Breaking News
Home / ಬೆಳಗಾವಿ (page 334)

ಬೆಳಗಾವಿ

ಬೆಳಗಾವಿ ಜಿಲ್ಲೆಯಲ್ಲಿ ಇಂದು 11 ಪ್ರಕರಣಗಳು ಪತ್ತೆಯಾಗಿವೆ. 

  ರಾಜ್ಯದಲ್ಲಿ ಇಂದು 1925 ಜನರಿಗೆ ಸೋಂಕು ತಗುಲಿದೆ . ಬೆಳಗಾವಿ ಜಿಲ್ಲೆಯಲ್ಲಿ ಇಂದು 11 ಪ್ರಕರಣಗಳು ಪತ್ತೆಯಾಗಿವೆ. 9 ಹೊಸ ಪ್ರಕರಣ ಇಂದು ದಾಖಲಾದರೆ,  ನಿನ್ನೆ ಇಬ್ಬರು ಸಾವನ್ನಪ್ಪಿದ್ದಾರೆ. ಅದನ್ನು ಆರೋಗ್ಯ ಇಲಾಖೆ ಇಂದು ಅಧಿಕೃತ ಘೋಷಣೆ ಮಾಡಿದೆ. ಇದುವರೆಗೆ ಕಂಡು ಪತ್ತೆಯಾಗಿರುವ ಸೋಂಕಿತರ ಸಂಖ್ಯೆ 394ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಕೊರೋನಾ ಗೆ ಒಟ್ಟು 6 ಜನ ಬಲಿಯಾಗಿದ್ದಾರೆ. ಅಥಣಿ-5, ಬೆಳಗಾವಿ ನಗರ-3, ಸವದತ್ತಿ (ಉಗರಗೋಳ)-1 ಜಿಲ್ಲೆಯಲ್ಲಿ ಮತ್ತೆರಡು ಸಾವು. ರಾಯಬಾಗ-1 ಬೆಳಗಾವಿ …

Read More »

ಜಿಲ್ಲೆಯಲ್ಲಿ ಮತ್ತೆ 27 ಜನರಿಗೆ ಸೊಂಕು ಇರುವದು ದೃಡವಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಕರ್ಮಕಾಂಡ ಮುಂದುವರೆದಿದೆ,ಜಿಲ್ಲೆಯ ಜನ ಸಂಡೇ ಲಾಕಡೌನ್ ಮೂಡ್ ನಲ್ಲಿ ಇರುವಾಗಲೇ ಈ ಮಹಾಮಾರಿ ಹೊಡೀ ಒಂಬತ್ತ್ ಎಂದಿದೆ,ಯಾಕಂದ್ರೆ ಇವತ್ತು ಒಂದೇ ದಿನ 27 ಜನ ಸೊಂಕಿತರು ಪತ್ತೆಯಾಗಿದ್ದಾರೆ. ಇಂದು ಶನಿವಾರದ ಹೆಲ್ತ್ ಬುಲೀಟೀನ್ ಬಿಡುಗಡೆಯಾಗಿದ್ದು,ಈ ಬುಲೀಟಿನ್ ನಲ್ಲಿ ಜಿಲ್ಲೆಯಲ್ಲಿ ಮತ್ತೆ 27 ಜನರಿಗೆ ಸೊಂಕು ಇರುವದು ದೃಡವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ ರಾಜ್ಯ ಹೆಲ್ತ್ ಬುಲೀಟೀನ್ ಪ್ರಕಾರ 383 ಕ್ಕೇರಿದಂತಾಗಿದೆ. ಇಂದು ರಾಜ್ಯದಲ್ಲಿ …

Read More »

ಶನಿವಾರ ಮಧ್ಯಾಹ್ನ 3 ಗಂಟೆಗೆ ಪತ್ರಿಕಾ ದಿನಾಚರಣೆ ನಿಮಿತ್ಯ ಪತ್ರಕರ್ತರಿಗೆ ಸತ್ಕಾರ ಸಮಾರಂಭ

ಹಳ್ಳೂರ: ಗ್ರಾಮದ ಗ್ರಾಮ ಪಂಚಾಯತ ಸಭಾ ಭವನದಲ್ಲಿ ಶನಿವಾರ ಮಧ್ಯಾಹ್ನ 3 ಗಂಟೆಗೆ ಪತ್ರಿಕಾ ದಿನಾಚರಣೆ ನಿಮಿತ್ಯ ಪತ್ರಕರ್ತರಿಗೆ ಸತ್ಕಾರ ಸಮಾರಂಭವು ನಡೆಯಲಿದೆ. ಗೋಕಾಕ ಹಾಗೂ ಮೂಡಲಗಿ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಹೆಗ್ಗನಾಯಕ್ ಕಾರ್ಯಕ್ರಮ ಉದ್ಘಾಟಿಸುವರು. ಗ್ರಾಪಂ ಅಧ್ಯಕ್ಷೆ ಕಲಾವತಿ ಮಿರ್ಜಿ ಅಧ್ಯಕ್ಷತೆಯನ್ನು ವಹಿಸುವರು. ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹಾಗೂ ಮೂಡಲಗಿ ಪಿಎಸ್‌ಐ ಮಲ್ಲಿಕಾರ್ಜುನ ಸಿಂಧೂರ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಪ್ರಾಚಾರ್ಯ ಹಾಗೂ ಸಾಹಿತಿ …

Read More »

ಸಾರ್ವಜನಿಕರು ಸುರಕ್ಷತೆಯ ಕಡೆಗೆ ಹೆಚ್ಚಿನ ಗಮನ ನೀಡಿ- ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ

ಗೋಕಾಕ : ವಿಶ್ವ ವ್ಯಾಪಿಯಾಗಿ ದಿನದಿಂದ ದಿನಕ್ಕೆ ಹರಡುತ್ತಿರುವ ಕೊರೋನಾ ವೈರಸ್ ಕೌಜಲಗಿಯ ಮಿರಾಳ ತೋಟಕ್ಕೂ ಪ್ರವೇಶಿಸಿದ್ದು, ಸಾರ್ವಜನಿಕರು ಸುರಕ್ಷತೆಯ ಕಡೆಗೆ ಹೆಚ್ಚಿನ ಗಮನ ನೀಡಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು. ಶುಕ್ರವಾರದಂದು ತಾಲ್ಲೂಕಿನ ಕೌಜಲಗಿ ಗ್ರಾಪಂ ಕಾರ್ಯಾಲಯದ ಆವರಣದಲ್ಲಿ ಶಾಸಕ ಮತ್ತು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ನಡೆಸಿದ ಮುಂಜಾಗ್ರತಾ ಸಭೆಯಲ್ಲಿ ಗ್ರಾಮಸ್ಥರನ್ನುದ್ಧೇಶಿಸಿ ಅವರು ಮಾತನಾಡಿದರು. ಕೌಜಲಗಿ ಗ್ರಾಮದಿಂದ …

Read More »

ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 13 ಜನರಿಗೆ ಕೊರೊನಾ ಸೊಂಕು ತಗುಲಿದೆ

ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಅರ್ಭಟ ಮುಂದುವರೆದಿದ್ದು ಇಂದು ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 13 ಜನರಿಗೆ ಕೊರೊನಾ ಸೊಂಕು ತಗುಲಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಕರಿಕಟ್ಟಿ ಗ್ರಾಮದ ಎರಡು ಕುಟುಂಬದ 8 ಸದಸ್ಯರಿಗೆ ಕೊರೊನಾ ಸೊಂಕು ತಗುಲಿದೆ. ಅದಲ್ಲದೇ ಕಳೆದ ಮೂರು ದಿನಗಳ ಹಿಂದೆ ಕಳ್ಳತನ ಆರೋಪದ ಮೇಲೆ ಬಂಧಿತನಾದ ಆರೋಪಿಗೂ ಕೊರೊನಾ ಸೊಂಕು ತಗುಲಿದೆ. ಇದರಿಂದ ಬೆಳಗಾವಿ ನಗರದ ಕ್ಯಾಂಪ ಪೋಲಿಸ್ ಠಾಣೆಯ ಸಿಬ್ಬಂದಿ ಯಲ್ಲಿ ದುಗುಡಿನ ವಾತಾವರಣ …

Read More »

ವೈದ್ಯರು ಭೂಮಿಯ ಮೇಲೆ ದೇವರ ಸ್ವರೂಪಿಯಾಗಿ ಕಾರ್ಯಮಾಡುತ್ತಾರೆ

ಮೂಡಲಗಿಯ ತಾಲ್ಲೂಕು ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಆಚರಿಸಿದ ವೈದ್ಯರ ದಿನಾಚರಣೆಯಲ್ಲಿ ವೈದ್ಯರನ್ನು ಸನ್ಮಾನಿಸಿ ಗೌರವಿಸಿದರು ಸಾಹಿತಿ ಬಾಲಶೇಖರ ಬಂದಿ ಅಭಿಮತ ‘ವೈದ್ಯರು ಭೂಮಿಯ ಮೇಲಿನ ದೇವರ ಸ್ವರೂಪಿಗಳು’ ಮೂಡಲಗಿ: ‘ವೈದ್ಯರಿಲ್ಲದ ಜಗತ್ತನ್ನು ಊಹಿಸಲಿಕ್ಕೆ ಸಾಧ್ಯವಿಲ್ಲ, ವೈದ್ಯರು ಭೂಮಿಯ ಮೇಲೆ ದೇವರ ಸ್ವರೂಪಿಯಾಗಿ ಕಾರ್ಯಮಾಡುತ್ತಾರೆ’ ಎಂದು ಸಾಹಿತಿ ಬಾಲಶೇಖರ ಬಂದಿ ಹೇಳಿದರು. ಇಲ್ಲಿಯ ತಾಲ್ಲೂಕು ಪ್ರೆಸ್ ಕ್ಲಬ್‍ದಲ್ಲಿ ಆಚರಿಸಿದ ವೈದ್ಯರ ದಿನಾಚರಣೆಯಲ್ಲಿ ಮಾತನಾಡಿದ ಅವರು ಸಮಾಜಕ್ಕೆ ವೈದ್ಯರು ನೀಡಿದ ಕೊಡುಗೆ, ಸಾಧನೆ …

Read More »

ರಾಜ್ಯಸಭಾ ನೂತನ ಸದಸ್ಯ ಈರಣ್ಣ ಕಡಾಡಿ ಅವರ ಜನಸಂಪರ್ಕ ಕಾರ್ಯಾಲಯವನ್ನು ಶುಕ್ರವಾರ ರೈತರು, ಯೋಧರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು

ಮೂಡಲಗಿ ತಾಲ್ಲೂಕಿನ ಕಲ್ಲೋಳಿಯಲ್ಲಿ ರಾಜ್ಯಸಭಾ ನೂತನ ಸದಸ್ಯ ಈರಣ್ಣ ಕಡಾಡಿ ಅವರ ಜನಸಂಪರ್ಕ ಕಾರ್ಯಾಲಯವನ್ನು ಶುಕ್ರವಾರ ರೈತರು, ಯೋಧರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು ಮೂಡಲಗಿ: ‘ರಾಜ್ಯಸಭಾ ಸದಸ್ಯತ್ವದ ಅವಧಿಯನ್ನು ಜನರ ಸೇವೆಗಾಗಿ ಪ್ರಾಮಾಣಿಕವಾಗಿ ಸದ್ವಿನಿಯೋಗಿಸಿಕೊಳ್ಳುವೆನು’ ಎಂದು ನೂತನ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಹೇಳಿದರು. ರಾಜ್ಯಸಭೆಗೆ ನೂತನವಾಗಿ ಆಯ್ಕೆಯಾಗಿರುವ ಈರಣ್ಣ ಕಡಾಡಿ ಅವರು ಕಲ್ಲೋಳಿಯಲ್ಲಿ ಶ್ರೀ ಮಹಾಲಕ್ಷ್ಮೀ ಕೋ.ಆಪ್ ಕ್ರೆಡಿಟ್ ಸೊಸೈಟಿಯ ಕಟ್ಟಡದಲ್ಲಿ ಸ್ಥಾಪಿಸಿರುವ ಜನಸಂಪರ್ಕ ಕಚೇರಿಯ …

Read More »

ಪತ್ರಿಕಾರಂಗವೂ ಎಚ್ಚರವಿದ್ದರೆ ಸಮಾಜವೇ ಎಚ್ಚರವಾಗಿರುತ್ತದೆ- ಮಲ್ಲಿಕಾರ್ಜುನ ಸಿಂಧೂರ

ಮೂಡಲಗಿ: ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗವು ಅಸ್ತವ್ಯಸ್ಥವಾದಾಗ ಸರಿಯಾದ ದಿಕ್ಕಿನತ್ತ ಸಾಗುವಂತೆ ಮಾಡುವ ಜವಾಬ್ದಾರಿ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕಾರಂಗಕ್ಕಿದೆ. ಸಮಾಜ ಸುಧಾರಣೆಗಾಗಿ ಶ್ರಮಿಸುತ್ತಿರುವ ಪತ್ರಕರ್ತರಿಗೆ ಸಮಾಜದಲ್ಲಿ ಗೌರವ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಮೂಡಲಗಿ ಪಿಎಸ್‍ಐ ಮಲ್ಲಿಕಾರ್ಜುನ ಸಿಂಧೂರ ಹೇಳಿದರು. ಅವರು ಸ್ಥಳೀಯ ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರದಿಂದ ಪತ್ರಿಕಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡ ಪತ್ರಕರ್ತರ ಸತ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತ, ಖಡ್ಗಕ್ಕಿಂತ ಲೇಖನಿ ಹರಿತವಾದದ್ದು. ಪತ್ರಿಕಾರಂಗವು ಪ್ರಜಾಪ್ರಭುತ್ವ …

Read More »

ಕೌಜಲಗಿ ಗ್ರಾಮಕ್ಕೆ ಬಂದಿದ್ದ ಓರ್ವ ಬಾಲಕಿಗೆ ಕೋರೊನಾ ದೃಢವಾಗಿದೆ.

ಮೂಡಲಗಿ : ಜಿಲ್ಲೆಯಲ್ಲಿ ಮತ್ತೇ ಕೊರೋನಾ ರುದ್ರ ನರ್ತನವನ್ನು ನಡೆಸಿದ್ದು, ತಾಲ್ಲೂಕಿನಿಂದ ತಾಲ್ಲೂಕಿಗೆ ತನ್ನ ಪಸರಿಸುವಿಕೆಯನ್ನು ಶುರು ಮಾಡಿಕೊಡಿದೆ. ಇಂದು ಗೋಕಾಕ ತಾಲೂಕಿನ ಎಂಟು ವರ್ಷದ ಓರ್ವ ಬಾಲಕಿಗೆ ಕೊರೋನಾ ತಗುಲಿದ ಬಗ್ಗೆ ಬಲ್ಲ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಗೋಕಾಕ ನಗರದ ಕೊಳಚೆ ಪ್ರದೇಶದ ಸುಮಾರು ಐವತ್ತಕ್ಕೂ ಹೆಚ್ಚು ಜನರನ್ನು ಪರೀಕ್ಷಿಸಿದಾಗ ಈ ಓರ್ವ ಬಾಲಕಿಗೆ ಕೋರೊನಾ ದೃಢವಾಗಿದೆ.ಯಾವುದೇ ಟ್ರಾವೆಲ್ಲಿಂಗ್ ಹಿಸ್ಟರಿ ಇಲ್ಲ . ಆ ಬಾಲಕಿ ಕೆಳದ ಎರಡು …

Read More »

ಮೂಡಲಗಿ ತಾಲೂಕಿನಲ್ಲಿ ಪರೀಕ್ಷೆಗಳು ಅಚ್ಚುಕಟ್ಟಾಗಿ ಮಂಡಳಿಯ ನಿಯಮಾನುಸಾರ ಜರುಗಿವೆ

ಮೂಡಲಗಿ: ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಪರೀಕ್ಷಾ ಮಂಡಳಿಯ ನಿಯಮಾನುಸಾರ ಜರುಗುತ್ತಿವೆ. ಪರೀಕ್ಷಾರ್ಥಿಗಳು ತಮ್ಮಲ್ಲಿರುವ ಜ್ಞಾನವನ್ನು ಪರೀಕ್ಷೆಯ ಮೂಲಕ ಉತ್ತಮ ಅಂಕಗಳನ್ನು ಪಡೆದು ಭವ್ಯ ಪ್ರಜೆಗಳಾಗಿ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಸಹಕಾರಿಯಾಗುವದು ಎಂದು ಚಿಕ್ಕೋಡಿ ಉಪನಿಧೇಶಕರ ಕಛೇರಿಯ ಶಿಕ್ಷಣಾಧಿಕಾರಿ ಅನಿಲಕುಮಾರ ಗಂಗಾಧರ ಅಭಿಪ್ರಾಯ ವ್ಯಕ್ತ ಪಡಿಸಿದರು. ಅವರು ಗುರುವಾರ ಜರುಗಿದ ಎಸ್.ಎಸ್.ಎಲ್.ಸಿಯ ಕನ್ನಡ ಭಾಷಾ ಪರೀಕ್ಷೆಯ ಶಿವಾಪೂರ (ಹ), ಖಾನಟ್ಟಿ, ಪಟಗುಂದಿ, ಮೂಡಲಗಿಯ ಪರೀಕ್ಷಾ ಕೇಂದ್ರಗಳಿಗೆ ಸಂದರ್ಶನ ನೀಡಿದರು. ಮೂಡಲಗಿ ತಾಲೂಕಿನಲ್ಲಿ …

Read More »