ಮೂಡಲಗಿ, ಗುರ್ಲಾಪೂರ ಕ್ರಾಸ್ ದಲ್ಲಿ ಕಳೆದ ಏಳು ದಿನಗಳಿಂದ ರೈತರು ಕಬ್ಬಿನ ದರ ನಿಗದಿಗಾಗಿ ಮಾಡುತ್ತಿರುವಂತ ಹೋರಾಟಕ್ಕೆ ಬೆಂಬಲಿಸಿ ಮೂಡಲಗಿ ಪಟ್ಟಣ ಸಂಪೂರ್ಣ ಬಂದ್ ಮಾಡಲಾಗಿತ್ತು. ಗುರುವಾರ ಮುಂಜಾನೆ ಹತ್ತು ಗಂಟೆಯಿಂದ ಸಹಕಾರಿ ಸಂಘಗಳ ಒಕ್ಕೂಟದ ಸದಸ್ಯರು, ಸಹಕಾರಿ ಸಂಘಗಳ ಪದಾಧಿಕಾರಿಗಳು, ಎಲ್ಲ ತರಹದ ವ್ಯಾಪಾರಿಗಳು, ಬೀದಿ ಬದಿ ವ್ಯಾಪಾರಿಗಳು, ಉದ್ಯಮಿಗಳು, ಎಬಿವಿಪಿ ವಿದ್ಯಾರ್ಥಿಗಳು ಸ್ವಯಂ ಪ್ರೇರಣೆಯಿಂದ ಅಂಗಡಿ-ಮುಗ್ಗಟ್ಟು, ಸಹಕಾರಿ ಸೊಸೈಟಿಗಳನ್ನು ಬಂದ್ ಮಾಡಿ ಟೈರಗೆ ಬೆಂಕಿ ಹಚ್ಚಿ ಆಕ್ರೋಶ …
Read More »ಕಲ್ಲೋಳಿಯಲ್ಲಿ ನ.10ರಂದು ಕಬ್ಬು, ಅರಿಷಿಣ ಕ್ಷೇತ್ರೋತ್ಸವ, ಹೋರಿಗಳ ಪ್ರದರ್ಶನ
ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಪ್ರಗತಿಪರ ರೈತ ಬಸವರಾಜ ಬಾಳಪ್ಪ ಬೆಳಕೂಡ ಅವರು ತೋಟದಲ್ಲಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಸಹಯೋಗದಲ್ಲಿ ನ.10ರಂದು ಬೆಳಿಗ್ಗೆ 10.30ರಿಂದ ಸಂಜೆ 5ರವರೆಗೆ ಬೆಳಗಾವಿ ವಿಭಗ ಮಟ್ಟದ ಕಬ್ಬು ಹಾಗೂ ಅರಿಷಿಣ ಬೆಳೆಯ ಕ್ಷೇತ್ರೋತ್ಸವ, ವಿಚಾರ ಸಂಕಿರಣ ಹಾಗೂ ಹಾಲು ಹಲ್ಲಿನ ಹೋರಿ ಪ್ರದರ್ಶನವನ್ನು ಏರ್ಪಡಿಸಿರುವರು. ಅರಭಾವಿ ಕಿತ್ತೂರ ರಾಣಿ ಚನ್ನಮ್ಮ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ. ಎಂ.ಜಿ. ಕೆರುಟಗಿ ಕಾರ್ಯಕ್ರಮವವನ್ನು ಉದ್ಘಾಟಿಸುವರು. ಕರ್ನಾಟಕ ಪ್ರದೇಶ …
Read More »ಆನಂದಕಂದರು ಕನ್ನಡ ನಾಡಿನ ಶ್ರೇಷ್ಠ ಸಾಹಿತಿಯಾಗಿದ್ದರು:ಸುಣಧೋಳಿ ಶಿವಾನಂದ ಶ್ರೀಗಳು
ಬೆಟಗೇರಿ:ಇಂದು ಪ್ರತಿಯೊಬ್ಬರೂ ಸಾಹಿತ್ಯಾಭಿರುಚಿ ಮತ್ತು ಕನ್ನಡಾಭಿಮಾನ ಬೆಳಸಿಕೊಳ್ಳಬೇಕು. ಆನಂದಕಂದರು ಅಪ್ಪಟದೇಶಿ ಕವಿ ಮತ್ತು ಕನ್ನಡ ನಾಡಿನ ಶ್ರೇಷ್ಠ ಸಾಹಿತಿಯಾಗಿದ್ದರು ಎಂದು ಸುಣಧೋಳಿ ಶಿವಾನಂದ ಮಹಾಸ್ವಾಮೀಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಸ್ಥಳೀಯ ಶ್ರೀ ಗಜಾನನ ವೇದಿಕೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನ.4ರಂದು ನಡೆದ …
Read More »ಬೆಟಗೇರಿ ಗ್ರಾಮ ಪಂಚಾಯತಿ ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ಮುಖ್ಯೋಪಾಧ್ಯಯರು ಸ್ಥಳೀಯ ಗ್ರಾಮ ಪಂಚಾಯತ ಗ್ರಂಥಾಲಯ ಮತ್ತು ಅರಿವು ಕೇಂದ್ರಕ್ಕೆ ಶಾಲಾ ಮಕ್ಕಳ ಓದಿಗೆ ಪ್ರಸಕ್ತ ವರ್ಷದ 6 ಮತ್ತು 7 ನೇ ತರಗತಿಯ ಪಠ್ಯ ಪುಸ್ತಕಗಳನ್ನು ನ.4 ರಂದು ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕರಿಗೆ ಉಚಿತವಾಗಿ ನೀಡಿದರು. ಈ ವೇಳೆ ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು …
Read More »ಬೆಟಗೇರಿ ಕರವೇದವರಿಂದ ಶಾಲಾ ಮಕ್ಕಳಿಗೆ ಕಾಣಿಕೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನ.1ರಂದು ನಡೆದ 70ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ವಿವಿಧ ರೂಪಕಗಳ ಮೂಲಕ ಹಲವು ಮಹನ್ ವ್ಯಕ್ತಿಗಳ ವೇಷಭೂಷಣ ಧರಿಸಿದ್ದ ಸÀ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಸುಮಾರು 86 ನೋಟ ಬುಕ್ಕ್ ಮತ್ತು ಪೆನ್ನುಗಳನ್ನು ಬೆಟಗೇರಿ ಗ್ರಾಮ ಘಟಕದ ಕರವೇ ಕಾರ್ಯಕರ್ತರು ಕಾಣಿಕೆಯಾಗಿ ನೀಡಿದರು. ಸ್ಥಳೀಯ ಉಭಯ ಪ್ರಾಥಮಿಕ ಕನ್ನಡ ಶಾಲೆಯ …
Read More »ನ.4ರಂದು ಡಾ.ಬೆಟಗೇರಿ ಕೃಷ್ಣಶರ್ಮರ ದಿವ್ಯ ಸ್ಮರಣೋತ್ಸವ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದÀಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನ.4ರಂದು ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬೆಟಗೇರಿ ಕೃಷ್ಣಶರ್ಮರ ದಿವ್ಯ ಸ್ಮರಣೋತ್ಸವ ಸಮಾರಂಭ ಜರುಗಲಿದೆ. ನ.4ರಂದು ಸಂಜೆ 7 ಗಂಟೆಗೆ ಸ್ಥಳೀಯ ಗಜಾನನ ವೇದಿಕೆ ಮೇಲೆ ಡಾ.ಬೆಟಗೇರಿ ಕೃಷ್ಣಶರ್ಮರ ದಿವ್ಯ ಸ್ಮರಣೋತ್ಸವ ಕಾರ್ಯಕ್ರಮ ಜರುಗಲಿದೆ. ಸುಣಧೋಳಿ ಅಭಿನವ ಶಿವಾನಂದ …
Read More »ಕನ್ನಡ ನಾಡು ಎಲ್ಲ ಕ್ಷೇತ್ರದಲ್ಲಿ ಬಹಳಷ್ಟು ಶ್ರೀಮಂತವಾಗಿದೆ : ಈರಣ್ಣ ಬಳಿಗಾರ
ಬೆಟಗೇರಿ:ಕನ್ನಡ ನಾಡು, ನುಡಿಗಾಗಿ ತಮ್ಮ ಬದುಕನ್ನೆ ತ್ಯಾಗ ಮಾಡಿದ ಮಹಾನ್ ವ್ಯಕ್ತಿಗಳನ್ನು ಇಂದು ಪ್ರತಿಯೊಬ್ಬರೂ ಸ್ಮರಿಸಬೇಕು. ಕನ್ನಡ ನಾಡು ಎಲ್ಲ ಕ್ಷೇತ್ರದಲ್ಲಿ ಬಹಳಷ್ಟು ಶ್ರೀಮಂತವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಘಟಕದ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಕರ್ನಾಟಕ ರಕ್ಷಣಾ ವೇದಿಕೆಯ ಗ್ರಾಮ ಘಟಕದ ಸಹಯೋಗದಲ್ಲಿ ನ.1ರಂದು ನಡೆದ 70ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ನಾಡಿನ …
Read More »ಬೆಟಗೇರಿ ಗ್ರಾಮದಲ್ಲಿ ಢಂ..ಢಂ.ಢುಂ..ಡೊಳ್ಳು ಬಡಿತ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನ.1ರಂದು ನಡೆದ 70ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ಗ್ರಾಮದ ಪ್ರಮುಖ ಬೀದಿಗಳಲ್ಲಿ ಹಮ್ಮಿಕೊಂಡ ಭುವನೇಶ್ವರಿ ಮತ್ತು ಆನಂದಕಂದರ ಭಾವ ಚಿತ್ರ ಭವ್ಯ ಮೆರವಣಿಗೆ ಕಾರ್ಯಕ್ರಮದಲ್ಲಿ ಸ್ಥಳೀಯ ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಮತ್ತು ಕರವೇ ಗ್ರಾಮ ಘಟಕದ ಅಧ್ಯಕ್ಷ ಈರಣ್ಣ ಬಳಿಗಾರ ಕೆಲವು ಹೊತ್ತು ಡೊಳ್ಳು ಬಾರಿಸಿ ಎಲ್ಲರ ಗಮನ ಸೆಳೆದರು.
Read More »ನ.1ರಂದು ಬೆಟಗೇರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲ್ಲಿ ಸ್ಥಳೀಯ ಕರ್ನಾಟಕ ರಕ್ಷಣಾ ವೇದಿಕೆ ಇವರ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭ ನ.1 ರಂದು ಜರುಗಲಿದೆ. ನ.1 ರಂದು ಬೆಳಿಗ್ಗೆ 9 ಗಂಟೆಗೆ ಸ್ಥಳೀಯ ವಿವಿಧ ವೃತ್ತದಲ್ಲಿರುವ ಮಹಾನ್ ಪುರುಷರ ಪುತ್ಥಳಿಗಳಿಗೆ ಪೂಜೆ, ಪುಷ್ಪಾರ್ಪಣೆ ಸಮರ್ಪಣೆ ಬಳಿಕ ಇಲ್ಲಿಯ ಅಶ್ವಾರೂಢ ಬಸವೇಶ್ವರ ವೃತ್ತದಿಂದ ಸಂಗೋಳ್ಳಿ ರಾಯಣ್ಣ ವೃತ್ತದವರೆಗೆ ಶಾಲಾ-ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ವಿವಿಧ ರೂಪಕಗಳ, ಜಾನಪದ ಕಲಾ ತಂಡಗಳು ಸೇರಿದಂತೆ ಸಕಲ ವಾದ್ಯಮೇಳಗಳೊಂದಿಗೆ ಭುವನೇಶ್ವರಿ …
Read More »ಯೋಜನೆಗಳ ಸದುಪಯೋಗವಾಗಲಿ’ ಕಾರ್ಮಿಕರಿಗೆ ಕಿಟ್ ವಿತರಣೆ | ಗುರುತಿನ ಚೀಟಿ ಮಾಡಿಸಿಕೊಳ್ಳಿ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ ಕಟ್ಟಡ ಕಾರ್ಮಿಕರಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, ಅಂತಹ ಯೋಜನೆಗಳ ಸದುಪಯೋಗಕ್ಕೆ ಶಾಸಕ ಮತ್ತು ಬೆವೆಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಲಹೆ ಮಾಡಿದರು. ಪಟ್ಟಣದ ಪುರಸಭೆ ಕಾರ್ಯಲಯದ ಆವರಣದಲ್ಲಿ ಕಾರ್ಮಿಕ ಇಲಾಖೆಯಿಂದ ಕಿಟ್ಗಳನ್ನು ವಿತರಿಸಿ ಮಾತನಾಡಿದ ಅವರು ಕಾರ್ಮಿಕರ ಏಳೆಗಾಗಿ ಇರುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು. ಕಟ್ಟಡಗಳ ನಿರ್ಮಾಣದಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. 60 ವರ್ಷ ಮೇಲ್ಪಟ್ಟ ನೋಂದಾಯಿತ ಕಾರ್ಮಿಕರಿಗೆ ಸರ್ಕಾರ ಪ್ರತಿ ತಿಂಗಳು 3 ಸಾವಿರ ರೂ. …
Read More »
IN MUDALGI Latest Kannada News