*ಸಿಎಂ ಭೇಟಿ ಫಿಕ್ಸ್* *ಸಂಗೊಳ್ಳಿ ರಾಯಣ್ಣ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮ* *ಮುಖ್ಯಮಂತ್ರಿ ಸಿದ್ಧರಾಮಯ್ಯ ೨೬ ರಂದು ಕಳ್ಳಿಗುದ್ದಿ, ಕೌಜಲಗಿ, ಯಾದವಾಡ ಮತ್ತು ಕಲ್ಲೊಳಿಗೆ ಆಗಮನ.* *ಸಿಎಂ ಸಿದ್ಧರಾಮಯ್ಯ ಆಗಮನದ ಹಿನ್ನೆಲೆಯಲ್ಲಿ ಕೌಜಲಗಿಯಲ್ಲಿ ಭರದ ಸಿದ್ಧತೆ.* ಗೋಕಾಕ: ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಬರುವ ಸೋಮವಾರದಂದು ಗೋಕಾಕ ಮತ್ತು ಮೂಡಲಗಿ ತಾಲ್ಲೂಕು ಪ್ರವಾಸ ಕೈಗೊಂಡಿದ್ದು, ನೂತನವಾಗಿ ನಿರ್ಮಾಣಗೊಂಡಿರುವ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಸೋಮವಾರದಂದು ಬೆಂಗಳೂರಿನಿದ ವಿಶೇಷ ವಿಮಾಣದ ಮೂಲಕ …
Read More »ಸುಕ್ಷೇತ್ರ ಹೂಲಿಕಟ್ಟಿ ಗ್ರಾಮದ ಶ್ರೀ ಬಸವ ಆಶ್ರಮದಲ್ಲಿ ಶ್ರಾವಣ ಮಾಸದ ಆಧ್ಯಾತ್ಮಿಕ ಸತ್ಸಂಗ ಕಾರ್ಯಕ್ರಮ
*ಆಧ್ಯಾತ್ಮದಿಂದ ದುಃಖ ನಿವೃತ್ತಿಯಾಗುವದು* ಹೂಲಿಕಟ್ಟಿ-ಶಿವಾಪೂರ : ಗೋಕಾಕ ತಾಲೂಕಿನ ಸುಕ್ಷೇತ್ರ ಹೂಲಿಕಟ್ಟಿ ಗ್ರಾಮದ ಶ್ರೀ ಬಸವ ಆಶ್ರಮದಲ್ಲಿ ಶ್ರಾವಣ ಮಾಸದ ಆಧ್ಯಾತ್ಮಿಕ ಸತ್ಸಂಗ ಕಾರ್ಯಕ್ರಮಗಳು ಜರುಗಿದವು. ಹೂಲಿಕಟ್ಟಿಯ ಭಜನಾ ಮಂಡಳಿ ಹಾಗೂ ಶ್ರೀ ಅಡವಿಸಿದ್ದೇಶ್ವರ ಭಜನಾ ಮಂಡಳಿ ಶಿವಾಪೂರ ಹ, ಶ್ರೀ ದುರ್ಗಾದೇವಿ ಭಜನಾ ಮಂಡಳಿ ಶಿವಾಪೂರ ಹ ಹಾಗೂ ವಿವಿಧ ಗ್ರಾಮಗಳ ಕಲಾವಿದರಿಂದ ಭಜನಾ ಕಾರ್ಯಕ್ರಮಗಳು ನಡೆದವು. ಮುಂಜಾನೆ ರುದ್ರಾಭಿಷೇಕ, ಹಾಗೂ ವರದ ಶಂಕರ ಪೂಜೆ ಶಿವಾಪೂರದ ವೇ. …
Read More »ಮೂಡಲಗಿ ಬಣಜಿಗ ಸಂಘದ 16ನೇ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ‘ಬಣಜಿಗರು ಸೌಹಾರ್ದತೆ, ಶಾಂತಿ ಪ್ರಿಯರು’
ಮೂಡಲಗಿ ತಾಲ್ಲೂಕು ಬಣಜಿಗ ಸಂಘದ 16ನೇ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸಭ್ಕಾರ ಸಮಾರಂಭದಲ್ಲಿ ಬಣಜಿಗ ಸಮಾಜದ ಹಿರಿಯ ವ್ಯಕ್ತಿಗಳನ್ನು ಸಂಸದರಾದ ಜಗದೀಶ ಶೆಟ್ಟರ ಅವರು ಸನ್ಮಾನಿಸಿದರು. ದತ್ತಾತ್ರೇಯಬೋಧ ಸ್ವಾಮಿಗಳು ಚಿತ್ರದಲ್ಲಿರುವರು. ಮೂಡಲಗಿ: ‘ಲಿಂಗಾಯತ ಎಲ್ಲ ಉಪಪಂಗಡಗಳು ಬೆಳೆಯುವುದರೊಂದಿಗೆ ಇಡೀ ವಿಶ್ವಮಟ್ಟದಲ್ಲಿ ಲಿಂಗಾಯತ ಸಮಾಜ ಒಂದೇ ಎನ್ನುವ ಬದ್ಧತೆ ಹೊಂದಬೇಕು’ ಎಂದು ಬೆಳಗಾವಿಯ ಸಂಸದ ಜಗದೀಶ ಶೆಟ್ಟರ ಹೇಳಿದರು. ಮೂಡಲಗಿಯ ಕೆ.ಎಚ್. ಸೋನವಾಲ್ಕರ್ ಕಲ್ಯಾಣ ಮಂಟಪದಲ್ಲಿ ಜರುಗಿದ ತಾಲ್ಲೂಕಾ ಬಣಜಿಗ ಸಮಾಜ …
Read More »ಅರಭಾವಿ ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಅವಿರೋಧವಾಗಿ ಅಯ್ಕೆ
ಮೂಡಲಗಿ- ತಾಲ್ಲೂಕಿನ ಅರಭಾವಿ ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಬಿಜೆಪಿಯ ರೇಣುಕಾ ಸಂಜು ಮಾದರ ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿಯ ರಾಜಶ್ರೀ ಅಪ್ಪಯ್ಯ ಗಂಗನ್ನವರ ಅವರು ಅವಿರೋಧವಾಗಿ ಅಯ್ಕೆಯಾಗಿದ್ದಾರೆ. ತಾಲ್ಲೂಕಿನ ಅರಭಾವಿ ಪಟ್ಟಣ ಪಂಚಾಯತಿಯ ಸಭಾ ಭವನದಲ್ಲಿ ಜರುಗಿದ ನೂತನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ. ಅಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನವು ಹಿಂದುಳಿದ ಅ ವರ್ಗ ಮಹಿಳೆಗೆ ಮೀಸಲಿದ್ದರಿಂದ ಉಭಯ …
Read More »ವಿದ್ಯಾರ್ಥಿಗಳು ಸ್ಮಾರ್ಟ್ ಕ್ಲಾಸ್ ಉಪಯೋಗವನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
ಘಟಪ್ರಭಾ: ನಮ್ಮ ಮಕ್ಕಳು ಸ್ಪರ್ಧಾತ್ಮಕ ಯುಗದಲ್ಲಿ ಆಧುನಿಕ ತಂತ್ರಜ್ಞಾನ ಮೂಲಕ ಶಿಕ್ಷಣ ಕಲಿತರೇ ಮುಂದಿನ ದಿನಗಳಲ್ಲಿ ಮಕ್ಕಳಿಗೆ ಅನುಕೂಲವಾಗುತ್ತದೆ ಎನ್ನುವ ಉದ್ದೇಶವಿದ್ದು, ವಿದ್ಯಾರ್ಥಿಗಳು ಸ್ಮಾರ್ಟ್ ಕ್ಲಾಸ್ ಉಪಯೋಗವನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಮಂಗಳವಾರ ಆ 20 ರಂದು ಮಲ್ಲಾಪೂರ ಪಿ.ಜಿ ಪಟ್ಟಣದ ಪಿ.ಎಂ ಶ್ರೀ ಸರಕಾರಿ ಹಿರಿಯ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ರಾಜ್ಯಸಭಾ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನಿರ್ಮಿಸಿರುವ …
Read More »ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಗಳ ತರಬೇತಿ ಶಿಬಿರ
ಕೃಷಿ ಪರಿಕರ ಮಾರಾಟಗಾರರಿಗೆ ವಿಸ್ತರಣಾ ಸೇವೆಗಳ ತರಬೇತಿ ಶಿಬಿರ ಉದ್ಘಾಟನೆ ಮೂಡಲಗಿ: ಕೃಷಿ ಪರಿಕರ ಮಾರಟಾಗಾರರು ವ್ಯಾಪಾರ ಮನೋಬಾವ ಬಿಟ್ಟು ಸೇವಾ ಮನೋಬಾವದ ಕಡೆ ತಿರುಗಿ ಮತ್ತು ರೈತರಿಗೆ ಸರಿಯಾದ ಸಲಹೆಗಳನ್ನು ನೀಡಬೇಕು ಮತ್ತು ಆಧುನಿಕತೆ, ಯಾಂತ್ರಿಕತೆಯಿಂದ ಭೂಮಿ ಫಲವತ್ತತೆಯು ಕಡಿಮೆ ಆಗುತ್ತಿದೆ ಆದ್ದರಿಂದ ಮಣ್ಣಿನ ಸಂರಕ್ಷಣೆ ಕಡೆ ಗಮನ ಹರಿಸಿ ಮಣ್ಣಿನ ಫಲವತ್ತತೆಯನ್ನು ಕಾಪಾಡಬೇಕೆಂದು ಎಂದು ತಿಳಿಸಿದರು ಧಾರವಾಡ ಕೃಷಿ ವಿಶ್ವ ವಿದ್ಯಾಲಯ ಪ್ರಾಧ್ಯಪಕರು ಹಾಗೂ ದೇಶಿ ರಾಜ್ಯ …
Read More »ಶ್ರೀ ಮಡ್ಡಿ ವೀರಭದ್ರೇಶ್ವರ ಮಹಾದ್ವಾರದ ಉದ್ಘಾಟನಾ ಸಮಾರಂಭವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಿದರು.
ಚುನಾವಣೆ ಫಲಿತಾಂಶಕ್ಕೆ ತಲೆ ಕೆಡಿಸಿಕೊಳ್ಳದೆ ಪಂಚ ಗ್ಯಾರಂಟಿ ಮುಂದುವರಿಕೆ: ಲಕ್ಷ್ಮೀ ಹೆಬ್ಬಾಳಕರ್ ಮೂಡಲಗಿ : ರಾಜ್ಯದ ನಮ್ಮ ಕಾಂಗ್ರೆಸ್ ಸರಕಾರ ಜನರಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಚುನಾವಣೆಯ ಫಲಿತಾಂಶಕ್ಕೂ ತಲೆಕೆಡಿಸಿಕೊಳ್ಳದೆ ಜನರಿಗೋಸ್ಕರ ತಂದಿರುವ ಐದೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸದೆ ಮುಂದುವರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಅವರು ಮಂಗಳವಾರದಂದು ಪಟ್ಟಣದ ಈರಣ್ಣ ನಗರದ ಶ್ರೀ ಮಡ್ಡಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ, ರಾಜಗೋಪುರದ …
Read More »ಪಟ್ಟಣದ ಈರಣ್ಣ ನಗರ ವೀರಭದ್ರೇಶ್ವರ ರಥೋತ್ಸವ
ಮೂಡಲಗಿ: ಪಟ್ಟಣದ ಈರಣ್ಣ ನಗರ ಮಡ್ಡಿ ವೀರಭದ್ರೇಶ್ವರ ರಥೋತ್ಸವ ಮಂಗಳವಾರದಂದು ವಿವಿಧ ವಾಧ್ಯಮೇಳ ಮತ್ತು ವಿವಿಧ ದೇವರುಗಳ ಪಲ್ಲಕ್ಕಿಗಳೊಂದಿಗೆ ಸಡಗರ ಸಂಭ್ರಮದಿಂದ ಜರುಗಿತು.
Read More »ಅಭಿವೃದ್ಧಿಗಾಗಿ ಸರಕಾರದ ವಿವಿಧ ಯೋಜನೆಗಳನ್ನು ಒದಗಿಸಲಾಗಿದೆ. ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಪಕ್ಷಪಾತ ಮಾಡಿಲ್ಲ- ಶಾಸಕರು ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ಸಾಮಾಜಿಕವಾಗಿ, ಧಾರ್ಮಿಕವಾಗಿ ಸಮಾಜದ ವಿವಿಧ ಚಟುವಟಿಕೆಗಳಿಗೆ ಸುಸಜ್ಜಿತವಾದ ಅಂಬೇಡ್ಕರ ಭವನವನ್ನು ಸಧ್ಭಳಕೆ ಮಾಡಿಕೊಳ್ಳುವಂತೆ ಶಾಸಕ ಮತ್ತು ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಡಾ. ಬಿ.ಆರ್. ಅಂಬೇಡ್ಕರ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜಕ್ಕೆ ಅನುಕೂಲವಾಗಲು ಈ ಭವನವನ್ನು ನಿರ್ಮಿಸಿದ್ದು, ಸ್ವಚ್ಛತೆಯ ಜತೆಗೆ ಉತ್ತಮ ಕಾರ್ಯಗಳಿಗೆ ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಬಾಂಧವರಲ್ಲಿ ಕೋರಿದರು. ದಲಿತರ …
Read More »ಅಖಂಡ ಭಾರತದ ಸೌರ್ಹಾದತೆಗೆ ಪ್ರತಿಜ್ಞೆ ಸ್ವೀಕಾರ ಅಗತ್ಯ – ಪ್ರೋ ಸಂಗಮೇಶ ಕುಂಬಾರ
ಆರ್.ಡಿ.ಎಸ್. ಸಂಸ್ಥೆ ಆಯೋಜಿಸಿದ ಸದ್ಬಾವನಾ ದಿನಾಚರಣೆ ಮೂಡಲಗಿ : ಅಖಂಡ ಭಾರತದ ಸೌರ್ಹಾದತೆ ವಿದ್ಯಾರ್ಥಿಗಳಲ್ಲಿ ಬೆಳಸುವ ಕಾರ್ಯ ಪ್ರಸ್ತುತ ದಿನಗಳಲ್ಲಿ ಅವಶ್ಯಕವಾಗಿದೆ ಭಾರತ ವಿಶ್ವದ ಶಕ್ತಿಯಾಗಿ ಬೆಳಯುವಲ್ಲಿ ನಮ್ಮ ಒಗಟ್ಟಿನ ಸಾಮರ್ಥ್ಯದ ಅಗತ್ಯತೆಯನ್ನು ತೋರಿಸುವದಕ್ಕಾಗಿ ಸಾಮಾಜಿಕ ಸ್ವಾಸ್ಥö್ಯವನ್ನು ಕಾಪಾಡುವ ಸಲುವಾಗಿ ಮತ್ತು ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇದಬಾವವಿಲ್ಲದೇ ಭಾರತದ ಸಮಗ್ರತೆಗೆ ಆಧ್ಯತೆ ನೀಡಬೇಕೆಂದು ಉಪನ್ಯಾಸಕ ಸಂಗಮೇಶ ಕುಂಬಾರ ಹೇಳಿದರು. ಪಟ್ಟಣದ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ …
Read More »