Breaking News
Home / ರಾಜ್ಯ (page 39)

ರಾಜ್ಯ

ಮೂಡಲಗಿ : ಇತ್ತೀಚೆಗೆ ಪಟ್ಟಣದ ಅಶ್ವಿನಿ ಮಾರುತಿ ಬಿರಡಿ ಎಂಬ ವಿದ್ಯಾರ್ಥಿನಿ ಬಾಗಲಕೋಟೆಯ ರಾಜೀವಗಾಂಧಿ ವಿಶ್ವವಿದ್ಯಾಲಯದ ಸಜ್ಜಲಶ್ರೀ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಎಮ್.ಎಸ್,ಸ್ಸಿ ನರ್ಸಿಂಗ್ ಓಬಿಜಿ ವಿಭಾಗದ ಪರೀಕ್ಷೆಯಲ್ಲಿ ೮೩.೭೪% ರಷ್ಟು ಅಂಕ ಪಡೆದು ಚಿನ್ನದ ಪದಕ ಪಡೆದುಕೊಂಡಿದ್ದರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಆಯೋಜಿಸಲಾದ ಮಹಿಳಾ ದಿನಾಚರಣೆಯಲ್ಲಿ ಅತ್ಯುತ್ತಮ ಕಾರ್ಯಕರ್ತೆ ಎಂಬ ಪ್ರಶಸ್ತಿಗೆ ಸುಜಾತ ಕೊಕಟನೂರ ಪಡೆದುಕೊಂಡ ಹಿನ್ನಲೆ ಅವರನ್ನಿ ಸೋಮವಾರದಂದು ಪಟ್ಟಣದ ಅಂಗನವಾಡಿ ಕಾರ್ಯಕರ್ತೆಯರು ಸತ್ಕರಿಸಿ …

Read More »

ನಜೀರ್ ಅಹ್ಮದ್ ಕಂಗನೊಳ್ಳಿ ಅವರಿಗೆ ಎಮ್ ಎಲ್ ಸಿ ಸ್ಥಾನ ನೀಡಲು ಪೀರಜಾದೆ ಒತ್ತಾಯ

ಮೂಡಲಗಿ : ಬಾಗಲಕೋಟ ಜಿಲ್ಲಾ ಕಾಂಗ್ರೇಸ್ ಪಕ್ಷದ ಉಪಾಧ್ಯಕ್ಷರಾಗಿ ಹಾಗೂ ಕೆ.ಪಿ.ಸಿ.ಸಿ ಸದಸ್ಯರಾಗಿ ಕಾಂಗ್ರೇಸ ಪಕ್ಷದ ಸಂಘಟಣೆಗಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಜಮಖಂಡಿ ನಗರದ ನಜೀರಅಹ್ಮದ ಅಬ್ಬಾಸಅಲಿ ಕಂಗನೊಳ್ಳಿ ಅವರನ್ನು ವಿಧಾನ ಪರಿಷತ್ತಿನಲ್ಲಿ ಖಾಲಿ ಇರುವ 4 ಸ್ಥಾನಗಳ ಪೈಕಿ ವಿಧಾನ ಪರಿಷತ್ತಿಗೆ ಆಯ್ಕೆ ಮಾಡಬೇಕೆಂದು ಪಟ್ಟಣದ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸಾಕೀಬ ಪೀರಜಾದೆ ಒತ್ತಾಯಿಸಿದರು. ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ಗುರುವಾರದಂದು ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಗಲಕೋಟ ಜಿಲ್ಲೆಯಲ್ಲಿ …

Read More »

ಬೆಟಗೇರಿ ಅರಿವು ಕೇಂದ್ರದ ಮೇಲ್ವಿಚಾರಕನಿಗೆ ಮೆಚ್ಚುಗೆ, sslc ವಿದ್ಯಾರ್ಥಿಗಳಿಗೆ ಸಹಾಯ, ಸಹಕಾರ

ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕರಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಕಲಿಕೆಗೆ ಸಹಕಾರ.! *ಅಡಿವೇಶ ಮುಧೋಳ. ಬೆಟಗೇರಿ:ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಹೆಚ್ಚು ಅಂಕ ಗಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಕಲಿಕೆಗೆ ಪ್ರೋತ್ಸಾಹಿಸಿ, ಸಹಾಯ, ಸಹಕಾರ ನೀಡಿ, ವಿದ್ಯಾರ್ಥಿಗಳ ಕಾಳಜಿ ಮಾಡುತ್ತಿರುವ ಬೆಟಗೇರಿ ಗ್ರಾಮ ಪಂಚಾಯ್ತಿ ಗ್ರಂಥಾಲಯ ಮತ್ತು ಅರಿವು ಕೇಂದ್ರದ ಮೇಲ್ವಿಚಾರಕ ಬಸವರಾಜ ಪಣದಿ ಅವರ ವಿಶೇಷ ಕಾರ್ಯವೈಖರ್ಯ ಮೆಚ್ಚುವಂತಹದಾಗಿದೆ. ಬೆಟಗೇರಿ …

Read More »

ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಬಿಡುಗಡೆ – ಸಚಿವ ಸತೀಶ್ ಜಾರಕಿಹೊಳಿ

  ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಬಿಡುಗಡೆ – ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ನಾಳೆ ದಿನಾಂಕ. 27 ರಿoದ  ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಹರಿಸಲಾಗುತ್ತಿದ್ದು, ಒಟ್ಟು ೬ ದಿನಗಳವರೆಗೆ ೨ ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ. ನಾಳೆ ಗುರುವಾರದಂದು ಸಂಜೆ ೬ ಗಂಟೆಯಿಂದ ಘಟಪ್ರಭಾ ನದಿಗೆ ನೀರು …

Read More »

ಮಾ.29ರಿಂದ ಏ.1ರ ವರೆಗೆ ಅರಭಾವಿ ದುರದುಂಡೀಶ್ವರ ಜಾತ್ರೆ

ಮೂಡಲಗಿ: ತಾಲ್ಲೂಕಿನ ಅರಭಾವಿಯ ಜಗದ್ಗುರು ದುರದುಂಡೀಶ್ವರ ಪುಣ್ಯಾರಣ್ಯ ಸಿದ್ಧ ಸಂಸ್ಥಾನಮಠದ ಜಾತ್ರೆಯು ಪೀಠಾಧಿಪತಿ ಗುರುಬಸವಲಿಂಗ ಸ್ವಾಮಿಗಳ ಸಾನಿಧ್ಯದಲ್ಲಿ ಮಾ. 29ರಿಂದ ಏ. 1ರ ವರೆಗೆ ಜರುಗಲಿದೆ. ಮಾ. 29ರಂದು ಸಂಜೆ 6ಕ್ಕೆ ಹುಕ್ಕೇರಿಯ ವಿರಕ್ತಮಠದ ಶಿವಬಸವ ಸ್ವಾಮಿಗಳ ಅಧ್ಯಕ್ಷತೆಯಲ್ಲಿ ಶಿವಾನುಭವ ಕಾರ್ಯಕ್ರಮ ಇರುವುದು. ಪ್ರಜಾವಾಣಿ ಪತ್ರಿಕೆಯ ಬೆಳಗಾವಿ ಜಿಲ್ಲಾ ಹಿರಿಯ ವರದಿಗಾರ, ಸಾಹಿತಿ ಸಂತೋಷ ಚಿನಗುಡಿ ಅವರು ‘ವಚನ ಮತ್ತು ಪ್ರಮಾಣ ವಚನ: ಆಧುನಿಕ ಜೀವನ ಮತ್ತು ಅನುಷ್ಠಾನ” ಕುರಿತು …

Read More »

ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

*ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ* ಮೂಡಲಗಿ: ಮುಸ್ಲಿಂ ಮೀಸಲಾತಿಗಾಗಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಯನ್ನು ಖಂಡಿಸಿ ಮಂಗಳವಾರದoದು ಮೂಡಲಗಿಯ ಕಲ್ಮೇಶ್ವರ ವೃತ್ತದಲ್ಲಿ ಬಿಜೆಪಿ ಅರಭಾವಿ ಮಂಡಲ ವತಿಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ನಡೆಸಿ ಡಿ.ಕೆ.ಶಿವಕುಮಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮಂತರ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್ ಮಾತನಾಡಿ, ಬಹು ಸಂಖ್ಯಾತ ಹಿಂದುಗಳಿಗೆ …

Read More »

ವಿಧಾನಸಭಾ ಸ್ಪೀಕರ್ ಅವರು ಬಿಜೆಪಿ ಶಾಸಕರನ್ನು ಅಮಾನತು ಮಾಡಿ ರಾಜ್ಯ ಸರಕಾರದ ತಾಳಕ್ಕೆ ತಕ್ಕಂತೆ ಕುಣಿದಿದ್ದಾರೆ- ಸಂಸದ ಈರಣ್ಣ ಕಡಾಡಿ

ಮೂಡಲಗಿ: ವಿಧಾನಸಭಾ ಸ್ಪೀಕರ್ ಅವರು ಬಿಜೆಪಿ ಶಾಸಕರನ್ನು ಅಮಾನತು ಮಾಡಿ ರಾಜ್ಯ ಸರಕಾರದ ತಾಳಕ್ಕೆ ತಕ್ಕಂತೆ ಕುಣಿದಿದ್ದಾರೆ. 18 ಬಿಜೆಪಿಯ ಶಾಸಕರನ್ನು 6 ತಿಂಗಳ ಕಾಲ ಅಮಾನತುಗೊಳಿಸುವ ಕುರಿತು ಏಕಪಕ್ಷೀಯ ನಿರ್ಣಯ ತೆಗೆದುಕೊಂಡಿದ್ದಾರೆ ಇದು ಸರ್ವಾಧಿಕಾರಿ ಧೋರಣೆ ತೋರುತ್ತದೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸಭಾಧ್ಯಕ್ಷರ ನಡೆಯನ್ನು ವಿರೋಧಿಸಿದರು. ರವಿವಾರ ಮಾ-23 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ …

Read More »

ಬಯಲಾಟ ಕಲಾ ಪ್ರದರ್ಶನಕ್ಕೆ ಸಾಮಾಜಿಕ ಆದ್ಯತೆ ದೊರೆಯಬೇಕು ಬಯಲಾಟಗಳು ನಾಡಿನ ಶ್ರೀಮಂತ ಕಲೆಗಳಾಗಿವೆ -ಪ್ರೊ. ಕೆ.ಆರ್.ದುರ್ಗಾದಾಸ್

ಮೂಡಲಗಿ ತಾಲೂಕಿನ ಅರಭಾವಿ ಗ್ರಾಮದಲ್ಲಿ ಕರ್ನಾಟಕ ಬಯಲಾಟ ಅಕಾಡೆಮಿಯ ವತಿಯಿಂದ  ಜರುಗಿದ ದೊಡ್ಡಾಟ-ಸಣ್ಣಾಟ ಸಂಭ್ರಮ ಸಮಾರಂಭವನ್ನು ಜಾನಪದ ಚಿಂತಕ ಡಾ. ಗುರುಪಾದ ಮರೆಗುದ್ದಿ ಉದ್ಘಾಟಿಸಿದರು.   ಬಯಲಾಟ ಕಲಾ ಪ್ರದರ್ಶನಕ್ಕೆ ಸಾಮಾಜಿಕ ಆದ್ಯತೆ ದೊರೆಯಬೇಕು ಬಯಲಾಟಗಳು ನಾಡಿನ ಶ್ರೀಮಂತ ಕಲೆಗಳಾಗಿವೆ -ಪ್ರೊ. ಕೆ.ಆರ್.ದುರ್ಗಾದಾಸ್ ಮೂಡಲಗಿ: ಬಯಲಾಟವು ಮನರಂಜನೆಯೊಂದಿಗೆ ಬದುಕಿನ ವಿವೇಕ, ನೈತಿಕತೆ, ಸೌಹಾರ್ದ ಮನೋಭಾವ, ಕೂಡುಬಾಳ್ವೆ ಮುಂತಾದ ಮೌಲ್ಯಗಳನ್ನು ಪ್ರಸಾರ ಮಾಡುತ್ತ ಬಂದಿದ್ದು, ಗ್ರಾಮೀಣ ಪ್ರದೇಶದ ಎಲ್ಲಾ ಜಾತಿ-ಧರ್ಮಗಳ ಜನ …

Read More »

ಮಕ್ಕಳನ್ನು ಸಮಾಜದಲ್ಲಿ ಒಳ್ಳೆಯ ನಾಗರಿಕರಾಗಿ ಮಾಡುವುದು ಮಹಿಳೆಯರ ಪಾತ್ರ ಮುಖ್ಯ – ನ್ಯಾಯಾಧೀಶೆ ಜ್ಯೋತಿ ಪಾಟೀಲ

*ಮಹಿಳಾ ದಿನಾಚರಣೆ ಮತ್ತು ಕಿತ್ತೂರ ರಾಣಿ ಚನ್ನಮ್ಮ ಜಿಲ್ಲಾ ಯುವ ಪ್ರಶಸ್ತಿ ಪ್ರಧಾನ* *ಮಕ್ಕಳನ್ನು ಸಮಾಜದಲ್ಲಿ ಒಳ್ಳೆಯ ನಾಗರಿಕರಾಗಿ ಮಾಡುವುದು ಮಹಿಳೆಯರ ಪಾತ್ರ ಮುಖ್ಯ – ನ್ಯಾಯಾಧೀಶೆ ಜ್ಯೋತಿ ಪಾಟೀಲ* ಮೂಡಲಗಿ: ಇಂದಿನ ತಂತ್ರಜ್ಞಾನ ಯುಗದಲ್ಲಿ ಮಹಿಳೆಯು ಎಲ್ಲ ರಂಗದಲ್ಲಿ ತಮ್ಮ ತಾವು ಗುರುತಿಸಿಕೊಂಡಿದ್ದು, ಪ್ರತಿಯೋಬ್ಬರು ಕನಿಷ್ಠ ಕಾನೂನಿನ ಜ್ಞಾನವನ್ನು ತಿಳಿದುಕೊಂಡು ತಮ್ಮ ಮಕ್ಕಳನ್ನು ಶಿಕ್ಷಣವಂತರನ್ನಾಗಿಸಿ ಸಮಾಜದಲ್ಲಿ ಒಳ್ಳೆಯ ನಾಗರಿಕರಾಗಿ ಮಾಡುವುದು ತಮ್ಮೆಲ್ಲರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಮೂಡಲಗಿ …

Read More »

ಧಾರವಾಡವರೆಗಿನ ವಂದೇ ಭಾರತ ರೈಲನ್ನು ಬೆಳಗಾವಿಯವರೆಗೆ ವಿಸ್ತರಿಸುವ ದಿನಾಂಕ ಆದಷ್ಟು ಬೇಗ ಘೋಷಿಸಿ- ಸಂಸದ ಈರಣ್ಣ ಕಡಾಡಿ

ಬೆಳಗಾವಿ: ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಭೇಟಿಯಾಗಿ ಧಾರವಾಡವರೆಗಿನ ವಂದೇ ಭಾರತ ರೈಲನ್ನು ಬೆಳಗಾವಿಯವರೆಗೆ ವಿಸ್ತರಿಸುವ ದಿನಾಂಕವನ್ನು ಆದಷ್ಟು ಬೇಗ ಘೋಷಿಸುವುದು ಮತ್ತು ಬೆಳಗಾವಿ ಮಿರಜ್‌ ನಡುವೆ ಮೆಮೊ ರೈಲು ಸಂಚಾರ ಪ್ರಾರಂಭಿಸುವುದು ಹಾಗೂ ಮುಂಬೈ-ಹೊಸಪೇಟೆ (ರೈಲು ಸಂಖ್ಯೆ 111139/40) ಮತ್ತು ಸೊಲ್ಹಾಪುರ-ಹೊಸಪೇಟೆ (ರೈಲು ನಂ .11415/16) ವರೆಗೆ ಇರುವ ಈ ರೈಲುಗಳನ್ನು ಬಳ್ಳಾರಿ ರೈಲ್ವೆ ನಿಲ್ದಾಣಕ್ಕೆ ವಿಸ್ತರಿಸುವಂತೆ …

Read More »