Breaking News
Home / ಬೆಳಗಾವಿ (page 20)

ಬೆಳಗಾವಿ

ಹಣಮಂತ ಗುರಪ್ಪ ತಿಪ್ಪಿಮನಿ ನಿಧನ

ಹಣಮಂತ ಗುರಪ್ಪ ತಿಪ್ಪಿಮನಿ ನಿಧನ ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡದ ನಿವಾಸಿ ಶ್ರೀ ಹಣಮಂತ ಗುರಪ್ಪ ತಿಪ್ಪಿಮನಿ (60) ಅನಾರೋಗ್ಯದಿಂದ ಗುರುವಾರ ಸಂಜೆ 5 ಕ್ಕೆ ನಿಧನರಾಗಿದ್ದಾರೆ. ಇವರು ಘಟಪ್ರಭಾ ಜಗದ್ಗುರು ಗುರುಸಿದ್ದೇಶ್ವರ ಸಹಕಾರಿ ಆಸ್ಪತ್ರೆಯ ರಕ್ತ ತಪಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಮೃತರು ಪತ್ನಿ.ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Read More »

ರೈತರು ಸ್ಥಳೀಯ ಗ್ರಾಮ ಆಡಳಿತ ಅಧಿಕಾರಿ ಕಛೇರಿಗೆ ಭೇಟಿ ನೀಡಿ.!

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸಾರ್ವಜನಿಕರು ಮತ್ತು ರೈತರು ಸ್ಥಳೀಯ ಗ್ರಾಮ ಆಡಳಿತ ಅಧಿಕಾರಿ ಕಛೇರಿಗೆ ಭೇಟಿ.   ನಿಮ್ಮ ಕೃಷಿ ಜಮೀನು ಮಾಲೀಕ ಮರಣ ಹೊಂದಿದ್ದರೆ, ಮೃತರ ಉತ್ತರಾಧಿಕಾರಿಗಳ ಹೆಸರಿಗೆ ಬದಲಾವಣೆ ಮಾಡಿಕೊಳ್ಳಬೇಕು ಎಂದು ಬೆಟಗೇರಿ ಗ್ರಾಮದ ಗ್ರಾಮ ಆಡಳಿತ ಅಧಿಕಾರಿ ಗೌಡಪ್ಪ ಸಸಾಲಟ್ಟಿ ತಿಳಿಸಿದ್ದಾರೆ. ಕರ್ನಾಟಕ ಸರ್ಕಾರ ಹಾಗೂ ಕಂದಾಯ ಇಲಾಖೆಯ ಮಹತ್ವಕಾಂಕ್ಷಿ ಯೋಜನೆಯಾದ ಇ-ಪೌತಿ/ವಾರಸಾ ಖಾತೆ ಆಂದೋಲನದಡಿಯಲ್ಲಿ ತಮ್ಮ ಕೃಷಿ ಜಮೀನನ ಮಾಲೀಕರು ನಿಧನರಾಗಿದ್ದರೆ, ತಮ್ಮ ಕುಟುಂಬದ …

Read More »

ಮಸಗುಪ್ಪಿ ಗ್ರಾಮದಲ್ಲಿ ಜರುಗಿದ ಮಹರ್ಷಿ ಭಗೀರಥ ಮಹಾರಾಜರ ಪ್ರವಚನದ ಸಮಾರೋಪ

ಮಸಗುಪ್ಪಿ- ಹಿಂದುಳಿದ ಉಪ್ಪಾರ ಸಮಾಜದ ಅಭಿವೃದ್ಧಿಗೆ ಬದ್ಧನಿರುವೆ. ಬೆಮುಲ್ ನಲ್ಲಿ ಎರಡು ಸ್ಥಾನಗಳಿಗೆ ನಿರ್ದೇಶಕರನ್ನು ನೇಮಕ ಮಾಡಲಾಗುತ್ತಿದ್ದು, ಅದರಲ್ಲಿ ಒಂದನ್ನು ಮೂಡಲಗಿ- ಗೋಕಾಕ ತಾಲ್ಲೂಕಿಗೆ ಸೇರಿರುವ ಭಗೀರಥ- ಉಪ್ಪಾರ ಸಮಾಜಕ್ಕೆ ಸೇರಿರುವ ರೈತಪರ ಕಾಳಜಿಯುಳ್ಳ ವ್ಯಕ್ತಿಯೊಬ್ಬರನ್ನು ನಿರ್ದೇಶಕನನ್ನಾಗಿ ಮಾಡಿಕೊಳ್ಳುತ್ತೇನೆ ಎಂದು ಶಾಸಕ ಹಾಗೂ ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಭರವಸೆಯನ್ನು ನೀಡಿದರು. ಮೂಡಲಗಿ ತಾಲ್ಲೂಕಿನ ಮಸಗುಪ್ಪಿ ಗ್ರಾಮದಲ್ಲಿ ಬುಧವಾರದಂದು ಶ್ರೀಮತಿ ಭೀಮವ್ವ ಲಕ್ಷ್ಮಣರಾವ್ ಜಾರಕಿಹೊಳಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಮತ್ತು …

Read More »

ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಕುಲಗೋಡ: ರಕ್ತದಾನ ಮಾಡುವ ಜನರು ಹೃದಯಾಘಾತ ಮತ್ತು ಕ್ಯಾನ್ಸರ್ ಅಪಾಯಕ್ಕೆ ಒಳಗಾಗುವ ಸಾಧ್ಯತೆ ಕಡಿಮೆ. ಹಾಗೂ ರಕ್ತದಾನವು ಜನರು ತಮ್ಮ ರಕ್ತವನ್ನು ಜನರಿಗೆ ದಾನ ಮಾಡುವ ಅಭ್ಯಾಸವನ್ನು ಸೂಚಿಸುತ್ತದೆ ಆದ್ದರಿಂದ ಅದು ಅವರ ಆರೋಗ್ಯ ಸಮಸ್ಯೆಗಳಿಗೆ ಸಹಾಯ ಮಾಡುತ್ತದೆ ಇಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಸನಗೌಡ ಈಶ್ವರಪ್ಪಗೋಳ ಮಾತನಾಡಿದರು. ಇವರು ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು ಗ್ರಾಮ ಪಂಚಾಯತ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ …

Read More »

ಅಕ್ಟೋಬರ್ ೧೯ ರಂದು ನಡೆಯುವ ಬಿಡಿಸಿಸಿ ಬ್ಯಾಂಕ್ ಚುನಾವಣೆ

ಬೆಳಗಾವಿ- ಬರುವ ಅಕ್ಟೋಬರ್ ೧೯ ರಂದು ನಡೆಯುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯನ್ನು  ಸಮರ್ಥವಾಗಿ ಎದುರಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಮಾಜಿ ಸಂಸದ ಜೊಲ್ಲೆಯವರ ಯಕ್ಸಂಬಾ ಬ್ಯಾಂಕಿನಲ್ಲಿ ಮಂಗಳವಾರದಂದು ಸಭೆಯನ್ನು ನಡೆಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯಸಭಾ ಮಾಜಿ ಸದಸ್ಯ ಡಾ. ಪ್ರಭಾಕರ ಕೋರೆ, ಗೋಕಾಕ ಶಾಸಕ ರಮೇಶ್‌ ಜಾರಕಿಹೊಳಿ, ಮಾಜಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರ ನೇತೃತ್ವದಲ್ಲಿ ಬಿಡಿಸಿಸಿ …

Read More »

ಬೆಟಗೇರಿ ಗ್ರಾಮದಲ್ಲಿ ವಾರದ ಹಿಡಿದ ಕಾರ್ಯಕ್ರಮ ಸಂಪನ್ನ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಕಳೆದ ಜು.1ರಿಂದ ನಾಲ್ಕು ಮಂಗಳವಾರ, ಒಂದು ಶುಕ್ರವಾರ ಸೇರಿ ವಾರ ಹಿಡಿದ ಹಿನ್ನಲೆಯಲ್ಲಿ ಕೊನೆಯ ಮಂಗಳವಾರ ಜುಲೈ.22ರಂದು ವಾರದ ಹಿಡಿದ ಮಂಗಲೋತ್ಸವ ಕಾರ್ಯಕ್ರಮ ಭಕ್ತಿಯಿಂದ ನಡೆದು ಸಂಪನ್ನಗೊಂಡಿತು. ಗ್ರಾಮದ ಜನರು ಸ್ಥಳೀಯ ಎಲ್ಲ ದೇವಸ್ಥಾನಗಳಿಗೆ ತೆರಳಿ ಪೂಜೆ, ಉಡಿ ತುಂಬುವ, ನೈವೇದ್ಯ ಸಮರ್ಪಿಸುವ, ದೇವಾಲಯ ಕಟ್ಟೆಗಳಿಗೆ ನೀರು ಹಾಕುವದು ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದ ಬಳಿಕ ಸಂಜೆ.6 ಗಂಟೆಗೆ ಊರಿನ ಪ್ರಮುಖ ಬೀದಿಗಳಲ್ಲಿ …

Read More »

ಬೆಟಗೇರಿ ಗ್ರಾಮದಲ್ಲ್ಲಿ ಜುಲೈ.22ರ ಮಂಗಳವಾರ ಕಟ್ಟಾ ವಾರ ಆಚರಣೆ

  ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಜನ-ಜಾನುವಾರುಗಳಿಗೆ ರೋಗ-ರುಜೀನ ಬರದಂತೆ ಹಾಗೂ ಮಳೆಗಾಗಿ ಗ್ರಾಮದಲ್ಲಿ ಕಳೆದ ಜು.1ರಿಂದ ಜು.22ರ ತನಕ 4 ಮಂಗಳವಾರ 1 ಶುಕ್ರವಾರ ವಾರ ಹಿಡಿದ ಹಿನ್ನಲೆಯಲ್ಲಿ ಕೊನೆಯ ಮಂಗಳವಾರ ಜುಲೈ.22ರಂದು ವಾರದ ಮಂಗಲೋತ್ಸವ ವಿವಿಧ ಕಾರ್ಯಕ್ರಮ ನಡೆಯಲಿವೆ. ಜು.22ರಂದು ಗ್ರಾಮದ ಜನರು ಸ್ಥಳೀಯ ಎಲ್ಲ ದೇವಸ್ಥಾನಗಳಿಗೆ ತೆರಳಿ ಪೂಜೆ, ಉಡಿ ತುಂಬುವ, ನೈವೇದ್ಯ ಸಮರ್ಪಿಸುವ, ದೇವಾಲಯ ಕಟ್ಟೆಗಳಿಗೆ ನೀರು ಹಾಕುವದು ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು …

Read More »

ಬೆಟಗೇರಿಯಲ್ಲಿ ಇನ್ನೂ 1 ಮಂಗಳವಾರ ಕಟ್ಟಾ ವಾರ ಹಿಡಿಯಲಾಗಿದೆ : ಮಾಯಪ್ಪ ಬಾಣಸಿ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದ ಪ್ರಯುಕ್ತ ಶುಕ್ರವಾರ ಜು.18ರಂದು ವಾರದ ದಿನ ಮುಂಜಾನೆ 9:30 ಗಂಟೆಗೆ ಊರಿನ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳಗಳೊಂದಿಗೆ ಪುರ ದೇವರ ಪಲ್ಲಕ್ಕಿ ಉತ್ಸವ ಕಾರ್ಯಕ್ರಮ ನಡೆಯಿತು. ಸ್ಥಳೀಯರಿಂದ ಪುರದೇವರ ದೇವಸ್ಥಾನಕ್ಕೆ ತೆರಳಿ ಪೂಜೆ, ನೈವೇದ್ಯ ಸಮರ್ಪಿಸುವ, ದೇವಾಲಯ ಕಟ್ಟೆಗಳಿಗೆ ನೀರು ಹಾಕುವದು ಸೇರಿದಂತೆ ವಿವಿಧ ಕಟ್ಟಾ ವಾರ ಆಚರಣೆಯ ಹಲವು ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಗ್ರಾಮದ ಪ್ರಮುಖ ಬೀದಿ, ಸ್ಥಳಗಳು ಜನರ …

Read More »

ಕೃಷಿಯಲ್ಲಿ ನೀರಿನ ಮಿತ ಬಳಕೆ ಮಣ್ಣಿನ ಆರೋಗ್ಯ ಕಾಯಬೇಕು- ಅಮೆರಿಕಾದ ಕೃಷಿ ವಿಜ್ಞಾನಿ ಚಾಲ್ರ್ಸ ರಿಚರ್ಡ 

ಮೂಡಲಗಿ: ‘ನೈಸರ್ಗಿಕ ಸಂಪನ್ಮೂಲಗಳನ್ನು ಬಳಸಿ ಮಣ್ಣಿನ ಫಲವತ್ತತೆಯನ್ನು ವೃದ್ಧಿಸಿ ಉತ್ತಮ ಇಳುವರಿಯನ್ನು ಪಡೆಯುತ್ತಿರುವ ಕಲ್ಲೋಳಿಯ ಕೃಷಿಕ ಬಾಳಪ್ಪ ಬಿ. ಬೆಳಕೂಡ ಅವರ ಸಾಧನೆಯು ಅಪೂರ್ವವಾಗಿದೆ’ ಎಂದು ಅಮೆರಿಕಾದ ಕೃಷಿಯಲ್ಲಿ ನೀರು ನಿರ್ವಹಣೆ ಮತ್ತು ಎಲೆಗಳ ವಿಜ್ಞಾನಿ ಚಾಲ್ರ್ಸ ರಿಚರ್ಡ ಅವರು ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಪ್ರಗತಿಪರ ಕೃಷಿಕ ಬಾಳಪ್ಪ ಬಿ. ಬೆಳಕೂಡ ಅವರ ತೋಟಕ್ಕೆ ಭೇಟ್ಟಿ ನೀಡಿ ಕಬ್ಬು, ಅರಿಷಿನ, ಸೋಯಾ ಅವರೆ ಮತ್ತು ಇತರೆ ಬೆಳೆಗಳನ್ನು ವೀಕ್ಷಿಸಿ ಮಾತನಾಡಿದ …

Read More »

ಜು.21ರಂದು ಕೇಂದ್ರದ ನಡೆಯನ್ನು ಖಂಡಿಸಿ ಪಿಂಚಣಿದಾರರಿಂದ ಪ್ರತಿಭಟನೆ

ಮೂಡಲಗಿ: ಕೇಂದ್ರ ಸರ್ಕಾರವು ನಿಯೋಜಿಸಿರುವ 8ನೇ ವೇತನ ಆಯೋಗದಲ್ಲಿ ನಿವೃತ್ತ ನೌಕರರಿಗೆ ಪಿಂಚಣಿಯನ್ನು ಪರಿಷ್ಕರಿಸದಿರುವುದು ಮತ್ತು ತುಟ್ಟಿ ಭತ್ಯೆಯನ್ನು ನಿಲ್ಲಿಸುವ ಬಗ್ಗೆ ಲೋಕಸಭೆಯಲ್ಲಿ ಚರ್ಚೆಯಾಗಿರುವುದನ್ನು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಮೂಡಲಗಿ ತಾಲ್ಲೂಕು ಘಟಕವು ತೀವ್ರವಾಗಿ ಖಂಡಿಸಿದೆ. ಈ ವಿಷಯ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಮೂಡಲಗಿ ತಾಲ್ಲೂಕು ಘಟಕದ ಅಧ್ಯಕ್ಷ ಪ್ರೊ. ಎಸ್.ಎಂ. ಕಮದಾಳ ಅವರು ಪ್ರಕಟಣೆಯಲ್ಲಿ ತಿಳಿಸಿದ್ದು ಇದೇ ಜುಲೈ …

Read More »