Breaking News
Home / ಬೆಳಗಾವಿ (page 52)

ಬೆಳಗಾವಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕಾ ಮಟ್ಟದ ಸ್ವ-ಸಹಾಯ ಸಂಘದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕಾ ಮಟ್ಟದ ಸ್ವ-ಸಹಾಯ ಸಂಘದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಉದ್ಘಾಟನೆ ಮೂಡಲಗಿ: ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಮಾತೃಶ್ರೀ ಡಾ.ಹೇಮಾವತಿ ಹೆಗ್ಗಡೆಯವರು ಜನಪರ ಹೃದಯದವರು, ರಾಜ್ಯಾದ್ಯಾಂತ ಸರಕಾರ ಮಾಡುವ ಕೆಲಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖಾಂತರ ಎಲ್ಲ ಕ್ಷೇತ್ರದಲ್ಲಿ ಮಾಡುತ್ತಿರುವ ಕಾರ್ಯ ಶ್ಲಾಘನಿಯ ಎಂದು ಮೂಡಲಗಿ ಬಿಇಒ ಅಜೀತ ಮನ್ನಿಕೇರಿ ಹೇಳಿದರು. ಅವರು ಪಟ್ಟಣದ ಅತ್ತಾರ ಸಭಾ ಭವನದಲ್ಲಿ ಶ್ರೀ ಕ್ಷೇತ್ರ …

Read More »

ಕಾರ್ಮಿಕ ವಿಮಾ ನಿಗಮದ 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಸುಮಾರು 152.2 ಕೋಟಿ ರೂ.ಗಳ ಅನುದಾನ

ಬೆಳಗಾವಿ: ಕೇಂದ್ರ ಸರ್ಕಾರವು ಬೆಳಗಾವಿ ನಗರದಲ್ಲಿ ಪ್ರಸ್ತುತ ಇರುವ ರಾಜ್ಯ ಕಾರ್ಮಿಕ ವಿಮಾ ನಿಗಮದ 50 ಹಾಸಿಗೆಗಳ ಆಸ್ಪತ್ರೆಯ ಹಳೆಯ ಕಟ್ಟಡವನ್ನು ತೆರವುಗೊಳಿಸಿ ಕೇಂದ್ರ ಕಾರ್ಮಿಕ ವಿಮಾ ನಿಗಮದ 100 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸಲು ಸುಮಾರು 152.2 ಕೋಟಿ ರೂ.ಗಳ ಅನುದಾನದಡಿ ಟೆಂಡರ ಪ್ರಕ್ರಿಯೆ ಮುಗಿದು ಹಲವು ತಿಂಗಳು ಕಳೆದರು ಇದುವೆರೆಗೆ ಕಾಮಗಾರಿ ಪ್ರಾರಂಭಗೊAಡಿರುವುದಿಲ್ಲ ಆದಷ್ಟು ಬೇಗನೇ ಆಸ್ಪತ್ರೆಯ ಕಟ್ಟಡ ಕಾಮಗಾರಿಯನ್ನು ಪ್ರಾರಂಭಿಸುವಂತೆ ರಾಜ್ಯ ಕಾರ್ಮಿಕ ವಿಮಾ ನಿಗಮದ ಪ್ರಾದೇಶಿಕ …

Read More »

ಚಾಂಪಿಯಿನ್‍ಷಿಪ್ ಮುಡಿಗೇರಿಸಿಕೊಂಡ ‘ಎಸ್‍ಬಿಇ ತಂಡ’

ಮೂಡಲಗಿಯ ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ ಮತ್ತು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಯೋಜಿಸಿದ್ದ ಎಂಪಿಎಲ್-2024 ಕ್ರಿಕೆಟ್ ಟೂರ್ನಿಯ ಚಾಂಪಿಯನ್‍ಷಿಪ ಪಡೆದ ಎಸ್‍ಬಿಇ ತಂಡದ ಮಾಲೀಕ ಈರಣ್ಣ ಜಕಾತಿ ಮತ್ತು ನಾಯಕ ಶಿವಾನಂದ ಗಾಡವಿ ಪ್ರಶಸ್ತಿ ಕಪ್‍ವನ್ನು ಪಡೆಯುತ್ತಿರುವರು. ಎಂಪಿಎಲ್-202 ಕ್ರಿಕೆಟ್ ಟೂರ್ನಿ: ಚಾಂಪಿಯಿನ್‍ಷಿಪ್ ಮುಡಿಗೇರಿಸಿಕೊಂಡ ‘ಎಸ್‍ಬಿಇ ತಂಡ’ ಮೂಡಲಗಿ: ಕನ್ನಡ ರಾಜ್ಯೋತ್ಸವ ಅಂಗವಾಗಿ ಮೂಡಲಗಿಯಲ್ಲಿ ಮಾರ್ನಿಂಗ ಸ್ಟಾರ್ಸ್ ಕ್ರಿಕೆಟ್ ಮತ್ತು ಮೂಡಲಗಿ ಲಯನ್ಸ್ ಕ್ಲಬ್ ಪರಿವಾರ ಸಹಯೋಗದಲ್ಲಿ ಆಯೋಜಿಸಿದ್ದ ‘ಎಂಪಿಎಲ್-2024’ …

Read More »

1.14 ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

1.14 ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ಮೂಡಲಗಿ ಪಟ್ಟಣದ ಪೋಲಿಸ್ ಠಾಣೆ ಹತ್ತಿರದಿಂದ ಎಸ್‍ಎಸ್‍ಆರ್ ಕಾಲೇಜ ವರೆಗಿನ ಮುಖ್ಯ ರಸ್ತೆ ಡಾಂಬರೀಕರಣ ಕಾಮಗಾರಿಗೆ ಪುರಸಭೆ ಅಧ್ಯಕ್ಷೆ ಖುರಶಾದ ಅನ್ವರ ನದಾಫ ಅವರು ಭೂಮಿ ಪೂಜೆ ನೇರವೆರಿಸಿ ಚಾಲನೆ ನೀಡಿದರು. ಅರಬಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಕಾಳಜಿ ಮೇರೆಗೆ ಪುರಸಭೆಯ ವಿವಿಧ ಯೋಜನೆ ಅಡ್ಡಿಯಲಿ 1.14 ಕೋಟಿ ರೂ ಅನುದಾನದಲ್ಲಿ ಮೂಡಲಗಿ ಪಟ್ಟಣದ …

Read More »

16ನೇ ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನದ ಆಮಂತ್ರ ಪತ್ರಿಕೆ ಬಿಡುಗಡೆ

16ನೇ ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನದ ಆಮಂತ್ರ ಪತ್ರಿಕೆ ಬಿಡುಗಡೆ ಮೂಡಲಗಿ: ಮೂಡಲಗಿ ಪಟ್ಟಣದಲ್ಲಿ ಜರುಗುವ ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನವನ್ನು ಸಾಹಿತಿಗಳೊಂದಿಗೆ ತಾಲೂಕಿನ ಸರ್ವವರು ಕೂಡಿಕೊಂಡು ಕೆಲಸ ಮಾಡಿ ಸಮ್ಮೇಳನವನ್ನು ಯಶಸ್ವಿಗೋಳಿಸೋಣ ಎಂದು ಸಮ್ಮೇಳನದ ದಿವ್ಯ ಸಾನ್ನಿಧ್ಯವಹಿಸುತ್ತಿರು ಮೂಡಲಗಿ ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿ ಶ್ರೀ ದತ್ತಾತ್ರಯಬೋಧ ಮಹಾಸ್ವಾಮೀಜಿ ಹೇಳಿದರು. ಅವರು ರವಿವಾರ ಸಂಜೆ ಪಟ್ಟಣದ ಶ್ರೀ ಶಿವಬೋಧರಂಗ ಮಠದಲ್ಲಿ ಮೂಡಲಗಿಯಲ್ಲಿ ನ.23 ಮತ್ತು 24 ರಂದು ನಡೆಯುವ …

Read More »

ಬೆಟಗೇರಿ ಪ್ರೌಢ ಶಾಲೆಯಲ್ಲಿ ನೂತನ ಶಾಲಾ ಕೊಠಡಿಗಳಿಗೆ ಭೂಮಿಪೂಜೆ

ಬೆಟಗೇರಿ ಪ್ರೌಢ ಶಾಲೆಯಲ್ಲಿ ನೂತನ ಶಾಲಾ ಕೊಠಡಿಗಳಿಗೆ ಭೂಮಿಪೂಜೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿವಿಡಿ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ನ.12ರಂದು ನೂತನ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ಕಾರ್ಯಕ್ರಮ ನಡೆಯಿತು. ಬೆಳಗಾವಿ ಜಿಲ್ಲಾ ಪಂಚಾಯತ, ಚಿಕ್ಕೋಡಿ ಪಂಚಾಯತ ರಾಜ್ ಇಂಜನೀಯರಿಂಗ್ ವಿಭಾಗ ಹಾಗೂ ಗೋಕಾಕ ಸಹಾಯಕ ಕಾರ್ಯಕಾರಿ ಅಭಿಯಂತರರು ಪಂಚಾಯತ ರಾಜ್ ಇಂಜನೀಯರಿಂಗ್ ಉಪವಿಭಾಗದ ಸಹಯೋಗದಲ್ಲಿ ಸನ್2022-23ನೇ ಸಾಲಿನ ಕೇಂದ್ರ ಯೋಜನಾ ಅನುಮೋದನಾ ಮಂಡಳಿ(ಪಿಎಬಿ)ವಾರ್ಷಿಕ …

Read More »

ಪಾಂಡಪ್ಪ  ರಂಗಪ್ಪ ಚನ್ನಾಳ ನಿಧನ

ನಿಧನ ವಾರ್ತೆ     ಮೂಡಲಗಿ: ತಾಲ್ಲೂಕಿನ ಢವಳೇಶ್ವರ ಗ್ರಾಮದ ಹಿರಿಯರ ಹಾಗೂ ಪ್ರಗತಿ ಪರ ರೈತರಾದ ಪಾಂಡಪ್ಪ ರಂಗಪ್ಪ ಚನ್ನಾಳ(95) ಮಂಗಳವಾರ ನಿಧನರಾದರು                ಪಾಂಡಪ್ಪ ರಂಗಪ್ಪ ಚನ್ನಾಳ ಅವರು  ತಮ್ಮ ಜೀವಿತ ಅವಧಿಯಲ್ಲಿ ಅರಭಾವಿ ಕಾಂಗ್ರೆಸ್ ಬ್ಲಾಕ್  ಅಧ್ಯಕ್ಷರಾಗಿ, ಗೋಕಾಕ ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ ಹಾಗೂ ಸಮೀರವಾಡಿ ಕಬ್ಬು ಬೆಳೆಗಾರ ಸಂಘದ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದರು.      …

Read More »

ತಾಲೂಕಾ ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

ತಾಲೂಕಾ ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಮೂಡಲಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ಮೂಡಲಗಿ ಯೋಜನಾ ಕಛೇರಿಯ ವ್ಯಾಪ್ತಿಯ ತಾಲೂಕಾ ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶವನ್ನು ಮಂಗಳವಾರ ನ.12 ರಂದು ಬೆಳಿಗ್ಗೆ 9 ಗಂಟೆಗೆ ಮೂಡಲಗಿಯ ಅತ್ತಾರ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯೋಜನೆಯ ಮೂಡಲಗಿ ತಾಲೂಕಾ ಯೋಜನಾಧಿಕಾರಿ ರಾಜು ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮಾವೇಶವನ್ನು ಯೋಜನೆಯ ಧಾರವಾಡ ಪ್ರಾದೇಶಿಕ ವ್ಯಾಪ್ತಿ ನಿರ್ದೇಶಕರಾದ ಶ್ರೀಮತಿ ದಯಾಶೀಲ ಅವರು ಉದ್ಘಾಟಿಸುವರು, …

Read More »

ಡಾ.ಬೆಟಗೇರಿ ಕೃಷ್ಣಶರ್ಮರು ಅಪ್ಪಟ ದೇಶಿ ಕವಿಯಾಗಿದ್ದರು:ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ

ಬೆಟಗೇರಿ:ಆನಂದಕಂದ ಕಾವ್ಯನಾಮದಿಂದ ಚಿರಪರಿತರಾಗಿರುವ ಡಾ.ಬೆಟಗೇರಿ ಕೃಷ್ಣಶರ್ಮರು ನಾಡಿನ ಶ್ರೇಷ್ಠ ಸಾಹಿತಿಯಾಗಿದ್ದರು. ಇಂದು ಪ್ರತಿಯೊಬ್ಬರೂ ಸಾಹಿತ್ಯಾಭಿರುಚಿ ಮತ್ತು ಕನ್ನಡಾಭಿಮಾನ ಬೆಳಸಿಕೊಳ್ಳಬೇಕು. ಡಾ.ಬೆಟಗೇರಿ ಕೃಷ್ಣಶರ್ಮರು ಅಪ್ಪಟ ದೇಶಿ ಕವಿಯಾಗಿದ್ದರು ಎಂದು ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಶ್ರೀ ಗಜಾನನ …

Read More »

ದಾಸೋಹ ರತ್ನ ಚಕ್ರವರ್ತಿ ದಾನೇಶ್ವರ ಶ್ರೀಗಳಿಗೆ ಸತ್ಕಾರ

ಮೂಡಲಗಿ: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರ ಕನ್ನಡ ಮತ್ತು ಸಂಸ್ಕøತ ಇಲಾಖೆಯಿಂದ “ಸುವರ್ಣ ಮಹೋತ್ಸವ” ಪ್ರಶಸ್ತಿಗೆ ಭಾಜನರಾದ ಬಂಡಿಗಣಿಯ ದಾಸೋಹ ರತ್ನ ಚಕ್ರವರ್ತಿ ದಾನೇಶ್ವರ ಶ್ರೀಗಳನ್ನು ಅರಂಭಾವಿ-ಸಂಗನಕೇರಿಯ ಶ್ರೀ ಚಕ್ರವರ್ತಿ ಕುರಿ ಸಂಗೋಪನೆ ಮತ್ತು ಉಣ್ಣಿ ಉತ್ಪಾದಕರ ಸಹಕಾರಿ ಸಂಘ ಮತ್ತು ಅರಭಾವಿ ಶ್ರೀ ಚಕ್ರವರ್ತಿ ದಾನೇಶ್ವರ ಕೃಪಾ ಸಂಚಾರಿ ಕುರುಬರ ಕುರಿ ಸಂಗೋಪನೆ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಪದಾಧಿಕಾರಿಗಳು ಸತ್ಕರಿಸಿ ಗೌರವಿಸಿದರು. ಶ್ರೀ ಚಕ್ರವರ್ತಿ …

Read More »