Breaking News
Home / Recent Posts (page 47)

Recent Posts

ಹೊಸದಾಗಿ ಮನೆ ಮಂಜೂರಾತಿಗಾಗಿ ಅರ್ಜಿ ಆಹ್ವಾನ

ಗೋಕಾಕ: ಬೆಳಗಾವಿ ಜಿಲ್ಲೆಯಲ್ಲಿರುವ ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ವಸತಿ ರಹಿತರಿಗೆ ಹೊಸದಾಗಿ ಮನೆ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೆಳಗಾವಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಲಕ್ಷ್ಮಣ ಬಬಲಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಹಿಂದುಳಿದ ವರ್ಗಗಳ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರು ನಿಗದಿತ ಅರ್ಜಿ ನಮೂನೆಯು ಆಯಾ ತಾಲೂಕುಗಳ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಲಭ್ಯವಿದ್ದು ಅವುಗಳನ್ನು ಪಡೆದು ಅರ್ಜಿಗಳನ್ನು ಭರ್ತಿ …

Read More »

ವಿದ್ಯುನ್ಮಾನ ಮತ ಯಂತ್ರವನ್ನು ವೀಕ್ಷಿಸಿದ ನ್ಯಾಯಾಧೀಶೆ ಜ್ಯೋತಿ ಪಾಟೀಲ

ವಿದ್ಯುನ್ಮಾನ ಮತ ಯಂತ್ರವನ್ನು ವೀಕ್ಷಿಸಿದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಮೂಡಲಗಿ: ಪಟ್ಟಣದ ತಹಶೀಲ್ದಾರ ಕಚೇರಿಯ ಆವರಣದಲ್ಲಿ ಬರುವ ವಿಧಾನ ಸಭೆ ಸಾರ್ವತ್ರಿಕ ಚುನಾವಣಾ ನಿಮಿತ್ಯ ತೇರೆದಿರುವ ವಿದ್ಯುನ್ಮಾನ ಮತದಾನ ಪ್ರಾತ್ಯಕ್ಷಿಕೆ ಕೇಂದ್ರದಲ್ಲಿ ಮೂಡಲಗಿ ದಿವಾಣಿ ಹಾಗೂ ಜೆ.ಎಮ್.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಅವರು ಪ್ರಾತ್ಯಕ್ಷಿಯ ಮತ ಚಲಾಯಿಸುವ ಮೂಲಕ ವಿದ್ಯುನ್ಮಾನ್ ಮತ ಯಂತ್ರವನ್ನು ವೀಕ್ಷಿಸಿದರು. ತಾಲೂಕಾ ದಂಡಾಧಿಕಾರಿ ಪ್ರಶಾಂತ ಚನಗೋಂಡ ಮಾತನಾಡಿ, ಮತದಾರರಲ್ಲಿ ಗೊಂದಲಗಲ ಪರಿಹಾರಕ್ಕಾಗಿ ಹಾಗೂ ಮಾದರಿ …

Read More »

ನಮ್ಮ ನಾಡಿನ ಹಬ್ಬಗಳು, ಸಂಪ್ರದಾಯಗಳು ನೈಸರ್ಗಿಕ ಬದಲಾವಣೆಗಳ ಮೇಲೆ ನಿರ್ಧರಿತವಾಗಿವೆ–ಗಿರೆಣ್ಣವರ

ನಮ್ಮ ನಾಡಿನ ಹಬ್ಬಗಳು, ಸಂಪ್ರದಾಯಗಳು ನೈಸರ್ಗಿಕ ಬದಲಾವಣೆಗಳ ಮೇಲೆ ನಿರ್ಧರಿತವಾಗಿವೆ–ಗಿರೆಣ್ಣವರ ಮೂಡಲಗಿ: ಪ್ರಾಚೀನ ಕಾಲದಿಂದಲೂ ನಮ್ಮ ನಾಡಿನ ದೇಶದ ಸಂಸೃತಿ ಸಂಸ್ಕಾರಗಳಲ್ಲದೇ ಹಬ್ಬ ಹರಿದಿನಗಳು ಆಚರಣೆಗಳೂ ಕೂಡ ನಮ್ಮ ನೈಸರ್ಗಿಕ ಬದಲಾವಣೆಗಳಿಗೆ ತಕ್ಕಂತೆ ನಿರ್ಧರಿತವಾಗಿವೆ ಎಂದು ಪ್ರಧಾನ ಗುರು ಎ.ವ್ಹಿ ಗಿರೆಣ್ಣವರ ಹೇಳಿದರು. ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಯುಗಾದಿ ಆಚರಣೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಬೇವು ಬೆಲ್ಲ ವಿತರಿಸಿ ಮಾತನಾಡಿ, ನಮ್ಮ ಪೂರ್ವಜರಿಗೆ ಪ್ರಕೃರ್ತಿ ವಿಸ್ಮಯ …

Read More »

ಮಾನವರಾಗಿ ಹುಟ್ಟಿದ ಮೇಲೆ ನಾವು ಸಕಲರಿಗೂ ಒಳ್ಳೆಯದನ್ನೇ ಬಯಸಬೇಕು-ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಮಾನವರಾಗಿ ಹುಟ್ಟಿದ ಮೇಲೆ ನಾವು ಸಕಲರಿಗೂ ಒಳ್ಳೆಯದನ್ನೇ ಬಯಸಬೇಕು. ಈ ಭೂಮಿಯಲ್ಲಿ ಮನುಷ್ಯರಾಗಿ ಹುಟ್ಟಿರುವದು ನಮ್ಮೆಲ್ಲರ ಪುಣ್ಯವಾಗಿದೆ. ಆದರೆ ಕೆಲವೇ ಕೆಲವು ಜನರು ಈ ಭೂಮಿಯಿಂದ ನಿರ್ಗಮನರಾಗುವಾಗ ದೇವರಾಗಿ ಹೋಗುತ್ತಾರೆ. ಇದಕ್ಕೆ ವಿಜಯಪುರದ ಸಿದ್ಧೇಶ್ವರ ಸ್ವಾಮಿಜಿಗಳೇ ಜ್ವಲಂತ ಉದಾಹರಣೆ ಎಂದು ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ವಡೇರಹಟ್ಟಿ ಗ್ರಾಮದ ಮಲ್ಲಿಕಾರ್ಜುನ ಮಠದಲ್ಲಿ ಕಳೆದ ಭಾನುವಾರದಂದು ಸಿದ್ಧೇಶ್ವರ ಸ್ವಾಮಿಜಿಗಳ ನುಡಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ …

Read More »

*ಮುಸ್ಲಿಂ ಸಮುದಾಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ : ಬಾಲಚಂದ್ರ ಜಾರಕಿಹೊಳಿ ವಾಗ್ದಾನ*

ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಮುಸ್ಲಿಂ ಸಮುದಾಯ ಬಾಂಧವರಿಗೆ ಇತರೆ ಸಮಾಜದವರಿಂದ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಂಡಿದ್ದು, ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಎಲ್ಲ ಸಮುದಾಯಗಳು ಒಗ್ಗಟ್ಟಿನ ಮಂತ್ರ ಪಠಿಸಿ ಶಾಂತಿ ಸಾಮರಸ್ಯವನ್ನು ಕಾಪಾಡಿಕೊಂಡು ಬರುತ್ತಿವೆ ಎಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ಪಟ್ಟಣದ ತಹಶೀಲದಾರ ಕಚೇರಿಯ ಹತ್ತಿರ ಜರುಗಿದ ಅರಭಾವಿ ಕ್ಷೇತ್ರದ ಮುಸ್ಲಿಂ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯದ …

Read More »

ರಾಜ್ಯ ಮಟ್ಟದ ಅಂತರ್ಜಾಲ ರಸಪ್ರಶ್ನೆ ಸ್ಪರ್ಧೆ

  ರಾಜ್ಯ ಮಟ್ಟದ ಅಂತರ್ಜಾಲ ರಸಪ್ರಶ್ನೆ ಸ್ಪರ್ಧೆ ಮೂಡಲಗಿ: ಬೆಂಗಳೂರ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಮತ್ತು ರಾಜ್ಯದ ಸರ್ವ ಜಿಲ್ಲಾ ಹಾಗೂ ತಾಲ್ಲೂಕು ಸಮಿತಿಯ ಸಹಯೋಗದೊಂದಿಗೆ ರಾಜ್ಯ ಮಟ್ಟದ ನೈರ್ಮಲ್ಯ ಹಾಗೂ ಆರೋಗ್ಯ ವಿಷಯ ಕುರಿತು ಉಚಿತ “ಅಂತರ್ಜಾಲ ರಸಪ್ರಶ್ನೆ ಸ್ಪರ್ಧೆ”ಯನ್ನು ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ 6, 7, 8 ಮತ್ತು 9ನೆಯ ತರಗತಿಯ ಶಾಲೆಯ ಸಮಸ್ತ ವಿದ್ಯಾರ್ಥಿಗಳಿಗೆ ದಿ: 19. 03. 2023 …

Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ವಾತ್ಸಲ್ಯ ಕಾರ್ಯಕ್ರಮ

  ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ ಕಿಟ್ ವಿತರಣೆ ಮೂಡಲಗಿ: ‘ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪೂಜ್ಯ ಹೇಮಾವತಿ ಅಮ್ಮನವರ ಕನಸಿನ ಯೋಜನೆಯಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಂಜೂರಾದ ವಾತ್ಸಲ್ಯ ಕಿಟ್ ಅಸಕ್ತ ಬಂಧುಗಳಿಗೆ ಮೂಡಲಗಿ ಪಟ್ಟಣದ ಕರೆಮ್ಮಾ ದೇವಿ ದೇವಸ್ಥಾನ ಹತ್ತಿರದ ಸದಸ್ಯರಿಗೆ ವಿತರಿಸಲಾಯಿತು. ಈ ಸಮಯದಲ್ಲಿ ಯೋಜನೆಯ ತಾಲೂಕಾ ಯೋಜನಾಧಿಕಾರಿ ರಾಜು ನಾಯಕ್, ಮೂಡಲಗಿ ವಲಯದ ಮೇಲ್ವಿಚಾರಾಕಿ ಕಾಮಾಕ್ಷಿ ನಾಯ್ಕ,ತಾಲೂಕಿನ ಸಮನ್ವಯಾಧಿಕಾರಿ ಶೃತಿ ಕೋಳಿ, ಸೇವಾ ಪ್ರತಿನಿಧಿ …

Read More »

ಎಂದಿಗೂ ರಾಜಕೀಯ ನಿವೃತ್ತಿ ಕುರಿತು ಮಾತನಾಡಬೇಡಿ: ಬಾಲಚಂದ್ರ ಅವರಿಗೆ ಒಕ್ಕೂರಿಲಿನಿಂದ ಮನವಿ ಮಾಡಿಕೊಂಡ ದಲಿತ ಮುಖಂಡರು.

ಎಲ್ಲ ಸಮಾಜಗಳು ಸಹೋದರತ್ವ ಭಾವನೆಗಳಿಂದ ನಡೆದಾಗ ಮಾತ್ರ ಅಭಿವೃದ್ದಿ ಸಾಧ್ಯ-ಶಾಸಕ ಬಾಲಚಂದ್ರ ಜಾರಕಿಹೊಳಿ. ಬಾಲಚಂದ್ರ ಜಾರಕಿಹೊಳಿ ಅವರಿಗೆ ಬೃಹತ ಸೇಬು ಹಣ್ಣಿನ ಹಾರ ಹಾಕಿ ಸ್ವಾಗತಿಸಿಕೊಂಡ ದಲಿತ ಬಾಂಧವರು. ಎಂದಿಗೂ ರಾಜಕೀಯ ನಿವೃತ್ತಿ ಕುರಿತು ಮಾತನಾಡಬೇಡಿ: ಬಾಲಚಂದ್ರ ಅವರಿಗೆ ಒಕ್ಕೂರಿಲಿನಿಂದ ಮನವಿ ಮಾಡಿಕೊಂಡ ದಲಿತ ಮುಖಂಡರು. ಘಟಪ್ರಭಾ: ನಿಮ್ಮ ಸಮಾಜವನ್ನು ಪ್ರೀತಿಸುವುದರ ಜೊತೆಗೆ ಮತ್ತೊಂದು ಸಮಾಜದವರ ಬಗ್ಗೆ ಗೌರವ, ಆದರ ಇಟ್ಟುಕೊಳ್ಳಬೇಕು. ಸಮಾಜದಲ್ಲಿ ಪ್ರತಿ ಜಾತಿಗಳು ಸಹೋದರತ್ವ ಮನೋಭಾವನೆಯಿಂದ ನಡೆದುಕೊಂಡಾಗ …

Read More »

ಮಾ.20ರಂದು ಮೂಡಲಗಿಯಲ್ಲಿ ಮುಸ್ಲಿಂ ಸಮಾಜ ಬೃಹತ ಸಮಾವೇಶ-ಮುಲ್ಲಾ

ಮಾ.20ರಂದು ಮೂಡಲಗಿಯಲ್ಲಿ ಮುಸ್ಲಿಂ ಸಮಾಜ ಬೃಹತ ಸಮಾವೇಶ-ಮುಲ್ಲಾ ಮೂಡಲಗಿ: ಅರಭಾವಿ ಮತ ಕ್ಷೇತ್ರದಲ್ಲಿ ಸರ್ವ ಧರ್ಮ ಹಿತ ಚಿಂತಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಅರಭಾವಿ ಮತಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಎಪ್ರೀಲ್-ಮೇ ನಲ್ಲಿ ನಡೆಯುವ ರಾಜ್ಯದ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯ ಬೆಂಬಲಾರ್ಥವಾಗಿ ಮೂಡಲಗಿ ಪಟ್ಟಣದ ತಹಶೀಲ್ದಾರ ಕಛೇರಿ ಹತ್ತಿರ ಮಾ.20 ರಂದು ಮಧ್ಯಹ್ನಾ 12 ಗಂಟೆಗೆ ಅರಭಾವಿ ಮತ ಕ್ಷೇತ್ರದ ಮುಸ್ಲಿಂ ಸಮಾಜ ಭಾಂದವರಿಂದ ಬೃಹತ ಸಮಾವೇಶವನ್ನು …

Read More »

ಮೂಡಲಗಿಯಲ್ಲಿ ವಿದ್ಯುತ್ ವ್ಯತ್ಯಯ

ಮೂಡಲಗಿಯಲ್ಲಿ ವಿದ್ಯುತ್ ವ್ಯತ್ಯಯ ಮೂಡಲಗಿ: 110 ಕೆವಿ ಮೂಡಲಗಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಕಾರ್ಯ ನಿರ್ವಹಣೆ ಕಾಮಗಾರಿ ಕಾರ್ಯವನ್ನು ಕೈಗೊಳ್ಳಲು ಉದ್ದೇಶಿಸಿರುವುದರಿಂದ ಮಾ. 19 ಭಾನುವಾರ ಬೆಳಿಗ್ಗೆ 10 ರಿಂದ ಸಾಯಂಕಾಲ 5 ರ ವರೆಗೆ ಮೂಡಲಗಿ, ಗುರ್ಲಾಪೂರ ಪಟ್ಟಣ ಹಾಗೂ ಎಲ್ಲ 11ಕೆವಿ ನೀರಾವರಿ ಪಂಪಸೆಟ್ಟ ಮಾರ್ಗಗಳ ವಿದ್ಯುತ್ ಪೋರೈಕೆಯಲ್ಲಿ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸಬೇಕು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಮ್‍ಎಸ್ ನಾಗಣ್ಣವರ ಪ್ರಕಟಣೆಯಲ್ಲಿ …

Read More »