ಮೂಡಲಗಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ 10ಕೋಟಿ ರೂಪಾಯಿ ಮಂಜೂರು –ಕಂದಾಯ ಸಚಿವ ಆರ್.ಅಶೋಕ್ ಮೂಡಲಗಿಯಲ್ಲಿ ಉಪ ನೋಂದಣಾಧಿಕಾರಿಗಳ ಕಛೇರಿ ಉದ್ಘಾಟಿಸಿದ ಸಚಿವರು ಬಾಲಚಂದ್ರ ಜಾರಕಿಹೊಳಿ ಅವರು ನಮ್ಮ ಬಿಜೆಪಿ ಪವರ್ ಫುಲ್ ಲೀಡರ್- ಆರ್.ಅಶೋಕ್ ಮೂಡಲಗಿ: ಮೂಡಲಗಿ ತಾಲೂಕಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ 10 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಪಟ್ಟಣದ ತಹಶೀಲ್ದಾರ …
Read More »ಬೆಟಗೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯ ಚುನಾವಣೆ ಡಿ.20ರಂದು ಸಂಘದ ಕಾರ್ಯಾಲಯದಲ್ಲಿ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಸೋಮಗೌಡ್ರ, ಉಪಾಧ್ಯಕ್ಷೆಯಾಗಿ ಗಿರೆವ್ವ ಮೆಳೆಣ್ಣವರ ಅವಿರೂಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಸಹಕಾರ ಇಲಾಖೆಯ ಎಸ್.ಬಿ.ಬಿರಾದಾರ ಪಾಟೀಲ ಅವರು ತಿಳಿಸಿದ ಬಳಿಕ ಸಂಘದ ಆಡಳಿತ ಮಂಡಳಿಗೆ ಅವಿರೂಧವಾಗಿ ಆಯ್ಕೆಗೊಂಡ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಹಾಗೂ ಸಂಘದ ನಿಕಟಪೂರ್ವ …
Read More »ಉಪ ನೋಂದಣಿ ಕಚೇರಿ ಉದ್ಘಾಟನೆ
ಉಪ ನೋಂದಣಿ ಕಚೇರಿ ಉದ್ಘಾಟನೆ ಮೂಡಲಗಿ: ಪಟ್ಟಣದ ತಹಶೀಲ್ದಾರ ಕಚೇರಿಯ ಆವರಣದಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ನೂತನ ಉಪ ನೋಂದಣಾಧಿಕಾರಿಗಳ ಕಛೇರಿಯ ಉದ್ಘಾಟನಾ ಸಮಾರಂಭ ಮಂಗಳವಾರ ಡಿ.20 ರಂದು ಸಂಜೆ 5ಗಂಟೆಗೆ ಜರುಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮತ್ತು ಕಂದಾಯ ಸಚಿವ ಆರ್.ಅಶೋಕ ಉದ್ಘಾಟಿಸುವರು, ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷತೆಯನ್ನು ವಹಿಸುವರು. ಮುಖ್ಯ ಅತಿಥಿಗಳಾಗಿ ಮುಜರಾಯಿ, ಹಜ್ ಮತ್ತು ಪಕ್ವ್ …
Read More »ನಮ್ಮ ರೊಟ್ಟಿ ನಮ್ಮ ಹಾಸಿಗೆ ಎಂಬ ಉದ್ದೇಶದಿಂದ ರೊಟ್ಟಿ ಸಂಗ್ರಹ
ಮೂಡಲಗಿ : ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕಲ್ಪಿಸುವ ಉದ್ದೇಶದಿಂದ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಡಿ.22ರಂದು 25 ಲಕ್ಷ ಜನರನ್ನು ಸೇರಿಸಿ ಬೆಳಗಾವಿಯ ಸುವರ್ಣ ವಿಧಾನ ಸೌಧದ ಮುಂದೆ ಪ್ರತಿಭಟನೆ ಮಾಡುವ ಹಿನ್ನೆಲೆ ನಮ್ಮ ರೊಟ್ಟಿ ನಮ್ಮ ಹಾಸಿಗೆ ಎಂಬ ಉದ್ದೇಶದಿಂದ ರೊಟ್ಟಿ ಸಂಗ್ರಹ ಮಾಡಲಾಗುತ್ತಿದೆ ಎಂದು ಪಂಚಮಸಾಲಿ ರಾಜ್ಯ ಸೈನಿಕ ಘಟಕದ ಅಧ್ಯಕ್ಷ ಬಾಳೇಶ ಶಿವಾಪೂರ ಹೇಳಿದರು. ರವಿವಾರದಂದು ತಾಲೂಕಿನ ಹಳ್ಳೂರ ಗ್ರಾಮದ ಪಂಚಮಸಾಲಿ ದೈವದ …
Read More »ಮೂಡಲಗಿ: ರಾಜ್ಯದಲ್ಲಿ ಉಪ್ಪಾರ ಸಮಾಜಕ್ಕೆ ಪರಿಶಿಷ್ಟ ಜಾತಿ (ಎಸ್ಸಿ) ಪರಿಶಿಷ್ಟ ಪಂಗಡದ (ಎಸ್.ಟಿ) ಮೀಸಲಾತಿ ನೀಡುವಂತೆ ಆಗ್ರಹಿಸಿ ಮಂಗಳವಾರ ಡಿ.21 ರಂದು ಮುಂಜಾನೆ 10 ಗಂಟೆಗೆ ಬೆಳಗಾವಿಯ ಸುವರ್ಣ ಸೌಧ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದ್ದು, ಉಪ್ಪಾರ ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿಬೇಕೆಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ ಮತ್ತು ಜಿಲ್ಲಾಧ್ಯಕ್ಷ ಮಂಜುನಾಥ ರಾಜಪ್ಪನವರ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಸುಮಾರು 50 ಲಕ್ಷಕ್ಕೂ …
Read More »ಮನುಷ್ಯನಿಗೆ ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಬೇಕಾದರೆ ಕ್ರೀಡೆ ಅತ್ಯವಶ್ಯಕವಾಗಿದೆ – ಸರ್ವೋತ್ತಮ ಜಾರಕಿಹೊಳಿ
ಮೂಡಲಗಿ: ಮನುಷ್ಯನಿಗೆ ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಬೇಕಾದರೆ ಕ್ರೀಡೆ ಅತ್ಯವಶ್ಯಕವಾಗಿದೆ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ, ತಾಲೂಕಾ ಪಂಚಾಯತ್ ಮೂಡಲಗಿ ಗ್ರಾಮ ಪಂಚಾಯತ ವಡೇರಹಟ್ಟಿ, ಪೂರ್ವಿ ಕ್ರೀಡಾ ಮತ್ತು ಸಾಂಸ್ಕೃತಿಕ ಯುವ ಸಂಘ ವಡೇರಹಟ್ಟಿ, ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ …
Read More »ಹೆಸ್ಕಾಂ ಜಾಗೃತಿ ಸಭೆ
ಹೆಸ್ಕಾಂ ಜಾಗೃತಿ ಸಭೆ ಮೂಡಲಗಿ: ವಿದ್ಯುತ್ ಬಳಕೆಯಲ್ಲಿ ಸುರಕ್ಷತೆಯ ಸಲಹೆಗಳು, ಉಳಿತಾಯದ ಕ್ರಮಗಳು, ಎಲ್ಇಡಿ ಬಳಕೆಯ ಪ್ರಯೋಜನಗಳು, ಕೇಂದ್ರ ಸರಕಾರದ ಸೌರ ಚಾವಣಿ ಯೋಜನೆ ಹಂತ-2, ಪ್ರಧಾನ ಮಂತ್ರಿ ಕಿಸಾನ ಉರ್ಜಾ ಸುರಕ್ಷಾ ಉತ್ಥಾನ ಮಹಾಭಿಯಾನ (ಪಿಎಂ ಕುಸುಮ) ಇವಿ ಚಾರ್ಜಿಂಗ ಸೆಂಟರ್ ಇತ್ಯಾದಿಗಳ ಬಗ್ಗೆ ಗ್ರಾಹಕರಲ್ಲಿ ಜಾಗೃತಿ ಮೂಡಿಸಲು ಮೂಡಲಗಿ ಹೆಸ್ಕಾಂ ಉಪ ವಿಭಾಗದ ವತಿಯಿಂದ ವಿವಿಧ ಗ್ರಾಮಗಳಲ್ಲಿ ಜಾಗೃತಿ ಸಭೆ ಹಮ್ಮಿಕೊಳ್ಳಲಾಗಿದೆ. ಡಿ.19 ರಂದು ಮೂಡಲಗಿ-2 ಗುಜನಟ್ಟಿಯಲ್ಲಿ …
Read More »ನಮ್ಮ ನೆಲವನ್ನು ಒಂದಿಂಚೂ ಬಿಟ್ಟುಕೊಡುವುದಿಲ್ಲ. ಎಂದೆಂದಿಗೂ ಬೆಳಗಾವಿ ನಮ್ಮದೇ : ಶಾಸಕ ಬಾಲಚಂದ್ರ ಜಾರಕಿಹೊಳಿ
ನಮ್ಮ ನೆಲವನ್ನು ಒಂದಿಂಚೂ ಬಿಟ್ಟುಕೊಡುವುದಿಲ್ಲ. ಎಂದೆಂದಿಗೂ ಬೆಳಗಾವಿ ನಮ್ಮದೇ : ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಟಗೇರಿಯಲ್ಲಿ ಜರುಗಿದ ಗೋಕಾಕ ತಾಲೂಕಾ 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೆರವಣಿಗೆ ಜಾಥಾಕ್ಕೆ ಚಾಲನೆ ನೀಡಿದ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಗೋಕಾಕ(ಡಾ.ಬೆಟಗೇರಿ ಕೃಷ್ಣಶರ್ಮ ವೇದಿಕೆ, ಬೆಟಗೇರಿ) : ಬೆಳಗಾವಿ ಎಂದೆಂದಿಗೂ ನಮ್ಮದೇ. ಗಡಿ ವಿವಾದ ಮುಗಿದ ಅಧ್ಯಾಯ. ಗಡಿ ವಿಷಯದಲ್ಲಿ ಪ್ರತಿ ಚುನಾವಣೆ ಬಂದಾಗೊಮ್ಮೆ …
Read More »ಪಿ.ಎಂ.ಎಫ್.ಎಂ.ಇ ಯೋಜನೆಯಡಿ ಕರ್ನಾಟಕದ 30 ಜಿಲ್ಲೆಗಳಿಗೆ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ 21 ವಿಶಿಷ್ಟ ಉತ್ಪನ್ನಗಳು
ಮೂಡಲಗಿ: ಕೇಂದ್ರೀಯ ಪ್ರಾಯೋಜಿತ ಪ್ರಧಾನ ಮಂತ್ರಿ ಮೈಕ್ರೋ ಫುಡ್ ಪ್ರೊಸೆಸಿಂಗ್ ಎಂಟರ್ಪ್ರೈಸಸ್ (ಪಿ.ಎಂ.ಎಫ್.ಎಂ.ಇ) ಯೋಜನೆಯಡಿ ಕರ್ನಾಟಕದ 30 ಜಿಲ್ಲೆಗಳಿಗೆ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ 21 ವಿಶಿಷ್ಟ ಉತ್ಪನ್ನಗಳನ್ನು ಅನುಮೋದಿಸಲಾಗಿದೆ ಎಂದು ಆಹಾರ ಸಂಸ್ಕರಣಾ ಕೈಗಾರಿಕೆಗಳ ಇಲಾಖೆ ಸಚಿವ ಪಶುಪತಿ ಕುಮಾರ ಪರಸ ಅವರು ಉತ್ತರಿಸಿದ್ದಾರೆ ಎಂದು ಸಂಸದ ಈರಣ್ಣ ಕಡಾಡಿ ಅವರು ಹೇಳಿದರು. ರಾಜ್ಯ ಸಭೆಯ ಚಳಿಗಾಲದ ಅಧಿವೇಶನದಲ್ಲಿ ಪ್ರಧಾನ ಮಂತ್ರಿ ಮೈಕ್ರೋ ಫುಡ್ ಪ್ರೊಸೆಸಿಂಗ್ ಎಂಟರ್ಪ್ರೈಸಸ್ …
Read More »ತೊಂಡಿಕಟ್ಟಿ ಶಾಲೆಗೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಮನವಿ
ರಾಮದುರ್ಗ: ತಾಲೂಕಿನ ತೊಂಡಿಕಟ್ಟಿ ಗ್ರಾಮದಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಪ್ರೌಢ ಶಾಲೆಯನ್ನಾಗಿ ಮಾರ್ಪಡಿಸುವಂತೆ ಮತ್ತು ವಿವಿಧ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಶಾಲೆಯ ಮುಖ್ಯ ಶಿಕ್ಷಕ ಎಂ.ಎ.ಬನ್ನೂರ ಅವರು ಮನವಿ ಸಲ್ಲಿಸಿದರು. ಶುಕ್ರವಾರದಂದು ತೊಂಡಿಕಟ್ಟಿ ಶಾಲಾ ಆವರಣದಲ್ಲಿ ಜರುಗಿದ ರಾಕೇಶ ಚಿಕ್ಕೂರ ಅವರ ಮಧುವೆಗೆ ಆಗಮಿಸದ ಸಚಿವ ಗೋವಿಂದ ಕಾರಜೋಳ ಅವರಿಗೆ ಸಲ್ಲಿಸಿದ ಮನವಿಯಲ್ಲಿ ತೊಂಡಿಕಟ್ಟಿ …
Read More »