Breaking News
Home / ಬೆಳಗಾವಿ (page 266)

ಬೆಳಗಾವಿ

ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಸ.5 ರಂದು

ಮೂಡಲಗಿ: ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಪ್ರಯುಕ್ತ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಸ.5 ರವಿವಾರದಂದು ಸ್ಥಳೀಯ ಶ್ರೀ ಕೆ.ಎಚ್ ಸೋನವಾಲಕರ ಕಲ್ಯಾಣ ಮಂಟಪ ಗುಡ್ಲಮಡ್ಡಿ ಈರಣ್ಣ ದೇವಸ್ಥಾನದಲ್ಲಿ ಮುಂಜಾನೆ 11-00 ಗಂಟೆಗೆ ಸರಕಾರ ಹಾಗೂ ಇಲಾಖೆಯ ಮಾರ್ಗದರ್ಶನದಂತೆ ಕೋವಿಡ್-19 ಶಿಷ್ಠಾಚಾರದ ನಿಯಮಾನುಸಾರ ಏರ್ಪಡಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸ್ಥಳೀಯ ಸಿದ್ಧ ಸಂಸ್ಥಾನ ಮಠದ ಶ್ರೀ ಶ್ರೀ ದತ್ತಾತ್ರೇಯಬೋಧ ಮಹಾಸ್ವಾಮೀಜಿ …

Read More »

ತುಕ್ಕಾನಟ್ಟಿ  ಗ್ರಾಮದಲ್ಲಿ ಗೋವಿನ ಜೋಳದ ಕ್ಷೇತ್ರೋತ್ಸವ

ತುಕ್ಕಾನಟ್ಟಿ  ಗ್ರಾಮದಲ್ಲಿ ಗೋವಿನ ಜೋಳದ ಕ್ಷೇತ್ರೋತ್ಸವ ಮೂಡಲಗಿ: ರೈತರು ಸಾವಯವ ಕೃಷಿಯನ್ನು ಅಳವಡಿಸಿಕೊಂಡು ತಮ್ಮ ಆರೋಗ್ಯದೊಂದಿಗೆ ಸಮಾಜದ ಆರೋಗ್ಯವನ್ನು ಕಾಯ್ದುಕೊಳ್ಳಬೇಕು’ ಎಂದು ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಬಾಳಪ್ಪ ಬಿ. ಬೆಳಕೂಡ ಹೇಳಿದರು. ತಾಲ್ಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ರೈತ ಮಹಿಳೆ ಆಶಾ ಭರತ ಮಹಾತ್ರೆ ಅವರ ತೋಟದಲ್ಲಿ ತಾಲ್ಲೂಕು ಕೃಷಿಕ ಸಮಾಜ ಹಾಗೂ ಕೃಷಿ ಇಲಾಖೆಯ ಆತ್ಮ ಯೋಜನೆ ಇವರ ಸಹಯೋಗದಲ್ಲಿ ಗುರುವಾರ ಏರ್ಪಡಿಸಿದ್ದ ಗೋವಿನ ಜೋಳ …

Read More »

ಲಯನ್ಸ್ ಕ್ಲಬ್‍ದಿಂದ ಆಸ್ಪತ್ರೆಯಲ್ಲಿ ಅನ್ನದಾಸೋಹ ‘ಅನ್ನದಾನವು ಶ್ರೇಷ್ಠ ದಾನವಾಗಿದೆ’

  ಲಯನ್ಸ್ ಕ್ಲಬ್‍ದಿಂದ ಆಸ್ಪತ್ರೆಯಲ್ಲಿ ಅನ್ನದಾಸೋಹ ‘ಅನ್ನದಾನವು ಶ್ರೇಷ್ಠ ದಾನವಾಗಿದೆ’ ಮೂಡಲಗಿ: ‘ಅನ್ನ ದಾನವು ಎಲ್ಲ ದಾನಕ್ಕಿಂತ ಶ್ರೇಷ್ಠ ದಾನವಾಗಿದೆ’ ಎಂದು ತಹಶೀಲ್ದಾರ್ ಡಿ.ಜಿ. ಮಹಾತ್ ಅವರು ಹೇಳಿದರು. ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲಯನ್ಸ್ ಕ್ಲಬ್ ಆಫ್ ಮೂಡಲಗಿ ಪರಿವಾರದವರು ಏರ್ಪಡಿಸಿದ್ದ 66ನೇ ಪಾಕ್ಷಿಕ ಅನ್ನದಾಸೋಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಹಸಿದವರಿಗೆ ಅನ್ನವನ್ನು ನೀಡುವುದು ಸಮಾಜದ ಶ್ರೇಷ್ಠ ಮೌಲ್ಯವಾಗಿದೆ ಎಂದರು. ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಉಚಿತ ಆಹಾರ …

Read More »

ಪರಿಸರ ಸ್ನೇಹಿ ಗಣೇಶ ಮೂರ್ತಿ ಸ್ಥಾಪಿಸಲು ಸೂಚನೆ

ಪರಿಸರ ಸ್ನೇಹಿ ಗಣೇಶ ಮೂರ್ತಿ ಸ್ಥಾಪಿಸಲು ಸೂಚನೆ ಮೂಡಲಗಿ: ಈ ಬಾರಿ ಆಚರಿಸುವ ಗಣೇಶ ಹಬ್ಬವನ್ನು ಕೋವಿಡ್-19 ಮಾರ್ಗಸೂಚಿಯೊಂದಿಗೆ ಸರಳವಾಗಿ ಆಚರಿಸುವಂತೆ ಜಿಲ್ಲಾಧಿಕಾರಿಯವರ ಆದೇಶದನ್ವಯ ಗಣೇಶ ಮೂರ್ತಿ ತಯಾರಕರು ಹಾಗೂ ಮಾರಾಟಗಾರರು ಪಿಓಪಿ ಹಾಗೂ ಬಣ್ಣ ಲೇಪಿತ ಮೂರ್ತಿ ತಯಾರಿಸುವುದು, ಮಾರಾಟ ಮಾಡುವುದನ್ನು ನಿಷೇಧಿಸಿದ್ದಾರೆ. ಅದರ ಬದಲಾಗಿ ಶೇಡಿ ಮಣ್ಣಿನಿಂದ ತಯಾರಿಸಿದ ಹಾಗೂ ನಾಲ್ಕು ಅಡಿ ಎತ್ತರದೊಳಗೆ ಮೂರ್ತಿಗಳನ್ನು ತಯಾರಿಸಿ ಬಣ್ಣ ರಹಿತ ಮೂರ್ತಿಗಳನ್ನು ಮಾರಾಟ ಮಾಡಬೇಕು ಎಂದು ಪುರಸಭೆ …

Read More »

30 ವರ್ಷಗಳ ಕಾಲ ತಾಯ್ನಾಡಿಗೆ ಸುಧೀರ್ಘ ಸೇವೆ ಸಲ್ಲಿಸಿದ ವೀರಯೋದ ಸುಬೇದಾರ ಉದ್ದನ್ನವರ ಕುರಿತಾದ ಮಾಹಿತಿ

“ ದೇಶ ಸೇವೆಯ ಹೊಣೆ ಹೊತ್ತು ಸುಧೀರ್ಘ 30 ವರ್ಷಗಳ ಕಾಲ ಸಿಪಾಯಿ ಹುದ್ದೆಯಿಂದ ಸುಬೇದಾರ ಹಂತದವರೆಗೆ ಬಡ್ತಿ ಪಡೆದು ಆಗಷ್ಟ 31 ರಂದು ನಿವೃತ್ತರಾಗುತ್ತಿಯಾದ ಸುಬೇದಾರ ಮಾರುತಿ ಶಿವಲಿಂಗಪ್ಪ ಉದ್ದನ್ನವರ ಅವರ ಕೀರು ಚಿತ್ರಣ” ವರದಿ: ಕೆ.ಎಲ್ ಮೀಶಿ(ಮೂಡಲಗಿ) ಮೂಡಲಗಿ ತಾಲೂಕಿನ ಖಾನಟ್ಟಿ ಗ್ರಾಮದ ಸುಬೇದಾರ ಮಾರುತಿ ಉದ್ದನ್ನವರ ಅವರು ತಂದೆ ಶಿವಲಿಂಗಪ್ಪ ತಾಯಿ ಬಾಳವ್ವ ಉದರದಲ್ಲಿ ಜೂನ್ 1 1971 ರಂದು ಖಾನಟ್ಟಿಯಲ್ಲಿ ಜನಿಸಿದರು. ಪ್ರಾಥಮಿಕ ಶಿಕ್ಷಣವನ್ನು …

Read More »

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸಿದ ಪ್ರಯುಕ್ತ ಗ್ರಾಮಸ್ಥರಿಂದ ಅಭಿನಂದನಾ ಸಮಾರಂಭ

ಮೂಡಲಗಿ: ತಾಲೂಕಿನ ಖಾನಟ್ಟಿ ಗ್ರಾಮದ ವೀರಯೋಧ ಸುಬೇದಾರ ಮಾರುತಿ ಶಿವಲಿಂಗಪ್ಪ ಉದ್ದನ್ನವರ ಸುಧೀರ್ಘ 30 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿದ್ದಾರೆ. ಯಶಸ್ವಿ ಸೇವೆ ಸಲ್ಲಿಸಿರುವ ಪ್ರಯುಕ್ತ ಗ್ರಾಮಸ್ಥರಿಂದ ಅಭಿನಂದನಾ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವು ಸ. 3 ಶುಕ್ರವಾರದಂದು ಶ್ರೀ ಬಸವೇಶ್ವರ ಹಿರಿಯ ಪ್ರಾಥಮಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಸಮಾರಂಭದಲ್ಲಿ ದಿವ್ಯ ಸಾನಿಧ್ಯವನ್ನು ಜೋಡಕುರಳಿಯ ಚಿದ್ಘನಾನಂದ ಸ್ವಾಮಿಗಳು, ಉದ್ಘಾಟಕರಾಗಿ ಕೆಎಮ್‍ಎಫ್ ಅಧ್ಯಕ್ಷರು …

Read More »

ಇಂದು ಲಯನ್ಸ್ ಕ್ಲಬ್‍ದಿಂದ ಅನ್ನದಾಸೋಹ

ಇಂದು ಲಯನ್ಸ್ ಕ್ಲಬ್‍ದಿಂದ ಅನ್ನದಾಸೋಹ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೆ. 1ರಂದು ಮಧ್ಯಾಹ್ನ 1 ಗಂಟೆಗೆ ಪಾಕ್ಷಿಕ ಅನ್ನದಾಸೋಹ ಏರ್ಪಡಿಸಲಾಗಿದೆ. ಅನ್ನದಾಸೋಹದ ಪ್ರಾಯೋಜಕತ್ವವನ್ನು ವೆಂಕಟೇಶ ಆರ್. ಸೋನವಾಲಕರ ವಹಿಸಿಕೊಂಡಿರುವರು. ದಾಸೋಹ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಡಿ.ಜಿ. ಮಹಾತ್ ಅವರು ಚಾಲನೆ ನೀಡುವರು. ಮುಖ್ಯ ಅತಿಥಿಗಳಾಗಿ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಭಾರತಿ ಕೋಣಿ ಭಾಗವಹಿಸುವರು. ಲಯನ್ಸ್ ಕ್ಲಬ್ ಅಧ್ಯಕ್ಷ ಬಾಲಶೇಖರ …

Read More »

.2ರಂದು ಗೋವಿನ ಜೋಳ ಕ್ಷೇತ್ರೋತ್ಸವ

ತುಕ್ಕಾನಟ್ಟಿ: ಸೆ. 2ರಂದು ಗೋವಿನ ಜೋಳ ಕ್ಷೇತ್ರೋತ್ಸವ ಮೂಡಲಗಿ: ತಾಲ್ಲೂಕು ಕೃಷಿಕ ಸಮಾಜ ಹಾಗೂ ಕೃಷಿ ಇಲಾಖೆ ಗೋಕಾಕ ಇವರು ಸಂಯುಕ್ತ ಆಶ್ರಯದಲ್ಲಿ ತಾಲ್ಲೂಕಿನ ತುಕ್ಕಾನಟ್ಟಿ ಗ್ರಾಮದ ಆಶಾ ಭರತ ಮಹಾತ್ರೆ ಅವರ ತೋಟದಲ್ಲಿ ಸೆ. 2ರಂದು ಬೆಳಿಗ್ಗೆ 10ಕ್ಕೆ ಗೋವಿನ ಜೋಳ ಕ್ಷೇತ್ರೋತ್ಸವ ಮತ್ತು ರೈತರ ಗೋಷ್ಠಿ ಏರ್ಪಡಿಸಿರವರು. ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಬಾಳಪ್ಪ ಬ. ಬೆಳಕೂಡ ಕಾರ್ಯಕ್ರಮವನ್ನು ಉದ್ಘಾಟಿಸಿವರು. ತುಕ್ಕಾನಟ್ಟಿ ಗ್ರಾಮ ಪಂಚಾಯ್ತಿ …

Read More »

ಟೈಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟಿಸಿ ಕಾಮುಕರ ವಿರುದ್ದ ಆಕ್ರೋಶ

ಮೂಡಲಗಿ: ತಾಲೂಕಿನ ರಾಜಾಪೂರ ಗ್ರಾಮದ ದಲಿತ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಖಂಡಿಸಿ ಮಂಗಳವಾರದoದು ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮೀತಿಯಿಂದ ಪಟ್ಟಣದ ಪ್ರಮುಖ ರಸ್ತೆ ಬಂದ್ ಮಾಡಿ ಟೈಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ಕಾಮುಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣ ಸಾವಿರಾರು ಶಾಲಾ-ಕಾಲೇಜ ವಿದ್ಯಾರ್ಥಿಗಳು ಭಾಗವಹಿಸಿ ಪ್ರತಿಭಟನೆಗೆ ಬೆಂಬಲ ಸೂಚಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. …

Read More »

ಪ್ರಾಥಮಿಕಪಿಕೆಪಿಎಸ್ ನೂತನ ಅಧ್ಯಕ್ಷರಾಗಿ ಬಸಪ್ಪ ಯಲ್ಲಪ್ಪ ಕುಂದರಗಿ ಅವಿರೋಧವಾಗಿ ಆಯ್ಕೆ

ಬೆಟಗೇರಿ:ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾರ್ಗದರ್ಶನ ಹಾಗೂ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಅವರ ನೇತೃತ್ವದಲ್ಲಿ ಸಮೀಪದ ಕೌಜಲಗಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಬಸಪ್ಪ ಯಲ್ಲಪ್ಪ ಕುಂದರಗಿ ಅವರು ಅವಿರೋಧವಾಗಿ ಮಂಗಳವಾರ ಆ.31ರಂದು ಆಯ್ಕೆಗೊಂಡಿದ್ದಾರೆ. ಸ್ಥಳೀಯ ಪಿಕೆಪಿಎಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಸಪ್ಪ ಕುಂದರಗಿ ಹಾಗೂ ಗಣ್ಯರನ್ನು ಇಲ್ಲಿಯ ಪಿಕೆಪಿಎಸ್ ವತಿಯಿಂದ ಸತ್ಕರಿಸಲಾಯಿತು. ಗೋಕಾಕ ಸಹಕಾರಿ ಅಭಿವೃದ್ಧಿ ಅಧಿಕಾರಿ ಬಿ.ಕೆ.ಗೋಖಲೆ ಅವರು …

Read More »