಜಿ.ಹುಣಶ್ಯಾಳದ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಅಪ್ಪನ ಜಾತ್ರೆ ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿ.ಜಿ ಗ್ರಾಮದಲ್ಲಿ ಶೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಜ.೧ ರಿಂದ ೩ ರವರಿಗೆ “ಅಪ್ಪನ ಜಾತ್ರೆ” ೨೪ನೇ ಸತ್ಸಂಗ ಮಹೋತ್ಸವ, ತೋಟ್ಟಿಲೋತ್ಸವ, ಶ್ರೀ ಸಿದ್ಧಲಿಂಗ ರಥೋತ್ಸವ ಕಾರ್ಯಕ್ರಮ ಜರುಗಲಿದೆ. ಜ.೧ ರಂದು ಮುಂಜಾನೆ ಶ್ರೀ ಸಿದ್ಧಲಿಂಗ ಯತಿರಾಜ ಶ್ರೀಶಾಂಭವಿ ಮಾತೆಯ ಶ್ರೀ ಸಿದ್ಧಲಿಂಗ ಮಹಾರಾಜರ ಮೂರ್ತಿಗೆ ರುದ್ರಾಭಿಷೇಕ ಮತ್ತು ಮುತೈದೆಯರ ಉಡಿ ತುಂಬುವುದು, ೧೦ …
Read More »