ಬಸವ ಸೇವಾ ಯುವಕ ಸಂಘದಿಂದ ಬಸವ ಜಯಂತಿ ಆಚರಣೆ ಮೂಡಲಗಿ: ಆನೆ ಮೇಲೆ ಬಸವೇಶ್ವರರ ಭಾವಚಿತ್ರ ಮೆರವಣಿಗೆ ಮೂಡಲಗಿ: ಇಲ್ಲಿಯ ಬಸವ ಸೇವಾ ಯುವಕ ಸಂಘದಿಂದ ಆನೆ ಮೇಲೆ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ಇಟ್ಟು ಮೆರವಣಿಗೆ ಮಾಡುವ ಮೂಲಕ ಮಂಗಳವಾರ ಸಂಭ್ರಮದಿಂದ ಬಸವ ಜಯಂತಿಯನ್ನು ಆಚರಿಸಿದರು. ಬೆಳಿಗ್ಗೆ ಬಸವೇಶ್ವರ ಕಲ್ಯಾಣ ಮಂಟಪದ ಬಳಿಯಲ್ಲಿ ಜೋಡೆತ್ತುಗಳಿಗೆ ಪೂಜೆಯನ್ನು ಸಲ್ಲಿಸಿ ವಿವಿದ ಸಮಾಜದ ಹಿರಿಯರು ಮೆರವಣಿಗೆಗೆ ಚಾಲನೆ ನೀಡಿದರು. 251 ಮಹಿಳೆರ ಪೂರ್ಣಕುಂಭ …
Read More »‘ಬಸವೇಶ್ವರರ ಕಾಯಕ ತತ್ವವು ಸರ್ವಕಾಲಿಕವಾಗಿದೆ’ – ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಷ ಜಿ. ಢವಳೇಶ್ವರ
‘ಬಸವೇಶ್ವರರ ಕಾಯಕ ತತ್ವವು ಸರ್ವಕಾಲಿಕವಾಗಿದೆ’ – ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಷ ಜಿ. ಢವಳೇಶ್ವರ ಮೂಡಲಗಿ: ಮಂಗಳವಾರ ಬಸವ ಜಯಂತಿಯ ಅಂಗವಾಗಿ ಶೃಂಗಾರಗೊಳಿಸಿದ್ದ ಜೋಡೆತ್ತುಗಳ ಮೆರವಣಿಗೆಯು ಗಮನಸಳೆಯಿತು. ಎತ್ತುಗಳಿಗೆ ಗುಲಾಲು, ಕೋಡುಗಳಿಗೆ ಬಣ್ಣ ಬಣ್ಣದ ರಿಬ್ಬನ್, ಬಲೂನ್ ಹಾಗೂ ಮೈಮೇಲೆ ಕಸೂತಿಯ ವಸ್ತ್ರಗಳಿಂದ ಎತ್ತುಗಳು ಆಕರ್ಷಕವಾಗಿ ಕಾಣುತ್ತಿದ್ದವು. ಇಲ್ಲಿಯ ಬಸವೇಶ್ವರ ಕಲ್ಯಾಣ ಮಂಟಪ ಸಮಿತಿ, ವೀರಶೈವ ಲಿಂಗಾಯತ ಮತ್ತು ರಾಷ್ಟ್ರೀಯ ಬಸವ ದಳದ ಆಶ್ರಯದಲ್ಲಿ ಬಸವ ಜಯಂತಿಯನ್ನು ಸಂಭ್ರಮದಿಂದ ಅಚರಿಸಿದರು. …
Read More »ಬೆಟಗೇರಿಯಲ್ಲಿ ಸೌಹಾರ್ದತೆ ಮತ್ತು ಸಹಬಾಳ್ವೆಯ ಪ್ರತೀಕವಾಗಿರುವ ಪವಿತ್ರ ರಂಜಾನ್ ಹಬ್ಬ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈದ್ಗಾ ಮೈದಾನದಲ್ಲಿ ಸೌಹಾರ್ದತೆ ಮತ್ತು ಸಹಬಾಳ್ವೆಯ ಪ್ರತೀಕವಾಗಿರುವ ಪವಿತ್ರ ರಂಜಾನ್ ಹಬ್ಬವನ್ನು ಮೇ.3ರಂದು ಇಲ್ಲಿಯ ಮುಸ್ಲಿಂ ಭಾಂದವರು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಿದರು. ತಮ್ಮ ಧರ್ಮದ ಸಂಪ್ರದಾಯದಂತೆ ಅಂದು ಬೆಳಗ್ಗೆ ಮಸೀದಿಯಲ್ಲಿ ಸಾಮೂಹಿಕವಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಹೊಸ ಬಟ್ಟೆ ತೊಟ್ಟು ಮಕ್ಕಳು ಸೇರಿದಂತೆ ವೃದ್ಧರವರೆಗೆ ಸ್ಥಳೀಯ ಮುಸ್ಲಿಂ ಭಾಂದವರು ಬಬ್ಬರಿಗೊಬ್ಬರು ಅಪ್ಪಿಕೊಂಡು ರಂಜಾನ್ ಹಬ್ಬದ ಶುಭಾಶಗಳನ್ನು ಹಂಚಿಕೊಂಡು ಈದ್-ಉಲ್-ಪಿತರ್ ಸಡಗರ, ಭಕ್ತಿಯಿಂದ ಆಚರಿಸಿದ …
Read More »ಬಸವಣ್ಣನವರ ವಿಚಾರಗಳೇ ನಮಗೆ ಸ್ಪೂರ್ತಿ- ಕಡಾಡಿ
ಬಸವಣ್ಣನವರ ವಿಚಾರಗಳೇ ನಮಗೆ ಸ್ಪೂರ್ತಿ- ಕಡಾಡಿ ಮೂಡಲಗಿ:ವಿಶ್ವಗುರು ಬಸವಣ್ಣನವರ ವಿಚಾರಗಳು ಸರ್ವಕಾಲಿಕ ಇಂದಿನ ಯುವ ಜನಾಂಗ ಬಸವಣ್ಣನವರ ಆಚಾರ, ವಿಚಾರ ನಡೆ ನುಡಿಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುದು ಮುಖ್ಯವಾಗಿದೆ, ಸಮಾಜಕ್ಕೆ ಅವರ ವಿಚಾರಗಳೇ ನಮಗೆ ಸ್ಪೂರ್ತಿ ಎಂದು ಸೇವಾ ಸಂಸ್ಥೆ ಅಧ್ಯಕ್ಷ ಬಸವರಾಜ ಕಡಾಡಿ ಹೇಳಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ ಕಲ್ಲೋಳಿ, ರಾಜ್ಯಸಭಾ ಸಂಸದರ ಜನಸಂಪರ್ಕ ಕಾರ್ಯಾಲಯ ಹಾಗೂ ಸೇವಾ ಸಂಸ್ಥೆಯ ಆಶ್ರಯದಲ್ಲಿ …
Read More »ಬಸವೇಶ್ವರ ಸೌಹಾರ್ದ ಸಹಕಾರಿಯಲ್ಲಿ ಬಸವ ಜಯಂತಿ
ಬೆಟಗೇರಿ:ಗ್ರಾಮದ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಕಾರ್ಯಾಲಯದಲ್ಲಿ ಮೇ.3ರಂದು ಬಸವ ಜಯಂತಿ ಆಚರಣೆ ಕಾರ್ಯಕ್ರಮ ನಡೆಯಿತು. ಸ್ಥಳೀಯ ಬಸವೇಶ್ವರ ಸೌಹಾರ್ದ ಸಹಕಾರಿಯ ಅಧ್ಯಕ್ಷ ಮಲ್ಲಿಕಾರ್ಜುನ ನೀಲಣ್ಣವರ ಅಧ್ಯಕ್ಷತೆ ವಹಿಸಿದ್ದರು. ಸಂಗಯ್ಯ ಹಿರೇಮಠ ಸಾನಿಧ್ಯ ವಹಿಸಿ, ಬಸವೇಶ್ವರ ಭಾವ ಚಿತ್ರಕ್ಕೆ ಪೂಜೆ, ಪುಷ್ಪಾರ್ಪನೆ, ಸಿಹಿ ವಿತರಣೆ ಮಾಡಿದ ಬಳಿಕ ಮುಖ್ಯ ಕಾರ್ಯನಿರ್ವಾಹಕ ಈರಣ್ಣ ಸಿದ್ನಾಳ ಅವರು ಬಸವಣ್ಣನವರ ಬದುಕು ಬರಹದ ಕುರಿತು ಮಾತನಾಡಿದರು. ಈಶ್ವರ ಬಳಿಗಾರ, ಈರಪ್ಪ ದೇಯಣ್ಣವರ, ಕಲ್ಲಪ್ಪ ಹುಬ್ಬಳ್ಳಿ, …
Read More »ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ.- ಜಡಿಸಿದ್ದೇಶ್ವರ ಮಠದ ಪೀಠಾಧಿಪತಿ ಅಭಿನವ ಶಿವಾನಂದ ಸ್ವಾಮೀಜಿ
ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು ವಚನಗಳ ಮೂಲಕ ಜೀವನಾದರ್ಶಗಳನ್ನು ಬೋಧಿಸಿದ ವiಹಾನ್ ಚಿಂತಕರಾಗಿದ್ದಾರೆ ಎಂದು ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿ ಅಭಿನವ ಶಿವಾನಂದ ಸ್ವಾಮೀಜಿ ಹೇಳಿದರು. ಬೆಟಗೇರಿ ಗ್ರಾಮದಲ್ಲಿ ಇಲ್ಲಿಯ ಬಸವ ಅಭಿಮಾನಿ ಬಳಗದ ಸಹಯೋಗದಲ್ಲಿ ಮೇ.3ರಂದು ನಡೆದ ಬಸವ ಜಯಂತಿ ಕಾರ್ಯಕ್ರಮದ ಸಾನಿಧ್ಯ ವಹಿಸಿ ಷಟಸ್ಥಲ್ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಬಸವಣ್ಣನವರು ವಚನಗಳನ್ನು ರಚಿಸಿ ಜಗತ್ತಿಗೆ ಅದ್ಭುತವಾದ ಕೊಡುಗೆ ನೀಡಿದ್ದಾರೆ. …
Read More »ಮೂಡಲಗಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ
ಮೂಡಲಗಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ ಮೂಡಲಗಿ: ಪಟ್ಟಣದ ಜಾಮಿಯಾ ಮಸೀದಿಯಲ್ಲಿ ಮುಸ್ಲಿಂ ಬಾಂದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿ ಸಂಭ್ರಮದ ರಂಜಾನ್ ಹಬ್ಬವನ್ನು ಆಚರಿಸಿದರು. ಧರ್ಮಗುರುಗಳಾದ ಕೌಸರ ರಜಾ ಅವರು ಮಂತ್ರ ಪಠಣ ಮಾಡಿ ರಂಜಾನ್ ಹಬ್ಬದ ವೈಶಿಷ್ಟ್ಯದ ಕುರಿತು ಪ್ರವಚಣ ಹೇಳಿ ಸಮಾಜದಲ್ಲಿ ಸಹಬಾಳ್ವೆಯಿಂದ ಬದುಕುಬೇಕು ಎಂದು ಸಂದೇಶ ಸಾರಿದರು. ಬಾಜಾರ ಮಸೀದಿಯಿಂದ ಪ್ರಮುಖ ವೃತ್ತಗಳಲ್ಲಿ ಅಲ್ಲಾಹನ ನಾಮಸ್ಮರಣೆಯೊಂದಿಗೆ ಮೆರವಣಿಗೆ ಸಾಗಿ ಜಾಮೀಯಾ ಮಸೀದಿ ತಲುಪಿ ಪ್ರಾರ್ಥನೆ ಸಲ್ಲಿಸಿ ಪರಸ್ಪರರು …
Read More »ಬಸವ ಅಭಿಮಾನಿ ಬಳಗದ ಸಹಯೋಗದಲ್ಲಿ ಬಸವ ಜಯಂತಿಯ ಆಚರಣೆ ಕಾರ್ಯಕ್ರಮ
ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಸವ ಅಭಿಮಾನಿ ಬಳಗದ ಸಹಯೋಗದಲ್ಲಿ ಬಸವ ಜಯಂತಿಯ ಆಚರಣೆ ಕಾರ್ಯಕ್ರಮ ಇದೇ ಮಂಗಳವಾರ ಮೇ.3ರಂದು ಅದ್ಧೂರಿಯಾಗಿ ನಡೆಯಲಿದೆ. ಗ್ರಾಮದ ಅಶ್ವಾರೊಢ ಬಸವೇಶ್ವರ ವೃತ್ತದಲ್ಲಿ ಮುಂಜಾನೆ 8 ಗಂಟೆಗೆ ಬಸವಣ್ಣನವರ ಅಶ್ವಾರೊಢ ಮೂರ್ತಿಗೆ ಮಹಾಪೂಜೆ, ಪುಷ್ರ್ಪಾಪನೆ, ಷಟಸ್ಥಲ್ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿ ಅಭಿನವ ಶಿವಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಷಟಸ್ಥಲ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಮುಂಜಾನೆ 10 ಗಂಟೆಗೆ …
Read More »ಕಲ್ಲೋಳಿಯಲ್ಲಿ ಅಶ್ವಾರೂಢ ಜಗಜ್ಯೋತಿ ಬಸವಣ್ಣನವರ ಕಂಚಿನ ಪುತ್ಥಳಿಯ ಲೋಕಾರ್ಪಣೆ ಸಮಾರಂಭ
ಮೂಡಲಗಿ: ‘ಮೇಲು, ಕೀಳು ಎಂಬ ಭೇದ ತೀವ್ರವಾಗಿದ್ದ 12ನೇ ಶತಮಾನದಲ್ಲಿ ಬಸವಣ್ಣನವರು ತಮ್ಮ ವಚನ, ಸಂದೇಶಗಳ ಮೂಲಕ ಸಮಾಜ ಶುದ್ಧಗೊಳಿಸಿದ ಮಹಾನ ಮಾನವತಾವಾದಿ’ ಎಂದು ಕನೇರಿಮಠದ ಶ್ರೀ ಸಿದ್ಧಿಗಿರಿಮಠದ ಜಗದ್ಗುರು ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಕಲ್ಲೋಳಿಯಲ್ಲಿ ನೂತನವಾಗಿ ನಿರ್ಮಿಸಿರುವ ಬಸವ ವೃತ್ತದಲ್ಲಿ ಆಶ್ವಾರೂಢ ಜಗಜ್ಯೋತಿ ಬಸವೇಶ್ವರರ ಕಂಚಿನ ಪ್ರತಿಮೆಯ ಲೋಕಾರ್ಪಣೆ ಸಮಾರಂಭದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ಬಸವಣ್ಣನವರು ಕಾಯಕನಿಷ್ಠತೆ, ಸಮಾನತೆ, ಸಮಬಾಳ್ವೆ ಸಾರಿದ ದಾರ್ಶನಿಕ ಪುರುಷ ಎಂದರು. …
Read More »ಗಿಡ ನೆಟ್ಟು ಕಾರ್ಮಿಕರ ದಿನಾಚರಣೆ ಆಚರಣೆ
ಗಿಡ ನೆಟ್ಟು ಕಾರ್ಮಿಕರ ದಿನಾಚರಣೆ ಆಚರಣೆ ಮೂಡಲಗಿ: ಇಲ್ಲಿನ ಈರಣ್ಣ ನಗರದ ಶ್ರೀ ದುರ್ಗಾದೇವಿ ದೇವಸ್ಥಾನ ಆವರಣದಲ್ಲಿ ಕಾರ್ಮಿಕ ದಿನಾಚರಣೆ ಪ್ರಯುಕ್ತ ಪರಿಸರ ಪ್ರೇಮಿ ಈರಪ್ಪ ಢವಳೇಶ್ವರ ಅವರು 20 ಗಿಡ ನೆಟ್ಟು ವಿಭಿನ್ನವಾಗಿ ಕಾರ್ಮಿಕ ದಿನಾಚರಣೆ ಆಚರಿಸಿದರು ಶಿಕ್ಷಣ ಸಂಯೋಜಕ ಕರಿಬಸವರಾಜ ಅವರು ಸಸಿಗೆ ನೀರು ಉಣಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ರೈತನಂತೆ ನಿತ್ಯ ಶ್ರಮಪಡುವ ಕಾರ್ಮಿಕರ ಸೇವೆ ಅನನ್ಯವಾಗಿದೆ.ಅವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂದು ಕ್ಷೇತ್ರ ಶಿಕ್ಷಣಾಧಿಕಾರಿ …
Read More »