Breaking News
Home / ಬೆಳಗಾವಿ (page 35)

ಬೆಳಗಾವಿ

ಸಾಮಾಜಿಕವಾಗಿ ಕಾನೂನಾತ್ಮಕವಾಗಿ ಸಾಕಷ್ಟು ನ್ಯಾಯ ಮಹಿಳೆಯರಿಗೆ ಸಿಗವಂತಾಗಬೇಕಾಗಿದೆ : ಮುಖ್ಯೋಪಾದ್ಯಾಯಿನಿ ಗೀತಾ ಕರಗಣ್ಣಿ

ಮೂಡಲಗಿ : ಮಹಿಳೆಯರು ಸಮಾಜದಲ್ಲಿವಿರುವ ಅವಕಾಶಗಳನ್ನು ಸದುಪಯೋಗಪಡೆದುಕೊಳ್ಳಬೇಕು ಮಹಿಳೆಯರ ಸಾಮಾಜಿಕ ಸ್ಥಾನಮಾನಗಳು ಹೆಚ್ಚಾಗಿದ್ದು ಅವುಗಳ ಅರಿವು ಹೊಂದಿ ಸಾಮಾಜಿಕ ನ್ಯಾಯವನ್ನು ಪಡೆದುಕೊಂಡು ಸಮಾಜದ ಮುಖ್ಯವಾಹಿನಿ ಮಹಿಳಾ ಸಮಾಜ ಗುರ್ತಿಸಿಕೊಳ್ಳುವುದು ಅವಶ್ಯಕವಿದ್ದು ಇಂದು ಭಾರತೀಯ ಸಂವಿಧಾನದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ವಿಶೇಷ ಆಧ್ಯತೆಗಳನ್ನು ನೀಡಿದ್ದು ಅವುಗಳ ಸದುಪಯೋಗ ಇಂದಿನ ಯುವಸಮುದಾಯದ ಮಹಿಳೆಯರು ಪಡೆದುಕೊಳ್ಳುವುದು ಅವಶ್ಯಕವಿದೆ ಎಂದು ಗುರ್ಲಾಪೂರದ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ಗೀತಾ ಕರಗಣ್ಣಿ ಹೇಳಿದರು. ಪಟ್ಟಣದ ಆರ್.ಡಿ.ಎಸ್. ಕಲಾ, ವಾಣಿಜ್ಯ, …

Read More »

ಆ.24 ರಂದು ಉಪನೋಂದಣಿ ಕಛೇರಿ ಕಾರ್ಯ ನಿರ್ವಹಿಸಲಿದೆ

ಮೂಡಲಗಿ : ರಾಜ್ಯ ಸರಕಾರದ ಹಾಗೂ ನೋಂದಣಿ ಮಹಾಪರಿವೀಕ್ಷಕರ ಆದೇಶದಂತೆ ರಾಜ್ಯದ ಪ್ರತಿಯೊಂದು ಜಿಲ್ಲಾ ನೋಂದಣಿ ಕಛೇರಿ ವ್ಯಾಪ್ತಿಯಲ್ಲಿನ ಉಪನೋಂದಣಿ ಕಛೇರಿಗಳು ಸರದಿಧಿಯ ಆಧಾರದ ಮೇಲೆ ಈ ಭಾನುವಾರ ಆ.24 ರಂದು ಮೂಡಲಗಿ ಉಪನೋಂಣಿ ಕಛೇರಿ ಕಾರ್ಯ ನಿರ್ವಹಿಸಲಿದೆ. ಆ.26 ದಂದು ಮಂಗಳವಾರ ಕಛೇರಿಗೆ ರಜೆ ಇರುವದು ಎಂದು ಉಪನೋಂಣಿ ಅಧಿಕಾರಿ ಓ.ಹರಿಯಪ್ಪ ತಿಳಿಸಿದ್ದಾರೆ.  

Read More »

ಯಶಸ್ಸಿಗೆ ಕೊನೆ ಇಲ್ಲ – ಎಸ್. ಎಮ್ ಕುಂಬಾರ

ಮೂಡಲಗಿ : ನಾವು ಜೀವನದಲ್ಲಿ ಒಂದು ಗುರಿ ಇಟ್ಟುಕೊಂಡು ಅದನ್ನು ಮುಟ್ಟಿದ ತಕ್ಷಣ ಯಶಸ್ಸು ಅನ್ನಲಿಕ್ಕೆ ಆಗಲ್ಲಾ. ಯಶಸ್ಸಿಗೆ ಕೊನೆಯೆ ಇಲ್ಲಾ. ಜೀವನದ ಕೊನೆಯ ಘಟ್ಟದವರೆಗೂ ಸುಳ್ಳು ಸುದ್ದಿಗಳಿಗೆ ಕಿವಿ ಕೊಡದೇ ನಿಮ್ಮದಾರಿಯಲ್ಲಿ ನೀವು ಸಾಗಿದರೆ ಅದುವೆ ಯಶಸ್ಸು ಎಂದು ಜಮಖಂಡಿ ತಾಲೂಕಿನ ಮೈಗೂರ ಸರ್ಕಾರಿ ಪ.ಪೂ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಎಸ್. ಎಮ್ ಕುಂಬಾರ ಹೇಳಿದರು. ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ವಾಣಿಜ್ಯ ಹಾಗೂ ಬಿಸಿಎ ಮಹಾವಿದ್ಯಾಲಯದ ಸನ್ …

Read More »

ಗುರುಪುಷ್ಯಾಮೃತ ದಿನ ನಡೆದ ಕುಂಕುಮಾರ್ಚನೆ

ಮೂಡಲಗಿ ಪಟ್ಟಣದ ಢವಳೇಶ್ವರ ಕಾಲನಿಯಲ್ಲಿಯ ಶ್ರೀ ಲಕ್ಷ್ಮೀ ದೇವಿ ದೇವಸ್ಥಾನದಲ್ಲಿ ಅರ್ಚಕ ರಾಘವೇಂದ್ರ ತೆಗ್ಗಿ ನೇತೃತ್ವದಲ್ಲಿ ವಿಶ್ವ ಹಿಂದೂ ಪರಿಷತ್‍ದ ಮಾತೃಶಕ್ತಿ ವತಿಯಿಂದ ಗುರುಪುಷ್ಯಾಮೃತ ದಿನ ಗುರುವಾರದಂದು ನಡೆದ ಕುಂಕುಮಾರ್ಚನೆಯಲ್ಲಿ ಭಾಗವಹಿಸಿದ ಮಹಿಳೆಯರು.

Read More »

ಆ.24ರಿಂದ ಬೆಟಗೇರಿಯಲ್ಲಿ 41ನೇ ಸತ್ಸಂಗ ಸಮ್ಮೇಳನ *ಐದು ದಿನ ಸಂಜೆ 7:30ಗಂಟೆಗೆ ಸಕಲ ಮಹಾತ್ಮರಿಂದ ಪ್ರವಚನ* ದಾನಿಗಳಿಗೆ ಸತ್ಕಾರ* ಮಹಾಪ್ರಸಾದ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ದೇವರ ದೇವಸ್ಥಾನದಲ್ಲಿ 41ನೇ ಸತ್ಸಂಗ ಸಮ್ಮೇಳನ ಆ.24ರಿಂದ ಆ.28ತನಕ ನಡೆಯಲಿದ್ದು, ಇಲ್ಲಿಯ ಈಶ್ವರ ದೇವರ ದೇವಸ್ಥಾನದಲ್ಲಿರುವ ಈಶ್ವರ ದೇವರ ಗದ್ದುಗೆ ಐದು ದಿನ ಮುಂಜಾನೆ 6 ಗಂಟೆಗೆ ಮಹಾಪೂಜೆ, ನೈವೇದ್ಯ ಸಮರ್ಪನೆ ಜರುಗಲಿದೆ. ಆ.24ರಂದು ಸ್ಥಳೀಯ ಶ್ರೀ ಗಜಾನನ ವೇದಿಕೆ ಮೇಲೆ ಸಾಯಂಕಾಲ 7:30ಗಂಟೆಗೆ ಸುಣಧೋಳಿ ಅಭಿನವ ಶಿವಾನಂದ ಸ್ವಾಮಿಜಿ, ಭಾಗೋಜಿಕೊಪ್ಪದ ಡಾ.ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮಿಜಿ, ಇಟ್ನಾಳದ ಸಿದ್ದೇಶ್ವರ ಸ್ವಾಮಿಜಿ, ಬಿಲಕುಂದಿ …

Read More »

ಸಾರ್ವಜನಿಕರ ಬಹು ದಿನಗಳ ಬೇಡಿಕೆಯಾದ *ಪ್ರಜಾ ಸೌಧ* ನಿರ್ಮಾಣಕ್ಕೆ 8.60 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ – ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಮೂಡಲಗಿ ತಾಲ್ಲೂಕಿನ ಸಾರ್ವಜನಿಕರ ಬಹು ದಿನಗಳ ಬೇಡಿಕೆಯಾದ *ಪ್ರಜಾ ಸೌಧ* ಆಡಳಿತ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ 8.60 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಈ ಬಗ್ಗೆ ಗುರುವಾರದಂದು ಮಾಧ್ಯಮಗಳಿಗೆ ಪ್ರಕಟಣೆ ನೀಡಿರುವ ಅವರು, ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ ಎಂದವರು ತಿಳಿಸಿದ್ದಾರೆ. ಮೂಡಲಗಿ ಪಟ್ಟಣದ ಈಗಿರುವ ತಹಶೀಲ್ದಾರ ಕಛೇರಿಉ ಮುಂಭಾಗದಲ್ಲಿ ಸುಮಾರು 2 …

Read More »

ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ

ಮೂಡಲಗಿ: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಬೆಳಗಾವಿ ಜಿಲ್ಲಾ ಶಾಲಾ ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ ಜಿಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ ಬುಧವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ.

Read More »

ಬೆಟಗೇರಿ ಸುತ್ತಮುತ್ತ ಸುರಿದ ಮಳೆ, ಬೆಳೆ ನಾಶವಾಗುವ ಆತಂಕದಲ್ಲಿ ರೈತರು.!

ಬೆಟಗೇರಿ ಸುತ್ತಮುತ್ತ ಸುರಿದ ಮಳೆ, ಬೆಳೆ ನಾಶವಾಗುವ ಆತಂಕದಲ್ಲಿ ರೈತರು.! *ಅಡಿವೇಶ ಮುಧೋಳ.ಬೆಟಗೇರಿ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಹಾಗೂ ಸುತ್ತಲಿನ ಹಳ್ಳಿಗಳಲ್ಲಿ ಕಳೆದ ಹಲವು ದಿನಗಳಿಂದ ಹಗಲು-ರಾತ್ರಿ ಆಗಾಗ ಮಳೆ ಸುರಿದು, ಇಲ್ಲಿಯ ಭೂಮಿಯನ್ನು ತಂಪಾಗಿಸಿದೆ. ಒಂದಡೆ ಇಲ್ಲಿಯ ರೈತರಿಗೆ ಮಾಳೆಯಾಗಿ ಸಂತಸವಾದರೆ ಇನ್ನೂಂದಡೆ ಭೂಮಿಯಲ್ಲಿರುವ ಕೆಲವು ಬೆಳೆ ಹಾಳಾಗುವ ಆತಂಕ ಎದುರಾಗಿದೆ. ಈಗ ಮತ್ತೇ ನಾಲ್ಕೈದು ದಿನಗಳಿಂದ ಬೆಟಗೇರಿ ಗ್ರಾಮದ ಸುತ್ತ-ಮುತ್ತ ಹಗಲಿರುಳು ಆಗಾಗ ಮಳೆ ಧರೆಗಿಳಿಯುತ್ತಿದೆ. …

Read More »

ಗೋಕಾಕ ಮತ್ತು ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ

ಗೋಕಾಕ- ಮಹಾರಾಷ್ಟ್ರ ಮತ್ತು ಹಿಡಕಲ್ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ತೀರದ ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗುವ ಸಾಧ್ಯತೆಗಳು ಹೆಚ್ಚಾಗಿದ್ದು, ಕೂಡಲೇ ಅಧಿಕಾರಿಗಳು ಸಂತ್ರಸ್ತರಿಗೆ ಯಾವುದೇ ಸಮಸ್ಯೆಗಳು ಬಾರದಂತೆ ಅಗತ್ಯವಿರುವ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಂಗಳವಾರ ಸಂಜೆ ನಗರದ ನಾಕಾ ಬಳಿ ಇರುವ ಪ್ರವಾಸಿ ಮಂದಿರದಲ್ಲಿ ಗೋಕಾಕ ಮತ್ತು ಮೂಡಲಗಿ …

Read More »

ಬಸ್ ಚಾಲಕನ ಮೊಬೈಲ್ ಗೀಳು! ಪ್ರಯಾಣಿಕರ ಜೀವಕ್ಕೆ ಹೊಣೆ ಯಾರು…?

ಬಸ್ ಚಾಲಕನ ಮೊಬೈಲ್ ಗೀಳು! ಪ್ರಯಾಣಿಕರ ಜೀವಕ್ಕೆ ಹೊಣೆ ಯಾರು…? ಮೂಡಲಗಿ : ಕರ್ನಾಟಕರಸ್ತೆ ಸಾರಿಗೆ ಸಂಸ್ಥೆಯ ಗೋಕಾಕ ಘಟಕದ ಚಾಲಕರೊಬ್ಬರು ಮೊಬೈಲ್ ಬಳಕೆ ಮಾಡುತ್ತ ಚಾಲನೆ ಮಾಡಿದ್ದು, ಪ್ರಯಾಣಿಕರೊಬ್ಬರು ವಿಡಿಯೋ ಮಾಡಿದ್ದಾರೆ.ದಿನೇ ದಿನೇ ಅಪಘಾತ ಹೆಚ್ಚುತ್ತಿದು ಕಾರಣ ಮೊಬೈಲ್ ಬಳಕೆ ಒಂದು ಪ್ರಮುಖ ಕಾರಣವಾಗಿದೆ ಎನ್ನುತ್ತಾರೆ ಪ್ರಯಾಣಿಕರು. ಗೋಕಾಕ ಘಟಕದ ಚಾಲಕರೊಬ್ಬರು(ಅ, 18)ಚಾಲನಾ ಸಮಯದಲ್ಲಿ ಮೊಬೈಲ್ ಬಳಕೆ ಮಾಡಿದ್ದು ಪ್ರಯಾಣಿಕರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಶ್ರಾವಣ ಮಾಸದ …

Read More »