ಗುರುವಿನ ಕೃಪೆಗಾಗಿ ಅಂತರಂಗ ಶುದ್ಧಿ ಇರಬೇಕು ಮೂಡಲಗಿ: ‘ಅಂತರಂಗವನ್ನು ಶುದ್ದವಾಗಿರಿಸಿಕೊಂಡು ಗುರುವಿನ ಜ್ಞಾನದ ಮಾರ್ಗದಲ್ಲಿ ಸಾಗಿದರೆ ಮಾತ್ರ ದೈವಿ ಕೃಪೆಯಾಗುವುದು’ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನಮಠದ ಜಗದ್ಗುರು ಡಾ. ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಶ್ರೀ ಸಿದ್ಧಾರೂಢ ಮಠದ 50ನೇ ವೇದಾಂತ ಪರಿಷತ್ತಿನ ಸುವರ್ಣ ಮಹೋತ್ಸವದ ಉದ್ಘಾಟನಾ ಸಮಾರಂಭದ ಸಾನಿಧ್ಯವಹಿಸಿ ಮಾತನಾಡಿದ ಅವರು ಮನಸ್ಸು ಸ್ವಚ್ಛವಾಗಿರಬೇಕು ಎಂದರು. ಜಗತ್ತಿನಲ್ಲಿ ಹೊರ ಕಾಣುವ ಲೌಕಿಕ ಸಂಗತಿಗಳನ್ನು ಪ್ರಾಪ್ತಗೊಳಿಸಿಕೊಳ್ಳುವುದು ಸುಲಭವಾಗಿದೆ. ಆದರೆ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸ್ವಂತ ದುಡ್ಡಿನಲ್ಲಿ ಒಂದು ಕಿ.ಮೀ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ *ಒಳ್ಳೆಯ ಸತ್ಕಾರ್ಯ ಮಾಡುತ್ತಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಎಲ್ಲರೂ ಗೌರವಿಸೋಣ : ಹನಮಂತ ಗುಡ್ಲಮನಿ
ಮೂಡಲಗಿ : ಕಳೆದೊಂದು ವಾರದಿಂದ ಸಾರ್ವಜನಿಕರಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ, ಮೂಡಲಗಿ ಪಟ್ಟಣದ ರಸ್ತೆ ಸುಧಾರಣಾ ಕಾಮಗಾರಿಗೆ ಸೋಮವಾರದಂದು ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಅವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಪಟ್ಟಣದ ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತದವರೆಗಿನ 1 ಕಿ.ಮೀ ರಸ್ತೆ ಸುಧಾರಣಾ ಕಾಮಗಾರಿ ಮಾಡುವುದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದು, ಕೊನೆಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …
Read More »ಜಾರಕಿಹೊಳಿ ಕುಟುಂಬ ಅರಭಾವಿ ಕ್ಷೇತ್ರದ ಜನರ ರಕ್ಷಣೆ ಮಾಡುತ್ತಿದ್ದಾರೆ : ವಿನಯ ಗುರೂಜಿ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಅರಭಾವಿ ಕ್ಷೇತ್ರದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು : ಲಖನ್ ಜಾರಕಿಹೊಳಿ
ಮೂಡಲಗಿ: ಜಾರಕಿಹೊಳಿ ಕುಟುಂಬ ಪಂಚಪಾoಡವರು ಇದ್ದಂತೆ ಅರಭಾವಿ ಕ್ಷೇತ್ರದ ಜನರ ರಕ್ಷಣೆ ಮಾಡುತ್ತಿದ್ದು, ಜನರು ಸಹ ಜಾರಕಿಹೊಳಿ ಕುಟಂಬದ ಮೇಲೆ ಅಪಾರವಾದ ಗೌರವ ಪ್ರೀತಿ ಇಟ್ಟುಕೊಂಡಿದ್ದಾರೆ ಎಂದು ಸ್ವರ್ಣಪೀಠಾಪುರ ದತ್ತಾಶ್ರಮದ ಅವಧೂತ ಶ್ರೀ ವಿನಯ ಗುರೂಜಿ ಹೇಳಿದರು. ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ರವಿವಾರದಂದು ಸದ್ಗುರು ಶ್ರೀ ಯಲ್ಲಾಲಿಂಗೇಶ್ವರ ಮಠದ 40ನೇ ವರ್ಷದ ಶ್ರಾವಣ ಮಾಸದ ಪುರಾಣ ಮಹಾಮಂಗಲೋತ್ಸವ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ …
Read More »ಆ.29 ರಂದು ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನೂತನ ಕಟ್ಟಡ ಉದ್ಘಾಟನೆ
ಆ.29 ರಂದು ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನೂತನ ಕಟ್ಟಡ ಉದ್ಘಾಟನೆ ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ 109 ವರ್ಷಗಳ ಪೂರೈಸಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಆ.29 ರಂದು ಸೋಮವಾರದಂದು ವಿವಿಧ ಮಠಾಧೀಶರ ಸಾನಿಧ್ಯದಲ್ಲಿ ಜರುಗಲಿದೆ ಎಂದು ಸಂಘದ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ನೀಲಕಂಠ ಬಸವರಾಜ ಕಪ್ಪಲಗುದ್ದಿ ಹೇಳಿದರು. ಅವರು ಶನಿವಾರದಂದು ಕಲ್ಲೋಳಿ ಪಟ್ಟಣದ ಸಂಘದ …
Read More »ಬೆಟಗೇರಿಯಲ್ಲಿ ಆ.29ರಿಂದ 38ನೇ ಸತ್ಸಂಗ ಸಮ್ಮೇಳನ
ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ದೇವರ ದೇವಸ್ಥಾನದಲ್ಲಿ 38ನೇ ಸತ್ಸಂಗ ಸಮ್ಮೇಳನ ಇದೇ ಸೋಮವಾರ ಆ.29 ರಿಂದ ಸೆ.2 ತನಕÀ ನಡೆಯಲಿದ್ದು, ಇಲ್ಲಿಯ ಈಶ್ವರ ದೇವರ ದೇವಸ್ಥಾನದಲ್ಲಿರುವ ಈಶ್ವರ ದೇವರ ಗದ್ದುಗೆ ಐದು ದಿನ ಮುಂಜಾನೆ 6 ಗಂಟೆಗೆ ಮಹಾಪೂಜೆ, ನೈವೇದ್ಯ ಸಮರ್ಪನೆ ಜರುಗಲಿದೆ. ಆ.29ರಂದು ಸ್ಥಳೀಯ ಶ್ರೀ ಗಜಾನನ ವೇದಿಕೆ ಮೇಲೆ ಸಾಯಂಕಾಲ 7:30ಗಂಟೆಗೆ ಚಿಕ್ಕಮುನವಳ್ಳಿ ಶಿವಪುತ್ರ ಸ್ವಾಮಿಜಿ, ತುಂಗಳದ ಮಾತೋಶ್ರೀ ಅನುಸೂಯಾ ತಾಯಿಯವರು, …
Read More »ಶ್ರೀ ಮಹಾಲಕ್ಷ್ಮೀ ಸೊಸಾಯಿಟಿ ಮೂಡಲಗಿ ವಾರ್ಷಿಕ ಮಹಾಸಭೆ
ಮೂಡಲಗಿ: ಶ್ರೀ ಮಹಾಲಕ್ಷ್ಮೀ ಅರ್ಬನ್ ಕೋ ಆಪ್ ಕ್ರೇ ಸೊಸಾಯಿಟಿ ಲಿ.,ಮೂಡಲಗಿ ಇದರ 30 ನೇ ವಾರ್ಷಿಕ ಮಹಾಸಭೆಯು ದಿನಾಂಕ 03/09/2022 ರಂದು ಪ್ರಧಾನ ಕಛೇರಿ ಮೂಡಲಗಿ ಸಭಾಭವನದಲ್ಲಿ ಶನಿವಾರ ಮುಂಜಾನೆ 10-00 ಕ್ಕೆ ಮಲಪ್ಪ. ಗು.ಗಾಣಿಗೇರ ಇವರ ಅಧ್ಯಕ್ಷತೆಯಲ್ಲಿ ಜರುಗಲಿದ್ದು ಸಂಘದ ಎಲ್ಲ ಸದಸ್ಯರು ಸದರೀ ಸಭೆಗೆ ಹಾಜರಾಗಿ ಸಭೆಯನ್ನು ಯಶಸ್ವಿಗೊಳಿಸಲು ಸಂಘದ ಪ್ರಧಾನಕಾರ್ಯದರ್ಶಿ ಸಿ.ಎಸ್.ಬಗನಾಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Read More »ಚೈತನ್ಯ ಕೋ.ಆಪ್ ಸೊಸೈಟಿಗೆ ರೂ. 1.53 ಕೋಟಿ ಲಾಭ
ಮೂಡಲಗಿ: ಮೂಡಲಗಿಯ ಚೈತನ್ಯ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿಯು 2022ರ ಮಾರ್ಚ್ ಅಂತ್ಯಕ್ಕೆ ರೂ. 1.53 ಕೋಟಿ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗಿದೆ ಎಂದು ಸೊಸೈಟಿ ಅಧ್ಯಕ್ಷ ತಮ್ಮಣ್ಣ ಕೆಂಚರಡ್ಡಿ ಹೇಳಿದರು. ಶುಕ್ರವಾರದಂದು ಸಂಘದ ಸಭಾ ಭವನದಲ್ಲಿ ಸಂಘದ 2021-22ನೇ ವಾರ್ಷಿಕ ಸರ್ವಸಾಧಾರಣ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಸದ್ಯ ಸೊಸೈಟಿಯು ಬೆಟಗೇರಿ, ಧರ್ಮಟ್ಟಿ, ಯರಗಟ್ಟಿ, ಲೋಕಾಪೂರ, ಮುನ್ಯಾಳ, ಮಂಟೂರಗಳಲ್ಲಿ 6 ಶಾಖೆಗಳನ್ನು ಹೊಂದಿ ಎಲ್ಲ ಶಾಖೆಗಳು ಪ್ರಗತಿಯಲ್ಲಿವೆ. ಬೆಳ್ಳಿ …
Read More »ಮುಸ್ಲಿಂ ಸಮಾಜದ ಜನರ ದಿಕ್ಕು ತಪ್ಪಿಸುವಂತ ಕೆಲಸ ತಹಶೀಲ್ದಾರ ಮಾಡಿದ್ದಾರೆ : ಶರೀಫ್ ಪಟೇಲ್
ಮೂಡಲಗಿ: ರಾಜ್ಯ ವಕ್ಘ್ ಬೋರ್ಡ ಬೆಂಗಳೂರು ಇವರು ಜು.30ರಂದು ಹೊರಡಿಸಿರುವ ಆದೇಶದನ್ವಯ ಮೂಡಲಗಿಯ ಬಜ್ಮೆ-ಎ-ತೋಹಿದ್ ತಂಜಿಮ ಕಮಿಟಿಯ ಆಡಳತಾಧಿಕಾರಿಯಾನ್ನಾಗಿ ತಹಶೀಲ್ದಾರ ಡಿ ಜಿ ಮಹಾತ್ ಅವರನ್ನು ನೇಮಕ ಮಾಡಿ ಅಧಿಕಾರಯವನ್ನು ವಹಿಸಿಕೊಳ್ಳಲು ಆದೇಶ ನೀಡಿತ್ತು. ಆದರೆ ತಹಶೀಲ್ದದಾರ ಅವರು ಕಮಿಟಿಯ ಸದಸ್ಯರಿಗೆ ನೋಟಿಸಿ ನೀಡದ 7ದಿನದ ಬಳಿಕ ಅಧಿಕಾರವನ್ನು ವಹಿಸಿಕೊಳ್ಳಬೇಕಾದ ತಹಶೀಲ್ದಾರ ಅವರು ನೋಟಿಸಿ ನೀಡಿದ ಮರುದಿನವೇ ಅಧಿಕಾರವನ್ನು ವಹಿಸಿಕೊಂಡಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದು ಕಮಿಟಿಯ ಅಧ್ಯಕ್ಷ ಶರೀಫ್ ಪಟೇಲ್ …
Read More »ಕಲ್ಲೋಳಿ ಬಸವೇಶ್ವರ ಸೊಸೈಟಿಗೆ ರೂ.2.80 ಕೋಟಿ ಲಾಭ
ಮೂಡಲಗಿ: ‘ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಸ್ಥೆಯು ಪ್ರಸಕ್ತ ಮಾರ್ಚ ಅಂತ್ಯದಲ್ಲಿ ರೂ. 2.80 ಕೋಟಿ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗಿದೆ” ಎಂದು ಸೊಸೈಟಿಯ ಅಧ್ಯಕ್ಷ ಬಾಳಪ್ಪ ಬಿ. ಬೆಳಕೂಡ ಅವರು ಹೇಳಿದರು. ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಸ್ಥೆಯ 2021-22ನೇ ವಾರ್ಷಿಕ ಸರ್ವಸಾಧಾರಣ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. 2021-22ನೇ ಆರ್ಥಿಕ ವರ್ಷದ ಕೊನೆಯಲ್ಲಿ ಸಂಸ್ಥೆಯು ರೂ. 34.70 ಕೋಟಿ ಠೇವಣಿ ಸಂಗ್ರಹಿಸಿ ರೂ.42.29 …
Read More »ಸೋಮವಾರದಂದೇ ಮೂಡಲಗಿಯ ರಸ್ತೆ ಕಾಮಗಾರಿಗೆ ಮುಹೂರ್ತ ಫಿಕ್ಸ್ ಒಂದು ಕಿಮೀ ರಸ್ತೆಯನ್ನು ಸುಧಾರಣೆ ಮಾಡಲು ಮುಂದಾದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಇಲ್ಲಿಯ ಅಂಬೇಡ್ಕರ್ ವೃತ್ತದಿಂದ ಟಿಪ್ಪು ಸುಲ್ತಾನ್ ವೃತ್ತದವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಬರುವ ಸೋಮವಾರದಂದು ಗುದ್ದಲಿ ಪೂಜೆ ಜರುಗಲಿದೆ. ಗುರುವಾರದಂದು ಹದಿಗೆಟ್ಟ ರಸ್ತೆಯನ್ನು ಪರಿಶೀಲನೆ ಮಾಡಿದ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಅವರು, ಶಾಸಕ ಬಾಲಚಂದ್ರ ಜಾರಕಿಕೊಳಿ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಸುಮಾರು 1.ಕಿ.ಮೀ. ರಸ್ತೆಯನ್ನು ಅಭಿವೃದ್ಧಿ ಮಾಡುವರು. ಇದಕ್ಕಾಗಿ ಸೋಮವಾರವೇ ರಸ್ತೆ ಕಾಮಗಾರಿಗೆ ಮುಹೂರ್ತ ಫಿಕ್ಸ್ ಆಗಿದೆ ಎಂದು ಹೇಳಿದರು. ಮೂಡಲಗಿ ಪಟ್ಟಣದ ಸಾರ್ವಜನಿಕರು ಮತ್ತು …
Read More »