inmudalgi
ಅಕ್ಟೋಬರ್ 16, 2023 Recent Posts, ತಾಲ್ಲೂಕು, ಬೆಳಗಾವಿ
*ಮೂಡಲಗಿ*- ಗೋಕಾವಿ ನೆಲದ ಪಂಚ- ಪೀಠಗಳಲ್ಲಿ ಒಂದಾಗಿರುವ ತಾಲ್ಲೂಕಿನ ಅರಭಾವಿ ದುರದುಂಡೀಶ್ವರ ಪೀಠದ ಜಗದ್ಗುರು ಪರಮಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು (೭೫) ರವಿವಾರ ರಾತ್ರಿ ಲಿಂಗೈಕ್ಯೆರಾಗಿದ್ದಾರೆ. ಪರಮ ಪೂಜ್ಯರ ಅಗಲಿಕೆಗೆ ಶಾಸಕರೂ ಆಗಿರುವ ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಅರಭಾವಿ ಭಾಗದಲ್ಲಿ ಭಕ್ತರ ಪಾಲಿನ ದೇವರು ಆಗಿದ್ದ ಸದಾ ಸೌಮ್ಯ ಹಾಗೂ ಶಾಂತ ಸ್ವಭಾವದ ಸಾಕಾರ ಮೂರ್ತಿಯಾಗಿದ್ದ ಪೂಜ್ಯರ ಅಗಲಿಕೆಯಿಂದ ನಮ್ಮ ನಾಡಿಗೆ ಅಪಾರ ಹಾನಿಯಾಗಿದೆ. …
Read More »
inmudalgi
ಅಕ್ಟೋಬರ್ 15, 2023 Recent Posts, ತಾಲ್ಲೂಕು, ಬೆಳಗಾವಿ
ಡಾ.ಎ.ಪಿ.ಜಿ ಅಬ್ದುಲ್ ಕಲಾಂ ಜಯಂತಿ ಆಚರಣೆ ಮೂಡಲಗಿ: ಪಟ್ಟಣದ ಶಿವಾಪೂರ(ಹ) ರಸ್ತೆಯಲ್ಲಿರುವ ಡಾ.ಎ.ಪಿ.ಜಿ ಅಬ್ದುಲ್ ಕಲಾಂ ವೃತ್ತದಲ್ಲಿ ಭಾರತ ರತ್ನ ಹಾಗೂ ಮಾಜಿ ರಾಷ್ಟ್ರಪತಿಗಳಾ ಡಾ.ಎ.ಪಿ.ಜಿ.ಅಬ್ದುಲ್ ಕಲಾಂ ಅವರ 92ನೇ ಜಯಂತಿಯನ್ನು ಆಚರಿಸಲಾಯಿತು. ಮೂಡಲಗಿ ಪಿಎಸ್ಐ ಎಚ್.ವಾಯ್ ಬಾಲದಂಡಿ ಅವರು ಡಾ.ಎ.ಪಿ.ಜಿ.ಅಬ್ದುಲ್ ಕಲಾಂ ಅವರ ಭಾವ ಚಿತ್ರಕ್ಕೆ ಪೂಜೆಸಲ್ಲಿಸಿ ಮಾತನಾಡಿ, ಡಾ.ಎ.ಪಿ.ಜಿ.ಅಬ್ದುಲ್ ಕಲಾಂ ಅವರು ವಿಶ್ವ ಮಟ್ಟದಲ್ಲಿ ಭಾರತದ ಕಿರ್ತಿ ಎತ್ತಿ ಹಿಡಿದ್ದಾರೆ. ಬಲಿಷ್ಠ ರಾಷ್ಟ್ರಗಳ ಜತೆ ಭಾರತ ಪೈಪೋಟಿ …
Read More »
inmudalgi
ಅಕ್ಟೋಬರ್ 15, 2023 Recent Posts, ತಾಲ್ಲೂಕು, ಬೆಳಗಾವಿ
ಸಾವಳಗಿಯ ದಸರಾ ಉತ್ಸದಲ್ಲಿ ವೈವಿದ್ಯಮಯವಾದ ಉಪನ್ಯಾಸಗಳು ಗೋಕಾಕ: ತಾಲ್ಲೂಕಿನ ಸುಕ್ಷೇತ್ರ ಸಾವಳಗಿಯ ಜಗದ್ಗುರು ಶಿವಲಿಂಗೇಶ್ವರ ಪೀಠದಲ್ಲಿ ಅ.15ರಂದು ಭಾನುವಾರ ಬೆಳಿಗ್ಗೆ ದಸರಾ ಉತ್ಸವವಕ್ಕೆ ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಸನ್ನಿಧಿಯವರು ಚಾಲನೆ ನೀಡಿದರು. ಅ.16ರಿಂದ ಸಂಜೆ 7.30ಕ್ಕೆ ದಸರಾ ಉತ್ಸವದಲ್ಲಿ ಜಗದ್ಗುರುಗಳ ಸನ್ನಿಧಿಯಲ್ಲಿ ವಿವಿಧ ಉಪನ್ಯಾಸ ಕಾರ್ಯಕ್ರಮಗಳನ್ನು ಏರ್ಪಡಿಸಿರುವರು. ಅ.16ರಂದು ಜಿನರಾಳದ ಡಾ. ಶ್ರೀಶೈಲ್ ಮಠಪತಿ ಅವರು ‘ಜಾನಪದ ಮತ್ತು ಗ್ರಾಮೀಣ ಸಂಸ್ಕøತಿ’ ವಿಷಯ, ಅ. 17ರಂದು ಬೆಳಗಾವಿಯ ಮ.ನ.ರ.ಸ. ಶಿಕ್ಷಣ …
Read More »
inmudalgi
ಅಕ್ಟೋಬರ್ 14, 2023 Recent Posts, ತಾಲ್ಲೂಕು, ಬೆಳಗಾವಿ
ಭಾವೈಕ್ಯತೆ ಬಿಂಬಿಸುವ ಸಾವಳಗಿಯ ದಸರಾ ಉತ್ಸವ ರವಿವಾರ ಪ್ರಾರಂಭ ಗೋಕಾಕ: ‘ಕಾಶಿ ಕಾಬಾ ಒಂದೇ, ಪುರಾಣ ಕುರಾನ್ ಒಂದೇ, ಈಶ್ವರ ಅಲ್ಲ ಒಬ್ಬನೇ’ ಎನ್ನುವ ಹಿಂದೂ ಮುಸ್ಲಿಂ ಸಾಮರಸ್ಯೆಯನ್ನು ಸಾರುವ, ಭಾವೈಕ್ಯತೆಗೆ ಹೆಸರಾಗಿರುವ ಗೋಕಾಕ ತಾಲ್ಲೂಕಿನ ಸಾವಳಗಿಯ ಜಗದ್ಗುರು ಪೀಠದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಅ.15ರಿಂದ ಅ.24ರ ವರೆಗೆ ದಸರಾ ಉತ್ಸವವು ಸಿಂಹಾಸನಾಧೀಶ ಶ್ರೀಮನ್ ಮಹಾರಾಜ ನಿರಂಜನ ಜಗದ್ಗುರು ಶ್ರೀ ಶಿವಲಿಂಗೇಶ್ವರ ಕುಮಾರೇಂದ್ರ ಮಹಾಸನ್ನಿಧಿಯಲ್ಲಿ ಸಂಭ್ರಮದಿಂದ ಜರುಗಲಿವೆ. ಅ.15ರಂದು …
Read More »
inmudalgi
ಅಕ್ಟೋಬರ್ 13, 2023 Recent Posts, ತಾಲ್ಲೂಕು, ಬೆಳಗಾವಿ
*ಬರುವ ರವಿವಾರದಿಂದಲೇ ದೇವಸ್ಥಾನದ ಜೀರ್ಣೋದ್ಧಾರ ಕೆಲಸಗಳನ್ನು ಆರಂಭಿಸಿ – ಶಾಸಕ ಬಾಲಚಂದ್ರ ಜಾರಕಿಹೊಳಿ* *ಗೋಕಾಕ ಮಹಾಲಕ್ಷ್ಮೀ ದೇವಸ್ಥಾನದ ಜಾತ್ರಾ ಕಮೀಟಿ ಸದಸ್ಯರ ಸಭೆ ನಡೆಸಿದ ಬಾಲಚಂದ್ರ ಜಾರಕಿಹೊಳಿ* ಗೋಕಾಕ- ಗೋಕಾವಿ ನೆಲದ ಇತಿಹಾಸ ಪ್ರಸಿದ್ಧ ಮಹಾಲಕ್ಷ್ಮೀ ಎರಡೂ ದೇವಸ್ಥಾನಗಳ ಜೀರ್ಣೋದ್ಧಾರ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಾತ್ರಾ ಕಮೀಟಿಗೆ ಸೂಚನೆ ನೀಡಿದರು. ಗುರುವಾರ ಸಂಜೆ ತಮ್ಮ ಗೃಹ ಕಚೇರಿಯಲ್ಲಿ ಮಹಾಲಕ್ಷ್ಮೀ ದೇವಸ್ಥಾನದ ಜಾತ್ರಾ ಕಮೀಟಿ …
Read More »
inmudalgi
ಅಕ್ಟೋಬರ್ 11, 2023 Recent Posts, ತಾಲ್ಲೂಕು, ಬೆಳಗಾವಿ
ಯಾದವಾಡದಲ್ಲಿ ಶ್ರೀ ದ್ಯಾಮವ್ವ ಮತ್ತು ಶ್ರೀ ದುರ್ಗಮ್ಮದೇವಿಯರ ಜಾತ್ರೆ ಆರಂಭ ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದಲ್ಲಿ ಹಲವು ವರ್ಷಗಳಿಂದ ನಡಯದೇ ಇರುವ ಶ್ರೀ ದ್ಯಾಮವ್ವದೇವಿ ಮತ್ತು ಶ್ರೀ ದುರ್ಗಮ್ಮದೇವಿಯರ ಅ.11ರಿಂದ 13ರವರೆಗೆ ಮೂರು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವದ ಪ್ರಥಮ ದಿನವಾದ ಬುಧವಾರದಂದು ಯುವಕರು ಮತ್ತು ಭಕ್ತರು ಬಂಡಾರದಲ್ಲಿ ಮಿಂದದ್ದೆರು. ಬುಧವಾರದಂದು ಯಾದವಾಡ ಗ್ರಾಮದ ಸೀಮೆಯಲ್ಲಿ ದೇವಸ್ಥಾನದ ಅರ್ಚಕರು ಶ್ರೀ ದ್ಯಾಮವ್ವದೇವಿ ಮತ್ತು ಶ್ರೀ ದುರ್ಗಮ್ಮದೇವಿಯರ ಮೂರ್ತಿಗಳಿಗೆ ಪೂಜೆ …
Read More »
inmudalgi
ಅಕ್ಟೋಬರ್ 11, 2023 Recent Posts, ತಾಲ್ಲೂಕು, ಬೆಳಗಾವಿ
ನಿಧನ ವಾರ್ತೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಲಿಂಗಾಯತ ಸಮಾಜದ ಹಿರಿಯರಾದ ದುಂಡವ್ವ ರಾಮಪ್ಪ ದೇಯಣ್ಣವರ (97) ಇವರು ಮಂಗಳವಾರ ಅ.10ರಂದು ನಿಧನರಾದರು. ಮೃತರು ಬೆಟಗೇರಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಭೀಮಶೆಪ್ಪ ರಾಮಪ್ಪ ದೇಯಣ್ಣವರ ಸೇರಿದಂತೆ ಇಬ್ಬರು ಪುತ್ರರು, ನಾಲ್ಕು ಜನ ಪುತ್ರಿಯರು, ಸೊಸೆಯಂದಿರು, ಮೊಮ್ಮಕ್ಕಳು, ಅಳಿಯಂದಿರು ಸೇರಿದಂತೆ ಅಪಾರ ಬಂದು-ಬಳಗವನ್ನಗಲಿದ್ದಾರೆ.
Read More »
inmudalgi
ಅಕ್ಟೋಬರ್ 11, 2023 Recent Posts, ತಾಲ್ಲೂಕು, ಬೆಳಗಾವಿ
ಗೋಸಬಾಳ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅಮರ ವಡೇರ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಬೆಟಗೇರಿ:ಗೋಕಾಕ ತಾಲೂಕಿನ ಗೋಸಬಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಅಮರ ಮುತ್ತೆಪ್ಪ ವಡೇರ ಅವರು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದ್ದಾರೆ. ಮೂಡಲಗಿಯಲ್ಲಿ ಇಚೆಗೆ ನಡೆದ ಚಿಕ್ಕೋಡಿ ಜಿಲ್ಲಾಮಟ್ಟದ ಪ್ರಾಥಮಿಕ ಶಾಲೆಯ ಕ್ರೀಡಾಕೂಟದ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡು ಬೆಟಗೇರಿ ಕ್ಲಸ್ಟರ್ಗೆ …
Read More »
inmudalgi
ಅಕ್ಟೋಬರ್ 11, 2023 Recent Posts, ತಾಲ್ಲೂಕು, ಬೆಳಗಾವಿ
ಹಲವು ವಿಶೇಷತೆಗಳಿಂದ ಕೂಡಿದ ತುಕ್ಕಾನಟ್ಟಿ ಹಸರಬ್ಬ- ಶಾಸಕ ಬಾಲಚಂದ್ರ ಜಾರಕಿಹೊಳಿ ಮೆಚ್ಚುಗೆ ಲಕ್ಷ್ಮೀ ದೇವಿ ದರ್ಶನ ಪಡೆದ ನಂತರ ಸಾರ್ವಜನಿಕರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ- ತುಕ್ಕಾನಟ್ಟಿ ಲಕ್ಷ್ಮೀ ದೇವಿಯ ಜಾತ್ರೆಯ ನಿಮಿತ್ಯವಾಗಿ ನಡೆಯುವ ಹಸರಬ್ಬವು ತನ್ನದೇಯಾದ ಪ್ರಸಿದ್ಧಿಯನ್ನು ಪಡೆದಿದ್ದು, ಹಲವು ವಿಶೇಷತೆಗಳಿಂದ ಕೂಡಿರುವ ತುಕ್ಕಾನಟ್ಟಿ ಹಸರಬ್ಬ ಎಂದು ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಲಕ್ಷ್ಮೀದೇವಿಯ ದರ್ಶನ …
Read More »
inmudalgi
ಅಕ್ಟೋಬರ್ 11, 2023 Recent Posts, ತಾಲ್ಲೂಕು, ಬೆಳಗಾವಿ
ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಚಿತ್ರಕಲಾ ಸ್ಪರ್ಧೆ ‘ಚಿತ್ರಕಲೆ ಮಕ್ಕಳಲ್ಲಿ ಸೃಜನಶೀಲತೆ ಬೆಳೆಸುತ್ತದೆ’ ಮೂಡಲಗಿ: ‘ಚಿತ್ರಕಲೆಯು ಮಕ್ಕಳಲ್ಲಿ ಸೃಜನಶೀಲತೆಯನ್ನು ಬೆಳೆಸುತ್ತದೆ’ ಎಂದು ಶ್ರೀನಿವಾಸ ಶಾಲೆಯ ಪ್ರಾಚಾರ್ಯ ಶಂಕರ ಬಿ. ಮಠಪತಿ ಅವರು ಹೇಳಿದರು. ಇಲ್ಲಿಯ ಶ್ರೀನಿವಾಶ ಶಾಲೆಯ ಆತಿಥ್ಯದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಶಾಂತಿ ಸಂದೇಶ ಕುರಿತಾದ ಅಂತರ್ರಾಷ್ಟ್ರೀಯ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು ಮಕ್ಕಳಲ್ಲಿಯ ಕೌಶಲತೆಯನ್ನು …
Read More »