ಬೆಟಗೇರಿ: ಸಾಲು ಮರದ ತಿಮ್ಮಕ್ಕ ತಮಗೆ ಮಕ್ಕಳಿಲ್ಲದ ಕರಣಕ್ಕೆ ರಸ್ತೆಯ ಬದಿಯಲ್ಲಿ ಸಸಿಗಳನ್ನು ನೆಟ್ಟು, ಅವುಗಳನ್ನು ಮಕ್ಕಳಂತೆ ಭಾವಿಸಿ ಪೋಷಿಸಿ ಬೆಳಸಿದಾಕೆ. ಸಾಲು ಮರದ ತಿಮ್ಮಕ್ಕ ಅನಕ್ಷರಸ್ಥೆಯಾಗಿದ್ದರೂ ಸಹ ಪರಿಸರ ಬಗ್ಗೆ ಅಪಾರ ಕಾಳಜಿಯುಳ್ಳ ವೃಕ್ಷ ಮಾತೆಯಾಗಿದ್ದರು ಎಂದು ಗೋಕಾಕ ತಾಲೂಕಿನ ಬೆಟಗೇರಿ ಕರವೇ ಗ್ರಾಮ ಘಟಕದ ಅಧ್ಯಕ್ಷ ಈರಣ್ಣ ಬಳಿಗಾರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಘಟಕದ ಕರವೇ ಅಧ್ಯಕ್ಷ ಈರಣ್ಣ ಬಳಿಗಾರ ಅವರು ನ.14ರಂದು ಸಾಲು …
Read More »ಮಕ್ಕಳ ಪೋಷಕರ ಮತ್ತು ಶಿಕ್ಷಕರ ನಡುವೆ ಅವಿನಾಭಾವ ಸಂಬಂಧವಿರಬೇಕು:ರಮೇಶ ಅಳಗುಂಡಿ
ಬೆಟಗೇರಿ:ಪ್ರತಿ ಮನೆಯಲ್ಲಿ ಶಾಲಾ ಮಕ್ಕಳ ಓದಿನ ಕಡೆ ತಂದೆ, ತಾಯಿ ವಿಶೇಷ ಗಮನ ಹರಿಸಿದರೆ ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಸಾಧಿಸುವುದರಲ್ಲಿ ಎರಡು ಮಾತಿಲ್ಲ, ಸರಕಾರಿ ಶಾಲೆಯಲ್ಲಿ ದೊರಕುವ ಶೈಕ್ಷಣಿಕ ಸಹಾಯ, ಸೌಲಭ್ಯಗಳು ಯಾವುದೇ ಖಾಸಗಿ ಶಾಲೆಗಳಲ್ಲಿ ದೊರಕುವುದಿಲ್ಲಾ ಎಂದು ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಸಹಯೋಗದಲ್ಲಿ ನ.14ರಂದು ಮಕ್ಕಳ ದಿನಾಚರಣೆ ಪ್ರಯುಕ್ತ …
Read More »ಸಾಮಾಜಿಕ ಜೀವನದಲ್ಲಿ ಸಹಕಾರ ಪ್ರಮುಖವಾಗಿದೆ: ಬಸವರಾಜ ಮಾಳೇದ
ಬೆಟಗೇರಿ: ಸಹಕಾರ ತತ್ವದಡಿ ಗ್ರಾಮೀಣ ವಲಯದಲ್ಲಿ ಸಹಕಾರಿ ಸಂಘ, ಸಂಸ್ಥೆಗಳ ನೀಡುತ್ತಿರುವ ಸಹಕಾರದ ಸೇವೆ ಅತ್ಯಂತ ಮಹತ್ವದಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಅಧ್ಯಕ್ಷ ಬಸವರಾಜ ಮಾಳೇದ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿಯಲ್ಲಿ ಶುಕ್ರವಾರ ನ.14 ರಂದು ಅಖಿಲ ಭಾರತ ಸಹಕಾರಿ ಸಪ್ತಾಹ ಆಚರಣೆ ಪ್ರಯುಕ್ತ ಸಹಕಾರಿ ಧ್ವಜಾರೋಹಣ ನೆರವೇರಿಸಿ ಸಹಕಾರಿ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, …
Read More »ಎಂಪಿಎಲ್-2025 ಕ್ರಿಕೆಟ್ ಟೂರ್ನಿ ಉದ್ಘಾಟನೆ ‘ಕ್ರೀಡಾಕೂಟಗಳಿಂದ ಸೌಹಾರ್ದತೆ ಬೆಳೆಯುತ್ತದೆ’
ಎಂಪಿಎಲ್-2025 ಕ್ರಿಕೆಟ್ ಟೂರ್ನಿ ಉದ್ಘಾಟನೆ ‘ಕ್ರೀಡಾಕೂಟಗಳಿಂದ ಸೌಹಾರ್ದತೆ ಬೆಳೆಯುತ್ತದೆ’ -ಚನ್ನಬಸು ಬಡ್ಡಿ ಮೂಡಲಗಿ: ‘ಕ್ರೀಡಾಕೂಟಗಳಿಂದ ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಸೌಹಾರ್ದತೆ ಬೆಳೆಯುತ್ತದೆ’ ಎಂದು ಶ್ರೀ ಬಸವೇಶ್ವರ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿಯ ನಿರ್ದೇಶಕ ಚನ್ನಬಸು ಬಡ್ಡಿ ಹೇಳಿದರು. ಇಲ್ಲಿಯ ಎಸ್ಎಸ್ಆರ್ ಕಾಲೇಜು ಮೈದಾನದಲ್ಲಿ ಮಾರ್ನಿಂಗ ಸ್ಟಾರ್ ಕ್ರಿಕೆಟರ್ಸ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರ ಸಹಯೋಗದಲ್ಲಿ ಏರ್ಪಡಿಸಿರುವ ‘ಎಂಪಿಎಲ್-2025’ ಕ್ರಿಕೆಟ್ ಟೂರ್ನಿಯ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ …
Read More »17ರಂದು ಕಬ್ಬು, ಅರಿಷಿಣ ಕ್ಷೇತ್ರೋತ್ಸವ, ಹೋರಿಗಳ ಪ್ರದರ್ಶನ
ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಪ್ರಗತಿಪರ ರೈತ ಬಸವರಾಜ ಬಾಳಪ್ಪ ಬೆಳಕೂಡ ಅವರ ತೋಟದಲ್ಲಿ ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಸಹಯೋಗದಲ್ಲಿ ನ.17ರಂದು ಬೆಳಿಗ್ಗೆ 10.30ರಿಂದ ಸಂಜೆ 5ರವರೆಗೆ ಬೆಳಗಾವಿ ವಿಭಾಗ ಮಟ್ಟದ ಕಬ್ಬು ಹಾಗೂ ಅರಿಷಿಣ ಬೆಳೆಯ ಕ್ಷೇತ್ರೋತ್ಸವ, ವಿಚಾರ ಸಂಕಿರಣ ಹಾಗೂ ಹಾಲು ಹಲ್ಲಿನ ಹೋರಿ ಪ್ರದರ್ಶನವನ್ನು ಏರ್ಪಡಿಸಿರುವರು. ಕಳೆದ ನ.10ರಂದು ನಿಗದಿಗೊಳಿಸಿದ್ದ ವಿಚಾರ ಸಂಕಿರಣವನ್ನು ಕಬ್ಬಿನ ದರ ನಿಗದಿಗಾಗಿ ರೈತರ ಹೋರಾಟವಿದ್ದ ಕಾರಣ ಮುಂದುಡಲಾಗಿತ್ತು. ಅರಭಾವಿ ಕಿತ್ತೂರ …
Read More »ಮೂಡಲಗಿ: ಜಾನುವಾರುಗಳಿಗೆ ಕಾಲುಬಾಯಿ ರೋಗ ಲಸಿಕೆಯನ್ನು ಹಾಕಿಸಿ, ರೋಗ ಬರದಂತೆ ಜಾನುವಾರುಗಳನ್ನು ರಕ್ಷಿಸುವಂತೆ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು.
ಮೂಡಲಗಿ- ಗುರ್ಲಾಪೂರದಲ್ಲಿ ಬುಧವಾರದಂದು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಜರುಗಿದ ಉಚಿತ ಕಾಲುಬಾಯಿ ರೋಗ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಳೆದ ದಿ. 3 ರಿಂದ ಆರಂಭವಾಗಿರುವ ಲಸಿಕಾ ಅಭಿಯಾನವು ಡಿಸೆಂಬರ್ 2ರ ತನಕ ನಡೆಯಲಿದ್ದು, ಇದನ್ನು ಯಶಸ್ವಿಗೊಳಿಸುವಂತೆ ಪಶುಪಾಲಕರಲ್ಲಿ ಕೋರಿದರು. ರೈತರಿಗೆ ಆರ್ಥಿಕ ಸಂಕಷ್ಟಗಳನ್ನು ತಂದೊಡ್ಡುವ ಕಾಲು ಬಾಯಿ ರೋಗವನ್ನು ನಿಯಂತ್ರಿಸುವುದು ಅವಶ್ಯವಾಗಿದೆ. ಇದನ್ನು ನಿರ್ಮೂಲನೆ ಮಾಡಲು ಪ್ರತಿ 6 ತಿಂಗಳಿಗೊಮ್ಮೆ ಈ ರೋಗದ ವಿರುದ್ಧ …
Read More »*ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಮೂಡಲಗಿ- ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*
ಮೂಡಲಗಿ: – ಕ್ಷೇತ್ರದಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಬರುವ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರದಂದು ಹೊರವಲಯದ ಗುರ್ಲಾಪೂರ ಪ್ರವಾಸಿ ಮಂದಿರದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದುಕೊಂಡು ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವಂತೆಯೂ ಅವರು ಸೂಚಿಸಿದರು. ಗ್ರಾಮ ಪಂಚಾಯತಿಗಳಿಗೆ ಡಿಸೆಂಬರ್ ಇಲ್ಲವೇ ಜನವರಿ ತಿಂಗಳಲ್ಲಿ ಚುನಾವಣೆಯು ಘೋಷಣೆಯಾಗಬಹುದು. ಈ …
Read More »ವಿದ್ಯಾರ್ಥಿ ಈರಯ್ಯ ಮತ್ತು ಅಮರ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ
ಬೆಟಗೇರಿ:ಚಿಕ್ಕೋಡಿ ಶೈಕ್ಷಣೀಕ ಜಿಲ್ಲಾ ಶಿಕ್ಷಣ ಇಲಾಖಾ ಸಹಯೋಗದಲ್ಲಿ ಗೋಕಾಕ ಮಹರ್ಷಿ ವಾಲ್ಮಿಕಿ ಕ್ರೀಡಾಂಗಣದಲ್ಲಿ ಇತೀಚೆಗೆ ನಡೆದ 17 ವರ್ಷದೊಳಗಿನ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಗೋಕಾಕ ತಾಲೂಕಿನ ಗೋಸಬಾಳ ಸರಕಾರಿ ಹಿರಿಯ ಪ್ರಾಥಮಿಕ ಹಾಗೂ ಉನ್ನತೀಕರಿಸಿದ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಕುಮಾರ ಈರಯ್ಯ ಶಿವಲಿಂಗಯ್ಯ ಹಿರೇಮಠ ಇತನು 5 ಕಿ.ಮೀ ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಕುಮಾರ ಅಮರ ಮುತ್ತೆಪ್ಪ ವಡೇರ ಇತನು ಚಕ್ರ ಎಸೆತ ಮತ್ತು ಹ್ಯಾಮರ್ ಎಸೆತ …
Read More »ಒನಕೆ ಓಬವ್ವ ಕನ್ನಡ ನಾಡಿನ ಧೀರ ಮಹಿಳೆಯಾಗಿದ್ದಳು:ರಾಮಣ್ಣ ನೀಲಣ್ಣವರ
ಬೆಟಗೇರಿ: ಚಿತ್ರದುರ್ಗ ಕೋಟೆಯ ಪಾಳೆಯಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಕಹಳೆ ಮದ್ದಹನುಮಪ್ಪನ ಹೆಂಡತಿ. ಹೈದರ ಅಲಿಯ ಪಡೆಗಳೂಂದಿಗೆ ಏಕಾಂಗಿಯಾಗಿ ಹೋರಾಡಿದ ಧೀರ ಮಹಿಳೆಯಾಗಿದ್ದಳು ಎಂದು ಬೆಟಗೇರಿ ಯುವ ಮುಖಂಡ ರಾಮಣ್ಣ ನೀಲಣ್ಣವರ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮ ಪಂಚಾಯ್ತಿ ಕಾರ್ಯಾಲಯದಲ್ಲಿ ನ.11ರಂದು ನಡೆದ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ವೀರ ವನಿತೆ ಒನಕೆ ಓಬವ್ವ ವೀರ ಯೋಧಿಯಾಗಿದ್ದು, ಓಬವ್ವಳ …
Read More »ನ.12ರಿಂದ ನ.16ರ ವರೆಗೆ ಎಂಪಿಎಲ್-2025 ಕ್ರಿಕೆಟ್ ಟೂರ್ನಿ
ಮೂಡಲಗಿ: ಮೂಡಲಗಿಯ ಮಾರ್ನಿಂಗ್ ಸ್ಟಾರ್ ಕ್ರಿಕೆಟರ್ಸ ಹಾಗೂ ಲಯನ್ಸ ಕ್ಲಬ್ ಮೂಡಲಗಿ ಪರಿವಾರ ಇವರ ಸಹಯೋಗದಲ್ಲಿ ಇದೇ ನ. 12ರಿಂದ ನ.16ರ ವರೆಗೆ 5 ದಿನಗಳ ವರೆಗೆ ಎಸ್ಎಸ್ಆರ್ ಕಾಲೇಜು ಮೈದಾನದಲ್ಲಿ ಮೂಡಲಗಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಾಮೆಂಟ್ವನ್ನು ಏರ್ಪಡಿಸಲಾಗಿದೆ ಎಂದು ಸಂಘಟಕರಾದ ಶಿವಾನಂದ ಗಾಡವಿ, ಮಲ್ಲು ಕುರಬಗಟ್ಟಿ ಹಾಗೂ ಸನ್ನಿತ ಸೋನವಾಲಕರ ಹೇಳಿದರು. ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ಇಡಲಾಗಿದ್ದು, ಪ್ರಥಮ ಬಹುಮಾನ ರೂ.51,001, ದ್ವಿತೀಯ ರೂ.30,001 ಹಾಗೂ ತೃತೀಯ …
Read More »
IN MUDALGI Latest Kannada News