ಸುಣಧೋಳಿ ಜಡಿಸಿದ್ಧೇಶ್ವರ ಹಾಗು ಯಾದವಾಡ ಗಟ್ಟಿ ಬಸವೇಶ್ವರ ಜಾತ್ರೆ ಹಾಗೂ ರಥೋತ್ಸವ ಸಂಪೂರ್ಣ ರದ್ದು; ಪಿಎಸ್ಐ ಎಚ್.ಕೆ.ನರಳೆ ಬೆಟಗೇರಿ: ಮಹಾಮಾರಿ ಕರೊನಾ 2ನೇ ಅಲೆಯಿಂದ ಕರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ಆದೇಶದ ಮಾರ್ಗಸೂಚಿ ನಿಯಮಗಳನುಸಾರ ಕುಲಗೋಡ ಪೊಲೀಸ್ ಠಾಣಾ ವ್ಯಾಪಿಯ ಹಲವಾರು ಹಳ್ಳಿಗಳಲ್ಲಿ ನಡೆಯಬೇಕಿದ್ದ ಪ್ರಸಕ್ತ ವರ್ಷದ ವಿವಿಧ ಜಾತ್ರೆ ಹಾಗೂ ರಥೋತ್ಸವವನ್ನು ಸಂಪೂರ್ಣ ರದ್ದು ಮಾಡಲಾಗಿದೆ ಎಂದು ಕುಲಗೋಡ ಪೊಲೀಸ್ ಠಾಣೆ ಪಿಎಸ್ಐ …
Read More »ಮೂಡಲಗಿ ಪಟ್ಟಣ ಧಿಡೀರ್ ಬಂದ್ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಕಂಗಾಲು ದಿನಸಿ ವಸ್ತುಗಳ ಖರೀದಿಗೆ ಮುಗಿಬಿದ್ದ ಮೂಡಲಗಿ ಜನತೆ
ಮೂಡಲಗಿ ಪಟ್ಟಣ ಧಿಡೀರ್ ಬಂದ್ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಕಂಗಾಲು ದಿನಸಿ ವಸ್ತುಗಳ ಖರೀದಿಗೆ ಮುಗಿಬಿದ್ದ ಮೂಡಲಗಿ ಜನತೆ ಮೂಡಲಗಿ : ನೈಟ್ ಕರ್ಫ್ಯು ಮುಗಿಸಿ ಇವತ್ತು ಬೆಳಿಗ್ಗೆಯಿಂದ ವ್ಯಾಪಾರ ವಹಿವಾಟಿಗೆ ಮರಳಿದ ವ್ಯಾಪಾರಿಗಳಿಗೆ ಇಂದು ಮಧ್ಯಾಹ್ನ ಶಾಕೀಂಗ್ ಆದೇಶ ಎದುರಾಗಿದೆ,ಮದ್ಯಾಹ್ನ 4 ಗಂಟೆಯಿಂದಲೇ ಪೋಲೀಸರು ಅಂಗಡಿಗಳನ್ನು ಬಂದ್ ಮಾಡಿಸುತ್ತಿದ್ದಾರೆ. ಕರ್ನಾಟಕದಲ್ಲಿ ಕೊರೋನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ತುರ್ತು ಆದೇಶ ಹೊರಡಿಸಿ ಅಗತ್ಯವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಎಲ್ಲ …
Read More »ಕೊರೋನಾ ಎರಡನೇ ಅಲೆಯ ನಿಯಂತ್ರಣಕ್ಕೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿಂದು ಗೋಕಾಕ ಹಾಗೂ ಮೂಡಲಗಿ ತಾಲೂಕಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಕೊರೋನಾ ಎರಡನೇ ಅಲೆಯ ನಿಯಂತ್ರಣಕ್ಕೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ನಿರ್ವಹಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕದಲ್ಲಿಂದು ಗೋಕಾಕ ಹಾಗೂ ಮೂಡಲಗಿ ತಾಲೂಕಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಗೋಕಾಕ ಹಾಗೂ ಮೂಡಲಗಿ ತಾಲೂಕುಗಳಲ್ಲಿ ಮಹಾಮಾರಿ ಕೊರೋನಾ ನಿಯಂತ್ರಿಸಲು ಅಧಿಕಾರಿಗಳು ಸಕಲ ಸಿದ್ಧತೆಯೊಂದಿಗೆ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. …
Read More »ಕರೊನಾ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸುವಂತೆ ಪಟ್ಟಣದ ಎಲ್ಲ ವಾರ್ಡಗಳಲ್ಲಿ ಜನಜಾಗೃತಿ
ಕೊವಿಡ್-19 ನಿಯಮ ಪಾಲಿಸದ ಅಂಗಡಿಕಾರರಿಗೆ ದಂಡ ಕರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಪುರಸಭೆ ಸಿಬ್ಬಂದಿ ಗುರುವಾರ ಕಾರ್ಯಾಚರಣೆ ನಡೆಸಿ ಕೊವಿಡ್-19 ನಿಯಮ ಪಾಲಿಸದ ಅಂಗಡಿಕಾರರಿಗೆ ಮತ್ತು ಮಾಸ್ಕ ಹಾಕದ 45 ಜನರಿಗೆ ತಲಾ 100 ರೂ. ರಂತೆ ದಂಡ ವಿಧಿಸಿದ್ದಾರೆ. ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ ಮಾತನಾಡಿ, ಈ ಕಾರ್ಯಾಚರಣೆ ಪ್ರತಿನಿತ್ಯ ನಡೆಯುತ್ತದೆ. ಅಂಗಡಿಕಾರರು ಹಾಗೂ ವ್ಯಾಪಾರಸ್ಥರು ಕೋವಿಡ್-19ರ ನಿಯಮ ಪಾಲನೆ ಅಗತ್ಯವಿದ್ದು, ಎಲ್ಲರೂ ಕಡ್ಡಾಯವಾಗಿ ಮಾಸ್ಕ ಧರಿಸುವದು, ದೈಹಿಕ ಅಂತರ …
Read More »ಅಗತ್ಯ ಸೇವೆ ಹೊರತು ಪಡಿಸಿ ಬೆಟಗೇರಿ ಗ್ರಾಮದಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸಲಾಗಿದೆ – ಗ್ರಾಪಂ ಪಿಡಿಒ ಎಚ್.ಎನ್.ಬಾವಿಕಟ್ಟಿ
ಬೆಟಗೇರಿ:ಕರೊನಾ 2ನೇ ಅಲೆ ಅಬ್ಬರಿಸುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ಆದೇಶದ ಮಾರ್ಗಸೂಚಿಯಂತೆ ಶನಿವಾರ ಏ.24 ಮತ್ತು ಏ.25 ಹಾಗೂ ಏ.26ರಂದು ಸೋಮವಾರ ಬೆಳಗ್ಗೆ 6 ಗಂಟೆವರೆಗೆ ಅಗತ್ಯ ಸೇವೆ ಹೊರತು ಪಡಿಸಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಸಂಪೂರ್ಣ ಲಾಕ್ಡೌನ್ ಜಾರಿಗೊಳಿಸಲಾಗಿದೆ ಎಂದು ಸ್ಥಳೀಯ ಗ್ರಾಪಂ ಪಿಡಿಒ ಎಚ್.ಎನ್.ಬಾವಿಕಟ್ಟಿ ಹೇಳಿದರು. ಬೆಟಗೇರಿ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಸ್ಥಳೀಯ ಗ್ರಾಪಂ ಮತ್ತು ಪಿಎಚ್ಸಿ ಸಹಯೋಗದಲ್ಲಿ ಕರೋನಾ 2ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ …
Read More »ಜಾತ್ರೆ,ಹಬ್ಬಗಳು ದೇಶೀಯ ಸಂಸ್ಕøತಿಯನ್ನು ಪ್ರತಿಬಿಂಬಿಸುತ್ತವೆ
ಜಾತ್ರೆ,ಹಬ್ಬಗಳು ದೇಶೀಯ ಸಂಸ್ಕøತಿಯನ್ನು ಪ್ರತಿಬಿಂಬಿಸುತ್ತವೆ ಮೂಡಲಗಿ:- ಮಾನವನ ನಾಗರೀಕತೆಯಲ್ಲಿ ಸಂಪ್ರದಾಯ ಆಚರಣೆಗಳು, ಮಹತ್ವದ ಪಾತ್ರವಹಿಸುತ್ತವೆ.ಇಂತಹ ಸಂದರ್ಭದಲ್ಲಿ ಜಾತ್ರೆ.ಹಬ್ಬಗಳು ದೇಶೀಯ ಸಂಸ್ಕøತಿಯನ್ನು ಪ್ರತಿಬಿಂಬಿಸುತ್ತವೆ ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿ ಸದಸ್ಯ ಹಾಗೂ ಗೋಕಾಕದ ಸಿದ್ಧಾರ್ಥ ಲಲಿತಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಜಯಾನಂದ ಮಾದರ ಹೇಳಿದರು. ಸಮೀಪದ ಫುಲಗಡ್ಡಿ ಗ್ರಾಮದಲ್ಲಿ ಕಳೆದ ಸೋಮವಾರದಂದು ಶ್ರೀ ಚಂದ್ರಮ್ಮ ತಾಯಿ ಹಾಗೂ ಶ್ರೀ ಶೆಟ್ಟೆಮ್ಮದೇವಿ ಮತ್ತು ಬಬಲಾದಿ ಶ್ರೀ ಸದಾಶಿವ ಮಹಾಶಿವಯೋಗಿಗಳ ಜಾತ್ರಾ ನಿಮಿತ್ಯ ಹಮ್ಮಿಕೊಂಡಿದ್ದ ಪ್ರವಚನ …
Read More »ಬುಧವಾರ ಒಂದೇ ದಿನ 301 ಜನರಿಗೆ ಸೋಂಕು ಪತ್ತೆ
ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೊನಾ ರಣಕೇಕೆ ಹಾಕಿದ್ದು. ಹೊಸದಾಗಿ ಬುಧವಾರ ಒಂದೇ ದಿನ 301 ಜನರಿಗೆ ಸೋಂಕು ಪತ್ತೆಯಾಗಿದೆ. ಇಂದು ಖಾನಾಪುರದಲ್ಲಿ 144, ಬೆಳಗಾವಿಯಲ್ಲಿ 104. ಅಥಣಿ 2, ಬೈಲಹೊಂಗಲ 5, ಚಿಕ್ಕೋಡಿ 6, ಗೋಕಾಕ 21, ಹುಕ್ಕೇರಿ 3, ರಾಮದುರ್ಗ 2, ಸವದತ್ತಿ 7 ಹಾಗೂ ಇತರೆ 7 ಜನರಿಗೆ ಸೋಂಕು ದೃಢಪಟ್ಟಿದೆ.
Read More »ಶ್ರೀರಾಮಚಂದ್ರನ ಆದರ್ಶ ಪಾಲಿಸಿ -ಪ್ರಕಾಶ ಮಾದರ
ಶ್ರೀರಾಮಚಂದ್ರನ ಆದರ್ಶ ಪಾಲಿಸಿ -ಪ್ರಕಾಶ ಮಾದರ ಮೂಡಲಗಿ: ಮರ್ಯಾದಾ ಪುರುಷ ಪುರಶೋತ್ತಮ ಪ್ರಭು ಶ್ರೀರಾಮಚಂದ್ರನ ಆದರ್ಶಮಯ ವ್ಯಕ್ತಿತ್ವದ ಪ್ರೀತಿ ವಾತ್ಸಲ್ಯ ಸಹನಾ ಮೂರ್ತಿಯ ಗುಣಗಳನ್ನು ಹೊಂದಿದ್ದ ಮಹಾನ ವ್ಯಕ್ತಿತ್ವದ ಶ್ರೀರಾಮ ಚಂದ್ರನ ಆದರ್ಶ ಗುಣ,ತತ್ವಾದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಆದರ್ಶ ಜೀವನ ಸಾಗಿಸಬೇಕೆಂದು ವಿಶ್ವ ಹಿಂದೂ ಪರಿಷತ ಅಧ್ಯಕ್ಷ ಪ್ರಕಾಶ ಮಾದರ ಹೇಳಿದರು. ಇಲ್ಲಿಯ ಗಾಂಧಿ ಚೌಕ ಹನಮಂತ ದೇವರ ದೇವಸ್ಥಾನದಲ್ಲಿ ತಾಲೂಕಾ ವಿಶ್ವ ಹಿಂದೂ ಪರಿಷತ್ ವತಿಯಿಂದ …
Read More »ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೊನಾ ರಣಕೇಕೆ
ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಕೊರೊನಾ ರಣಕೇಕೆ ಹಾಕಿದ್ದು. ಹೊಸದಾಗಿ 186 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹೌದು ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್ನಲ್ಲಿ ಜಿಲ್ಲೆಯಲ್ಲಿ ಒಟ್ಟು 186 ಕೊರೊನಾ ಪಾಸಿಟಿವ್ ಕೇಸ್ಗಳು ದೃಢಪಟ್ಟಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,120ಕ್ಕೆ ಏರಿಕೆಯಾಗಿದೆ.
Read More »ಬೆಂಗಳೂರು ಮೆಟ್ರೋ ರೈಲು ಯೋಜನೆ 2ಎ ಹಂತಕ್ಕೆ ಒಟ್ಟು 58 ಕಿ.ಮೀ. ಯೋಜನೆಯ ಪೂರ್ಣಗೊಳಿಸುವಿಕೆಗೆ ಅನುಮೋದನೆ ದೊರೆತಿದೆ
ಮೂಡಲಗಿ: ಬೆಂಗಳೂರು ಮೆಟ್ರೋ ರೈಲು ಯೋಜನೆ 2ಎ ಹಂತವನ್ನು ಕೇಂದ್ರ ಸಿಲ್ಕ್ ಬೋರ್ಡ್ ಜಂಕ್ಷನ್ನಿಂದ ಕೆ.ಆರ್. ಪುರಂ ಮತ್ತು ಹಂತ 2ಬಿ. ಕೆ.ಆರ್. ಪುರಂನಿಂದ ವಿಮಾನ ನಿಲ್ದಾಣ ಮಾರ್ಗವಾಗಿ ಹೆಬ್ಬಾಳ ಜಂಕ್ಷನ್ ಮೂಲಕ ಒಟ್ಟು 58 ಕಿ.ಮೀ. ಯೋಜನೆಯ ಪೂರ್ಣಗೊಳಿಸುವಿಕೆ ವೆಚ್ಚ 14,788 ಕೋಟಿ ರೂ.ಗಳ ಕಾಮಗಾರಿಗೆ ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ನೈರುತ್ಯ ರೈಲ್ವೆ ವಲಯ ಪ್ರಯಾಣಿಕರ ಸಲಹಾ ಮಂಡಳಿ ಸದಸ್ಯ ಈರಣ್ಣ …
Read More »
IN MUDALGI Latest Kannada News