Breaking News
Home / Recent Posts (page 76)

Recent Posts

ಢವಳೇಶ್ವರದಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಉದ್ಘಾಟನೆ

ಢವಳೇಶ್ವರದಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಉದ್ಘಾಟನೆ ಮೂಡಲಗಿ: ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತರಾಜ್ ಇಲಾಖೆಯ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಉದ್ಘಾಟನಾ ಸಮಾರಂಭ ಸುಣಧೋಳಿಯ ಶ್ರೀ ಶಿವಾನಂದ ಸ್ವಾಮೀಜಿಗಳು ಮತ್ತು ಕಕಮರಿಯ ಶ್ರೀ ಗುರುಲಿಂಗ ಜಂಗಮ ಸ್ವಾಮೀಜಿಗಳ ಸಾನಿದ್ಯದಲ್ಲಿ ಜರುಗಿತು. ಗ್ರಂಥಾಲಯ ಉದ್ಘಾಟಿಸಿದ ಯುವ ನಾಯಕ ಸರ್ವೋತಮ ಜಾರಕಿಹೊಳಿ ಮಾತನಾಡಿ, ಪುಸ್ತಕ ಸ್ನೇಹ ಬೆಳೆಸುವುದದರಿಂದ ಮೆದುಳಿನ ಬೆಳವಣಿಗೆ ವೇಗ ಪಡೆಯುವುದಷ್ಟೆ ಅಲ್ಲದೆ ಬುದ್ದಿಮತ್ತೆಯೂ …

Read More »

ಸಹಕಾರಿ ಸಂಘಗಳು ಗ್ರಾಮೀಣ ಭಾಗದ ಜನರ ಆರ್ಥಿಕ ಚಟುವಟಿಕೆಗಳ ಕೇಂದ್ರಗಳಾಗಿವೆ

ಮೂಡಲಗಿ: ಸಹಕಾರಿ ಸಂಘಗಳು ಗ್ರಾಮೀಣ ಭಾಗದ ಜನರ ಆರ್ಥಿಕ ಚಟುವಟಿಕೆಗಳ ಕೇಂದ್ರಗಳಾಗಿವೆ ಹಾಗೂ ಸಹಕಾರಿ ಸಂಘಗಳು ಗ್ರಾಹಕರಿಗೆ ನೀಡುತ್ತಿರುವ ಸೇವೆ ಮತ್ತು ಕಾರ್ಯದಕ್ಷತೆ ಪ್ರಶಂಸನೀಯವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರ ಸೆ.14 ರಂದು ಮೂಡಲಗಿ ನಗರದ ಶ್ರೀ ಅನ್ನಪೂರ್ಣೇಶ್ವರಿ ಸಹಕಾರ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು ಸಹಕಾರ ಕ್ಷೇತ್ರ ಗ್ರಾಮೀಣ ಭಾಗದ ಜನರ ಆರ್ಥಿಕ ಅವಶ್ಯಕತೆಗಳನ್ನು ಪೂರೈಸುವ ಕೇಂದ್ರಗಳಾಗಿವೆ ಆ ಮೂಲಕ …

Read More »

ಶಿಕ್ಷಣ ಇಲಾಖೆಯ ಆಶೋತ್ತರಗಳನ್ನು ಈಡೇರಿಸುವಲ್ಲಿ ಲಿಪಿಕ ನೌಕರರ ಕೊಡುಗೆ ಅಪಾರ- ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ

ಮೂಡಲಗಿ : ಇಂದಿನ ತಂತ್ರಾoಶಯುಕ್ತ ಆಡಳಿತದಲ್ಲಿ ಪ್ರಮುಖವಾಗಿ ಗಣಕಯಂತ್ರದ ಜ್ಞಾನ ಅತ್ಯಾವಶ್ಯಕವಾಗಿದೆ. ಶಿಕ್ಷಣ ಇಲಾಖೆಯ ಆಶೋತ್ತರಗಳನ್ನು ಈಡೇರಿಸುವಲ್ಲಿ ಲಿಪಿಕ ನೌಕರರ ಕೊಡುಗೆ ಅಪಾರವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಪಟ್ಟಣದ ಕೆ.ಎಚ್ ಸೋನವಾಲಕರ ಸರಕಾರಿ ಪ್ರೌಢ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ತಾಲೂಕಾ ಲಿಪಿಕ ನೌಕರ ಸಂಘಗಳ ಸಂಯುಕ್ತಾಶ್ರಯದಲ್ಲಿ ಜರುಗಿದ ಎಫ್.ಡಿ.ಎ ಮತ್ತು ಎಸ್.ಡಿ.ಎ ಸಿಬ್ಬಂದಿಗಳಿಗೆ ತಂತ್ರಜ್ಞಾನ ಆಧಾರಿತ ಆಡಳಿತಾತ್ಮಕ ತರಬೇತಿಯ ಒಂದು ದಿನದ …

Read More »

ಶ್ರೀಗಳ ನೇತೃತ್ವದಲ್ಲಿ ಬೆಂಗಳೂರು ವರೆಗೂ ಪಾದಯಾತ್ರೆ ಮೂಲಕ ನೇರವಾಗಿ ಸಿಎಂ ಅವರಿಗೆ ಮನವಿ

ಮೂಡಲಗಿ: ಉಪ್ಪಾರ ಸಮಾಜವನ್ನು ಎಸಿ-ಎಸ್ಟಿಗೆ ಸೇರಿಸಬೇಕೆಂಬ ಉದ್ದೇಶದಿಂದ ಅನೇಕ ವರ್ಷಗಳ ಕಾಲದಿಂದಲೂ ಹೋರಾಟ ಮಾಡುತ್ತಾ ಬಂದಿದ್ದು, ಸರ್ಕಾರ ನಮ್ಮ ಹೋರಾಟಕ್ಕೆ ಇಲ್ಲಿಯವರೆಗೂ ಸ್ಪಂದಿಸಿಲ್ಲ ಆದರಿಂದ ತಾಲೂಕಿನ ಉಪ್ಪಾರ ಸಮಾಜದಿಂದ ಅ.21ರಂದು ಸಾಂಕೇತಿಕವಾಗಿ ಸುಮಾರು ಹತ್ತು ಸಾವಿರ ಜನ ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಸೇರಿ ತಹಶೀಲ್ದಾರ ಮೂಲಕ ಸಿಎಂ ಅವರಿಗೆ ಮನವಿ ಸಲ್ಲಿಸಲಾಗುವುದೆಂದು ಎಂದು ಸಮಾಜ ಹಿರಿಯ ಮುಖಂಡ ಬಿ ಬಿ ಹಂದಿಗುಂದ ಹೇಳಿದರು. ಶನಿವಾರದಂದು ಪಟ್ಟಣದ ಈರಣ್ಣ ದೇವಸ್ಥಾನದಲ್ಲಿ …

Read More »

ಉಪ್ಪಾರ ಸಮಾಜವನ್ನು ಪರಿಶಿಷ್ಠ ಜಾತಿ ಅಥವಾ ಪರಿಶಿಷ್ಠ ಪಂಗಡಕ್ಕೆ ಸೇರಿಸಿ- ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

ಮೂಡಲಗಿ: ರಾಜ್ಯದಲ್ಲಿ ಉಪ್ಪಾರ ಸಮಾಜವನ್ನು ಪರಿಶಿಷ್ಠ ಜಾತಿ ಅಥವಾ ಪರಿಶಿಷ್ಠ ಪಂಗಡಕ್ಕೆ ಸೇರಿಸಬೇಕೆಂದು ಒತ್ತಾಯಿಸಿ ಉಪ್ಪಾರ ಸಮಾಜ ನಡೆಸುತ್ತಿರುವ ಹೋರಾಟದ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಗುರುವಾರ ಸೆ.13 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ರಾಜ್ಯದಾದ್ಯಂತ ಸುಮಾರು 52 ಲಕ್ಷಕ್ಕೂ ಅಧಿಕ ಜನ ಉಪ್ಪಾರ ಜನಾಂಗದವರಿದ್ದು, ಇವರೆಲ್ಲ ಹಿಂದುಳಿದ ವರ್ಗದವರಾಗಿರುತ್ತಾರೆ. ಭೂಮಂಡಲಕ್ಕೆ ಗಂಗೆಯನ್ನು ಹರಿಸಿ ತಂದಿರುವ …

Read More »

ಉಪ್ಪಾರ ಸಮುದಾಯದ ಹೋರಾಟಕ್ಕೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಬಲ

ಉಪ್ಪಾರ ಸಮುದಾಯದ ಹೋರಾಟಕ್ಕೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಬಲ ಸಧ್ಯದಲ್ಲೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಪಂಚಮಸಾಲಿ, ಉಪ್ಪಾರಗಳ ಮೀಸಲಾತಿ ಹಾಗೂ ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಮಾಡುವಂತೆ ಮನವಿ ಮಾಡಿಕೊಳ್ಳುವೆ ಗೋಕಾಕ : ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ನಡೆಸುತ್ತಿರುವ ಉಪ್ಪಾರ ಸಮುದಾಯದ ಹೋರಾಟಕ್ಕೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಗುರುವಾರದಂದು ಹೇಳಿಕೆ …

Read More »

ಕುಟುಂಬದಲ್ಲಿ ಸತಿ-ಪತಿಗಳ ನಡುವೆ ಕಲಹಗಳು ಆಗುವುದು ಸಾಮಾನ್ಯ, ಕಲಹದಿಂದ ಪುರುಷರು ದುಶ್ಚಟಗಳಿಗೆ ದಾಸರಾಗಬಾರದು- ಕ್ಷೇತ್ರಶೀಕ್ಷಣಾಧಿಕಾರಿ ಅಜೀತ ಮನ್ನಿಕೇರಿ

ಮೂಡಲಗಿ: ಧರ್ಮಸ್ಥಳದ ಪೂಜ್ಯ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಮ್ಮಿಕೊಂಡ ಸಮಾಜಮುಖಿ ಕಾರ್ಯಗಳನ್ನು ಪ್ರತಿಯಬ್ಬರು ಸದುಪಯೋಗಪಡಿಸಿಕೊಂಡು ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬಾಳಬೇಕೆಂದು ಎಂದು ಮೂಡಲಗಿ ಕ್ಷೇತ್ರಶೀಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಹೇಳಿದರು ಅವರು ಪಟ್ಟಣದ ಶ್ರೀ ಮಹಾಲಕ್ಷ್ಮೀ ಅರ್ಬನ್ ಸೊಸಾಯಿಟಿಯ ಸಭಾ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಅಖಿಲ್ ಕರ್ನಾಟಕ ಜನಜಾಗೃತಿ ವೇದಿಕೆ ಆಶ್ರಯದಲ್ಲಿ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆ …

Read More »

ಅರಭಾವಿ ಮತಕ್ಷೇತ್ರದಿಂದ ಸುಮಾರು ಐದು ಸಾವಿರ ಜನ ಕಾಂಗ್ರೇಸ್‍ನ ಭಾರತ ಜೋಡೋ ಪಾದಯಾತ್ರೆಯಲ್ಲಿ – ಕಾಂಗ್ರೇಸ್ ಮುಖಂಡ ಅರವಿಂದ್ರ ದಳವಾಯಿ

ಮೂಡಲಗಿ: ಅರಭಾವಿ ಮತಕ್ಷೇತ್ರದಿಂದ ಸುಮಾರು ಐದು ಸಾವಿರ ಜನರು ಕಾಂಗ್ರೇಸ್‍ನ ಭಾರತ ಜೋಡೋ ಯಾತ್ರೆಯ ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೇಸ್ ಮುಖಂಡ ಅರವಿಂದ್ರ ದಳವಾಯಿ ಹೇಳಿದರು. ಗುರುವಾರದಂದು ಮೂಡಲಗಿ ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ದೇಶದ ಐಕ್ಯತೆಯ ದೃಷ್ಟಿಯಲ್ಲಿ ಭಾರತ ಜೋಡೋ ಯಾತ್ರೆ ಹಮ್ಮಿಕೊಂಡಿದ್ದಾರೆ ಆದರಿಂದ ಬಳ್ಳಾರಿ ಜಿಲ್ಲೆಯ ರಾಮಪೂರದಲ್ಲಿ ಅ.14ರಂದು ನಡೆಯಲ್ಲಿರುವ ಜೋಡೋ ಯಾತ್ರೆಯಲ್ಲಿ ಅರಭಾವಿ ಮತಕ್ಷೇತ್ರದ ಕಾಂಗ್ರೇಸ್ …

Read More »

ಡಾ. ಪ್ರಭಾಕರ ಕೋರೆ ಅವರ 75ನೇ ಅಮೃತ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಭಾಗವಹಿಸಬೇಕು- ಕಾಂಗ್ರೇಸ್ ಮುಖಂಡ ಲಕ್ಕಣ್ಣ ಸವಸುದ್ದಿ

ಮೂಡಲಗಿ: ಬೆಳಗಾವಿ ಜಿಲ್ಲೆಯ ಅಭಿವೃದ್ಧಿ ಹರಿಕಾರಿ ಡಾ. ಪ್ರಭಾಕರ ಕೋರೆ ಅವರ 75ನೇ ಅಮೃತ ಮಹೋತ್ಸವ ಸಮಾರಂಭದದಲ್ಲಿ ಅರಭಾವಿ ಮತ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಭಾಗವಹಿಸಬೇಕೆಂದು ಕಾಂಗ್ರೇಸ್ ಮುಖಂಡ ಕಲ್ಲೋಳಿಯ ಲಕ್ಕಣ್ಣ ಸವಸುದ್ದಿ ಹೇಳಿದರು. ಬುಧವಾರದಂದು ಮೂಡಲಗಿ ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ನೆಹರು ನಗರದ ಜಿಲ್ಲಾ ಕ್ರೀಡಾಂಗಣ, ಜೆಎಮ್‍ಸಿ ಆವರಣದಲ್ಲಿ ಅ.15ರಂದು ಮಧ್ಯಾಹ್ನ   ಡಾ. ಪ್ರಭಾಕರ ಕೋರೆ ಅವರು ಅಮೃತ ಮಹೋತ್ಸವ …

Read More »

ಸತೀಶ ಶುಗರ್ಸ ಕಾರ್ಖಾನೆಯ ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ

ಸತೀಶ ಶುಗರ್ಸ ಕಾರ್ಖಾನೆಯ ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿ.ಜಿ ಹತ್ತಿರದ ಸತೀಶ ಶುಗರ್ಸ ಸಕ್ಕರೆ ಕಾರ್ಖಾನೆಯ ಸನ್ 2022-23ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನ ಕಬ್ಬು ನುರಿಸುವ ಕಾರ್ಯಕ್ರಮಕ್ಕೆ ರೈತ ಮುಖಂಡರು, ಕಾರ್ಖಾನೆಯ ಆಡಳಿತ ಮಂಡಳಿ ಮತ್ತು ಅಧಿಕಾರಿ ವರ್ಗದವರು ಚಾಲನೆ ನೀಡಿದರು. ಸತೀಶ ಶುಗರ್ಸ ಸಂಸ್ಥೆಯ ಚೇರಮನ್‍ರು ಮತ್ತು ಮುಖ್ಯ ಹಣಕಾಸಿನ ಅಧಿಕಾರಿ ಪ್ರದೀಪಕುಮಾರ ಇಂಡಿ ಮಾತನಾಡಿ, ಸನ್ 2021-22 …

Read More »