Breaking News
Home / Recent Posts (page 49)

Recent Posts

ಪುರಾತನ ಕಾಲದಿಂದಲೂ ಮಹಿಳೆ ಪ್ರತಿಯೊಂದು ಕ್ಷೇತ್ರದಲ್ಲಿ ತನ್ನ ಛಾಪು ಮೂಡಿಸುವ ಒಂದು ಶಕ್ತಿಯಾಗಿದ್ದಾರೆ- ದಿವಾಣಿ ಹಾಗೂ ಜೆ.ಎಂ.ಎಫ್.ಸಿ. ನ್ಯಾಯಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ

ಮೂಡಲಗಿ : ಮಹಿಳೆ ಮತ್ತು ಪುರುಷ ಪರಸ್ಪರ ಹೊಂದಾಣಿಕೆ ಹಾಗೂ ಜವಾಬ್ದಾರಿಯೊಂದಿಗೆ ಮುನ್ನಡೆದಾಗ ಮಾತ್ರ ಯಾವುದೇ ಕ್ಷೇತ್ರದಲ್ಲಾದರೂ ಸಾಧನೆ ಮಾಡಬಹುದು. ಪುರಾತನ ಕಾಲದಿಂದಲೂ ಮಹಿಳೆ ಪ್ರತಿಯೊಂದು ಕ್ಷೇತ್ರದಲ್ಲಿ ತನ್ನ ಛಾಪು ಮೂಡಿಸುವ ಒಂದು ಶಕ್ತಿಯಾಗಿದ್ದಾರೆ ಎಂದು ದಿವಾಣಿ ಹಾಗೂ ಜೆ.ಎಂ.ಎಫ್.ಸಿ. ನ್ಯಾಯಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು. ಸೋಮವಾರದಂದು ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ಬೆಳಗಾವಿಯ ತುಳಿಸಿ ಅಭಿವೃದ್ಧಿ ಸಂಸ್ಥೆ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಮಹಿಳಾ …

Read More »

ಮಾ.14ರಿಂದಗೋಸಬಾಳ ಗ್ರಾಮದ ಗ್ರಾಮದೇವತೆ ದ್ಯಾಮವ್ವದೇವಿ ಜಾತ್ರಾಮಹೋತ್ಸವ

ಮಾ.14ರಿಂದ ಗೋಸಬಾಳ ಗ್ರಾಮದ ಗ್ರಾಮದೇವತೆ ದ್ಯಾಮವ್ವದೇವಿ ಜಾತ್ರಾಮಹೋತ್ಸವ ಬೆಟಗೇರಿ:ಗೋಕಾಕ ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಪ್ರತಿ 5 ವರ್ಷಕ್ಕೊಮ್ಮೆ ನಡೆಯುವ ಇಲ್ಲಿಯ ಗ್ರಾಮದೇವತೆ ಶ್ರೀದ್ಯಾಮವ್ವದೇವಿ ಜಾತ್ರಾಮಹೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮಾ.14ರಿಂದ ಮಾ.17ರವರೆಗೆ ನಡೆಯಲಿವೆ. ಮಾ.14ರಂದು ಮುಂಜಾನೆ 9ಗಂಟೆಗೆ ಸುಮಂಗಲೆಯರಿಂದ ಕುಂಭ, ಆರತಿ, ಸಕಲವಾದ್ಯಮೇಳಗಳೊಂದಿಗೆ ಸ್ಥಳೀಯ ಬಸ್ ತಂಗುದಾಣಕ್ಕೆ ಹೋಗುವುದು. ಜಾತ್ರಾಮಹೋತ್ಸವ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸುಣಧೋಳಿ ಅಭಿನವ ಶಿವಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಶ್ರೀದೇವಿಗೆ ಪೂಜೆ ಸಲ್ಲಿಸುವರು, …

Read More »

15ರಂದು ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆಯ ಕಾರ್ಯಕ್ರಮವನ್ನು ರದ್ದು ಮಾಡಿ ಮಾ.17ಕ್ಕೆ ಮುಂದೂಡಲಾಗಿದೆ

ಮೂಡಲಗಿ: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್ ದ್ರುವನಾರಾಯಣ ಅವರ ನಿಧನದ ಹಿನ್ನಲೆಯಲ್ಲಿ ಮಾ.15ರಂದು ಮೂಡಲಗಿಯಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆಯ ಕಾರ್ಯಕ್ರಮವನ್ನು ಅಂದು ರದ್ದು ಮಾಡಿ ಮಾ.17ಕ್ಕೆ ಮುಂದೂಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಅರವಿಂದ ದಳವಾಯಿ ತಿಳಿಸಿದ್ದಾರೆ. ಮಾ.15ರಂದು ಮೂಡಲಗಿಯ ಶ್ರೀ ಬಸವರಂಗ ಮಂಟಪದ ಮೈದಾನದಲ್ಲಿ ವೇದಿಕೆ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಈ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಲಿದ್ದರು ಆದರೆ ದ್ರುವನಾರಾಯಣ ಅವರ ಅಕಾಲಿಕ ನಿಧನದಿಂದಾಗಿ ಕಾರ್ಯಕ್ರಮವನ್ನು ಮಾ.15ರ ಬದಲು 17ಕ್ಕೆ …

Read More »

ಮಾರ್ಚ 13ರಂದು ಮಹಿಳಾ ಸಾಧಕಿಯರಿಗೆ ವೀರ ರಾಣಿ ಕಿತ್ತೂರ ಚನ್ನಮ್ಮ ಪ್ರಶಸ್ತಿ ಪ್ರಾಧಾನ ಕಾರ್ಯಕ್ರಮ

ಮೂಡಲಗಿ : ತುಳಸಿ ಅಭಿವೃದ್ಧಿ ಸಂಸ್ಥೆ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಡಲಗಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಸಾಧಕಿಯರಿಗೆ ವೀರ ರಾಣಿ ಕಿತ್ತೂರ ಚನ್ನಮ್ಮ ಪ್ರಶಸ್ತಿ ಪ್ರಾದನ ಕಾರ್ಯಕ್ರಮ ಮಾರ್ಚ 13ರಂದು ಮಧ್ಯಹ್ನಾ 1;30ಕ್ಕೆ ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ಜರುಗಲಿದೆ ಎಂದು ತುಳಿಸಿ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷೆ ಲಕ್ಷ್ಮೀ …

Read More »

ಸಿದ್ದಣ್ಣ ದುರದುಂಡಿ ಅವರಿಗೆ ಬೆಳಗಾವಿ ಜಿಲ್ಲಾ ಮಟ್ಟದ ಸಾಂಘಿಕ ಯುವ ಪ್ರಶಸ್ತಿ

ಮೂಡಲಗಿ : ತಾಲ್ಲೂಕಿನ ಹಳ್ಳೂರ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂಘದ ಅಧ್ಯಕ್ಷ ಹಾಗೂ ಯುವ ಸಂಘಟಕ ಸಿದ್ದಣ್ಣ ದುರದುಂಡಿ ಅವರಿಗೆ ಭಾರತ ಸರ್ಕಾರ ನೆಹರು ಯುವ ಕೇಂದ್ರ ಬೆಳಗಾವಿ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ 2022 – 23 ನೇ ಸಾಲಿನ ಬೆಳಗಾವಿ ಜಿಲ್ಲಾ ಮಟ್ಟದ ಸಾಂಘಿಕ ಯುವ ಪ್ರಶಸ್ತಿಯನ್ನು ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಸಮಾಜ ಸೇವಕ ಸಿದ್ದಣ್ಣ ದುರದುಂಡಿ ಅವರು …

Read More »

ಜನಪದ ವಚನ ಸಾಹಿತ್ಯವು ವೈಚಾರಿಕತೆಯ ಕುರುಹುಗಳು: ಡಾ. ಪೋತರಾಜ

  ಜನಪದ ವಚನ ಸಾಹಿತ್ಯವು ವೈಚಾರಿಕತೆಯ ಕುರುಹುಗಳು: ಡಾ. ಪೋತರಾಜ ಮೂಡಲಗಿ: ಅನಾದಿ ಕಾಲದಿಂದಲೂ ವಿಜ್ಞಾನ ಬಳಕೆಯಲ್ಲಿದ್ದು ಆಯಾ ಕಾಲಘಟ್ಟದಲ್ಲಿ ತನ್ನ ವಿಶಿಷ್ಟ ರೂಪತಾಳಿ ಮಹೋನ್ನತ ಕೊಡುಗೆ ನೀಡುತಾ ಬಂದಿರುವ ಕುರುಹುಗಳೇ ನಮ್ಮ ಜನಪದ ಮತ್ತು ವಚನ ಸಾಹಿತ್ಯ ಹಾಗೆಯೇ ವಚನಕಾರರೇ ಸಮಾಜ ಪರಿವರ್ತನೆಯ ನಿಜ ಸಂಶೋಧಕ, ವಿಜ್ಞಾನಿಗಳೆಂದು ಉಪನ್ಯಾಸಕ,ಸಾಹಿತಿ, ಸಂಶೋಧಕ ಡಾ. ಮಹಾದೇವ ಪೆÇೀತರಾಜ ಅಭಿಪ್ರಾಯ ಪಟ್ಟರು. ಅವರು ತಾಲ್ಲೂಕಿನ ಖಾನಟ್ಟಿ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಕರ್ನಾಟಕ …

Read More »

ವೀರಶೈವಲಿಂಗಾಯತ ಮಹಿಳಾ ಸಂಘ ಉದ್ಘಾಟನೆ

ವೀರಶೈವಲಿಂಗಾಯತ ಮಹಿಳಾ ಸಂಘ ಉದ್ಘಾಟನೆ ಮೂಡಲಗಿ: ಮಹಿಳೆಯರು ತೊಡಗಿಕೊಂಡು ಸ್ವ ಉದ್ಯೋಗಕ್ಕೆ ಸಿಗುವ ನೇರವನ್ನು ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ವೀರಶೈವಲಿಂಗಾಯತ ಸಂಘದ ಬೆಳಗಾವಿ ಜಿಲ್ಲಾ ಅಧ್ಯಕ್ಷೆ ಶಿಲ್ಪಾ ಗೋಡಿಗೌಡರ ಹೇಳಿದರು. ಅವರು ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಸೋಸೈಟಿಯ ಸಭಾಂಗಣದಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಮೂಡಲಗಿ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ ಭಾಗವಹಿಸಿ ಮಾತನಾಡಿ, ಸಂಘಟನೆಗಳಿಂದ ನಮ್ಮ ಭಾರತೀಯ ಸಂಸ್ಕøತಿಯ ಮೆರಗು ಹೆಚ್ಚುತ್ತದೆ ಎಂದರು. ಇದೆ ಸಮಯದಲ್ಲಿ …

Read More »

ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದಾರೆ- ಡಾ.ಭಾರತಿ ಕೋಣಿ

ಮೂಡಲಗಿ: ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದಾರೆ ಮಹಿಳೆ ಅಬಲೆಯಲ್ಲ ಸಬಲೆ ಎಂದು ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ಭಾರತಿ ಕೋಣಿ ಹೇಳಿದರು. ಅವರು ಮೂಡಲಗಿ ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರದ ಸಭಾ ಭವನದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ ಶ್ರೀ ಭಗೀರಥ ಯುವತಿ ಮಂಡಲ ಹಳ್ಳೂರ ಹಾಗೂ ಮಂಜುನಾಥ ಸೈನಿಕ ತರಬೇತಿ ಕೇಂದ್ರ ಮೂಡಲಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ ಅಂತರಾಷ್ಟ್ರೀಯ …

Read More »

“ನನ್ನ ಕ್ಷೇತ್ರದ ಜನರೇ ನನ್ನ ದೇವರು” ಎಂದ ಶಾಸಕ‌ ಬಾಲಚಂದ್ರ ಜಾರಕಿಹೊಳಿ.

“ನನ್ನ ಕ್ಷೇತ್ರದ ಜನರೇ ನನ್ನ ದೇವರು” ಎಂದ ಶಾಸಕ‌ ಬಾಲಚಂದ್ರ ಜಾರಕಿಹೊಳಿ. *ವಿಜಯ ಸಂಕಲ್ಪ ಯಾತ್ರೆಗೆ ಅದ್ದೂರಿ ಸ್ವಾಗತ ಕೋರಿದ ಕಾರ್ಯಕರ್ತರು, ಬೃಹತ್ ಬೈಕ್ ರ್ಯಾಲಿ-ರೋಡ್ ಶೋ. ಕೇಸರಿಮಯವಾದ ಮೂಡಲಗಿ ಪಟ್ಟಣ ಮೂಡಲಗಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಿದ ಮೇಲೆ ಪ್ರತಿಯೊಬ್ಬರಿಗೂ ಸಾಕ್ಷಾತಃ ದೇವರಂತೆ ಕಾಣುತ್ತಾರೆ. ಅಷ್ಟೊಂದು ದೈವಿ ಸಂಕಲ್ಪ ಅವರಲ್ಲಿದೆ. ಹೀಗಾಗಿಯೇ ಜಗತ್ತಿನ ಹಲವಾರು ರಾಷ್ಟçಗಳು ಭಾರತದತ್ತ ಆಕರ್ಷಿಸಲು ಕಾರಣವಾಗಿದೆ. ಮೋದಿಯವರು ವಿಶ್ವಗುರುವಾಗಿ ಕಾಣತೊಡಗಿದ್ದಾರೆಂದು ಶಾಸಕ, ಕೆಎಮ್‌ಎಫ್ …

Read More »

ಪೊಲೀಸ್ ಠಾಣೆಯಲ್ಲಿ ಹೋಳಿ ಹಬ್ಬದ ಶಾಂತಿ ಸಭೆ

ಮೂಡಲಗಿ: ಪಟ್ಟಣವು ಭಾವೈಕ್ಯತೆಯ ಸ್ಥಾನವಾಗಿದ್ದು, ಎಲ್ಲ ಹಬ್ಬ ಹರಿದಿನಗಳನ್ನು ಸಂಪ್ರದಾಯದಂತೆ ಆಚರಿಸಿ ಸಂಭ್ರಮಿಸಬೇಕು ಆಚರಣೆಯಲ್ಲಿ ಸೌಹಾರ್ದತೆಯನ್ನು ಬೆರೆಸಿದರೆ ಎಲ್ಲರಲ್ಲಿ ಅನ್ಯೋನ್ಯತೆ ಉಂಟಾಗಿ ಹಬ್ಬಕ್ಕೆ ಹೊಸ ಕಳೆ ಬರುತ್ತದೆ ಎಂದು ಪಿಎಸ್‍ಐ ಸೋಮೇಶ ಗೆಜ್ಜಿ ಹೇಳಿದರು. ರವಿವಾರದಂದು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಜರುಗಿದ ಹೋಳಿ ಹಬ್ಬದ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಾರ್ಚ 7 ಮತ್ತು 8ರಂದು ಹೋಳಿ ಹಬ್ಬದ ಆಚರಣೆ ಇದ್ದು ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು …

Read More »