Breaking News
Home / ರಾಜ್ಯ (page 4)

ರಾಜ್ಯ

ಬೆಟಗೇರಿ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಮಳೆಗೆ ಕಬ್ಬು ಬೆಳೆ ನಾಶ.!

ಬೆಟಗೇರಿ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಮಳೆಗೆ ಕಬ್ಬು ಬೆಳೆ ನಾಶ.! *ಅಡಿವೇಶ ಮುಧೋಳ.ಬೆಟಗೇರಿ ಗೋಕಾಕ ತಾಲೂಕಿನ ಬೆಟಗೇರಿ ಸುತ್ತಲಿನ ಹಳ್ಳಿಗಳಲ್ಲಿ ಕಳೆದ ಒಂದು ವಾರದಿಂದ ಆಗಾಗ ಹಗಲುರಾತ್ರಿ ಧಾರಾಕಾರ ಸುರಿದ ಮಳೆಯಿಂದ ಇಲ್ಲಿಯ ಭೂಮಿಯನ್ನು ತಂಪಾಗಿಸಿದೆ. ಅಲ್ಲದೇ ವಾರದಿಂದ ಸುರಿಯುತ್ತಿರುವ ಮಳೆ ನೀರಿಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಆದರೆ ಇಲ್ಲಿಯ ರೈತರಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ ಹೋಗಿದೆ.! ಈ ಮಳೆ ಹಗಲಿರುಳು ಬಿಡದೆ ಆಗಾಗ ಸುರಿದು ಗ್ರಾಮದ ಹಾಗೂ …

Read More »

‘ಗ್ರಾಮೀಣ ಜನರ ಕಾಮಧೇನು ಕಲ್ಲೋಳಿಯ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ

‘ಗ್ರಾಮೀಣ ಜನರ ಕಾಮಧೇನು ಕಲ್ಲೋಳಿಯ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ’ ಸರಳತೆಯ ಸಂತ ವಿಜಯಪುರ ಜ್ಞಾನಯೋಗಾಶ್ರಮದ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಅಮೃತ ಹಸ್ತದಿಂದ ಫೆಬ್ರುವರಿ 16 2002 ರಲ್ಲಿ ಕಲ್ಲೋಳಿಯಲ್ಲಿ ಗ್ರಾಮೀಣ ಪ್ರದೇಶದ ಜನರ ಆರ್ಥಿಕ ಸ್ವಾವಲಂಬನೆ ಸಾಧಿಸಲು ನೆರವಾಗುವ ಗುರಿಯೊಂದಿಗೆ ಶ್ರೀ ಈರಣ್ಣ ಕಡಾಡಿ ಅವರ ನೇತೃತ್ವದಲ್ಲಿ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ಪ್ರಾರಂಭವಾಯಿತು. ಆರಂಭದಲ್ಲಿ ಕೇವಲ 320 ಸದಸ್ಯರು, ರೂ.3.22 ಲಕ್ಷ ಶೇರು …

Read More »

ಬೆಟಗೇರಿ ಗ್ರಾಮದಲ್ಲಿ ವೈಭವದ ಬನ್ನಿ ವಿನಿಮಯ

ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಿಜಯದಶಮಿ ಹಬ್ಬದ ಪ್ರಯುಕ್ತ ಪುರ ಜನರಿಂದ ಬನ್ನಿ ವಿನಿಮಯ ಕಾರ್ಯಕ್ರಮ ಗುರುವಾರ ಅ.2 ರಂದು ವೈಭವದಿಂದ ನಡೆಯಿತು. ಸ್ಥಳೀಯ ಎಲ್ಲ ದೇವರ ದೇವಾಲಯಗಳಲ್ಲ್ಲಿ ಪುರ ಜನರಿಂದ ಪೂಜೆ, ಪುನಸ್ಕಾರ, ದೀಪೋತ್ಸವ ಕಾರ್ಯಕ್ರಮ ಸಡಗರದಿಂದ ನಡೆಯಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಪುರದೇವರ ಪಲ್ಲಕ್ಕಿ ಉತ್ಸವ ವಿಜೃಂಭನೆಯಿಂದ ಜರುಗಿದ ಬಳಿಕ ಇಲ್ಲಿಯ ಡಾ. ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಗ್ರಾಮಸ್ಥರು ಬನ್ನಿ ಪೂಜೆ, ಪುರದೇವರ ಪಲ್ಲಕ್ಕಿಗಳಿಗೆ ಬನ್ನಿ ವಿನಿಮಯ …

Read More »

ಬೆಟಗೇರಿ ಗ್ರಾಮದ ವಿವಿಧಡೆ ಗಾಂಧಿ ಮತ್ತು ಶಾಸ್ತ್ರಿ ಜನ್ಮ ದಿನ ಆಚರಣೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲಬಹುದ್ದೂರ್ ಶಾಸ್ತ್ರಿ ಜನ್ಮ ದಿನಾಚರಣೆಯನ್ನು ಅ.2ರಂದು ನಡೆಯಿತು. ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಅವರು ಗಾಂಧಿ ಮತ್ತು ಶಾಸ್ತ್ರಿ ಭಾವ ಚಿತ್ರಕ್ಕೆ ಪೊಜೆ, ಪುಷ್ಪಾರ್ಪನೆ ನೆರವೇರಿಸಿ ಮಾತನಾಡಿ, ಮಹಾತ್ಮ ಗಾಂಧಿ ಮತ್ತು ಲಾಲಬಹದ್ದೂರ್ ಶಾಸ್ತ್ರಿ ಅವರು ದೇಶಕ್ಕಾಗಿ ತಮ್ಮ ಬದುಕನ್ನೇ ತ್ಯಾಗ ಮಾಡಿದ ಸಂಗತಿಗಳ ಕುರಿತು ತಿಳಿಸಿದರು. ಶಾಲೆಯ ಎಸ್‍ಡಿಎಮ್‍ಸಿ ಅಧ್ಯಕ್ಷ ರಾಮಣ್ಣ ನೀಲಣ್ಣವರ, ಶಿಕ್ಷಕರಾದ …

Read More »

ಅ-04 ರಂದು ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ನೂತನ ಪ್ರಧಾನ ಕಛೇರಿಯ ಉದ್ಘಾಟಣೆ

ಮೂಡಲಗಿ: ಕಲ್ಲೋಳಿಯ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘದ ನೂತನ ಪ್ರಧಾನ ಕಛೇರಿಯ ಉದ್ಘಾಟನಾ ಸಮಾರಂಭವು ಶನಿವಾರ ಅ-04 ರಂದು ಮಧ್ಯಾಹ್ನ 3.00 ಗಂಟೆಗೆ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಮೈದಾನದಲ್ಲಿ ಉದ್ಘಾಟನಾ ಸಮಾರಂಭವು ಜರುಗಲಿದೆ ಎಂದು ಸಂಸ್ಥಾಪಕ ಅಧ್ಯಕ್ಷರು ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಗುರುವಾರ ಅ-02 ರಂದು ಸಹಕಾರಿಯ ಸಭಾ ಭವನದಲ್ಲಿ ಪ್ರತಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಸಂಸ್ಥೆಯು ಕಳೆದ 23 ವರ್ಷಗಳಿಂದ ಸಹಕಾರಿ …

Read More »

ಪ್ರಥಮವಾಗಿ ಸಮೀಕ್ಷಾ ಕಾರ್ಯ ಪೂರ್ಣಗೊಳಿಸಿದ ಶಿಕ್ಷಕನಿಗೆ ತಾಲೂಕಾಡಳಿದಿಂದ ಸನ್ಮಾನ

ಮೂಡಲಗಿ:ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸೆ.22 ರಿಂದ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ತಮಗೆ ವಹಿಸಿದ್ದ ಕರ್ತವ್ಯವನ್ನು ಕೇವಲ 8 ದಿನಗಳಲ್ಲಿ ಪ್ರ ಪ್ರಥಮವಾಗಿ ಪೂರ್ಣಗೊಳಿಸಿದ ಶಿಕ್ಷಕ ಅಶೋಕ ಬಸಳಿಗುಂದಿ ಅವರನ್ನು ತಾಲೂಕಾ ಆಡಳಿತದಿಂದ ತಹಸೀಲ್ದಾರ ಶ್ರೀಶೈಲ ಗುಡುಮೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಪಿ ಬಿ ಹಿರೇಮಠ ಅವರು ಸತ್ಕರಿಸಿ ಅಭಿನಂದಿಸಿದರು. ಮೂಡಲಗಿ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿರುವ ಇವರಿಗೆ ಹನ್ನೊಂದನೇ ವಾರ್ಡಿನ …

Read More »

ಅ.2ರಂದು ಬೆಟಗೇರಿ ಗ್ರಾಮದಲ್ಲಿ ಲೋಡೊ ಕಿಂಗ್ ಆಟದ ಸ್ಪರ್ಧೆ

ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಮಹಾನವಮಿ ಪ್ರಯುಕ್ತ ಪ್ರಪ್ರಥಮ ಭಾರಿಗೆ ಗುರುವಾರ ಅ.2ರಂದು ಮುಂಜಾನೆ 11:30 ಗಂಟೆಗೆ ಸ್ಥಳೀಯ ಶ್ರೀ ಯಲ್ಲಾಲಿಂಗ ಮಠದಲ್ಲಿ ಲೋಡೊ ಕಿಂಗ್ ಆಟದ ಸ್ಪರ್ಧೆ ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಹಲವಾರು ಜನ ಪ್ರಾಯೋಜಕರು ಆಕರ್ಷಕ ನಗದು ಬಹುಮಾನ ನೀಡಲಿದ್ದಾರೆ. ತಮ್ಮ ಹೆಸರು ನೊಂದಾಯಿಸಲು ಮತ್ತು ಮಾಹಿತಿಗಾಗಿ ಮೊಬೈಲ್ ನಂ:6362934612, 9535324957, 6360215701 ಸಂಪರ್ಕಿಸಬೇಕು ಎಂದು ಸ್ಫರ್ಧೆ ಆಯೀಜಕ ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.

Read More »

ಕಲ್ಲೋಳಿ: ಜಗನ್ಮಾತೆಗೆ ವಿಶೇಷ ಪೂಜೆ  

ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ಸದ್ಗುರು ಶ್ರೀ ಯಲ್ಲಾಲಿಂಗೇಶ್ವರ ಮಠದಲ್ಲಿ 5ನೇ ವರ್ಷದ ನವರಾತ್ರಿ ಉತ್ಸವದ ನಿಮಿತ್ಯ ಪ್ರತಿಷ್ಠಾಪಿಸಿದ ಶ್ರೀ ದುರ್ಗಾ ಮಾತೆಗೆ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಶ್ರೀ ಚಕ್ರ ರುದ್ರಾಭಿಷೇಕ ಕಾರ್ಯಕ್ರಮ ಮಂಗಳವಾರ ನೆರವೇರಿತು,  ಶ್ರೀ ಮತ್ಯುಂಜಯ ಈರಯ್ಯ ಹಿರೇಮಠ ಹಾಗೂ ಶ್ರೀ ಗುರುಸಿದ್ದಯ್ಯ ಸಿದ್ದಲಿಂಗಯ್ಯ ಹಿರೇಮಠ ಮತ್ತು ಶ್ರೀ ಮಹಾಂತೇಶ ಮಹಾದೇವ ಗೋರೋಶಿ ಅವರು ರುದ್ರಾಭಿಷೇಕ ಕಾರ್ಯಕ್ರಮ ನೆರವೇರಿಸಿದರು ಹಾಗೂ ಮುತೈದೆಯರಿಂದ ಗ್ರಾಮದ ಆದಿದೇವತೆ  ಮಹಾಲಕ್ಷ್ಮೀ …

Read More »

*ದೀಕ್ಷಾ ಭೂಮಿ ಯಾತ್ರೆಗೆ ಚಾಲನೆ ನೀಡಿದ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ*

ಗೋಕಾಕ- ಬೌದ್ಧ ಧರ್ಮವು ಜಾತಿ ಪದ್ಧತಿ ವ್ಯವಸ್ಥೆಯನ್ನು‌ ತಿರಸ್ಕರಿಸಿ ಸಾಮಾಜಿಕ ಸಮಾನತೆಗೆ ಒತ್ತು ನೀಡುತ್ತದೆ ಎಂದು ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿಯವರು ‌ಹೇಳಿದರು. ಇಲ್ಲಿನ ಎಸ್ಎಸ್ಎಫ್ ಕಚೇರಿಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಮಂಗಳವಾರ ಜರುಗಿದ ದೀಕ್ಷಾ ಭೂಮಿ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ನವಯಾನ ಬೌದ್ಧ ಧರ್ಮದ ಆವೃತ್ತಿಯಾಗಿದೆ ಎಂದು ತಿಳಿಸಿದರು. ನಮ್ಮ ದೇಶಕ್ಕೆ ಸಂವಿಧಾನವನ್ನು ರಚಿಸಿಕೊಟ್ಟ ಡಾ. ಅಂಬೇಡ್ಕರ್ ಅವರು ಪ್ರಜಾ ಪ್ರಭುತ್ವ ದೇಶವಾಗಲು ಅನೇಕ ಕೊಡುಗೆಗಳನ್ನು …

Read More »

*ನಿಪ್ಪಾಣಿ ಕ್ಷೇತ್ರದಿಂದ ಅಣ್ಣಾಸಾಹೇಬ ಜೊಲ್ಲೆಯವರ ಆಯ್ಕೆ ಖಚಿತ- ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*

ಬೆಳಗಾವಿ:  ಅಕ್ಟೋಬರ್ 19 ರಂದು ನಡೆಯುವ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಿಪ್ಪಾಣಿ ಕ್ಷೇತ್ರದಿಂದ ಸ್ಪರ್ಧೆ ಮಾಡಲಿರುವ ನಿಯೋಜಿತ ಅಭ್ಯರ್ಥಿ ಅಣ್ಣಾಸಾಹೇಬ್ ಜೊಲ್ಲೆಯವರ ಆಯ್ಕೆ ನಿಶ್ಚಿತವೆಂದು ಬೆಮುಲ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಸೋಮವಾರದಂದು ನಗರದ ಹೊರವಲಯದಲ್ಲಿರುವ ಖಾಸಗಿ ಹೊಟೇಲ್ ನಲ್ಲಿ ಆಯೋಜಿತಗೊಂಡಿರುವ ನಿಪ್ಪಾಣಿ ಕ್ಷೇತ್ರದ ಪಿಕೆಪಿಎಸ್ ಸದಸ್ಯರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಡಿಸಿಸಿ ಬ್ಯಾಂಕ್ ಅಧಿಕಾರ ಚುಕ್ಕಾಣಿ ಹಿಡಿಯಲು ಈಗಾಗಲೇ ರಣತಂತ್ರಗಳನ್ನು ರೂಪಿಸಿದ್ದೇವೆ ಎಂದು …

Read More »