ಗೋಕಾಕ- ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ೧.೪೦ ಕೋಟಿ ರೂಪಾಯಿಗಳು ಮಂಜೂರಾಗಿದ್ದು, ಕಟ್ಟಡ ಕಾಮಗಾರಿಗಳನ್ನು ಗುಣಮಟ್ಟದಿಂದ ಕೈಗೊಳ್ಳಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಭಾವಿ ಕ್ಷೇತ್ರದ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲ್ಲೂಕಿನ ಖಂಡ್ರಟ್ಟಿ ಗ್ರಾಮದಲ್ಲಿ ೨೦ ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಅಂಗನವಾಡಿ ಕಟ್ಟಡಕ್ಕೆ ಗುದ್ದಲಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು, ಇದಕ್ಕಾಗಿ ನರೇಗಾ ಯೋಜನೆಯಡಿ ಅನುದಾನವನ್ನು ನೀಡಲಾಗಿದೆ ಎಂದವರು ತಿಳಿಸಿದರು. …
Read More »ಕಪರಟ್ಟಿಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರಿಂದ ಶ್ರೀದೇವಿ ಮತ್ತು ಭರಮ ದೇವರ ದೇವಸ್ಥಾನಗಳ ಉದ್ಘಾಟನೆ
ಗೋಕಾಕ: ನಮ್ಮ ಹೆತ್ತವರೇ ನಮಗೆ ನಿಜವಾದ ದೇವರು. ದೇವರ ಸ್ವರೂಪಿಯಾಗಿರುವ ತಂದೆ- ತಾಯಿಯವರಿಗೆ ಗೌರವ ನೀಡುವ ಮೂಲಕ ತಮ್ಮ ಜೀವನವನ್ನು ಸಾರ್ಥಕಗೊಳಿಸುವಂತೆ ಅರಭಾವಿ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಶುಕ್ರವಾರ ಸಂಜೆ ತಾಲ್ಲೂಕಿನ ಕಪರಟ್ಟಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀದೇವಿ ಮತ್ತು ಭರಮದೇವರ ದೇವಸ್ಥಾನದ ಉದ್ಘಾಟನೆ ಮತ್ತು ಮೂರ್ತಿ ಪ್ರಾಣ ಪ್ರತಿಷ್ಟಾಪನೆ ನೆರವೇರಿಸಿ ಮಾತನಾಡಿದ …
Read More »ನ.9 ರಂದು ಬೆಟಗೇರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನ.9 ರಂದು ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬೆಟಗೇರಿ ಕೃಷ್ಣಶರ್ಮರ ದಿವ್ಯ ಸ್ಮರಣೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆ ಸಮಾರಂಭ ಜರುಗಲಿದೆ. ಸ್ಥಳೀಯ ಕರವೇದವರ ನೇತೃತ್ವದಲ್ಲಿ ಅಂದು ಮುಂಜಾನೆ 8:30ಗಂಟೆಗೆ ಗ್ರಾಮದ ವಿವಿಧ ವೃತ್ತದಲ್ಲಿರುವ ಪುತ್ಥಳಿಗಳಿಗೆ ಪೂಜೆ, ಪುಷ್ಪಾರ್ಪಣೆ ಸಮರ್ಪಣೆ ಬಳಿಕ ಇಲ್ಲಿಯ …
Read More »ಎಂಪಿಎಲ್-2024 ಕ್ರಿಕೆಟ್ ಟೂರ್ನಿ ಉದ್ಘಾಟನೆ ‘ಕ್ರೀಡೆಗಳ ಆಯೋಜನೆಯು ಜನರಲ್ಲಿ ಸೌಹಾರ್ದತೆ ಬೆಳೆಸುತ್ತದೆ’
ಮೂಡಲಗಿಯ ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ ಮತ್ತು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಯೋಜಿಸಿದ್ದ ಎಂಪಿಎಲ್-2024 ಕ್ರಿಕೆಟ್ ಟೂರ್ನಿಯನ್ನು ಮೂಡಲಗಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ವೆಂಕಟೇಶ ಸೋನವಾಲಕರ ಉದ್ಘಾಟಿಸಿದರು. ಮೂಡಲಗಿ: ‘ಕ್ರೀಡೆಗಳ ಆಯೋಜನೆಯಿಂದ ಜನರಲ್ಲಿ ಪರಸ್ಪರ ಸೌಹಾರ್ದತೆ ಬೆಳೆಯುತ್ತದೆ’ ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೆಂಕಟೇಶ ಆರ್. ಸೋನವಾಲಕರ ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಮೈದಾನದಲ್ಲಿ ಮೂಡಲಗಿ ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ್ ಮತ್ತು ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಸಂಯುಕ್ತವಾಗಿ …
Read More »ಶಿಕ್ಷಕರಿಂದ ವಿಶೇಷ ಪಾಠ ಪ್ರವಚನ
*ಅಡಿವೇಶ ಮುಧೋಳ. ಬೆಟಗೇರಿ:ಶಿಕ್ಷಕರಿಂದ ವಿಶೇಷ ಗಮನ… ಪಾಠ ಪ್ರವಚನ… ವಿದ್ಯಾರ್ಥಿಗಳಿಂದ ವಾಗ್ದಾನ.., ಫಲಿಂತಾಂಶ ಸುಧಾರಣೆÉಗೆ ಪ್ರೇರಣೆ… ಇದೇನು.? ಎಲ್ಲಿ ಅನ್ನುತ್ತೀರಾ.! ಇದು ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ಗ್ರಾಮದ ವಿ.ವಿ.ಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ವಾಗ್ದಾನ ಎಂಬ ವಿನೂತನ ವಿಶೇಷ ಕಾರ್ಯಕ್ರಮ ನ.7ರಂದು ನಡೆಯಿತು. ಶಾಲೆಯ ಮುಖ್ಯಾಧ್ಯಾಪಕ, ಸಹಶಿಕ್ಷಕರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉತ್ಸಾಹ ತುಂಬಲು ವಿದ್ಯಾರ್ಥಿಗಳಿಂದ ವಾಗ್ದಾನ ಎಂಬ ವಿನೂತನ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳು ಸ್ವ ಸಾಮಥ್ಯದ …
Read More »ಗ್ರಾಮಸ್ಥರ ಬೇಡಿಕೆಗಳಿಗೆ ಸ್ಪಂದಿಸಿ , ಮುಂಬರುವ ದಿನಗಳಲ್ಲಿ ಅಡಿಬಟ್ಟಿ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು ಶಾಸಕ ಬಾಲಚಂದ್ರ ಜಾರಕಿಹೊಳಿ
ಅಡಿಬಟ್ಟಿ- (ತಾ.ಗೋಕಾಕ)- ಗ್ರಾಮಸ್ಥರ ಬೇಡಿಕೆಗಳಿಗೆ ಸ್ಪಂದಿಸಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಅಡಿಬಟ್ಟಿ ಮುಖ್ಯರಸ್ತೆಯಿಂದ ವಿಠ್ಠಪ್ಪ ಗುಡಿಯವರೆಗೆ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆಯನ್ನು ನೀಡಿದರು. ಇತ್ತೀಚೆಗೆ ಗೋಕಾಕ ತಾಲೂಕಿನ ಅಡಿಬಟ್ಟಿ ಗ್ರಾಮದ ವಿಠ್ಠಪ್ಪನ ದೇವರ ಜಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿಠ್ಠಪ್ಪ ದೇವಸ್ಥಾನ (ಬಸಳಿಗುಂದಿ ಮನೆಯಿಂದ ಪೂಜೇರಿ ಮನೆತನಕ) ದ ರಸ್ತೆಯನ್ನು ಸುಧಾರಿಸಲಾಗುವುದು ಎಂದು ತಿಳಿಸಿದರು. ದಂಡಿನ ಮಾರ್ಗದ ರಸ್ತೆಯಲ್ಲಿರುವ ಅಡಿಬಟ್ಟಿ ಗ್ರಾಮಸ್ಥರು ಮೊದಲಿನಿಂದಲೂ ವಿಶ್ವಾಸವನ್ನಿಟ್ಟುಕೊಂಡು ಆಶೀರ್ವಾದ ಮಾಡುತ್ತ …
Read More »Ragging ವಿರೋಧಿ ಕಾಯ್ದೆ ಹಾಗೂ Ragging ವಿರೋಧಿ ಮಾರ್ಗಸೂಚಿಗಳ ಅರಿವು ಅಗತ್ಯ – ನಾಗಪ್ಪ ಒಡೆಯರ
ಮೂಡಲಗಿ : Ragging ನಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದು ಕಾನೂನು ಬಾಹಿರ ಚಟುವಟಿಕೆಯಾಗಿದ್ದು Ragging ಪ್ರವೃತ್ತಿಯಿಂದ ವಿದ್ಯಾರ್ಥಿಗಳು ಬದಲಾಗಬೇಕು ಇಂದು ಅಧ್ಯಯನದ ಬದಲಾಗಿ ವಿದ್ಯಾರ್ಥಿಗಳ ಕಾಲೇಜು ಅವಧಿಗಳಲ್ಲಿ ತಮ್ಮ ಕೆಳದರ್ಜೆ ವಿದ್ಯಾರ್ಥಿಗಳ ಮೇಲೆ Ragging ಚಟುವಟಿಕೆಯಲ್ಲಿ ತೊಡಗಿ ಸಾಮಾಜಿಕ ಅಪರಾಧಕೃತ್ಯಗಳಲ್ಲಿ ಕಾರಣವಾಗುತ್ತಿದ್ದಾರೆ ಇದರಿಂದ ತಮ್ಮ ಅಮೂಲ್ಯವಾದ ಜೀವನವನ್ನು Ragging ಚಟುವಟಿಕೆ ಯಿಂದ ಹಾಳುಮಾಡಿಕೊಂಡು ಇನ್ನೂಬ್ಬ ವಿದ್ಯಾರ್ಥಿಯ ಭವಿಷ್ಯವನ್ನು ಹಾಳುಮಾಡುತಿರುವುದು ಸರ್ವೇಸಾಮನ್ಯವಾಗಿದೆ. ಮತ್ತು Ragging ಚಟುವಟಿಕೆ ವಿದ್ಯಾರ್ಥಿಗಳ ಮಾರಣಾಂತಿಕ ಸ್ವರೂಪಕ್ಕೆ …
Read More »ಮನೆ-ಮನೆಗೆ ಭೇಟಿ ನೀಡಿ ಜಾನುವಾರುಗಳ ನಿಖರ ಮಾಹಿತಿ ಸಂಗ್ರಹಿಸಿ ಗಣತಿ ಕಾರ್ಯವನ್ನು ಯಶಸ್ವಿಗೊಳಿಸುವಂತೆ: ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಪ್ರತಿ ಮನೆ-ಮನೆಗೆ ಭೇಟಿ ನೀಡಿ ಜಾನುವಾರುಗಳ ನಿಖರವಾದ ಮಾಹಿತಿಯನ್ನು ಸಂಗ್ರಹಿಸಿ ಗಣತಿ ಕಾರ್ಯವನ್ನು ಯಶಸ್ವಿಗೊಳಿಸುವಂತೆ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಬೆಮ್ಯುಲ್) ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಇಲ್ಲಿಯ ಎನ್ಎಸ್ಎಫ್ ಕಾರ್ಯಾಲಯದಲ್ಲಿ ಕಳೆದ ಸೋಮವಾರದಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ನಡೆಯುತ್ತಿರುವ ೨೧ ನೇ ರಾಷ್ಟೀಯ ಜಾನುವಾರು ಗಣತಿ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ …
Read More »ಮುನ್ಯಾಳ ಗ್ರಾ.ಮಂ ದಿಂದ ರಂಗಾಪೂರ ಶಾಲೆಗೆ ಟಿ.ವಿ ಕಾಣಕೆ
ಮೂಡಲಗಿ: ತಾಲೂಕಿನ ಮುನ್ಯಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ರಂಗಾಪುರ ಗ್ರಾಮದ ಸರ್ಕಾರಿ ಕನ್ನಡ ಶಾಲೆಯ ಮಕ್ಕಲಿಗೆ ಗುಣಮಟ್ಟದ ಶಿಕ್ಷಣ ಸೌಲಭ್ಯ ಹಾಗೂ ಸ್ಮಾರ್ಟ್ ಶಿಕ್ಷಣದ ಸಲುವಾಗಿ ಗ್ರಾಮ ಪಂಚಾಯತ್ ಮುನ್ಯಾಳ ಗ್ರಾಮ ಪಂಚಾಯತಿಯಿಂದ 45 ಇಂಚಿನ ಟಿ.ವಿ ಯನ್ನು ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕಾಣಕೆ ನೀಡಿದರು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಉದಯ್ ಸನದಿ, ಸದಸ್ಯರಾದ ಬಸಪ್ಪ ಮಾದರ, ಸದಸ್ಯರಾದ ಬಸವ್ವ ಮಾದರ್ ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿ …
Read More »‘ಕನ್ನಡ ನಾಡಿನ ಕೀರ್ತಿಯು ವಿಶ್ವವ್ಯಾಪ್ತಿಯಾಗಿ ಹಬ್ಬಿದೆ’- ಡಾ. ಮಹಾದೇವ ಪೋತರಾರಜ
ಮೂಡಲಗಿ ತಾಲ್ಲೂಕಿನ ಫುಲಗಡ್ಡಿಯಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಏರ್ಪಡಿಸಿದ್ದ ಜಾನಪದ ಸಮ್ಮೇಳನದಲ್ಲಿ ರೂಪಕ ಪ್ರದರ್ಶಿಸಿದ ಶಾಲಾ ಬಾಲಕರನ್ನು ಗೌರವಿಸಿದರು. ಮೂಡಲಗಿ: ‘ಕನ್ನಡ ನಾಡು, ನುಡಿ, ಸಂಸ್ಕøತಿಯ ವೈಶಿಷ್ಟ್ಯತೆಯ ಕುರಿತು ಪ್ರಾಚೀನ ಕವಿಗಳು ಬಣ್ಣಿಸಿದ್ದು, ಕನ್ನಡ ನಾಡಿನ ಕೀರ್ತಿಯು ವಿಶ್ವವ್ಯಾಪ್ತಿಯಾಗಿ ಹಬ್ಬಿದೆ’ ಎಂದು ಬನಹಟ್ಟಿ ಸರ್ಕಾರಿ ಪದವಿ ಕಾಲೇಜು ಪ್ರಾಧ್ಯಾಪಕ ಡಾ. ಮಹಾದೇವ ಪೋತರಾಜ ಹೇಳಿದರು. ತಾಲ್ಲೂಕಿನ ಫುಲಗಡ್ಡಿ ಗ್ರಾಮದ ಮಹರ್ಷಿ ವಾಲ್ಮೀಕಿ ಸಮಿತಿ, ಡಾ. ಬಿ.ಆರ್.ಅಂಬೇಡ್ಕರ್ ಯುವಕ ಸಂಘ, ಕನ್ನಡ …
Read More »