ಬೆಳಗಾವಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಬೆಳಗಾವಿ ಜಿಲ್ಲೆಯ 5 ಲಕ್ಷ 29 ಸಾವಿರ ರೈತರ ಬ್ಯಾಂಕ್ ಖಾತೆಗಳಿಗೆ 105.86 ಕೋಟಿ ರೂ. ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಿದ್ದಾರೆ ಇದು ಅನ್ನದಾತರ ಕಲ್ಯಾಣವೇ ಮೋದಿ ಸರ್ಕಾರದ ಆದ್ಯತೆಯಾಗಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನು ಶ್ಲಾಘಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಸದ ಈರಣ್ಣ ಕಡಾಡಿ ಅವರು ಬಿಹಾರ ರಾಜ್ಯದ …
Read More »‘ಶಿಕ್ಷಣವು ಮಕ್ಕಳ ಭವಿಷ್ಯದೊಂದಿಗೆ ದೇಶದ ಭವಿಷ್ಯ ನಿರ್ಧರಿಸುತ್ತದೆ”- ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ
ಮೂಡಲಗಿಯ ವಿಶ್ವಭಾರತಿ ಶಿಕ್ಷಣ ಸಂಸ್ಥೆಯ ಶಾಂತಿನಿಕೇತ£ ರೂ. 10 ಲಕ್ಷ ವೆಚ್ಚದ ಸಂಸದರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ನಿರ್ಮಿಸುತ್ತಿರುವ ಶಾಲಾ ಕೊಠಡಿ ಕಟ್ಟಡ ನಿರ್ಮಾಣಕ್ಕೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಸೋಮವಾರ ಭೂಮಿ ಪೂಜೆ ನೆರವೇರಿಸಿದರು. ಮೂಡಲಗಿ: ‘ಶಿಕ್ಷಣವು ಮಕ್ಕಳ ಭವಿಷ್ಯ ನಿರ್ಮಿಸುವ ಜೊತೆಗೆ ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ’ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಸೋಮವಾರ ಮೂಡಲಗಿ ವಿಶ್ವಭಾರತಿ ಶಿಕ್ಷಣ ಸಂಸ್ಥೆಯ ಶಾಂತಿನಿಕೇತನ ಕನ್ನಡ ಮಾಧ್ಯಮ ಪೂರ್ವ …
Read More »ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಅನಧಿಕೃತ ವಸ್ವತ್ತುಗಳಿಗೂ ಸಹ ಇ- ಖಾತಾ ಅಭಿಯಾನಕ್ಕೆ ಚಾಲನೆ
ಮೂಡಲಗಿ – ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿನ ಅನಧಿಕೃತ ವಸ್ವತ್ತುಗಳಿಗೂ ಸಹ ಇ- ಖಾತಾ ಅಭಿಯಾನವು ನಡೆಯಲಿದ್ದು, ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕರೆ ನೀಡಿದರು. ಶನಿವಾರದಂದು ಪುರಸಭೆ ಆವರಣದಲ್ಲಿ ಜರುಗಿದ ಇ – ಖಾತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಅಭಿಯನದಿಂದ ಬಡ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಮೂಡಲಗಿ ಪುರಸಭೆಯ ವ್ಯಾಪ್ತಿಯಲ್ಲಿ ಸುಮಾರು ೨೫೦೦ ಕ್ಕೂ ಹೆಚ್ಚು …
Read More »ಸರ್ಕಾರಿ ಉರ್ದು ಶಾಲೆ ಸುಣ್ಣ-ಬಣ್ಣದಿಂದ ಅಲಂಕರಿಸಲು ಶ್ರಮಿಸಿದ ಶಿಕ್ಷಕರ ಕಾರ್ಯ ಶ್ಲಾಘನಿಯ-ಮನ್ನಿಕೇರಿ
ಸರ್ಕಾರಿ ಉರ್ದು ಶಾಲೆ ಸುಣ್ಣ-ಬಣ್ಣದಿಂದ ಅಲಂಕರಿಸಲು ಶ್ರಮಿಸಿದ ಶಿಕ್ಷಕರ ಕಾರ್ಯ ಶ್ಲಾಘನಿಯ-ಮನ್ನಿಕೇರಿ ಮೂಡಲಗಿ: ಸರಕಾರದ ಅನುದಾನದ ಬರುವಿಕೆಯನ್ನು ಕಾಯದೇ ವಿದ್ಯಾರ್ಥಿಗಳಲ್ಲಿ ಸರ್ಕಾರಿ ಉರ್ದು ಶಾಲೆಯನ್ನು ಆಕರ್ಷಿಸಲು ಶಾಲೆಯ ಶಿಕ್ಷಕ ಸಮೂಹ ಮುಂದಾಗಿರುವ ಕಾರ್ಯ ಶ್ಲಾಘನಿ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು. ಅವರು ಪಟ್ಟಣದ ಸರಕಾರಿ ಉರ್ದು ಪ್ರೌಢ ಶಾಲೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿ, ಸರಕಾರಿ ಉರ್ದು ಶಾಲೆಗೆ ಸುಣ್ಣ-ಬಣ್ಣದಿಂದ ಅಲಂಕರಿಸಲು ಶಾಲೆಯ ಶಿಕ್ಷಕ ಸಮೂಹ ತಮ್ಮ ಸ್ವಂತ ಹಣ …
Read More »ಸಕಾಲದಲ್ಲಿ ಸಾಲ ಮರುಪಾವತಿಸಿ ಬ್ಯಾಂಕಿನ ಪ್ರಗತಿಗೆ ಸಹಕರಿಸಿ : ವಿಜಯಕುಮಾರ
ಸಕಾಲದಲ್ಲಿ ಸಾಲ ಮರುಪಾವತಿಸಿ ಬ್ಯಾಂಕಿನ ಪ್ರಗತಿಗೆ ಸಹಕರಿಸಿ : ವಿಜಯಕುಮ ಬೆಟಗೇರಿ:ಗ್ರಾಮೀಣ ವಲಯದ ಕೆನರಾ ಬ್ಯಾಂಕ್ಗಳಲ್ಲಿ ವಿವಿಧ ಯೋಜನೆಗಳಡಿಯಲ್ಲಿ ರೈತರಿಗೆ ಮತ್ತು ಸ್ವಸಹಾಯ ಸಂಘಗಳಿಗೆ ಹಾಗೂ ಗ್ರಾಹಕರಿಗೆ, ದೊರಕುವ ಸಾಲ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹುಬ್ಬಳ್ಳಿಯ ಕೆನರಾ ಬ್ಯಾಂಕ್ ಸರ್ಕಲ್ ಆಫೀಸ್ನ ಜನರಲ್ ಮ್ಯಾನೇಜರ್ ವಿಜಯಕುಮಾರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಕೆನರಾ ಬ್ಯಾಂಕ್ ಶಾಖೆಯ ವತಿಯಿಂದ ಇತ್ತೀಚೆಗೆ ನಡೆದ ಕೃಷಿ ಮತ್ತು ಸ್ವ ಸಹಾಯ ಸಂಘಗಳ ಸಾಲ …
Read More »*ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.*
*ಬ್ಯಾಟ್ ಬೀಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.* ಗೋಕಾಕ: ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನೌಕರರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬ್ಯಾಟ್ ಬೀಸುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಮತ್ತು ತಾಲೂಕ ಆಡಳಿತ ಹಾಗೂ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಸಂಘವು ಶುಕ್ರವಾರದಂದು ಆಯೋಜಿಸಿದ್ದ ಹೊನಲು- ಬೆಳಕಿನ ಕ್ರಿಕೆಟ್ ಪಂದ್ಯಾವಳಿಯಲ್ಲಿ ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮೊದಲ ಉದ್ಘಾಟನಾ …
Read More »ಶೀಘ್ರದಲ್ಲಿಯೇ ನಾಮದೇವ ಸಿಂಪಿ ಸಮಾಜದ ರಾಜ್ಯ ಮಟ್ಟದ ವಧು-ವರರ ಸಮಾವೇಶ-ಪಿಸೆ
ಶೀಘ್ರದಲ್ಲಿಯೇ ನಾಮದೇವ ಸಿಂಪಿ ಸಮಾಜದ ರಾಜ್ಯ ಮಟ್ಟದ ವಧು-ವರರ ಸಮಾವೇಶ-ಪಿಸೆ ಮೂಡಲಗಿ: ರಾಜ್ಯದಲ್ಲಿ ಕಡಿಮೆ ಜನಸಂಖ್ಯೆ ಹೊಂದಿರುವ ನಾಮದೇವ ಶಿಂಪಿ ಸಮಾಜದ ವಧು-ವರರ ಹಿತಕ್ಕಾಗಿ ಶೀಘ್ರದಲ್ಲಿಯೇ ಉತ್ತರ ಕರ್ನಾಟಕದ ಭಾಗದಲ್ಲಿ ರಾಜ್ಯ ಮಟ್ಟದ ವಧು-ವರರ ಸಮಾವೇಶವನ್ನು ವೈಶಿಷ್ಠವಾಗಿ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ನಾಮದೇವ ಸಿಂಪಿ ಸಮಾಜ ವಧು-ವರರ ವೇದಿಕೆಯ ರಾಜ್ಯಾಧ್ಯಕ್ಷ ಸತೀಶಕುಮಾರ ಪಿಸೆ ಹೇಳಿದರು. ಅವರು ಗುರುವಾರದಂದು ಪಟ್ಟಣದಲ್ಲಿ ಜರುಗಿದ ನಾಮದೇವ ಶಿಂಪಿ ಸಮಾಜದ ಸಭೆಯಲ್ಲಿ ಮಾತನಾಡಿ, ವೇದಿಕೆಯು ಈಗಾಗಲೆ …
Read More »ಫೆ.22 ರಂದು ಸತೀಶ್ ಶುಗರ್ಸದಿಂದ ಕಬ್ಬು ನುರಿಸುವ ಹಂಗಾಮಿಗೆ ಮುಕ್ತಾಯ
ಫೆ.22 ರಂದು ಸತೀಶ್ ಶುಗರ್ಸದಿಂದ ಕಬ್ಬು ನುರಿಸುವ ಹಂಗಾಮಿಗೆ ಮುಕ್ತಾಯ ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿಜಿ ಬಳಿಯ ಸತೀಶ ಶುಗರ್ಸ್ ಕಾರ್ಖಾನೆಯ 2024-25 ನೇ ಸಾಲಿನ ಕಬ್ಬು ನುರಿಸುವ ಹಂಗಾಮು ಶನಿವಾರ ಫೆ.22 ರಂದು ಮುಕ್ತಾಯವಾಗಲ್ಲಿದೆ ಎಂದು ಕಾರ್ಖಾನೆಯ ಹಿರಿಯ ಉಪಾಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸತೀಶ ಶುಗರ್ಸ್ ಕಾರ್ಖಾನೆಯ ಪ್ರಸ್ತುತ 2024-25 ನೇ ಹಂಗಾಮಿನ ಕಬ್ಬು ನುರಿಸುವಕಾರ್ಯವನ್ನು ಫೆ. 22 ಮುಕ್ತಾಯಗೊಳಿಸಲು ನಿರ್ಧರಿಸಲಾಗಿದೆ. ಕಾರಣ, ರೈತ ಭಾಂದವರು ಸದರಿ ಹಂಗಾಮಿಗಾಗಿ …
Read More »*ಯಲ್ಲಾಲಿಂಗ ವಾಳದ ಅವರಿಗೆ ಕವಿರತ್ನ ಕಾಳಿದಾಸ ಪ್ರಶಸ್ತಿ ಪ್ರದಾನ*
*ಯಲ್ಲಾಲಿಂಗ ವಾಳದ ಅವರಿಗೆ ಕವಿರತ್ನ ಕಾಳಿದಾಸ ಪ್ರಶಸ್ತಿ ಪ್ರದಾನ* ಮೂಡಲಗಿ ತಾಲೂಕಿನ ಶಿವಾಪುರ ಗ್ರಾಮದ ಯಲ್ಲಾಲಿಂಗ ವಾಳದ ಗೆ ಕವಿರತ್ನ ಕಾಳಿದಾಸ ಪ್ರಶಸ್ತಿ ಲಭಿಸಿದೆ. ಇತ್ತೀಚೆಗೆ ರಾಮದುರ್ಗ ತಾಲೂಕಿನ ಸುರೇಬಾನ ಅವರಾದಿಯ ಶ್ರೀ ಕವಿರತ್ನ ಕಾಳಿದಾಸ ಜಾನಪದ ಕಲಾ ಪೋಷಕ ಸಂಘ ಸುರೇಬಾನ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೆಳ್ಳಿ ರಜತ್ ಮಹೋತ್ಸವದಲ್ಲಿ ಸರ್ಕಾರದ ಮುಖ್ಯ ಸಚೇತಕ ಅಶೋಕ ಪಟ್ಟಣ ಪ್ರಶಸ್ತಿ ಪ್ರದಾನ ಮಾಡಿದರು. ಯಲ್ಲಾಲಿಂಗ ವಾಳದ ಅವರು ಶ್ರೀ …
Read More »ಅತಿಥಿ ಶಿಕ್ಷಕರಿಗೆ ಸ್ವಂತ ಸುಮಾರು ೨೫.೧೫ ಲಕ್ಷ ರೂಪಾಯಿ ಗೌರವ ಸಂಭಾವನೆ ವಿತರಿಸಿದ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಸಮಾಜದ ಸುಧಾರಣೆಯಲ್ಲಿ ಶಿಕ್ಷಣವು ಮಹತ್ತರ ಪಾತ್ರ ವಹಿಸುತ್ತದೆ. ನಮ್ಮ ಮೂಡಲಗಿ ವಲಯವು ಶಿಕ್ಷಣದಲ್ಲಿ ಪ್ರಗತಿಯನ್ನು ಸಾಧಿಸುವ ಮೂಲಕ ಪ್ರತಿ ವರ್ಷವೂ ಉತ್ತಮವಾದ ಫಲಿತಾಂಶವನ್ನು ನೀಡುತ್ತ ಬರುತ್ತಿದ್ದು, ಕೊರತೆಯಿರುವ ಕಡೆಗಳಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಮೂಲಕ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತಿದ್ದೇನೆ. ಸ್ವಂತ ಹಣದಿಂದ ಅತಿಥಿ ಶಿಕ್ಷಕರಿಗೆ ಪ್ರತಿ ತಿಂಗಳೂ ವೇತನ ನೀಡುತ್ತ ಬರುತ್ತಿರುವುದಾಗಿ ಅರಭಾವಿ ಶಾಸಕ ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. …
Read More »
IN MUDALGI Latest Kannada News