ನ.1ರಂದು ಬೆಟಗೇರಿಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ *ಭುವನೇಶ್ವರಿದೇವಿ-ಡಾ.ಬೆಟಗೇರಿ ಕೃಷ್ಣಶರ್ಮರ ಭಾವಚಿತ್ರದ ಭವ್ಯ ಮೇರವಣಿಗೆ* ಆನಂದಕಂದರ ದಿವ್ಯ ಸ್ಮರಣೋತ್ಸವ ಸಮಾರಂಭ ಬೆಟಗೇರಿ:ಗ್ರಾಮದ ಕರ್ನಾಟಕ ರಕ್ಷಣಾ ವೇದಿಕೆ, ಗ್ರಾಮ ಪಂಚಾಯತಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಡಾ.ಬೆಟಗೇರಿ ಕೃಷ್ಣಶರ್ಮರ ದಿವ್ಯ ಸ್ಮರಣೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆ ಸಮಾರಂಭ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ನ.1 ರಂದು ಜರುಗಲಿದೆ. …
Read More »ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ
*ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ* *ಶಿವಾಪೂರ(ಹ) ಗ್ರಾಮದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದ ಅರಭಾವಿ ಶಾಸಕ* ಮೂಡಲಗಿ: ನಮ್ಮ ಸರ್ಕಾರವು ಆಡಳಿತದಲ್ಲಿದ್ದಾಗ ಅಭಿವೃದ್ಧಿ ಕಾರ್ಯಗಳಿಗೆ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಿದ್ದೇವು. ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದೇವು. ಆದರೀಗ ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರವಿರುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನವನ್ನು ಬಿಡುಗಡೆ ಮಾಡುತ್ತಿಲ್ಲವೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಸಮಧಾನ ವ್ಯಕ್ತಪಡಿಸಿದರು. ತಾಲೂಕಿನ ಶಿವಾಪೂರ(ಹ) ಗ್ರಾಮದಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ …
Read More »ಶಿರಹಟ್ಟಿ ಫಕೀರೇಶ್ವರ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ
ಶ್ರೀದೇವಿಯು ಮಹಾನ್ ಶಕ್ತಿ ದೇವತೆಯಾಗಿದ್ದಾಳೆ: ಜಗದ್ಗುರು ಫಕೀರಸಿದ್ಧರಾಮ ಮಹಾಸ್ವಾಮಿಜಿ ಶ್ರೀದೇವಿ ಪುರಾಣ ಪ್ರವಚನ ಮಂಗಲೋತ್ಸವ ಶಿರಹಟ್ಟಿ ಫಕೀರೇಶ್ವರ ಜಗದ್ಗುರುಗಳ ಅಡ್ಡಪಲ್ಲಕ್ಕಿ ಮಹೋತ್ಸವ ಮಾಸಿಕ ಶಿವಾನುಭವ ಬೆಟಗೇರಿ:ದುಷ್ಟರನ್ನು ಸಂಹಾರ ಮಾಡಿ, ಶಿಷ್ಟರನ್ನು ರಕ್ಷಣೆ ಮಾಡಿದ ಶ್ರೀದೇವಿಯು ಮಹಾನ್ ಶಕ್ತಿ ದೇವತೆಯಾಗಿದ್ದಾಳೆ. ದೇವಿಯ ಪುರಾಣವೆಂದರೆ ದೇಹದ ಪುರಾಣವಿದ್ದಂತೆ ದೇಹದಲ್ಲಿರುವ ಅವಗುಣಗಳನ್ನು ಕಳೆದುಕೊಳ್ಳುವುದೇ ರಾಕ್ಷಸರ ಸಂವಹಾರವಿದ್ದಂತೆ ಎಂದು ಶಿರಹಟ್ಟಿ ಜಗದ್ಗುರು ಫಕೀರೇಶ್ವರ ಸಂಸ್ಥಾನಮಠದ ಜಗದ್ಗುರು ಫಕೀರಸಿದ್ಧರಾಮ ಮಹಾಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಮಮದಾಪೂರ ಗ್ರಾಮದ …
Read More »ಏಕ ಭಾರತ- ಶ್ರೇಷ್ಠ ಭಾರತ ದೃಷ್ಟಿಯ ಸಾಕಾರ- ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ
ಏಕ ಭಾರತ- ಶ್ರೇಷ್ಠ ಭಾರತ ದೃಷ್ಟಿಯ ಸಾಕಾರ- ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ:- ದೇಶಾದ್ಯಂತ ಸಂಗ್ರಹಿಸಿರುವ ಮಣ್ಣಿನಿಂದ ಅಮೃತ ಉದ್ಯಾನವನ್ನು ರಚಿಸಲಾಗಿದ್ದು, ಅದು ಏಕ ಭಾರತ- ಶ್ರೇಷ್ಠ ಭಾರತ ದೃಷ್ಟಿಯನ್ನು ಸಾಕಾರಗೊಳಿಸುತ್ತದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್ ಎಸ್ ಎಫ್ ಕಚೇರಿಯಲ್ಲಿ ದೆಹಲಿಯ ಕರ್ತವ್ಯ ಪಥದಲ್ಲಿ ಬರುವ ಮಂಗಳವಾರದಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಅರಭಾವಿಯಿಂದ ಭಾಗವಹಿಸಲಿರುವ ಕಾರ್ಯಕರ್ತರಿಗೆ ಅಮೃತ ಕಳಶವನ್ನು ದೆಹಲಿಗೆ …
Read More »ನಿಜಗುಣ ದೇವರ ಷಷ್ಠಬ್ಧಿ ಸಂಭ್ರಮದ ಪ್ರಚಾರ ಪತ್ರಿಕೆ ಬಿಡುಗಡೆಗೊಳಿಸಿದ ಶ್ರೀಗಳು
ನಿಜಗುಣ ದೇವರ ಷಷ್ಠಬ್ಧಿ ಸಂಭ್ರಮದ ಪ್ರಚಾರ ಪತ್ರಿಕೆ ಬಿಡುಗಡೆಗೊಳಿಸಿದ ಶ್ರೀಗಳು ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿಜಿ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದ ಪೀಠಾಧಿಪತಿಗಳಾದ ಶ್ರೀ ನಿಜಗುಣ ದೇವರ ಷಷ್ಠಬ್ಧಿ ಸಂಭ್ರಮ ಕಾರ್ಯಕ್ರಮಕ್ಕೆ ಬರುವ ಮಹ್ಮಾತರು ತೃಪ್ತಿಯಿಂದ ಹೊಂದಿದರೆ ಈ ಭಾಗ ಸಮೃದ್ಧಿಯಾಗುತ್ತದೆ. ಕಾರ್ಯಕ್ರಮಕ್ಕೆ ಎಲ್ಲ ಸಂಪ್ರದಾಯದ ಸ್ವಾಮೀಜಿಗಳು ಬಂದು ಈ ಭಾಗಕ್ಕೆ ಆರ್ಶಿವಾದ ನೀಡುತ್ತಾರೆ ಎಂದು ಹುಕ್ಕೇರಿಯ ಗುರುಶಾಂತೇಶ್ವರ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಬರುವ ಜನವರಿ 1 …
Read More »ಕ್ರೈಸ್ತರು ಶಾಂತಿ ಪ್ರೀಯರು ಸೇವಾ ಮನೋಭಾವವುಳ್ಳವರು- ಶಾಸಕ ರಮೇಶ ಜಾರಕಿಹೊಳಿ
ಮೂಡಲಗಿ: ಕ್ರೈಸ್ತರು ಶಾಂತಿ ಪ್ರೀಯರು ಸೇವಾ ಮನೋಭಾವವುಳ್ಳವರು, ದೇಶಕ್ಕೆ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಗಳ ಮೂಲಕ ಹಿಂದುಳಿದ ಜನರನ್ನು ಮುಖ್ಯವಾಹಿನಿಗೆ ತಂದಿದ್ದಾರೆ. ಯೇಸುಸ್ವಾಮಿಯ ಸಂದೇಶದಂತೆ ಒಗ್ಗಟ್ಟಾಗಿ ಬಾಳಿ ಬುದಕಿ ಎಂದು ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ಅವರು ಶನಿವಾರ ಸಂಜೆ ಪಟ್ಟಣದ ಮೆಥೋಡಿಸ್ಟ್ ಚರ್ಚ ಆಶ್ರಯದಲ್ಲಿ ಭಕ್ತಿ ಸಂಜೀವನ ಕೂಟಗಳು ಎರಡನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಮಾತನಾಡಿ, ಭಾರತ ದೇಶದಲ್ಲಿ ಎಲ್ಲ …
Read More »ಸರಕಾರ ಕೂಡಲೇ ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಬಿಡುಗಡೆಗೊಳಿಸಬೇಕು-ಕಟ್ಟಿಕಾರ
ಸರಕಾರ ಕೂಡಲೇ ಜಾತಿ ಗಣತಿ ವರದಿಯನ್ನು ಅಂಗೀಕರಿಸಿ ಬಿಡುಗಡೆಗೊಳಿಸಬೇಕು-ಕಟ್ಟಿಕಾರ ಮೂಡಲಗಿ: ಕರ್ನಾಟಕ ಸರ್ಕಾರ ನಡೆಸಿರುವ ಜಾತಿ ಗಣತಿ ವರದಿಯನ್ನು ಅಂಗೀಕರಿಸಿ, ಬಿಡುಗಡೆಗೊಳಿಸಿ, ರಾಜ್ಯದ ಜನಸಂಖ್ಯೆಯಲ್ಲಿ ಶೇ. 85%ರಷ್ಟಿರುವ ಅಲ್ಪಸಂಖ್ಯಾತ-ಹಿಂದುಳಿದ-ದಲಿತ (ಅಹಿಂದ) ವರ್ಗಗಳಿಗೆ ಆಗುತ್ತಿರುವ ಅನ್ಯಾಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರಿಪಡಿಸ ಬೇಕು ಎಂದು ಅಹಿಂದ ಚೇತನ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ವಿನಾಯಕ ಕಟ್ಟಿಕಾರ ಆಗ್ರಹಿಸಿದರು. ರವಿವಾರದಂದು ಮೂಡಲಗಿ ಪತ್ರಿಕಾ ಕಛೇರಿಯಲ್ಲಿ ಕರೆದ ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 2016ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ನಡೆಸಿರುವ …
Read More »ಮೂಡಲಗಿಯಲ್ಲಿ ನ.೧ರಿಂದ ಮೂಡಲಗಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಆಯೋಜನೆ
ಮೂಡಲಗಿಯಲ್ಲಿ ನ.೧ರಿಂದ ಮೂಡಲಗಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮೂಡಲಗಿ: ಮೂಡಲಗಿ ಪಟ್ಟಣದಲ್ಲಿ ಪ್ರಪ್ರಥಮ ಬಾರಿಗೆ ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ್ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಆರು ತಂಡಗಳಿಂದ ಮೂಡಲಗಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯನ್ನು ನ.೧ ರಿಂದ ೫ರವರಿಗೆ ಐದು ದಿನಗಳ ಕಾಲ ಮೂಡಲಗಿ ಶಿಕ್ಷಣ ಸಂಸ್ಥೆಯ ಕ್ರೀಡಾ ಮೈದಾನದಲ್ಲಿ ಏರ್ಪಡಿಸಲಾಗಿದೆ ಎಂದು ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ …
Read More »ರಕ್ತದಾನದಿಂದ ಒಂದು ಜೀವ ಉಳಿಸಿದ ಪುಣ್ಯವು ದಾನಿಗೆ ದೊರೆಯುತ್ತದೆ’ – ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಂ.ಎಸ್. ಕೊಪ್ಪದ
ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಂ.ಎಸ್. ಕೊಪ್ಪದ ಅವರು ರಕ್ತದಾನ ಮಾಡಿರುವ ಸಂಜಯ ಮೋಕಾಶಿ ಅವರಿಗೆ ಪ್ರಮಾಣ ಪತ್ರ ನೀಡಿದರು. ———————————————– ರಕ್ತದಾನ ಶ್ರೇಷ್ಠ ದಾನವಾಗಿದೆ ಮೂಡಲಗಿ: ‘ರಕ್ತದಾನದಿಂದ ಒಂದು ಜೀವ ಉಳಿಸಿದ ಪುಣ್ಯವು ದಾನಿಗೆ ದೊರೆಯುತ್ತದೆ’ ಎಂದು ಮೂಡಲಗಿ, ಗೋಕಾಕ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಂ.ಎಸ್. ಕೊಪ್ಪದ ಹೇಳಿದರು. ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬೆಳಗಾವಿ ಜಿಲ್ಲಾ …
Read More »ನಮ್ಮ ಧರ್ಮವನ್ನು ಪ್ರೀತಿಸಿ, ಅನ್ಯ ಧರ್ಮವನ್ನು ಗೌರವಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ನಮ್ಮ ಧರ್ಮವನ್ನು ಪ್ರೀತಿಸಿ, ಅನ್ಯ ಧರ್ಮವನ್ನು ಗೌರವಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಮೆಥೋಡಿಸ್ಟ್ ಚರ್ಚ ಆಶ್ರಯದಲ್ಲಿ ಜರುಗಿದ ಭಕ್ತಿ ಸಂಜೀವನ ಕೂಟಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಭಾರತದಲ್ಲಿ ನಾನಾ ಜಾತಿ-ಧರ್ಮಗಳಿದ್ದರೂ ವಿವಿಧತೆಯಲ್ಲಿ ಏಕತೆಯನ್ನು ಬಿಂಬಿಸುತ್ತಿರುವ ನಮ್ಮ ದೇಶವು ಪ್ರಪಂಚದಲ್ಲಿ ಜಾತ್ಯಾತೀತ ರಾಷ್ಟ್ರವಾಗಿದ್ದು, ನಮ್ಮ ಧರ್ಮವನ್ನು ಪ್ರೀತಿಸುವುದರ ಜೊತೆಗೆ ಬೇರೆ ಧರ್ಮಗಳ ಬಗ್ಗೆ ಅಭಿಮಾನ ಹಾಗೂ ಗೌರವವನ್ನು ಹೊಂದಬೇಕೆಂದು ಶಾಸಕ, ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ …
Read More »