ಮೂಡಲಗಿ- ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಅರಭಾವಿ ಬಿಜೆಪಿ ಮಂಡಲದಿಂದ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಾರಥ್ಯದಲ್ಲಿ ಮೂರನೇ ಬಾರಿ ಬೈಕ್ ರ್ಯಾಲಿಯು ಸೋಮವಾರದಂದು ಜರುಗಿತು. ಕಲ್ಲೋಳಿ ಪಟ್ಟಣದ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಕಲ್ಲೋಳಿಯಿಂದ ಗೋಕಾಕ್ ನಾಕಾ- ಕೌಜಲಗಿವರೆಗಿನ ( ದಂಡಿನ ಮಾರ್ಗ ರಸ್ತೆ) ಬೈಕ್ ರ್ಯಾಲಿಗೆ ಜಿ.ಪಂ.ಅಧ್ಯಕ್ಷ ಬಸಗೌಡ ಪಾಟೀಲ ಹಾಗೂ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರು ಜಂಟಿಯಾಗಿ ಚಾಲನೆ ನೀಡಿದರು. …
Read More »2 ಕ್ವೀಟಾಲ ಜಿಲೇಬಿ ವಿತರಿಸಿದ ಗೆಳೆಯರ ಬಳಗ
2 ಕ್ವೀಟಾಲ ಜಿಲೇಬಿ ವಿತರಿಸಿದ ಗೆಳೆಯರ ಬಳಗ ಮೂಡಲಗಿ- ಭಾರತ ವಿವೀದತೇಯಲ್ಲಿ ಏಕತೆ ಕಂಡ ದೇಶ, ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ಸಮಯದಲ್ಲಿ ವಿವಿಧ ಪ್ರಕಾರದ ಸೇವೆಯನ್ನು ಎಲ್ಲರೂ ಮೈಗೊಡಿಸಿಕೊಂಡಿರುವದು ಸಂತಸದ ವಿಷಯ ಇದು ಭಾರತದಲ್ಲಿ ಮಾತ್ರ ಕಾಣಬಹುದಾಗಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು, ಸೋಮವಾರ ಕಲ್ಮೇಶ್ವರ ವೃತ್ತದಲ್ಲಿ 1987 -90 ನೇ ಸಾಲಿನ ಶ್ರೀ ಶಿವಬೋಧರಂಗ ಪ್ರೌಡ ಶಾಲೆಯ ಗೆಳೆಯರ ಬಳಗದ ಮಿತ್ರರಿಂದ ವಿಧ್ಯಾರ್ಥಿಗಳಿಗೆ ಶಿಕ್ಷಕರಿಗೆ …
Read More »ದೇಶದ ಸ್ವಾತಂತ್ರ್ಯ ಹೋರಾಟದ ಭಾಗದಲ್ಲಿ ಬೆಳಗಾವಿ ಜಿಲ್ಲೆಯ ಕೊಡುಗೆ ದೊಡ್ಡ ಪ್ರಮಾಣ: ರಾಜ್ಯಸಭಾ ಸಂಸದ ಈರಣ್ಣ ಕಡಾಡಿ
ಮೂಡಲಗಿ: ದೇಶದ ಸ್ವಾತಂತ್ರ್ಯ ಹೋರಾಟದ ಭಾಗದಲ್ಲಿ ಬೆಳಗಾವಿ ಜಿಲ್ಲೆಯ ಕೊಡುಗೆ ದೊಡ್ಡ ಪ್ರಮಾಣದಲ್ಲಿದ್ದು, ಪ್ರಸ್ತುತ ರಾಜ್ಯದಲ್ಲಿ ಗಮನ ಸೆಳೆಯುವ ಜಿಲ್ಲೆಯಾಗಿದ್ದು, ಈ ಹಿಂದೆ ಜಿಲ್ಲೆಯ ಮಹನೀಯರು ಹಾಕಿಕೊಟ್ಟ ಮಾರ್ಗಗಳನ್ನು ಗಮನದಲ್ಲಿ ಇಟ್ಟುಕೊಂಡು ಅವರ ಕೊಡುಗೆಗಳನ್ನು ಸ್ಮರಿಸಿ ಅವರ ದಾರಿಯೊಳಗೆ ನಡೆಯೋಣ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಸೋಮವಾರ ಅ.15 ರಂದು ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ, ಕಲ್ಲೋಳಿ ಹಾಲು ಉತ್ಪಾದಕರ ಸಹಕಾರಿ …
Read More »*ರಾಷ್ಟ್ರದ ಉನ್ನತಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕೊಡುಗೆ ಅನನ್ಯ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಕೆಎಂಎಫ್ ಕೇಂದ್ರ ಕಛೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ*
ಬೆಂಗಳೂರು: ರಾಷ್ಟ್ರದ ಉನ್ನತಿ ಮತ್ತು ಪ್ರಗತಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆ ಅನನ್ಯವಾಗಿದ್ದು, ಮೋದಿಯವರ ದೂರದೃಷ್ಟಿಯ ನಾಯಕತ್ವದಿಂದಾಗಿ ಇಡೀ ಪ್ರಪಂಚವೇ ನಮ್ಮತ್ತ ತಿರುಗಿ ನೋಡುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಇಲ್ಲಿಯ ಕೆಎಂಎಫ್ ಕೇಂದ್ರ ಕಛೇರಿಯಲ್ಲಿ ಜರುಗಿದ 76ನೇ ಸ್ವಾತಂತ್ರ್ಯ ವರ್ಷದ ಆಜಾದಿ ಕಾ ಅಮೃತ್ ಮಹೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಪ್ರಧಾನಿಗಳ ಸಮರ್ಥ ನಾಯಕತ್ವದಲ್ಲಿ ಭಾರತ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಬೃಹತ್ ಟ್ರ್ಯಾಕ್ಟರ್ ಜಾತಾ . ಲೋಳಸೂರ, ಅರಭಾವಿ, ದುರದುಂಡಿ, ಬಡಿಗವಾಡ ಮಾರ್ಗವಾಗಿ ನಾಗನೂರುವರೆಗೆ ಜಾತಾ
ಗೋಕಾಕ: ನಾಳೆ ನಡೆಯಲಿರುವ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ಯ ಅರಭಾವಿ ಬಿಜೆಪಿ ಮಂಡಲದಿಂದ ಬೃಹತ್ ಟ್ರ್ಯಾಕ್ಟರ್ ರ್ಯಾಲಿಯನ್ನು ರವಿವಾರದಂದು ಇಲ್ಲಿಯ ಎನ್ಎಸ್ಎಫ್ದಲ್ಲಿ ಚಾಲನೆ ನೀಡಲಾಯಿತು. ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರು ಈ ರ್ಯಾಲಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಆಯೋಜನೆಗೊಂಡಿದ್ದ ಈ ಟ್ರ್ಯಾಕ್ಟರ್ ರ್ಯಾಲಿಯಲ್ಲಿ ನೂರಾರು ರೈತರು ಭಾಗಿಯಾಗಿದ್ದರು. 257 ಟ್ರ್ಯಾಕ್ಟರ್ ರ್ಯಾಲಿಗೆ ಎನ್ಎಸ್ಎಫ್ದಲ್ಲಿ ಚಾಲನೆ …
Read More »ಸಂಗನಕೇರಿಯಿಂದ ಯಾದವಾಡವರೆಗಿನ ಬೃಹತ್ ಬೈಕ್ ರ್ಯಾಲಿ
ಹರ ಘರ ತಿರಂಗಾ: ಅರಭಾಂವಿ ಬಿಜೆಪಿ ಮಂಡಲದಿಂ ದ ಸಂಗನಕೇರಿಯಿಂದ ಯಾದವಾಡವರೆಗೆ ನಾಲ್ಕು ಸಾವಿರ ಬೈಕ್ ರ್ಯಾಲಿ. *ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ದೇಶಪ್ರೇಮ ಮೊಳಗಿಸಿದ ಬಿಜೆಪಿ ಕಾರ್ಯಕರ್ತರು.* ಮೂಡಲಗಿ: ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಎರಡನೇ ಹಂತದ ಅರಭಾವಿ ಬಿಜೆಪಿ ಮಂಡಲ ಶನಿವಾರ ಹಮ್ಮಿಕೊಂಡಿದ್ದ ಬೈಕ್ ರ್ಯಾಲಿಯು ಮೂಡಲಗಿ ತಾಲ್ಲೂಕಿನ ಯಾದವಾಡ ಗ್ರಾಮದ ಘಟಗಿ ಬಸವೇಶ್ವರ ದೇವಸ್ಥಾನದ ಹತ್ತಿರ ಸಮಾರೋಪಗೊಂಡಿತು. ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರು …
Read More »ತೊಂಡಿಕಟ್ಟಿಯಲ್ಲಿ ವಿವಿಧಡೆ ಧ್ವಜರೋಹಣ
ತೊಂಡಿಕಟ್ಟಿ: ಆಜಾದೀ ಕಾ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದ” ನಿಮಿತ್ಯ ರಾಮದುರ್ಗ ತಾಲ್ಲೂಕಿನ ತೊಂಡಿಕಟ್ಟಿ ಗ್ರಾಮದ ವಿವಿಧ ಸಂಘ ಸಂಸ್ಥೆ ಹಾಗೂ ಮನೆಗಳ ಮೇಲೆ ಧ್ವಜಾರೋಹಣ ಮಾಡಲಾಯಿತು. ಗ್ರಾಮದ ಗಾಂಧಿಕಟ್ಟೆಯ ಧ್ವಜಾರೋಹಣದ ಸಮಯದಲ್ಲಿ ಗ್ರಾಮ ಪಂಚಾಯತ ಪಿಡಿಒ ಬಸನಗೌಡ ಪಾಟೀಲ, ಕಾರ್ಯದರ್ಶಿ ಮಂಜುಳಾ ಪಾಟೀಲ, ಗ್ರಾಮ ಪಂಚಾಯತ ಸದಸ್ಯರಾದ ಲಕ್ಷ್ಮೀ ಲಂಕೆಣ್ಣವರ, ಸುಶೀಲವ್ವ ಪೂಜೇರಿ, ಹಿರಿಯರಾದ ತಿಮ್ಮಣ್ಣ ಚಿಕ್ಕೂರ, ವೆಂಕಣ್ಣ ಬಿರಾದಾರಪಾಟೀಲ, ಮಾಂತೇಶ ಹುಚ್ಚನವರ, ಪಿ.ಕೆ. …
Read More »ಮೂಡಲಗಿ ನಗರದ ಹಲವು ಗಣ್ಯರಿಗೆ 75ನೇ ವರ್ಷದ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ತಿರಂಗ ಧ್ವಜ ವಿತರಣೆ
ಮೂಡಲಗಿ: ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆಗಾಗಿ ಪ್ರತಿಯೊಬ್ಬರು ತಮ್ಮ ತಮ್ಮ ಮನೆಗಳ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸುವುದರ ಮೂಲಕ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸೋಣ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಕರೆ ನೀಡಿದರು. ಮೂಡಲಗಿ ನಗರದ ಹಲವು ಗಣ್ಯರಿಗೆ 75ನೇ ವರ್ಷದ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದಡಿ ತಿರಂಗ ಧ್ವಜಗಳನ್ನು ವಿತರಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು ಸ್ವಾತಂತ್ರ್ಯದ ಸವಿ ನೆನಪಿಗಾಗಿ ಪ್ರಧಾನಿ …
Read More »ಧರ್ಮಟ್ಟಿಯಲ್ಲಿ ಕಾಣಿಸಿಕೊಂಡ ಚಿರತೆ : ಅರಣ್ಯ ನಾಶಕ್ಕೆ ನಾವೇ ಕಾರಣ ಕಡಾಡಿ ಮನವಿ
ಮೂಡಲಗಿ : ಗುರುವಾರದಂದು ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡು ಎಮ್ಮೆ ಕರವನ್ನು ಬಲಿ ಪಡೆದ ಘಟನೆಯ ಹಿನ್ನೇಲೆಯಲ್ಲಿ ಇಂದು ಶುಕ್ರವಾರ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸ್ಥಳಕ್ಕೆ ಆಗಮಿಸಿ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದರು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಜಾಗೃತೆಯಿಂದ ಇರಬೇಕು. ಚಿರತೆಯನ್ನು ಹಿಡಿಯಲು ಈಗಾಗಲೇ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಕಾರ್ಯಪ್ರವರ್ತರಾಗಿದ್ದಾರೆ, ಬಲೆ ಹಾಕಲಾಗಿದೆ ಮತ್ತು ಚಿರತೆಯ ಹೆಜ್ಜೆ ಜಾಡನ್ನು ಗಮನಿಸಿ ಅದು ಆ ವ್ಯಾಪ್ತಿಯಲ್ಲಿಯೇ ಇರುವದನ್ನು …
Read More »ಮೂಡಲಗಿ ವಲಯದ ವ್ಯಾಪ್ತಿಯ ಶಾಲೆಗಳಿಗೆ ಶೆನಿವಾರ(ಆ.13) ರಜೆಯನ್ನು ಮುಂದುವರಿಸಲಾಗಿದೆ
ಮೂಡಲಗಿ: ಧರ್ಮಟ್ಟಿಯಲ್ಲಿ ಕಾಣಿಸಿಕೊಂಡಿರುವ ಚಿರತೆ ಇನ್ನೂ ಪತ್ತೆಯಾಗದ ಹಿನ್ನೆಲೆಯಲ್ಲಿ 30 ಶಾಲೆಗಳಿಗೆ ಶೆನಿವಾರವೂ ರಜೆಯನ್ನು ಮುಂದುವರಿಸಲಾಗಿದೆ. ಚಿರತೆಯನ್ನು ಸೆರೆಹಿಡಿಯುವ ಕಾರ್ಯಾಚರಣೆ ಮುಂದುವರಿದಿರುವುದರಿಂದ ಮೇಲ್ಕಂಡ ಪಟ್ಟಿಯಲ್ಲಿರುವ ಮೂಡಲಗಿ ವಲಯದ ವ್ಯಾಪ್ತಿಯ ಶಾಲೆಗಳಿಗೆ ಶೆನಿವಾರ(ಆ.13) ರಜೆಯನ್ನು ಮುಂದುವರಿಸಲಾಗಿದೆ ಎಂದು . ಬಿ.ಇ. ಓ. ಅಜೀತ್ ಮನ್ನಿಕೇರಿ. ಯವರು ತಿಳಿಸಿರುತ್ತಾರೆ. ಈ ಪ್ರದೇಶಗಳಿಂದ ಬೇರೆ ಬೇರೆ ಕಡೆಯ ಶಾಲೆಗಳಿಗೆ ಮಕ್ಕಳನ್ನು ಕಳಿಸುವಾಗ ಪಾಲಕರು ಸೂಕ್ತ ಎಚ್ಚರಿಕೆಯನ್ನು ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.
Read More »